Homeಮುಖಪುಟಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು...

ಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು…

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ.

- Advertisement -
- Advertisement -

ಭಾರತೀಯ ಜೀವ ವಿಮಾನ ನಿಗಮದಿಂದ ತನ್ನ ಶೇರುಗಳನ್ನು ಮಾರಾಟ ಮಾಡಲು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿರುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ದೇಶವೇ ಬೆಚ್ಚಿಬಿದ್ದಿದೆ. ಸ್ಪರ್ಧಾತ್ಮಕ ಯುಗದಲ್ಲೂ ಅತ್ಯಂತ ಬಲಿಷ್ಟ ಸಂಸ್ಥೆಯಾದ ಜೀವ ವಿಮಾ ನಿಗಮವನ್ನು ಖಾಸಗಿಯವರ ಕೈಗೊಪ್ಪಿಸಿ ಎಳ್ಳುನೀರು ಬಿಡಲು ಸರ್ಕಾರ ಹೊರಟಿದೆ. ಖಾಸಗಿ ವಿಮಾ ಕಂಪನಿಗಳ ಜೊತೆ ಸಮರ್ಥ ಪೈಪೋಟಿ ನೀಡಿ ಲಾಭದಲ್ಲಿರುವ ಸಂಸ್ಥೆಯನ್ನು ಏಕಾಏಕಿ ಖಾಸಗಿಯವರ ಕೈಗೆ ಒಪ್ಪಿಸಿದರೆ ಮುಂದಿನ ಪರಿಣಾಮ ಏನಾಗಬಹುದೆಂಬುದನ್ನು ಕೇಂದ್ರ ಊಹಿಸಿದಂತೆ ಕಾಣುತ್ತಿಲ್ಲ.

ಸೆಪ್ಟೆಂಬರ್ 1, 1956ರಲ್ಲಿ 231 ಖಾಸಗಿ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಭಾರತೀಯ ಜೀವ ವಿಮಾ ನಿಗಮವನ್ನು ಸ್ಥಾಪಿಸಲಾಯಿತು. ಅಂದು ಈ ಖಾಸಗಿ ವಿಮಾ ಕಂಪನಿಗಳು ಸಾರ್ವಜನಿಕರಿಗೆ ಮೋಸ ಮಾಡುವುದರಲ್ಲಿ ತೊಡಗಿದ್ದವು. ಸಾಕಷ್ಟು ಜನರ ಹಣಕ್ಕೆ ಯಾವುದೇ ಭದ್ರತೆ ಇರಲಿಲ್ಲ. ಇದನ್ನು ಮನಗಂಡ ಅಂದಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಖಾಸಗಿ ಕಂಪನಿಗಳನ್ನು ಒಂದುಗೂಡಿಸಿದ್ದರು. ಹೀಗಾಗಿ ಪಾಲಿಸಿದಾರರು ನಿಟ್ಟುಸಿರು ಬಿಟ್ಟರು. ಪಾಲಿಸಿದಾರರ ಹಣಕ್ಕೆ ಭದ್ರತೆ ಸಿಕ್ಕಿತ್ತು.

ಐದು ಕೋಟಿ ರೂಪಾಯಿಗಳಿಂದ ಆರಂಭವಾದ ಭಾರತೀಯ ಜೀವ ವಿಮಾ ನಿಗಮ ಇಂದು ದೇಶಾದ್ಯಂತ ವಿಸ್ತರಿಸಿಕೊಂಡು ಹೆಮ್ಮರವಾಗಿ ಬೆಳೆದು ನಿಂತಿದೆ. 8 ವಲಯಗಳು, 114 ವಿಭಾಗಗಳು ಮತ್ತು 2100 ಶಾಖೆ ಗಳನ್ನುಹೊಂದಿರುವ ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿಯಲ್ಲಿ ಅಧಿಕಾರಿಗಳು, ನೌಕರರು ಸೇರಿ 2 ಲಕ್ಷ ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. 12 ಲಕ್ಷ ಮಂದಿ ಏಜೆಂಟರು ಇಡೀ ದೇಶಾದ್ಯಂತ ಹರಡಿ ಹೋಗಿದ್ದಾರೆ.. ಇವರನ್ನು ನಂಬಿ 14 ಲಕ್ಷ ಕುಟುಂಬಗಳ ಸುಮಾರು ಒಂದು ಕೋಟಿ ಜನರು ಜೀವನ ನಿರ್ವಹಣೆಗೆ ಸಂಸ್ಥೆ ಅನುಕೂಲ ಕಲ್ಪಿಸಿದೆ.

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ. ಭಾರತೀಯ ಜೀವ ವಿಮಾ ನಿಗಮವನ್ನು ಸರಿಗಟ್ಟಬಲ್ಲ ಖಾಸಗಿ ಸಂಸ್ಥೆಯೊಂದು ಇದುವರೆಗೂ ಹುಟ್ಟಿಕೊಳ್ಳಲು ಸಾಧ್ಯವಾಗಿಲ್ಲ. ಹಲವು ಖಾಸಗಿ ವಿಮಾ ಸಂಸ್ಥೆಗಳು ದೇಶದಲ್ಲಿ ಕಾರ್ಯಾಚರಿಸುತ್ತಿದ್ದರೂ ಸರ್ಕಾರಿ ವಿಮಾ ಸಂಸ್ಥೆಯಷ್ಟು ನಂಬಿಕೆ ಉಳಿಸಿಕೊಂಡಿಲ್ಲ. ಸಾಮಾನ್ಯ ಬಡ ರೈತ, ಹೂವಿನ ವ್ಯಾಪಾರಿಯಿಂದ ಹಿಡಿದು ನೌಕರರು, ಅಧಿಕಾರಿಗಳು ಶ್ರೀಮಂತರೂ ಕೂಡ ಎಲ್ಐಸಿ ಪಾಲಿಸಿದಾರರಾಗಿದ್ದಾರೆ. ಇದು ಸಾರ್ವಜನಿಕ ಸಂಸ್ಥೆಯ ಹೆಗ್ಗಳಿಕೆ.

ಇಂತಹ ಹೆಗ್ಗಳಿಕೆ, ಜನರ ವಿಶ್ವಾಸ, ನಂಬಿಕೆ ಮತ್ತು ಪ್ರೀತಿಗೆ ಪಾತ್ರವಾಗಿರುವ ಭಾರತೀಯ ಜೀವ ವಿಮಾ ನಿಗಮದ ಕತ್ತು ಹಿಸುಕಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಲಾಭದಲ್ಲಿರುವ ಸಾರ್ವಜನಿಕ ಸಂಸ್ಥೆಯೊಂದರ ಶೇರುಗಳನ್ನು ಖಾಸಗಿ ಕಂಪನಿಯರಿಗೆ ಕೊಳ್ಳೆ ಕೊಡಲು ಕೇಂದ್ರ ಮನಸ್ಸು ಮಾಡಿದ್ದು ಜನರ ನಂಬಿಕೆಗೆ ಭಾರೀ ಪೆಟ್ಟು ನೀಡಲು ಸಿದ್ದತೆ ಮಾಡಿಕೊಂಡಿದೆ. ಇದು ಸಮರ್ಥನೀಯವಾದ ಕಾರ್ಯವಲ್ಲ. ಇಂತಹ ಕೆಲಸಕ್ಕೆ ಕೈಹಾಕುವ ಮೊದಲು ಸರ್ಕಾರ ಹತ್ತು ಬಾರಿ ಆಲೋಚಿಸಬೇಕು. ಇಲ್ಲಿದಿದ್ದರೆ ಜನರು ಸರ್ಕಾರಗಳ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಾರೆ. ಈ ಎಚ್ಚರಿಕೆ ಪ್ರತಿಯೊಂದು ಸರ್ಕಾರಕ್ಕೂ ಇರಬೇಕು.

ಒಂದೊಮ್ಮೆ ಖಾಸಗೀಕರಣಗೊಳಿಸಿದರೆ ಸರ್ಕಾರಿ ಸ್ವಾಮ್ಯದ ಎಲ್ಐಸಿಯ ಭಾರತದ ಸ್ವಭಾವವು ವಿನಾಶಕಾರಿ ಬದಲಾವಣೆಗೆ ಬರಲಿದೆ ಎಂದು ಭಾವಿಸಲಾಗಿದೆ, ಇದು ಕೋಟಿಗಟ್ಟಲೆ ಪಾಲಿಸಿದಾರರು ಮತ್ತು ಒಟ್ಟಾರೆ ದೇಶದ ಮೇಲೆ ಪರಿಣಾಮ ಬೀರುತ್ತದೆ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕುರುಡಾಗಿ ಉಳಿಸಲು ಭಾರತದ ಸಾಮಾನ್ಯ ಜನರು ಎಲ್‌ಐಸಿಗೆ ನೀಡಿರುವ ನಂಬಿಕೆ ಬಿರುಕು ಬಿಡುತ್ತದೆ. ನಿರ್ಣಾಯಕ ಆರ್ಥಿಕ ಸಂದರ್ಭಗಳಲ್ಲಿ ಎಲ್ಐಸಿಗೆ ರಾಷ್ಟ್ರದ ಸಂರಕ್ಷಕನಾಗಿ ಬರಲು ಸಾಧ್ಯವಾಗುವುದಿಲ್ಲ ಮತ್ತು ಮೇಲಾಗಿ ಸರ್ಕಾರಕ್ಕೆ ಭಾರಿ ಪ್ರಮಾಣದ ಲಾಭಾಂಶವನ್ನು ನೀಡಲಾಗುತ್ತದೆ ಎಂದು ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ ನಂಜುಂಡಸ್ವಾಮಿ ಹೇಳುತ್ತಾರೆ.

ಎಲ್‌ಐಸಿಯ ಅಡಿಪಾಯ ಎಷ್ಟು ಪ್ರಬಲವಾಗಿದೆ. ವಿಮಾ ವಲಯವನ್ನು ತೆರೆದ 20 ವರ್ಷಗಳ ನಂತರವೂ ಎಲ್‌ಐಸಿ 70 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ಮಾರುಕಟ್ಟೆಯ ನಾಯಕರಾಗಿ ಉಳಿದಿದೆ ಮತ್ತು ಇತರ 23 ಜೀವ ವಿಮಾ ಕಂಪನಿಗಳೊಂದಿಗೆ ಸ್ಪರ್ಧಿಸುತ್ತಿದೆ. ಈ ಹಣಕಾಸು ವರ್ಷದ ಎಲ್‌ಐಸಿ 6ರಷ್ಟು ಮಾರುಕಟ್ಟೆ ಪಾಲನ್ನು ಮರಳಿ ಪಡೆದಿದೆ ಮತ್ತು ಕೈಗಾರಿಕಾ ಬೆಳವಣಿಗೆಗಿಂತ ಎಲ್‌ಐಸಿ ಬೆಳವಣಿಗೆ ಹೆಚ್ಚಾಗಿದೆ. ಎಲ್ಐಸಿ ಕಳೆದ 15 ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಲಾಭದ ಹಣವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತಲೇ ಬರುತ್ತಿದೆ.

ಆದಿತ್ಯ ಬಿರ್ಲಾ ಸನ್ ಲೈಪ್, ಎಚ್.ಡಿ.ಎಫ್.ಸಿ, ಐಸಿಐಸಿಐ ಪ್ರುಡೆನ್ಸಿಯಲ್ ಲೈಪ್, ಮ್ಯಾಕ್ಸ್ ಲೈಪ್, ಎಸ್.ಬಿ.ಐ ಲೈಪ್, ಶ್ರೀರಾಮ್ ಲೈಪ್ ಐಡಿಬಿಐ ಫೆಡರಲ್ ಲೈಪ್ ಹೀಗೆ 24 ಖಾಸಗಿ ವಿಮಾ ಕಂಪನಿಗಳು ಮಾರುಕಟ್ಟೆಯಲ್ಲಿದ್ದರೂ ಎಲ್.ಐ.ಸಿ ಸಂಸ್ಥೆಯ ಎತ್ತರಕ್ಕೆ ಯಾರೂ ಬೆಳೆಯಲಾಗಿಲ್ಲ. ಜನರ ನಂಬಿಕೆ, ವಿಶ್ವಾಸವನ್ನು ಗಳಿಸಲು ಸಾಧ್ಯವಾಗಿಲ್ಲ. ಒಂದು ಅಂದಾಜಿನ ಪ್ರಕಾರ ಎಲ್.ಐ.ಸಿಯ 1 ಲಕ್ಷ ಕೋಟಿ ಶೇರುಗಳನ್ನು ಖಾಸಗಿ ಯವರಿಗೆ ಮಾರಾಟ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ. ಸರ್ಕಾರ ಎಲ್ಐಸಿ ಶೇರುಗಳನ್ನು ಮಾರಾಟಕ್ಕಿಟ್ಟರೆ ಪಾಲಿಸಿದಾರರ ಹಣಕ್ಕೆ ಯಾವುದೇ ಭದ್ರತೆ ಇರುವುದಿಲ್ಲ.

ಈಗಾಗಲೇ ಬಿಎಸ್ಎನ್ಎಲ್ ಟೈಟಾನಿಕ್ ನಂತೆ ಮುಳುಗುತ್ತಿದೆ. ಹಾಗೆಯೇ ಎಲ್ಐಸಿಯನ್ನು ಖಾಸಗೀಕರಣಗೊಳಿಸಿದರೆ ಇನ್ನು ಕೆಲವೇ ವರ್ಷಗಳಲ್ಲಿ ಬಾಗಿಲು ಮುಚ್ಚಿಕೊಳ್ಳಲಿದೆ. ಎಲ್.ಐ.ಸಿ ಶೇರುಗಳ ಮಾರಾಟದ ಮಾಹಿತಿ ಪಾಲಿಸಿದಾರರಲ್ಲಿ ದುಗುಡವನ್ನು ತಂದೊಡ್ಡಿದೆ. ನಮ್ಮ ಹಣ ಬರುತ್ತದೋ ಇಲ್ಲವೇ ಎಂಬ ಅತಂಕ ಪಾಲಿಸಿದಾರರಲ್ಲಿ ಮನೆ ಮಾಡಿದೆ. ಇದೇ ಕಾರಣಕ್ಕೆ ಏಜೆಂಟರನ್ನು ಕಂಡು ಹಣವನ್ನು ಹಿಂತೆಗೆದುಕೊಳ್ಳುವ ಕುರಿತು ಮಾತನಾಡುತ್ತಿದ್ದಾರೆ. ಈಗ ಪಾಲಿಸಿದಾರರ ಪಾಡು ಹೇಳತೀರದಾಗಿದೆ. ಯಾವುದೇ ಕಾರಣಕ್ಕು ಎಲ್ಐಸಿಯನ್ನು ಖಾಸಗೀಕರಣಗೊಳಿಸಬಾರದು ಎಂದು ಪ್ರತಿಭಟನೆಗಳು ತೀವ್ರಗೊಳುತ್ತಿವೆ. ಬಜೆಟ್ ನಲ್ಲಿ ಪ್ರಸ್ತಾಪವಾದ ಈ ಸುದ್ದಿ ಆತಂಕಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. LICಯ ಖಾಸಗೀಕರಣ ಅನ್ಯಾಯದ ಪರಮಾವಧಿ. ಜನಸಾಮಾನ್ಯರ ನಂಬಿಕೆಯನ್ನು ಸಂಪೂರ್ಣ ಕಳೆದುಕೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕ ಹಕ್ಕೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...