Homeಮುಖಪುಟಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು...

ಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು…

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ.

- Advertisement -
- Advertisement -

ಭಾರತೀಯ ಜೀವ ವಿಮಾನ ನಿಗಮದಿಂದ ತನ್ನ ಶೇರುಗಳನ್ನು ಮಾರಾಟ ಮಾಡಲು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿರುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ದೇಶವೇ ಬೆಚ್ಚಿಬಿದ್ದಿದೆ. ಸ್ಪರ್ಧಾತ್ಮಕ ಯುಗದಲ್ಲೂ ಅತ್ಯಂತ ಬಲಿಷ್ಟ ಸಂಸ್ಥೆಯಾದ ಜೀವ ವಿಮಾ ನಿಗಮವನ್ನು ಖಾಸಗಿಯವರ ಕೈಗೊಪ್ಪಿಸಿ ಎಳ್ಳುನೀರು ಬಿಡಲು ಸರ್ಕಾರ ಹೊರಟಿದೆ. ಖಾಸಗಿ ವಿಮಾ ಕಂಪನಿಗಳ ಜೊತೆ ಸಮರ್ಥ ಪೈಪೋಟಿ ನೀಡಿ ಲಾಭದಲ್ಲಿರುವ ಸಂಸ್ಥೆಯನ್ನು ಏಕಾಏಕಿ ಖಾಸಗಿಯವರ ಕೈಗೆ ಒಪ್ಪಿಸಿದರೆ ಮುಂದಿನ ಪರಿಣಾಮ ಏನಾಗಬಹುದೆಂಬುದನ್ನು ಕೇಂದ್ರ ಊಹಿಸಿದಂತೆ ಕಾಣುತ್ತಿಲ್ಲ.

ಸೆಪ್ಟೆಂಬರ್ 1, 1956ರಲ್ಲಿ 231 ಖಾಸಗಿ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಭಾರತೀಯ ಜೀವ ವಿಮಾ ನಿಗಮವನ್ನು ಸ್ಥಾಪಿಸಲಾಯಿತು. ಅಂದು ಈ ಖಾಸಗಿ ವಿಮಾ ಕಂಪನಿಗಳು ಸಾರ್ವಜನಿಕರಿಗೆ ಮೋಸ ಮಾಡುವುದರಲ್ಲಿ ತೊಡಗಿದ್ದವು. ಸಾಕಷ್ಟು ಜನರ ಹಣಕ್ಕೆ ಯಾವುದೇ ಭದ್ರತೆ ಇರಲಿಲ್ಲ. ಇದನ್ನು ಮನಗಂಡ ಅಂದಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಖಾಸಗಿ ಕಂಪನಿಗಳನ್ನು ಒಂದುಗೂಡಿಸಿದ್ದರು. ಹೀಗಾಗಿ ಪಾಲಿಸಿದಾರರು ನಿಟ್ಟುಸಿರು ಬಿಟ್ಟರು. ಪಾಲಿಸಿದಾರರ ಹಣಕ್ಕೆ ಭದ್ರತೆ ಸಿಕ್ಕಿತ್ತು.

ಐದು ಕೋಟಿ ರೂಪಾಯಿಗಳಿಂದ ಆರಂಭವಾದ ಭಾರತೀಯ ಜೀವ ವಿಮಾ ನಿಗಮ ಇಂದು ದೇಶಾದ್ಯಂತ ವಿಸ್ತರಿಸಿಕೊಂಡು ಹೆಮ್ಮರವಾಗಿ ಬೆಳೆದು ನಿಂತಿದೆ. 8 ವಲಯಗಳು, 114 ವಿಭಾಗಗಳು ಮತ್ತು 2100 ಶಾಖೆ ಗಳನ್ನುಹೊಂದಿರುವ ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿಯಲ್ಲಿ ಅಧಿಕಾರಿಗಳು, ನೌಕರರು ಸೇರಿ 2 ಲಕ್ಷ ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. 12 ಲಕ್ಷ ಮಂದಿ ಏಜೆಂಟರು ಇಡೀ ದೇಶಾದ್ಯಂತ ಹರಡಿ ಹೋಗಿದ್ದಾರೆ.. ಇವರನ್ನು ನಂಬಿ 14 ಲಕ್ಷ ಕುಟುಂಬಗಳ ಸುಮಾರು ಒಂದು ಕೋಟಿ ಜನರು ಜೀವನ ನಿರ್ವಹಣೆಗೆ ಸಂಸ್ಥೆ ಅನುಕೂಲ ಕಲ್ಪಿಸಿದೆ.

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ. ಭಾರತೀಯ ಜೀವ ವಿಮಾ ನಿಗಮವನ್ನು ಸರಿಗಟ್ಟಬಲ್ಲ ಖಾಸಗಿ ಸಂಸ್ಥೆಯೊಂದು ಇದುವರೆಗೂ ಹುಟ್ಟಿಕೊಳ್ಳಲು ಸಾಧ್ಯವಾಗಿಲ್ಲ. ಹಲವು ಖಾಸಗಿ ವಿಮಾ ಸಂಸ್ಥೆಗಳು ದೇಶದಲ್ಲಿ ಕಾರ್ಯಾಚರಿಸುತ್ತಿದ್ದರೂ ಸರ್ಕಾರಿ ವಿಮಾ ಸಂಸ್ಥೆಯಷ್ಟು ನಂಬಿಕೆ ಉಳಿಸಿಕೊಂಡಿಲ್ಲ. ಸಾಮಾನ್ಯ ಬಡ ರೈತ, ಹೂವಿನ ವ್ಯಾಪಾರಿಯಿಂದ ಹಿಡಿದು ನೌಕರರು, ಅಧಿಕಾರಿಗಳು ಶ್ರೀಮಂತರೂ ಕೂಡ ಎಲ್ಐಸಿ ಪಾಲಿಸಿದಾರರಾಗಿದ್ದಾರೆ. ಇದು ಸಾರ್ವಜನಿಕ ಸಂಸ್ಥೆಯ ಹೆಗ್ಗಳಿಕೆ.

ಇಂತಹ ಹೆಗ್ಗಳಿಕೆ, ಜನರ ವಿಶ್ವಾಸ, ನಂಬಿಕೆ ಮತ್ತು ಪ್ರೀತಿಗೆ ಪಾತ್ರವಾಗಿರುವ ಭಾರತೀಯ ಜೀವ ವಿಮಾ ನಿಗಮದ ಕತ್ತು ಹಿಸುಕಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಲಾಭದಲ್ಲಿರುವ ಸಾರ್ವಜನಿಕ ಸಂಸ್ಥೆಯೊಂದರ ಶೇರುಗಳನ್ನು ಖಾಸಗಿ ಕಂಪನಿಯರಿಗೆ ಕೊಳ್ಳೆ ಕೊಡಲು ಕೇಂದ್ರ ಮನಸ್ಸು ಮಾಡಿದ್ದು ಜನರ ನಂಬಿಕೆಗೆ ಭಾರೀ ಪೆಟ್ಟು ನೀಡಲು ಸಿದ್ದತೆ ಮಾಡಿಕೊಂಡಿದೆ. ಇದು ಸಮರ್ಥನೀಯವಾದ ಕಾರ್ಯವಲ್ಲ. ಇಂತಹ ಕೆಲಸಕ್ಕೆ ಕೈಹಾಕುವ ಮೊದಲು ಸರ್ಕಾರ ಹತ್ತು ಬಾರಿ ಆಲೋಚಿಸಬೇಕು. ಇಲ್ಲಿದಿದ್ದರೆ ಜನರು ಸರ್ಕಾರಗಳ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಾರೆ. ಈ ಎಚ್ಚರಿಕೆ ಪ್ರತಿಯೊಂದು ಸರ್ಕಾರಕ್ಕೂ ಇರಬೇಕು.

ಒಂದೊಮ್ಮೆ ಖಾಸಗೀಕರಣಗೊಳಿಸಿದರೆ ಸರ್ಕಾರಿ ಸ್ವಾಮ್ಯದ ಎಲ್ಐಸಿಯ ಭಾರತದ ಸ್ವಭಾವವು ವಿನಾಶಕಾರಿ ಬದಲಾವಣೆಗೆ ಬರಲಿದೆ ಎಂದು ಭಾವಿಸಲಾಗಿದೆ, ಇದು ಕೋಟಿಗಟ್ಟಲೆ ಪಾಲಿಸಿದಾರರು ಮತ್ತು ಒಟ್ಟಾರೆ ದೇಶದ ಮೇಲೆ ಪರಿಣಾಮ ಬೀರುತ್ತದೆ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕುರುಡಾಗಿ ಉಳಿಸಲು ಭಾರತದ ಸಾಮಾನ್ಯ ಜನರು ಎಲ್‌ಐಸಿಗೆ ನೀಡಿರುವ ನಂಬಿಕೆ ಬಿರುಕು ಬಿಡುತ್ತದೆ. ನಿರ್ಣಾಯಕ ಆರ್ಥಿಕ ಸಂದರ್ಭಗಳಲ್ಲಿ ಎಲ್ಐಸಿಗೆ ರಾಷ್ಟ್ರದ ಸಂರಕ್ಷಕನಾಗಿ ಬರಲು ಸಾಧ್ಯವಾಗುವುದಿಲ್ಲ ಮತ್ತು ಮೇಲಾಗಿ ಸರ್ಕಾರಕ್ಕೆ ಭಾರಿ ಪ್ರಮಾಣದ ಲಾಭಾಂಶವನ್ನು ನೀಡಲಾಗುತ್ತದೆ ಎಂದು ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ ನಂಜುಂಡಸ್ವಾಮಿ ಹೇಳುತ್ತಾರೆ.

ಎಲ್‌ಐಸಿಯ ಅಡಿಪಾಯ ಎಷ್ಟು ಪ್ರಬಲವಾಗಿದೆ. ವಿಮಾ ವಲಯವನ್ನು ತೆರೆದ 20 ವರ್ಷಗಳ ನಂತರವೂ ಎಲ್‌ಐಸಿ 70 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ಮಾರುಕಟ್ಟೆಯ ನಾಯಕರಾಗಿ ಉಳಿದಿದೆ ಮತ್ತು ಇತರ 23 ಜೀವ ವಿಮಾ ಕಂಪನಿಗಳೊಂದಿಗೆ ಸ್ಪರ್ಧಿಸುತ್ತಿದೆ. ಈ ಹಣಕಾಸು ವರ್ಷದ ಎಲ್‌ಐಸಿ 6ರಷ್ಟು ಮಾರುಕಟ್ಟೆ ಪಾಲನ್ನು ಮರಳಿ ಪಡೆದಿದೆ ಮತ್ತು ಕೈಗಾರಿಕಾ ಬೆಳವಣಿಗೆಗಿಂತ ಎಲ್‌ಐಸಿ ಬೆಳವಣಿಗೆ ಹೆಚ್ಚಾಗಿದೆ. ಎಲ್ಐಸಿ ಕಳೆದ 15 ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಲಾಭದ ಹಣವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತಲೇ ಬರುತ್ತಿದೆ.

ಆದಿತ್ಯ ಬಿರ್ಲಾ ಸನ್ ಲೈಪ್, ಎಚ್.ಡಿ.ಎಫ್.ಸಿ, ಐಸಿಐಸಿಐ ಪ್ರುಡೆನ್ಸಿಯಲ್ ಲೈಪ್, ಮ್ಯಾಕ್ಸ್ ಲೈಪ್, ಎಸ್.ಬಿ.ಐ ಲೈಪ್, ಶ್ರೀರಾಮ್ ಲೈಪ್ ಐಡಿಬಿಐ ಫೆಡರಲ್ ಲೈಪ್ ಹೀಗೆ 24 ಖಾಸಗಿ ವಿಮಾ ಕಂಪನಿಗಳು ಮಾರುಕಟ್ಟೆಯಲ್ಲಿದ್ದರೂ ಎಲ್.ಐ.ಸಿ ಸಂಸ್ಥೆಯ ಎತ್ತರಕ್ಕೆ ಯಾರೂ ಬೆಳೆಯಲಾಗಿಲ್ಲ. ಜನರ ನಂಬಿಕೆ, ವಿಶ್ವಾಸವನ್ನು ಗಳಿಸಲು ಸಾಧ್ಯವಾಗಿಲ್ಲ. ಒಂದು ಅಂದಾಜಿನ ಪ್ರಕಾರ ಎಲ್.ಐ.ಸಿಯ 1 ಲಕ್ಷ ಕೋಟಿ ಶೇರುಗಳನ್ನು ಖಾಸಗಿ ಯವರಿಗೆ ಮಾರಾಟ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ. ಸರ್ಕಾರ ಎಲ್ಐಸಿ ಶೇರುಗಳನ್ನು ಮಾರಾಟಕ್ಕಿಟ್ಟರೆ ಪಾಲಿಸಿದಾರರ ಹಣಕ್ಕೆ ಯಾವುದೇ ಭದ್ರತೆ ಇರುವುದಿಲ್ಲ.

ಈಗಾಗಲೇ ಬಿಎಸ್ಎನ್ಎಲ್ ಟೈಟಾನಿಕ್ ನಂತೆ ಮುಳುಗುತ್ತಿದೆ. ಹಾಗೆಯೇ ಎಲ್ಐಸಿಯನ್ನು ಖಾಸಗೀಕರಣಗೊಳಿಸಿದರೆ ಇನ್ನು ಕೆಲವೇ ವರ್ಷಗಳಲ್ಲಿ ಬಾಗಿಲು ಮುಚ್ಚಿಕೊಳ್ಳಲಿದೆ. ಎಲ್.ಐ.ಸಿ ಶೇರುಗಳ ಮಾರಾಟದ ಮಾಹಿತಿ ಪಾಲಿಸಿದಾರರಲ್ಲಿ ದುಗುಡವನ್ನು ತಂದೊಡ್ಡಿದೆ. ನಮ್ಮ ಹಣ ಬರುತ್ತದೋ ಇಲ್ಲವೇ ಎಂಬ ಅತಂಕ ಪಾಲಿಸಿದಾರರಲ್ಲಿ ಮನೆ ಮಾಡಿದೆ. ಇದೇ ಕಾರಣಕ್ಕೆ ಏಜೆಂಟರನ್ನು ಕಂಡು ಹಣವನ್ನು ಹಿಂತೆಗೆದುಕೊಳ್ಳುವ ಕುರಿತು ಮಾತನಾಡುತ್ತಿದ್ದಾರೆ. ಈಗ ಪಾಲಿಸಿದಾರರ ಪಾಡು ಹೇಳತೀರದಾಗಿದೆ. ಯಾವುದೇ ಕಾರಣಕ್ಕು ಎಲ್ಐಸಿಯನ್ನು ಖಾಸಗೀಕರಣಗೊಳಿಸಬಾರದು ಎಂದು ಪ್ರತಿಭಟನೆಗಳು ತೀವ್ರಗೊಳುತ್ತಿವೆ. ಬಜೆಟ್ ನಲ್ಲಿ ಪ್ರಸ್ತಾಪವಾದ ಈ ಸುದ್ದಿ ಆತಂಕಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. LICಯ ಖಾಸಗೀಕರಣ ಅನ್ಯಾಯದ ಪರಮಾವಧಿ. ಜನಸಾಮಾನ್ಯರ ನಂಬಿಕೆಯನ್ನು ಸಂಪೂರ್ಣ ಕಳೆದುಕೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕ ಹಕ್ಕೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...