Homeಮುಖಪುಟಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು...

ಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು…

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ.

- Advertisement -
- Advertisement -

ಭಾರತೀಯ ಜೀವ ವಿಮಾನ ನಿಗಮದಿಂದ ತನ್ನ ಶೇರುಗಳನ್ನು ಮಾರಾಟ ಮಾಡಲು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿರುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ದೇಶವೇ ಬೆಚ್ಚಿಬಿದ್ದಿದೆ. ಸ್ಪರ್ಧಾತ್ಮಕ ಯುಗದಲ್ಲೂ ಅತ್ಯಂತ ಬಲಿಷ್ಟ ಸಂಸ್ಥೆಯಾದ ಜೀವ ವಿಮಾ ನಿಗಮವನ್ನು ಖಾಸಗಿಯವರ ಕೈಗೊಪ್ಪಿಸಿ ಎಳ್ಳುನೀರು ಬಿಡಲು ಸರ್ಕಾರ ಹೊರಟಿದೆ. ಖಾಸಗಿ ವಿಮಾ ಕಂಪನಿಗಳ ಜೊತೆ ಸಮರ್ಥ ಪೈಪೋಟಿ ನೀಡಿ ಲಾಭದಲ್ಲಿರುವ ಸಂಸ್ಥೆಯನ್ನು ಏಕಾಏಕಿ ಖಾಸಗಿಯವರ ಕೈಗೆ ಒಪ್ಪಿಸಿದರೆ ಮುಂದಿನ ಪರಿಣಾಮ ಏನಾಗಬಹುದೆಂಬುದನ್ನು ಕೇಂದ್ರ ಊಹಿಸಿದಂತೆ ಕಾಣುತ್ತಿಲ್ಲ.

ಸೆಪ್ಟೆಂಬರ್ 1, 1956ರಲ್ಲಿ 231 ಖಾಸಗಿ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಭಾರತೀಯ ಜೀವ ವಿಮಾ ನಿಗಮವನ್ನು ಸ್ಥಾಪಿಸಲಾಯಿತು. ಅಂದು ಈ ಖಾಸಗಿ ವಿಮಾ ಕಂಪನಿಗಳು ಸಾರ್ವಜನಿಕರಿಗೆ ಮೋಸ ಮಾಡುವುದರಲ್ಲಿ ತೊಡಗಿದ್ದವು. ಸಾಕಷ್ಟು ಜನರ ಹಣಕ್ಕೆ ಯಾವುದೇ ಭದ್ರತೆ ಇರಲಿಲ್ಲ. ಇದನ್ನು ಮನಗಂಡ ಅಂದಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಖಾಸಗಿ ಕಂಪನಿಗಳನ್ನು ಒಂದುಗೂಡಿಸಿದ್ದರು. ಹೀಗಾಗಿ ಪಾಲಿಸಿದಾರರು ನಿಟ್ಟುಸಿರು ಬಿಟ್ಟರು. ಪಾಲಿಸಿದಾರರ ಹಣಕ್ಕೆ ಭದ್ರತೆ ಸಿಕ್ಕಿತ್ತು.

ಐದು ಕೋಟಿ ರೂಪಾಯಿಗಳಿಂದ ಆರಂಭವಾದ ಭಾರತೀಯ ಜೀವ ವಿಮಾ ನಿಗಮ ಇಂದು ದೇಶಾದ್ಯಂತ ವಿಸ್ತರಿಸಿಕೊಂಡು ಹೆಮ್ಮರವಾಗಿ ಬೆಳೆದು ನಿಂತಿದೆ. 8 ವಲಯಗಳು, 114 ವಿಭಾಗಗಳು ಮತ್ತು 2100 ಶಾಖೆ ಗಳನ್ನುಹೊಂದಿರುವ ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿಯಲ್ಲಿ ಅಧಿಕಾರಿಗಳು, ನೌಕರರು ಸೇರಿ 2 ಲಕ್ಷ ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. 12 ಲಕ್ಷ ಮಂದಿ ಏಜೆಂಟರು ಇಡೀ ದೇಶಾದ್ಯಂತ ಹರಡಿ ಹೋಗಿದ್ದಾರೆ.. ಇವರನ್ನು ನಂಬಿ 14 ಲಕ್ಷ ಕುಟುಂಬಗಳ ಸುಮಾರು ಒಂದು ಕೋಟಿ ಜನರು ಜೀವನ ನಿರ್ವಹಣೆಗೆ ಸಂಸ್ಥೆ ಅನುಕೂಲ ಕಲ್ಪಿಸಿದೆ.

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ. ಭಾರತೀಯ ಜೀವ ವಿಮಾ ನಿಗಮವನ್ನು ಸರಿಗಟ್ಟಬಲ್ಲ ಖಾಸಗಿ ಸಂಸ್ಥೆಯೊಂದು ಇದುವರೆಗೂ ಹುಟ್ಟಿಕೊಳ್ಳಲು ಸಾಧ್ಯವಾಗಿಲ್ಲ. ಹಲವು ಖಾಸಗಿ ವಿಮಾ ಸಂಸ್ಥೆಗಳು ದೇಶದಲ್ಲಿ ಕಾರ್ಯಾಚರಿಸುತ್ತಿದ್ದರೂ ಸರ್ಕಾರಿ ವಿಮಾ ಸಂಸ್ಥೆಯಷ್ಟು ನಂಬಿಕೆ ಉಳಿಸಿಕೊಂಡಿಲ್ಲ. ಸಾಮಾನ್ಯ ಬಡ ರೈತ, ಹೂವಿನ ವ್ಯಾಪಾರಿಯಿಂದ ಹಿಡಿದು ನೌಕರರು, ಅಧಿಕಾರಿಗಳು ಶ್ರೀಮಂತರೂ ಕೂಡ ಎಲ್ಐಸಿ ಪಾಲಿಸಿದಾರರಾಗಿದ್ದಾರೆ. ಇದು ಸಾರ್ವಜನಿಕ ಸಂಸ್ಥೆಯ ಹೆಗ್ಗಳಿಕೆ.

ಇಂತಹ ಹೆಗ್ಗಳಿಕೆ, ಜನರ ವಿಶ್ವಾಸ, ನಂಬಿಕೆ ಮತ್ತು ಪ್ರೀತಿಗೆ ಪಾತ್ರವಾಗಿರುವ ಭಾರತೀಯ ಜೀವ ವಿಮಾ ನಿಗಮದ ಕತ್ತು ಹಿಸುಕಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಲಾಭದಲ್ಲಿರುವ ಸಾರ್ವಜನಿಕ ಸಂಸ್ಥೆಯೊಂದರ ಶೇರುಗಳನ್ನು ಖಾಸಗಿ ಕಂಪನಿಯರಿಗೆ ಕೊಳ್ಳೆ ಕೊಡಲು ಕೇಂದ್ರ ಮನಸ್ಸು ಮಾಡಿದ್ದು ಜನರ ನಂಬಿಕೆಗೆ ಭಾರೀ ಪೆಟ್ಟು ನೀಡಲು ಸಿದ್ದತೆ ಮಾಡಿಕೊಂಡಿದೆ. ಇದು ಸಮರ್ಥನೀಯವಾದ ಕಾರ್ಯವಲ್ಲ. ಇಂತಹ ಕೆಲಸಕ್ಕೆ ಕೈಹಾಕುವ ಮೊದಲು ಸರ್ಕಾರ ಹತ್ತು ಬಾರಿ ಆಲೋಚಿಸಬೇಕು. ಇಲ್ಲಿದಿದ್ದರೆ ಜನರು ಸರ್ಕಾರಗಳ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಾರೆ. ಈ ಎಚ್ಚರಿಕೆ ಪ್ರತಿಯೊಂದು ಸರ್ಕಾರಕ್ಕೂ ಇರಬೇಕು.

ಒಂದೊಮ್ಮೆ ಖಾಸಗೀಕರಣಗೊಳಿಸಿದರೆ ಸರ್ಕಾರಿ ಸ್ವಾಮ್ಯದ ಎಲ್ಐಸಿಯ ಭಾರತದ ಸ್ವಭಾವವು ವಿನಾಶಕಾರಿ ಬದಲಾವಣೆಗೆ ಬರಲಿದೆ ಎಂದು ಭಾವಿಸಲಾಗಿದೆ, ಇದು ಕೋಟಿಗಟ್ಟಲೆ ಪಾಲಿಸಿದಾರರು ಮತ್ತು ಒಟ್ಟಾರೆ ದೇಶದ ಮೇಲೆ ಪರಿಣಾಮ ಬೀರುತ್ತದೆ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕುರುಡಾಗಿ ಉಳಿಸಲು ಭಾರತದ ಸಾಮಾನ್ಯ ಜನರು ಎಲ್‌ಐಸಿಗೆ ನೀಡಿರುವ ನಂಬಿಕೆ ಬಿರುಕು ಬಿಡುತ್ತದೆ. ನಿರ್ಣಾಯಕ ಆರ್ಥಿಕ ಸಂದರ್ಭಗಳಲ್ಲಿ ಎಲ್ಐಸಿಗೆ ರಾಷ್ಟ್ರದ ಸಂರಕ್ಷಕನಾಗಿ ಬರಲು ಸಾಧ್ಯವಾಗುವುದಿಲ್ಲ ಮತ್ತು ಮೇಲಾಗಿ ಸರ್ಕಾರಕ್ಕೆ ಭಾರಿ ಪ್ರಮಾಣದ ಲಾಭಾಂಶವನ್ನು ನೀಡಲಾಗುತ್ತದೆ ಎಂದು ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ ನಂಜುಂಡಸ್ವಾಮಿ ಹೇಳುತ್ತಾರೆ.

ಎಲ್‌ಐಸಿಯ ಅಡಿಪಾಯ ಎಷ್ಟು ಪ್ರಬಲವಾಗಿದೆ. ವಿಮಾ ವಲಯವನ್ನು ತೆರೆದ 20 ವರ್ಷಗಳ ನಂತರವೂ ಎಲ್‌ಐಸಿ 70 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ಮಾರುಕಟ್ಟೆಯ ನಾಯಕರಾಗಿ ಉಳಿದಿದೆ ಮತ್ತು ಇತರ 23 ಜೀವ ವಿಮಾ ಕಂಪನಿಗಳೊಂದಿಗೆ ಸ್ಪರ್ಧಿಸುತ್ತಿದೆ. ಈ ಹಣಕಾಸು ವರ್ಷದ ಎಲ್‌ಐಸಿ 6ರಷ್ಟು ಮಾರುಕಟ್ಟೆ ಪಾಲನ್ನು ಮರಳಿ ಪಡೆದಿದೆ ಮತ್ತು ಕೈಗಾರಿಕಾ ಬೆಳವಣಿಗೆಗಿಂತ ಎಲ್‌ಐಸಿ ಬೆಳವಣಿಗೆ ಹೆಚ್ಚಾಗಿದೆ. ಎಲ್ಐಸಿ ಕಳೆದ 15 ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಲಾಭದ ಹಣವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತಲೇ ಬರುತ್ತಿದೆ.

ಆದಿತ್ಯ ಬಿರ್ಲಾ ಸನ್ ಲೈಪ್, ಎಚ್.ಡಿ.ಎಫ್.ಸಿ, ಐಸಿಐಸಿಐ ಪ್ರುಡೆನ್ಸಿಯಲ್ ಲೈಪ್, ಮ್ಯಾಕ್ಸ್ ಲೈಪ್, ಎಸ್.ಬಿ.ಐ ಲೈಪ್, ಶ್ರೀರಾಮ್ ಲೈಪ್ ಐಡಿಬಿಐ ಫೆಡರಲ್ ಲೈಪ್ ಹೀಗೆ 24 ಖಾಸಗಿ ವಿಮಾ ಕಂಪನಿಗಳು ಮಾರುಕಟ್ಟೆಯಲ್ಲಿದ್ದರೂ ಎಲ್.ಐ.ಸಿ ಸಂಸ್ಥೆಯ ಎತ್ತರಕ್ಕೆ ಯಾರೂ ಬೆಳೆಯಲಾಗಿಲ್ಲ. ಜನರ ನಂಬಿಕೆ, ವಿಶ್ವಾಸವನ್ನು ಗಳಿಸಲು ಸಾಧ್ಯವಾಗಿಲ್ಲ. ಒಂದು ಅಂದಾಜಿನ ಪ್ರಕಾರ ಎಲ್.ಐ.ಸಿಯ 1 ಲಕ್ಷ ಕೋಟಿ ಶೇರುಗಳನ್ನು ಖಾಸಗಿ ಯವರಿಗೆ ಮಾರಾಟ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ. ಸರ್ಕಾರ ಎಲ್ಐಸಿ ಶೇರುಗಳನ್ನು ಮಾರಾಟಕ್ಕಿಟ್ಟರೆ ಪಾಲಿಸಿದಾರರ ಹಣಕ್ಕೆ ಯಾವುದೇ ಭದ್ರತೆ ಇರುವುದಿಲ್ಲ.

ಈಗಾಗಲೇ ಬಿಎಸ್ಎನ್ಎಲ್ ಟೈಟಾನಿಕ್ ನಂತೆ ಮುಳುಗುತ್ತಿದೆ. ಹಾಗೆಯೇ ಎಲ್ಐಸಿಯನ್ನು ಖಾಸಗೀಕರಣಗೊಳಿಸಿದರೆ ಇನ್ನು ಕೆಲವೇ ವರ್ಷಗಳಲ್ಲಿ ಬಾಗಿಲು ಮುಚ್ಚಿಕೊಳ್ಳಲಿದೆ. ಎಲ್.ಐ.ಸಿ ಶೇರುಗಳ ಮಾರಾಟದ ಮಾಹಿತಿ ಪಾಲಿಸಿದಾರರಲ್ಲಿ ದುಗುಡವನ್ನು ತಂದೊಡ್ಡಿದೆ. ನಮ್ಮ ಹಣ ಬರುತ್ತದೋ ಇಲ್ಲವೇ ಎಂಬ ಅತಂಕ ಪಾಲಿಸಿದಾರರಲ್ಲಿ ಮನೆ ಮಾಡಿದೆ. ಇದೇ ಕಾರಣಕ್ಕೆ ಏಜೆಂಟರನ್ನು ಕಂಡು ಹಣವನ್ನು ಹಿಂತೆಗೆದುಕೊಳ್ಳುವ ಕುರಿತು ಮಾತನಾಡುತ್ತಿದ್ದಾರೆ. ಈಗ ಪಾಲಿಸಿದಾರರ ಪಾಡು ಹೇಳತೀರದಾಗಿದೆ. ಯಾವುದೇ ಕಾರಣಕ್ಕು ಎಲ್ಐಸಿಯನ್ನು ಖಾಸಗೀಕರಣಗೊಳಿಸಬಾರದು ಎಂದು ಪ್ರತಿಭಟನೆಗಳು ತೀವ್ರಗೊಳುತ್ತಿವೆ. ಬಜೆಟ್ ನಲ್ಲಿ ಪ್ರಸ್ತಾಪವಾದ ಈ ಸುದ್ದಿ ಆತಂಕಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. LICಯ ಖಾಸಗೀಕರಣ ಅನ್ಯಾಯದ ಪರಮಾವಧಿ. ಜನಸಾಮಾನ್ಯರ ನಂಬಿಕೆಯನ್ನು ಸಂಪೂರ್ಣ ಕಳೆದುಕೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕ ಹಕ್ಕೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...