Homeಮುಖಪುಟಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು...

ಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು…

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ.

- Advertisement -
- Advertisement -

ಭಾರತೀಯ ಜೀವ ವಿಮಾನ ನಿಗಮದಿಂದ ತನ್ನ ಶೇರುಗಳನ್ನು ಮಾರಾಟ ಮಾಡಲು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿರುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ದೇಶವೇ ಬೆಚ್ಚಿಬಿದ್ದಿದೆ. ಸ್ಪರ್ಧಾತ್ಮಕ ಯುಗದಲ್ಲೂ ಅತ್ಯಂತ ಬಲಿಷ್ಟ ಸಂಸ್ಥೆಯಾದ ಜೀವ ವಿಮಾ ನಿಗಮವನ್ನು ಖಾಸಗಿಯವರ ಕೈಗೊಪ್ಪಿಸಿ ಎಳ್ಳುನೀರು ಬಿಡಲು ಸರ್ಕಾರ ಹೊರಟಿದೆ. ಖಾಸಗಿ ವಿಮಾ ಕಂಪನಿಗಳ ಜೊತೆ ಸಮರ್ಥ ಪೈಪೋಟಿ ನೀಡಿ ಲಾಭದಲ್ಲಿರುವ ಸಂಸ್ಥೆಯನ್ನು ಏಕಾಏಕಿ ಖಾಸಗಿಯವರ ಕೈಗೆ ಒಪ್ಪಿಸಿದರೆ ಮುಂದಿನ ಪರಿಣಾಮ ಏನಾಗಬಹುದೆಂಬುದನ್ನು ಕೇಂದ್ರ ಊಹಿಸಿದಂತೆ ಕಾಣುತ್ತಿಲ್ಲ.

ಸೆಪ್ಟೆಂಬರ್ 1, 1956ರಲ್ಲಿ 231 ಖಾಸಗಿ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಭಾರತೀಯ ಜೀವ ವಿಮಾ ನಿಗಮವನ್ನು ಸ್ಥಾಪಿಸಲಾಯಿತು. ಅಂದು ಈ ಖಾಸಗಿ ವಿಮಾ ಕಂಪನಿಗಳು ಸಾರ್ವಜನಿಕರಿಗೆ ಮೋಸ ಮಾಡುವುದರಲ್ಲಿ ತೊಡಗಿದ್ದವು. ಸಾಕಷ್ಟು ಜನರ ಹಣಕ್ಕೆ ಯಾವುದೇ ಭದ್ರತೆ ಇರಲಿಲ್ಲ. ಇದನ್ನು ಮನಗಂಡ ಅಂದಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಖಾಸಗಿ ಕಂಪನಿಗಳನ್ನು ಒಂದುಗೂಡಿಸಿದ್ದರು. ಹೀಗಾಗಿ ಪಾಲಿಸಿದಾರರು ನಿಟ್ಟುಸಿರು ಬಿಟ್ಟರು. ಪಾಲಿಸಿದಾರರ ಹಣಕ್ಕೆ ಭದ್ರತೆ ಸಿಕ್ಕಿತ್ತು.

ಐದು ಕೋಟಿ ರೂಪಾಯಿಗಳಿಂದ ಆರಂಭವಾದ ಭಾರತೀಯ ಜೀವ ವಿಮಾ ನಿಗಮ ಇಂದು ದೇಶಾದ್ಯಂತ ವಿಸ್ತರಿಸಿಕೊಂಡು ಹೆಮ್ಮರವಾಗಿ ಬೆಳೆದು ನಿಂತಿದೆ. 8 ವಲಯಗಳು, 114 ವಿಭಾಗಗಳು ಮತ್ತು 2100 ಶಾಖೆ ಗಳನ್ನುಹೊಂದಿರುವ ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿಯಲ್ಲಿ ಅಧಿಕಾರಿಗಳು, ನೌಕರರು ಸೇರಿ 2 ಲಕ್ಷ ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. 12 ಲಕ್ಷ ಮಂದಿ ಏಜೆಂಟರು ಇಡೀ ದೇಶಾದ್ಯಂತ ಹರಡಿ ಹೋಗಿದ್ದಾರೆ.. ಇವರನ್ನು ನಂಬಿ 14 ಲಕ್ಷ ಕುಟುಂಬಗಳ ಸುಮಾರು ಒಂದು ಕೋಟಿ ಜನರು ಜೀವನ ನಿರ್ವಹಣೆಗೆ ಸಂಸ್ಥೆ ಅನುಕೂಲ ಕಲ್ಪಿಸಿದೆ.

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ. ಭಾರತೀಯ ಜೀವ ವಿಮಾ ನಿಗಮವನ್ನು ಸರಿಗಟ್ಟಬಲ್ಲ ಖಾಸಗಿ ಸಂಸ್ಥೆಯೊಂದು ಇದುವರೆಗೂ ಹುಟ್ಟಿಕೊಳ್ಳಲು ಸಾಧ್ಯವಾಗಿಲ್ಲ. ಹಲವು ಖಾಸಗಿ ವಿಮಾ ಸಂಸ್ಥೆಗಳು ದೇಶದಲ್ಲಿ ಕಾರ್ಯಾಚರಿಸುತ್ತಿದ್ದರೂ ಸರ್ಕಾರಿ ವಿಮಾ ಸಂಸ್ಥೆಯಷ್ಟು ನಂಬಿಕೆ ಉಳಿಸಿಕೊಂಡಿಲ್ಲ. ಸಾಮಾನ್ಯ ಬಡ ರೈತ, ಹೂವಿನ ವ್ಯಾಪಾರಿಯಿಂದ ಹಿಡಿದು ನೌಕರರು, ಅಧಿಕಾರಿಗಳು ಶ್ರೀಮಂತರೂ ಕೂಡ ಎಲ್ಐಸಿ ಪಾಲಿಸಿದಾರರಾಗಿದ್ದಾರೆ. ಇದು ಸಾರ್ವಜನಿಕ ಸಂಸ್ಥೆಯ ಹೆಗ್ಗಳಿಕೆ.

ಇಂತಹ ಹೆಗ್ಗಳಿಕೆ, ಜನರ ವಿಶ್ವಾಸ, ನಂಬಿಕೆ ಮತ್ತು ಪ್ರೀತಿಗೆ ಪಾತ್ರವಾಗಿರುವ ಭಾರತೀಯ ಜೀವ ವಿಮಾ ನಿಗಮದ ಕತ್ತು ಹಿಸುಕಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಲಾಭದಲ್ಲಿರುವ ಸಾರ್ವಜನಿಕ ಸಂಸ್ಥೆಯೊಂದರ ಶೇರುಗಳನ್ನು ಖಾಸಗಿ ಕಂಪನಿಯರಿಗೆ ಕೊಳ್ಳೆ ಕೊಡಲು ಕೇಂದ್ರ ಮನಸ್ಸು ಮಾಡಿದ್ದು ಜನರ ನಂಬಿಕೆಗೆ ಭಾರೀ ಪೆಟ್ಟು ನೀಡಲು ಸಿದ್ದತೆ ಮಾಡಿಕೊಂಡಿದೆ. ಇದು ಸಮರ್ಥನೀಯವಾದ ಕಾರ್ಯವಲ್ಲ. ಇಂತಹ ಕೆಲಸಕ್ಕೆ ಕೈಹಾಕುವ ಮೊದಲು ಸರ್ಕಾರ ಹತ್ತು ಬಾರಿ ಆಲೋಚಿಸಬೇಕು. ಇಲ್ಲಿದಿದ್ದರೆ ಜನರು ಸರ್ಕಾರಗಳ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಾರೆ. ಈ ಎಚ್ಚರಿಕೆ ಪ್ರತಿಯೊಂದು ಸರ್ಕಾರಕ್ಕೂ ಇರಬೇಕು.

ಒಂದೊಮ್ಮೆ ಖಾಸಗೀಕರಣಗೊಳಿಸಿದರೆ ಸರ್ಕಾರಿ ಸ್ವಾಮ್ಯದ ಎಲ್ಐಸಿಯ ಭಾರತದ ಸ್ವಭಾವವು ವಿನಾಶಕಾರಿ ಬದಲಾವಣೆಗೆ ಬರಲಿದೆ ಎಂದು ಭಾವಿಸಲಾಗಿದೆ, ಇದು ಕೋಟಿಗಟ್ಟಲೆ ಪಾಲಿಸಿದಾರರು ಮತ್ತು ಒಟ್ಟಾರೆ ದೇಶದ ಮೇಲೆ ಪರಿಣಾಮ ಬೀರುತ್ತದೆ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕುರುಡಾಗಿ ಉಳಿಸಲು ಭಾರತದ ಸಾಮಾನ್ಯ ಜನರು ಎಲ್‌ಐಸಿಗೆ ನೀಡಿರುವ ನಂಬಿಕೆ ಬಿರುಕು ಬಿಡುತ್ತದೆ. ನಿರ್ಣಾಯಕ ಆರ್ಥಿಕ ಸಂದರ್ಭಗಳಲ್ಲಿ ಎಲ್ಐಸಿಗೆ ರಾಷ್ಟ್ರದ ಸಂರಕ್ಷಕನಾಗಿ ಬರಲು ಸಾಧ್ಯವಾಗುವುದಿಲ್ಲ ಮತ್ತು ಮೇಲಾಗಿ ಸರ್ಕಾರಕ್ಕೆ ಭಾರಿ ಪ್ರಮಾಣದ ಲಾಭಾಂಶವನ್ನು ನೀಡಲಾಗುತ್ತದೆ ಎಂದು ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ ನಂಜುಂಡಸ್ವಾಮಿ ಹೇಳುತ್ತಾರೆ.

ಎಲ್‌ಐಸಿಯ ಅಡಿಪಾಯ ಎಷ್ಟು ಪ್ರಬಲವಾಗಿದೆ. ವಿಮಾ ವಲಯವನ್ನು ತೆರೆದ 20 ವರ್ಷಗಳ ನಂತರವೂ ಎಲ್‌ಐಸಿ 70 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ಮಾರುಕಟ್ಟೆಯ ನಾಯಕರಾಗಿ ಉಳಿದಿದೆ ಮತ್ತು ಇತರ 23 ಜೀವ ವಿಮಾ ಕಂಪನಿಗಳೊಂದಿಗೆ ಸ್ಪರ್ಧಿಸುತ್ತಿದೆ. ಈ ಹಣಕಾಸು ವರ್ಷದ ಎಲ್‌ಐಸಿ 6ರಷ್ಟು ಮಾರುಕಟ್ಟೆ ಪಾಲನ್ನು ಮರಳಿ ಪಡೆದಿದೆ ಮತ್ತು ಕೈಗಾರಿಕಾ ಬೆಳವಣಿಗೆಗಿಂತ ಎಲ್‌ಐಸಿ ಬೆಳವಣಿಗೆ ಹೆಚ್ಚಾಗಿದೆ. ಎಲ್ಐಸಿ ಕಳೆದ 15 ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಲಾಭದ ಹಣವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತಲೇ ಬರುತ್ತಿದೆ.

ಆದಿತ್ಯ ಬಿರ್ಲಾ ಸನ್ ಲೈಪ್, ಎಚ್.ಡಿ.ಎಫ್.ಸಿ, ಐಸಿಐಸಿಐ ಪ್ರುಡೆನ್ಸಿಯಲ್ ಲೈಪ್, ಮ್ಯಾಕ್ಸ್ ಲೈಪ್, ಎಸ್.ಬಿ.ಐ ಲೈಪ್, ಶ್ರೀರಾಮ್ ಲೈಪ್ ಐಡಿಬಿಐ ಫೆಡರಲ್ ಲೈಪ್ ಹೀಗೆ 24 ಖಾಸಗಿ ವಿಮಾ ಕಂಪನಿಗಳು ಮಾರುಕಟ್ಟೆಯಲ್ಲಿದ್ದರೂ ಎಲ್.ಐ.ಸಿ ಸಂಸ್ಥೆಯ ಎತ್ತರಕ್ಕೆ ಯಾರೂ ಬೆಳೆಯಲಾಗಿಲ್ಲ. ಜನರ ನಂಬಿಕೆ, ವಿಶ್ವಾಸವನ್ನು ಗಳಿಸಲು ಸಾಧ್ಯವಾಗಿಲ್ಲ. ಒಂದು ಅಂದಾಜಿನ ಪ್ರಕಾರ ಎಲ್.ಐ.ಸಿಯ 1 ಲಕ್ಷ ಕೋಟಿ ಶೇರುಗಳನ್ನು ಖಾಸಗಿ ಯವರಿಗೆ ಮಾರಾಟ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ. ಸರ್ಕಾರ ಎಲ್ಐಸಿ ಶೇರುಗಳನ್ನು ಮಾರಾಟಕ್ಕಿಟ್ಟರೆ ಪಾಲಿಸಿದಾರರ ಹಣಕ್ಕೆ ಯಾವುದೇ ಭದ್ರತೆ ಇರುವುದಿಲ್ಲ.

ಈಗಾಗಲೇ ಬಿಎಸ್ಎನ್ಎಲ್ ಟೈಟಾನಿಕ್ ನಂತೆ ಮುಳುಗುತ್ತಿದೆ. ಹಾಗೆಯೇ ಎಲ್ಐಸಿಯನ್ನು ಖಾಸಗೀಕರಣಗೊಳಿಸಿದರೆ ಇನ್ನು ಕೆಲವೇ ವರ್ಷಗಳಲ್ಲಿ ಬಾಗಿಲು ಮುಚ್ಚಿಕೊಳ್ಳಲಿದೆ. ಎಲ್.ಐ.ಸಿ ಶೇರುಗಳ ಮಾರಾಟದ ಮಾಹಿತಿ ಪಾಲಿಸಿದಾರರಲ್ಲಿ ದುಗುಡವನ್ನು ತಂದೊಡ್ಡಿದೆ. ನಮ್ಮ ಹಣ ಬರುತ್ತದೋ ಇಲ್ಲವೇ ಎಂಬ ಅತಂಕ ಪಾಲಿಸಿದಾರರಲ್ಲಿ ಮನೆ ಮಾಡಿದೆ. ಇದೇ ಕಾರಣಕ್ಕೆ ಏಜೆಂಟರನ್ನು ಕಂಡು ಹಣವನ್ನು ಹಿಂತೆಗೆದುಕೊಳ್ಳುವ ಕುರಿತು ಮಾತನಾಡುತ್ತಿದ್ದಾರೆ. ಈಗ ಪಾಲಿಸಿದಾರರ ಪಾಡು ಹೇಳತೀರದಾಗಿದೆ. ಯಾವುದೇ ಕಾರಣಕ್ಕು ಎಲ್ಐಸಿಯನ್ನು ಖಾಸಗೀಕರಣಗೊಳಿಸಬಾರದು ಎಂದು ಪ್ರತಿಭಟನೆಗಳು ತೀವ್ರಗೊಳುತ್ತಿವೆ. ಬಜೆಟ್ ನಲ್ಲಿ ಪ್ರಸ್ತಾಪವಾದ ಈ ಸುದ್ದಿ ಆತಂಕಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. LICಯ ಖಾಸಗೀಕರಣ ಅನ್ಯಾಯದ ಪರಮಾವಧಿ. ಜನಸಾಮಾನ್ಯರ ನಂಬಿಕೆಯನ್ನು ಸಂಪೂರ್ಣ ಕಳೆದುಕೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕ ಹಕ್ಕೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...