Homeಮುಖಪುಟಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು...

ಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು…

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ.

- Advertisement -
- Advertisement -

ಭಾರತೀಯ ಜೀವ ವಿಮಾನ ನಿಗಮದಿಂದ ತನ್ನ ಶೇರುಗಳನ್ನು ಮಾರಾಟ ಮಾಡಲು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿರುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ದೇಶವೇ ಬೆಚ್ಚಿಬಿದ್ದಿದೆ. ಸ್ಪರ್ಧಾತ್ಮಕ ಯುಗದಲ್ಲೂ ಅತ್ಯಂತ ಬಲಿಷ್ಟ ಸಂಸ್ಥೆಯಾದ ಜೀವ ವಿಮಾ ನಿಗಮವನ್ನು ಖಾಸಗಿಯವರ ಕೈಗೊಪ್ಪಿಸಿ ಎಳ್ಳುನೀರು ಬಿಡಲು ಸರ್ಕಾರ ಹೊರಟಿದೆ. ಖಾಸಗಿ ವಿಮಾ ಕಂಪನಿಗಳ ಜೊತೆ ಸಮರ್ಥ ಪೈಪೋಟಿ ನೀಡಿ ಲಾಭದಲ್ಲಿರುವ ಸಂಸ್ಥೆಯನ್ನು ಏಕಾಏಕಿ ಖಾಸಗಿಯವರ ಕೈಗೆ ಒಪ್ಪಿಸಿದರೆ ಮುಂದಿನ ಪರಿಣಾಮ ಏನಾಗಬಹುದೆಂಬುದನ್ನು ಕೇಂದ್ರ ಊಹಿಸಿದಂತೆ ಕಾಣುತ್ತಿಲ್ಲ.

ಸೆಪ್ಟೆಂಬರ್ 1, 1956ರಲ್ಲಿ 231 ಖಾಸಗಿ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಭಾರತೀಯ ಜೀವ ವಿಮಾ ನಿಗಮವನ್ನು ಸ್ಥಾಪಿಸಲಾಯಿತು. ಅಂದು ಈ ಖಾಸಗಿ ವಿಮಾ ಕಂಪನಿಗಳು ಸಾರ್ವಜನಿಕರಿಗೆ ಮೋಸ ಮಾಡುವುದರಲ್ಲಿ ತೊಡಗಿದ್ದವು. ಸಾಕಷ್ಟು ಜನರ ಹಣಕ್ಕೆ ಯಾವುದೇ ಭದ್ರತೆ ಇರಲಿಲ್ಲ. ಇದನ್ನು ಮನಗಂಡ ಅಂದಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಖಾಸಗಿ ಕಂಪನಿಗಳನ್ನು ಒಂದುಗೂಡಿಸಿದ್ದರು. ಹೀಗಾಗಿ ಪಾಲಿಸಿದಾರರು ನಿಟ್ಟುಸಿರು ಬಿಟ್ಟರು. ಪಾಲಿಸಿದಾರರ ಹಣಕ್ಕೆ ಭದ್ರತೆ ಸಿಕ್ಕಿತ್ತು.

ಐದು ಕೋಟಿ ರೂಪಾಯಿಗಳಿಂದ ಆರಂಭವಾದ ಭಾರತೀಯ ಜೀವ ವಿಮಾ ನಿಗಮ ಇಂದು ದೇಶಾದ್ಯಂತ ವಿಸ್ತರಿಸಿಕೊಂಡು ಹೆಮ್ಮರವಾಗಿ ಬೆಳೆದು ನಿಂತಿದೆ. 8 ವಲಯಗಳು, 114 ವಿಭಾಗಗಳು ಮತ್ತು 2100 ಶಾಖೆ ಗಳನ್ನುಹೊಂದಿರುವ ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿಯಲ್ಲಿ ಅಧಿಕಾರಿಗಳು, ನೌಕರರು ಸೇರಿ 2 ಲಕ್ಷ ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. 12 ಲಕ್ಷ ಮಂದಿ ಏಜೆಂಟರು ಇಡೀ ದೇಶಾದ್ಯಂತ ಹರಡಿ ಹೋಗಿದ್ದಾರೆ.. ಇವರನ್ನು ನಂಬಿ 14 ಲಕ್ಷ ಕುಟುಂಬಗಳ ಸುಮಾರು ಒಂದು ಕೋಟಿ ಜನರು ಜೀವನ ನಿರ್ವಹಣೆಗೆ ಸಂಸ್ಥೆ ಅನುಕೂಲ ಕಲ್ಪಿಸಿದೆ.

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ. ಭಾರತೀಯ ಜೀವ ವಿಮಾ ನಿಗಮವನ್ನು ಸರಿಗಟ್ಟಬಲ್ಲ ಖಾಸಗಿ ಸಂಸ್ಥೆಯೊಂದು ಇದುವರೆಗೂ ಹುಟ್ಟಿಕೊಳ್ಳಲು ಸಾಧ್ಯವಾಗಿಲ್ಲ. ಹಲವು ಖಾಸಗಿ ವಿಮಾ ಸಂಸ್ಥೆಗಳು ದೇಶದಲ್ಲಿ ಕಾರ್ಯಾಚರಿಸುತ್ತಿದ್ದರೂ ಸರ್ಕಾರಿ ವಿಮಾ ಸಂಸ್ಥೆಯಷ್ಟು ನಂಬಿಕೆ ಉಳಿಸಿಕೊಂಡಿಲ್ಲ. ಸಾಮಾನ್ಯ ಬಡ ರೈತ, ಹೂವಿನ ವ್ಯಾಪಾರಿಯಿಂದ ಹಿಡಿದು ನೌಕರರು, ಅಧಿಕಾರಿಗಳು ಶ್ರೀಮಂತರೂ ಕೂಡ ಎಲ್ಐಸಿ ಪಾಲಿಸಿದಾರರಾಗಿದ್ದಾರೆ. ಇದು ಸಾರ್ವಜನಿಕ ಸಂಸ್ಥೆಯ ಹೆಗ್ಗಳಿಕೆ.

ಇಂತಹ ಹೆಗ್ಗಳಿಕೆ, ಜನರ ವಿಶ್ವಾಸ, ನಂಬಿಕೆ ಮತ್ತು ಪ್ರೀತಿಗೆ ಪಾತ್ರವಾಗಿರುವ ಭಾರತೀಯ ಜೀವ ವಿಮಾ ನಿಗಮದ ಕತ್ತು ಹಿಸುಕಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಲಾಭದಲ್ಲಿರುವ ಸಾರ್ವಜನಿಕ ಸಂಸ್ಥೆಯೊಂದರ ಶೇರುಗಳನ್ನು ಖಾಸಗಿ ಕಂಪನಿಯರಿಗೆ ಕೊಳ್ಳೆ ಕೊಡಲು ಕೇಂದ್ರ ಮನಸ್ಸು ಮಾಡಿದ್ದು ಜನರ ನಂಬಿಕೆಗೆ ಭಾರೀ ಪೆಟ್ಟು ನೀಡಲು ಸಿದ್ದತೆ ಮಾಡಿಕೊಂಡಿದೆ. ಇದು ಸಮರ್ಥನೀಯವಾದ ಕಾರ್ಯವಲ್ಲ. ಇಂತಹ ಕೆಲಸಕ್ಕೆ ಕೈಹಾಕುವ ಮೊದಲು ಸರ್ಕಾರ ಹತ್ತು ಬಾರಿ ಆಲೋಚಿಸಬೇಕು. ಇಲ್ಲಿದಿದ್ದರೆ ಜನರು ಸರ್ಕಾರಗಳ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಾರೆ. ಈ ಎಚ್ಚರಿಕೆ ಪ್ರತಿಯೊಂದು ಸರ್ಕಾರಕ್ಕೂ ಇರಬೇಕು.

ಒಂದೊಮ್ಮೆ ಖಾಸಗೀಕರಣಗೊಳಿಸಿದರೆ ಸರ್ಕಾರಿ ಸ್ವಾಮ್ಯದ ಎಲ್ಐಸಿಯ ಭಾರತದ ಸ್ವಭಾವವು ವಿನಾಶಕಾರಿ ಬದಲಾವಣೆಗೆ ಬರಲಿದೆ ಎಂದು ಭಾವಿಸಲಾಗಿದೆ, ಇದು ಕೋಟಿಗಟ್ಟಲೆ ಪಾಲಿಸಿದಾರರು ಮತ್ತು ಒಟ್ಟಾರೆ ದೇಶದ ಮೇಲೆ ಪರಿಣಾಮ ಬೀರುತ್ತದೆ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕುರುಡಾಗಿ ಉಳಿಸಲು ಭಾರತದ ಸಾಮಾನ್ಯ ಜನರು ಎಲ್‌ಐಸಿಗೆ ನೀಡಿರುವ ನಂಬಿಕೆ ಬಿರುಕು ಬಿಡುತ್ತದೆ. ನಿರ್ಣಾಯಕ ಆರ್ಥಿಕ ಸಂದರ್ಭಗಳಲ್ಲಿ ಎಲ್ಐಸಿಗೆ ರಾಷ್ಟ್ರದ ಸಂರಕ್ಷಕನಾಗಿ ಬರಲು ಸಾಧ್ಯವಾಗುವುದಿಲ್ಲ ಮತ್ತು ಮೇಲಾಗಿ ಸರ್ಕಾರಕ್ಕೆ ಭಾರಿ ಪ್ರಮಾಣದ ಲಾಭಾಂಶವನ್ನು ನೀಡಲಾಗುತ್ತದೆ ಎಂದು ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ ನಂಜುಂಡಸ್ವಾಮಿ ಹೇಳುತ್ತಾರೆ.

ಎಲ್‌ಐಸಿಯ ಅಡಿಪಾಯ ಎಷ್ಟು ಪ್ರಬಲವಾಗಿದೆ. ವಿಮಾ ವಲಯವನ್ನು ತೆರೆದ 20 ವರ್ಷಗಳ ನಂತರವೂ ಎಲ್‌ಐಸಿ 70 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ಮಾರುಕಟ್ಟೆಯ ನಾಯಕರಾಗಿ ಉಳಿದಿದೆ ಮತ್ತು ಇತರ 23 ಜೀವ ವಿಮಾ ಕಂಪನಿಗಳೊಂದಿಗೆ ಸ್ಪರ್ಧಿಸುತ್ತಿದೆ. ಈ ಹಣಕಾಸು ವರ್ಷದ ಎಲ್‌ಐಸಿ 6ರಷ್ಟು ಮಾರುಕಟ್ಟೆ ಪಾಲನ್ನು ಮರಳಿ ಪಡೆದಿದೆ ಮತ್ತು ಕೈಗಾರಿಕಾ ಬೆಳವಣಿಗೆಗಿಂತ ಎಲ್‌ಐಸಿ ಬೆಳವಣಿಗೆ ಹೆಚ್ಚಾಗಿದೆ. ಎಲ್ಐಸಿ ಕಳೆದ 15 ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಲಾಭದ ಹಣವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತಲೇ ಬರುತ್ತಿದೆ.

ಆದಿತ್ಯ ಬಿರ್ಲಾ ಸನ್ ಲೈಪ್, ಎಚ್.ಡಿ.ಎಫ್.ಸಿ, ಐಸಿಐಸಿಐ ಪ್ರುಡೆನ್ಸಿಯಲ್ ಲೈಪ್, ಮ್ಯಾಕ್ಸ್ ಲೈಪ್, ಎಸ್.ಬಿ.ಐ ಲೈಪ್, ಶ್ರೀರಾಮ್ ಲೈಪ್ ಐಡಿಬಿಐ ಫೆಡರಲ್ ಲೈಪ್ ಹೀಗೆ 24 ಖಾಸಗಿ ವಿಮಾ ಕಂಪನಿಗಳು ಮಾರುಕಟ್ಟೆಯಲ್ಲಿದ್ದರೂ ಎಲ್.ಐ.ಸಿ ಸಂಸ್ಥೆಯ ಎತ್ತರಕ್ಕೆ ಯಾರೂ ಬೆಳೆಯಲಾಗಿಲ್ಲ. ಜನರ ನಂಬಿಕೆ, ವಿಶ್ವಾಸವನ್ನು ಗಳಿಸಲು ಸಾಧ್ಯವಾಗಿಲ್ಲ. ಒಂದು ಅಂದಾಜಿನ ಪ್ರಕಾರ ಎಲ್.ಐ.ಸಿಯ 1 ಲಕ್ಷ ಕೋಟಿ ಶೇರುಗಳನ್ನು ಖಾಸಗಿ ಯವರಿಗೆ ಮಾರಾಟ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ. ಸರ್ಕಾರ ಎಲ್ಐಸಿ ಶೇರುಗಳನ್ನು ಮಾರಾಟಕ್ಕಿಟ್ಟರೆ ಪಾಲಿಸಿದಾರರ ಹಣಕ್ಕೆ ಯಾವುದೇ ಭದ್ರತೆ ಇರುವುದಿಲ್ಲ.

ಈಗಾಗಲೇ ಬಿಎಸ್ಎನ್ಎಲ್ ಟೈಟಾನಿಕ್ ನಂತೆ ಮುಳುಗುತ್ತಿದೆ. ಹಾಗೆಯೇ ಎಲ್ಐಸಿಯನ್ನು ಖಾಸಗೀಕರಣಗೊಳಿಸಿದರೆ ಇನ್ನು ಕೆಲವೇ ವರ್ಷಗಳಲ್ಲಿ ಬಾಗಿಲು ಮುಚ್ಚಿಕೊಳ್ಳಲಿದೆ. ಎಲ್.ಐ.ಸಿ ಶೇರುಗಳ ಮಾರಾಟದ ಮಾಹಿತಿ ಪಾಲಿಸಿದಾರರಲ್ಲಿ ದುಗುಡವನ್ನು ತಂದೊಡ್ಡಿದೆ. ನಮ್ಮ ಹಣ ಬರುತ್ತದೋ ಇಲ್ಲವೇ ಎಂಬ ಅತಂಕ ಪಾಲಿಸಿದಾರರಲ್ಲಿ ಮನೆ ಮಾಡಿದೆ. ಇದೇ ಕಾರಣಕ್ಕೆ ಏಜೆಂಟರನ್ನು ಕಂಡು ಹಣವನ್ನು ಹಿಂತೆಗೆದುಕೊಳ್ಳುವ ಕುರಿತು ಮಾತನಾಡುತ್ತಿದ್ದಾರೆ. ಈಗ ಪಾಲಿಸಿದಾರರ ಪಾಡು ಹೇಳತೀರದಾಗಿದೆ. ಯಾವುದೇ ಕಾರಣಕ್ಕು ಎಲ್ಐಸಿಯನ್ನು ಖಾಸಗೀಕರಣಗೊಳಿಸಬಾರದು ಎಂದು ಪ್ರತಿಭಟನೆಗಳು ತೀವ್ರಗೊಳುತ್ತಿವೆ. ಬಜೆಟ್ ನಲ್ಲಿ ಪ್ರಸ್ತಾಪವಾದ ಈ ಸುದ್ದಿ ಆತಂಕಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. LICಯ ಖಾಸಗೀಕರಣ ಅನ್ಯಾಯದ ಪರಮಾವಧಿ. ಜನಸಾಮಾನ್ಯರ ನಂಬಿಕೆಯನ್ನು ಸಂಪೂರ್ಣ ಕಳೆದುಕೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕ ಹಕ್ಕೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...