Homeಮುಖಪುಟಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು...

ಎಲ್ಐಸಿ ಶೇರು ಮಾರಾಟಕ್ಕೆ ಸಿದ್ದತೆ : ಆತಂಕಗೊಂಡ ಪಾಲಿಸಿದಾರರು…

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ.

- Advertisement -
- Advertisement -

ಭಾರತೀಯ ಜೀವ ವಿಮಾನ ನಿಗಮದಿಂದ ತನ್ನ ಶೇರುಗಳನ್ನು ಮಾರಾಟ ಮಾಡಲು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿರುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ದೇಶವೇ ಬೆಚ್ಚಿಬಿದ್ದಿದೆ. ಸ್ಪರ್ಧಾತ್ಮಕ ಯುಗದಲ್ಲೂ ಅತ್ಯಂತ ಬಲಿಷ್ಟ ಸಂಸ್ಥೆಯಾದ ಜೀವ ವಿಮಾ ನಿಗಮವನ್ನು ಖಾಸಗಿಯವರ ಕೈಗೊಪ್ಪಿಸಿ ಎಳ್ಳುನೀರು ಬಿಡಲು ಸರ್ಕಾರ ಹೊರಟಿದೆ. ಖಾಸಗಿ ವಿಮಾ ಕಂಪನಿಗಳ ಜೊತೆ ಸಮರ್ಥ ಪೈಪೋಟಿ ನೀಡಿ ಲಾಭದಲ್ಲಿರುವ ಸಂಸ್ಥೆಯನ್ನು ಏಕಾಏಕಿ ಖಾಸಗಿಯವರ ಕೈಗೆ ಒಪ್ಪಿಸಿದರೆ ಮುಂದಿನ ಪರಿಣಾಮ ಏನಾಗಬಹುದೆಂಬುದನ್ನು ಕೇಂದ್ರ ಊಹಿಸಿದಂತೆ ಕಾಣುತ್ತಿಲ್ಲ.

ಸೆಪ್ಟೆಂಬರ್ 1, 1956ರಲ್ಲಿ 231 ಖಾಸಗಿ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಭಾರತೀಯ ಜೀವ ವಿಮಾ ನಿಗಮವನ್ನು ಸ್ಥಾಪಿಸಲಾಯಿತು. ಅಂದು ಈ ಖಾಸಗಿ ವಿಮಾ ಕಂಪನಿಗಳು ಸಾರ್ವಜನಿಕರಿಗೆ ಮೋಸ ಮಾಡುವುದರಲ್ಲಿ ತೊಡಗಿದ್ದವು. ಸಾಕಷ್ಟು ಜನರ ಹಣಕ್ಕೆ ಯಾವುದೇ ಭದ್ರತೆ ಇರಲಿಲ್ಲ. ಇದನ್ನು ಮನಗಂಡ ಅಂದಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಖಾಸಗಿ ಕಂಪನಿಗಳನ್ನು ಒಂದುಗೂಡಿಸಿದ್ದರು. ಹೀಗಾಗಿ ಪಾಲಿಸಿದಾರರು ನಿಟ್ಟುಸಿರು ಬಿಟ್ಟರು. ಪಾಲಿಸಿದಾರರ ಹಣಕ್ಕೆ ಭದ್ರತೆ ಸಿಕ್ಕಿತ್ತು.

ಐದು ಕೋಟಿ ರೂಪಾಯಿಗಳಿಂದ ಆರಂಭವಾದ ಭಾರತೀಯ ಜೀವ ವಿಮಾ ನಿಗಮ ಇಂದು ದೇಶಾದ್ಯಂತ ವಿಸ್ತರಿಸಿಕೊಂಡು ಹೆಮ್ಮರವಾಗಿ ಬೆಳೆದು ನಿಂತಿದೆ. 8 ವಲಯಗಳು, 114 ವಿಭಾಗಗಳು ಮತ್ತು 2100 ಶಾಖೆ ಗಳನ್ನುಹೊಂದಿರುವ ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿಯಲ್ಲಿ ಅಧಿಕಾರಿಗಳು, ನೌಕರರು ಸೇರಿ 2 ಲಕ್ಷ ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. 12 ಲಕ್ಷ ಮಂದಿ ಏಜೆಂಟರು ಇಡೀ ದೇಶಾದ್ಯಂತ ಹರಡಿ ಹೋಗಿದ್ದಾರೆ.. ಇವರನ್ನು ನಂಬಿ 14 ಲಕ್ಷ ಕುಟುಂಬಗಳ ಸುಮಾರು ಒಂದು ಕೋಟಿ ಜನರು ಜೀವನ ನಿರ್ವಹಣೆಗೆ ಸಂಸ್ಥೆ ಅನುಕೂಲ ಕಲ್ಪಿಸಿದೆ.

ಜೀವ ವಿಮಾ ಸಂಸ್ಥೆಯಲ್ಲಿ 30 ಕೋಟಿ ಮಂದಿ ಪಾಲಿಸಿದಾರರು ತಮ್ಮ ಹಣವನ್ನು ತೊಡಗಿಸಿದ್ದಾರೆ. ಎಲ್ಐಸಿ ಸಂಸ್ಥೆ ಮೇಲೆ ಜನರು ಇಟ್ಟಿರುವ ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ. ಭಾರತೀಯ ಜೀವ ವಿಮಾ ನಿಗಮವನ್ನು ಸರಿಗಟ್ಟಬಲ್ಲ ಖಾಸಗಿ ಸಂಸ್ಥೆಯೊಂದು ಇದುವರೆಗೂ ಹುಟ್ಟಿಕೊಳ್ಳಲು ಸಾಧ್ಯವಾಗಿಲ್ಲ. ಹಲವು ಖಾಸಗಿ ವಿಮಾ ಸಂಸ್ಥೆಗಳು ದೇಶದಲ್ಲಿ ಕಾರ್ಯಾಚರಿಸುತ್ತಿದ್ದರೂ ಸರ್ಕಾರಿ ವಿಮಾ ಸಂಸ್ಥೆಯಷ್ಟು ನಂಬಿಕೆ ಉಳಿಸಿಕೊಂಡಿಲ್ಲ. ಸಾಮಾನ್ಯ ಬಡ ರೈತ, ಹೂವಿನ ವ್ಯಾಪಾರಿಯಿಂದ ಹಿಡಿದು ನೌಕರರು, ಅಧಿಕಾರಿಗಳು ಶ್ರೀಮಂತರೂ ಕೂಡ ಎಲ್ಐಸಿ ಪಾಲಿಸಿದಾರರಾಗಿದ್ದಾರೆ. ಇದು ಸಾರ್ವಜನಿಕ ಸಂಸ್ಥೆಯ ಹೆಗ್ಗಳಿಕೆ.

ಇಂತಹ ಹೆಗ್ಗಳಿಕೆ, ಜನರ ವಿಶ್ವಾಸ, ನಂಬಿಕೆ ಮತ್ತು ಪ್ರೀತಿಗೆ ಪಾತ್ರವಾಗಿರುವ ಭಾರತೀಯ ಜೀವ ವಿಮಾ ನಿಗಮದ ಕತ್ತು ಹಿಸುಕಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಲಾಭದಲ್ಲಿರುವ ಸಾರ್ವಜನಿಕ ಸಂಸ್ಥೆಯೊಂದರ ಶೇರುಗಳನ್ನು ಖಾಸಗಿ ಕಂಪನಿಯರಿಗೆ ಕೊಳ್ಳೆ ಕೊಡಲು ಕೇಂದ್ರ ಮನಸ್ಸು ಮಾಡಿದ್ದು ಜನರ ನಂಬಿಕೆಗೆ ಭಾರೀ ಪೆಟ್ಟು ನೀಡಲು ಸಿದ್ದತೆ ಮಾಡಿಕೊಂಡಿದೆ. ಇದು ಸಮರ್ಥನೀಯವಾದ ಕಾರ್ಯವಲ್ಲ. ಇಂತಹ ಕೆಲಸಕ್ಕೆ ಕೈಹಾಕುವ ಮೊದಲು ಸರ್ಕಾರ ಹತ್ತು ಬಾರಿ ಆಲೋಚಿಸಬೇಕು. ಇಲ್ಲಿದಿದ್ದರೆ ಜನರು ಸರ್ಕಾರಗಳ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಾರೆ. ಈ ಎಚ್ಚರಿಕೆ ಪ್ರತಿಯೊಂದು ಸರ್ಕಾರಕ್ಕೂ ಇರಬೇಕು.

ಒಂದೊಮ್ಮೆ ಖಾಸಗೀಕರಣಗೊಳಿಸಿದರೆ ಸರ್ಕಾರಿ ಸ್ವಾಮ್ಯದ ಎಲ್ಐಸಿಯ ಭಾರತದ ಸ್ವಭಾವವು ವಿನಾಶಕಾರಿ ಬದಲಾವಣೆಗೆ ಬರಲಿದೆ ಎಂದು ಭಾವಿಸಲಾಗಿದೆ, ಇದು ಕೋಟಿಗಟ್ಟಲೆ ಪಾಲಿಸಿದಾರರು ಮತ್ತು ಒಟ್ಟಾರೆ ದೇಶದ ಮೇಲೆ ಪರಿಣಾಮ ಬೀರುತ್ತದೆ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕುರುಡಾಗಿ ಉಳಿಸಲು ಭಾರತದ ಸಾಮಾನ್ಯ ಜನರು ಎಲ್‌ಐಸಿಗೆ ನೀಡಿರುವ ನಂಬಿಕೆ ಬಿರುಕು ಬಿಡುತ್ತದೆ. ನಿರ್ಣಾಯಕ ಆರ್ಥಿಕ ಸಂದರ್ಭಗಳಲ್ಲಿ ಎಲ್ಐಸಿಗೆ ರಾಷ್ಟ್ರದ ಸಂರಕ್ಷಕನಾಗಿ ಬರಲು ಸಾಧ್ಯವಾಗುವುದಿಲ್ಲ ಮತ್ತು ಮೇಲಾಗಿ ಸರ್ಕಾರಕ್ಕೆ ಭಾರಿ ಪ್ರಮಾಣದ ಲಾಭಾಂಶವನ್ನು ನೀಡಲಾಗುತ್ತದೆ ಎಂದು ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ ನಂಜುಂಡಸ್ವಾಮಿ ಹೇಳುತ್ತಾರೆ.

ಎಲ್‌ಐಸಿಯ ಅಡಿಪಾಯ ಎಷ್ಟು ಪ್ರಬಲವಾಗಿದೆ. ವಿಮಾ ವಲಯವನ್ನು ತೆರೆದ 20 ವರ್ಷಗಳ ನಂತರವೂ ಎಲ್‌ಐಸಿ 70 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ಮಾರುಕಟ್ಟೆಯ ನಾಯಕರಾಗಿ ಉಳಿದಿದೆ ಮತ್ತು ಇತರ 23 ಜೀವ ವಿಮಾ ಕಂಪನಿಗಳೊಂದಿಗೆ ಸ್ಪರ್ಧಿಸುತ್ತಿದೆ. ಈ ಹಣಕಾಸು ವರ್ಷದ ಎಲ್‌ಐಸಿ 6ರಷ್ಟು ಮಾರುಕಟ್ಟೆ ಪಾಲನ್ನು ಮರಳಿ ಪಡೆದಿದೆ ಮತ್ತು ಕೈಗಾರಿಕಾ ಬೆಳವಣಿಗೆಗಿಂತ ಎಲ್‌ಐಸಿ ಬೆಳವಣಿಗೆ ಹೆಚ್ಚಾಗಿದೆ. ಎಲ್ಐಸಿ ಕಳೆದ 15 ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಲಾಭದ ಹಣವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತಲೇ ಬರುತ್ತಿದೆ.

ಆದಿತ್ಯ ಬಿರ್ಲಾ ಸನ್ ಲೈಪ್, ಎಚ್.ಡಿ.ಎಫ್.ಸಿ, ಐಸಿಐಸಿಐ ಪ್ರುಡೆನ್ಸಿಯಲ್ ಲೈಪ್, ಮ್ಯಾಕ್ಸ್ ಲೈಪ್, ಎಸ್.ಬಿ.ಐ ಲೈಪ್, ಶ್ರೀರಾಮ್ ಲೈಪ್ ಐಡಿಬಿಐ ಫೆಡರಲ್ ಲೈಪ್ ಹೀಗೆ 24 ಖಾಸಗಿ ವಿಮಾ ಕಂಪನಿಗಳು ಮಾರುಕಟ್ಟೆಯಲ್ಲಿದ್ದರೂ ಎಲ್.ಐ.ಸಿ ಸಂಸ್ಥೆಯ ಎತ್ತರಕ್ಕೆ ಯಾರೂ ಬೆಳೆಯಲಾಗಿಲ್ಲ. ಜನರ ನಂಬಿಕೆ, ವಿಶ್ವಾಸವನ್ನು ಗಳಿಸಲು ಸಾಧ್ಯವಾಗಿಲ್ಲ. ಒಂದು ಅಂದಾಜಿನ ಪ್ರಕಾರ ಎಲ್.ಐ.ಸಿಯ 1 ಲಕ್ಷ ಕೋಟಿ ಶೇರುಗಳನ್ನು ಖಾಸಗಿ ಯವರಿಗೆ ಮಾರಾಟ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ. ಸರ್ಕಾರ ಎಲ್ಐಸಿ ಶೇರುಗಳನ್ನು ಮಾರಾಟಕ್ಕಿಟ್ಟರೆ ಪಾಲಿಸಿದಾರರ ಹಣಕ್ಕೆ ಯಾವುದೇ ಭದ್ರತೆ ಇರುವುದಿಲ್ಲ.

ಈಗಾಗಲೇ ಬಿಎಸ್ಎನ್ಎಲ್ ಟೈಟಾನಿಕ್ ನಂತೆ ಮುಳುಗುತ್ತಿದೆ. ಹಾಗೆಯೇ ಎಲ್ಐಸಿಯನ್ನು ಖಾಸಗೀಕರಣಗೊಳಿಸಿದರೆ ಇನ್ನು ಕೆಲವೇ ವರ್ಷಗಳಲ್ಲಿ ಬಾಗಿಲು ಮುಚ್ಚಿಕೊಳ್ಳಲಿದೆ. ಎಲ್.ಐ.ಸಿ ಶೇರುಗಳ ಮಾರಾಟದ ಮಾಹಿತಿ ಪಾಲಿಸಿದಾರರಲ್ಲಿ ದುಗುಡವನ್ನು ತಂದೊಡ್ಡಿದೆ. ನಮ್ಮ ಹಣ ಬರುತ್ತದೋ ಇಲ್ಲವೇ ಎಂಬ ಅತಂಕ ಪಾಲಿಸಿದಾರರಲ್ಲಿ ಮನೆ ಮಾಡಿದೆ. ಇದೇ ಕಾರಣಕ್ಕೆ ಏಜೆಂಟರನ್ನು ಕಂಡು ಹಣವನ್ನು ಹಿಂತೆಗೆದುಕೊಳ್ಳುವ ಕುರಿತು ಮಾತನಾಡುತ್ತಿದ್ದಾರೆ. ಈಗ ಪಾಲಿಸಿದಾರರ ಪಾಡು ಹೇಳತೀರದಾಗಿದೆ. ಯಾವುದೇ ಕಾರಣಕ್ಕು ಎಲ್ಐಸಿಯನ್ನು ಖಾಸಗೀಕರಣಗೊಳಿಸಬಾರದು ಎಂದು ಪ್ರತಿಭಟನೆಗಳು ತೀವ್ರಗೊಳುತ್ತಿವೆ. ಬಜೆಟ್ ನಲ್ಲಿ ಪ್ರಸ್ತಾಪವಾದ ಈ ಸುದ್ದಿ ಆತಂಕಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. LICಯ ಖಾಸಗೀಕರಣ ಅನ್ಯಾಯದ ಪರಮಾವಧಿ. ಜನಸಾಮಾನ್ಯರ ನಂಬಿಕೆಯನ್ನು ಸಂಪೂರ್ಣ ಕಳೆದುಕೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕ ಹಕ್ಕೂ ಇಲ್ಲ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...