Homeಕರ್ನಾಟಕಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

- Advertisement -
- Advertisement -

ಪೋಸ್ಟ್ ಕಾರ್ಡ್ ಕನ್ನಡ ಸದಾ ಫೇಕ್ ನ್ಯೂಸ್‍ಗಳನ್ನೆ ಹಾಸೊದ್ದುಕೊಂಡಿರುವ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಒಂದು ಬಲಪಂಥೀಯ ಸಾಮಾಜಿಕ ಜಾಲತಾಣ. ಸುಳ್ಳು ಸುದ್ದಿಗಳಿಗೆ ಕುಖ್ಯಾತಿಯಾಗಿರುವ ಆ ಸಾಮಾಜಿಕ ಜಾಲತಾಣ ಈಗ ಮತ್ತೊಂದು ಅಂತಹದ್ದೆ ಸುಳ್ಳು ಸುದ್ದಿಯನ್ನು ಹೊಂದಿರುವ ಪೋಸ್ಟರ್‌ವೊಂದನ್ನು ಶೇರ್ ಮಾಡಿತ್ತು, ಆ ಪೋಸ್ಟರ್‌ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಬರಹವನ್ನು ಪ್ರಕಟಿಸಿತ್ತು, ಪೋಸ್ಟರ್‌ನಲ್ಲಿರುವುದು ಹಸಿ ಸುಳ್ಳು ಎಂದು ವಾರ್ತಾಭಾರತಿ ಆಧಾರ ಸಹಿತ ವರದಿ ಮಾಡಿತ್ತು. ಅಲ್ಲಿ ಸುದ್ದಿ ಪ್ರಕಟಣೆಯಾಗುತ್ತಿದಂತೆ ಇತ್ತ ಪೋಸ್ಟ್ ಕಾರ್ಡ್ ತನ್ನ ಪೇಜ್ ನಲ್ಲಿ ಪ್ರಕಟಗೊಂಡ ಸುಳ್ಳು ಸುದ್ದಿಯ ಪೋಸ್ಟರ್‌ ಅನ್ನು ಡಿಲೀಟ್ ಮಾಡುವ ಮೂಲಕ ಮತ್ತೆ ಜನರೆದುರು ಬೆತ್ತಲಾಗಿದೆ.

ಪೋಸ್ಟ್ ಕಾರ್ಡ್ ತಾನು ಪ್ರಕಟಿಸಿದ್ದ ಪೋಸ್ಟರ್‌ನಲ್ಲಿ “ ನಮ್ಮ ಇಸ್ಲಾಂನಲ್ಲಿ ಹೆಣ್ಣನ್ನ ಮಕ್ಕಳನ್ನು ಹೆರುವ ಕೃಷಿ ಎಂದು ಪರಿಗಣಿಸಲಾಗಿದೆ. ನಾವೆಲ್ಲರೂ ಮುಸ್ಲಿಂ ಧರ್ಮವನ್ನು ತೊರೆದು ಹಿಂದೂ ಆಗಲಿದ್ದೇವೆ ಮತ್ತು ಹಿಂದೂ ಹುಡುಗರನ್ನು ಮದುವೆಯಾಗುತ್ತೇವೆ, ಮತ್ತೆ ಯಾವುದೇ ತಲಾಕ್ ಇಲ್ಲ, ಹಲಾಲ್ ಕೂಡ ಇಲ್ಲ. ಸನಾತನ ಹಿಂದೂ ಧರ್ಮ ನಮ್ಮದಾಗಲಿ” ಎಂದು ಬರೆದಿದ್ದ ಪೋಸ್ಟರ್ ನಲ್ಲಿ ಫಾತಿಮಾ ಖುರೇಷಿ, ಮುಂಬೈ ಎಂದು ಹೆಸರು ಹಾಕಿ ಮುಸ್ಲಿಂ ಮಹಿಳೆಯೊಬ್ಬರ ಫೋಟೋ ಹಾಕಲಾಗಿತ್ತು. ಜೊತೆಗೆ “ಇಸ್ಲಾಂನಲ್ಲಿ ಹೆಣ್ಣನ್ನು ಭೋಗದ ವಸ್ತುವಂತೆ ಬಳಸುತ್ತಿದ್ದಾರೆ ಎಂದು ಮುಸ್ಲಿಂ ಹೆಣ್ಣು ಮಕ್ಕಳೇ ಒಪ್ಪಿಕೊಂಡು ಹಿಂದೂ ಧರ್ಮದತ್ತ ಮುಖ ಮಾಡಸುತ್ತಿದ್ದಾರೆ .” ಎಂದು ಬರೆದ ಪೋಸ್ಟರ್‌ಅನ್ನು ಪ್ರಕಟಿಸಿತ್ತು.

ಪೋಸ್ಟ್ ಕಾರ್ಡ್ ಕನ್ನಡ ಪ್ರಕಟಿಸಿದ್ದ ಸುಳ್ಳು ಸುದ್ದಿ

ಈ ಪೋಸ್ಟರ್ ಎರಡು ವಾರಗಳ ಹಿಂದೆ ಹಿಂದಿ ಭಾಷೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದೇ ಮಹಿಳೆಯ ಫೋಟೋ ಬಳಸಿ, ಹಿಂದಿಯಲ್ಲಿ ಬರೆದಿದ್ದ ಬರಹವನ್ನು ಕನ್ನಡಕ್ಕೆ ಅನುವಾದಿಸಿ ಮತ್ತಷ್ಟು ದ್ವೇಷ ಹರಡುವ ಸಾಲುಗಳನ್ನು ಸೇರಿಸಿ ಪೋಸ್ಟರ್ ರೂಪಿಸಿರುವುದು ಫ್ಯಾಕ್ಟ್‌ ಚೆಕ್ ಮೂಲಕ ತಿಳಿದುಬಂದಿದೆ. ನಕಲು ಮಾಡಿರುವ ಸುದ್ದಿಯು 2019ರಲ್ಲಿ ನ್ಯೂಸ್ ಮೊಬೈಲ್.ಇನ್ ಪ್ರಕಟವಾಗಿರುವುದನ್ನು ಕಾಣಬಹುದು. ಹಾಗಾಗಿ ಇದೊಂದು ತಿರುಚಲ್ಪಟ್ಟ ಸುದ್ದಿ ಎಂದು ತಿಳಿದುಬಂದಿದೆ.

ಗೂಗಲ್ ಮೂಲಕ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಪೋಸ್ಟರ್ ನಲ್ಲಿ ಇರುವ ಮಹಿಳೆಯ ಫೋಟೋ ಮರಿಯಮ್ ಖಾಲಿಕ್ ಎಂಬುವವರದು ಎಂದು ತಿಳಿದು ಬಂದಿದ್ದು, ಪೋಸ್ಟ್ ಕಾರ್ಡ್ ನಲ್ಲಿ ಅವರ ಹೆಸರನ್ನು ಫಾತಿಮಾ ಖುರೇಷಿ, ಮುಂಬೈ ಎಂಬ ಹೆಸರಿನಲ್ಲಿ ಕಪೋಲಕಲ್ಪಿತ ಹೇಳಿಕೆಯನ್ನು ಪ್ರಕಟಿಸಿದೆ. 2013ರ ಸೆಪ್ಟಂಬರ್ 20 ರಂದು ಗ್ಲೋಬಲ್ ಎಜುಕೇಶನ್ ಮಾನಿಟರಿಂಗ್ (GEM) ಸೈಟ್‍ನಲ್ಲಿ  ಪ್ರಕಟಿಸಿದ ವರದಿಯಲ್ಲಿ ಈ ಮಹಿಳೆಯು ನೊಬೆಲ್ ಪುರಸ್ಕೃತೆ ಮಲಾಲಾ ಯೂಸಫ್‍ಜಾಯ್ ಅವರ ಶಿಕ್ಷಕಿ ಮರಿಯಮ್ ಖಾಲಿಕ್ ಎಂದು ತಿಳಿದುಬಂದಿದೆ. ನ್ಯೂಯಾರ್ಕ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಕಿಯರ ಶಿಕ್ಷಣದ ಮಹತ್ವ ಕುರಿತು ಮರಿಯಮ್ ಮಾತನಾಡುತ್ತಿದ್ದ ಸಂದರ್ಭದಲ್ಲಿ ತೆಗೆದ ಫೋಟೋ ಆಗಿದ್ದು, “ ನ್ಯೂಯಾರ್ಕ್‍ನಲ್ಲಿ ನಡೆದ ಇಎಫ್ಎ ವರದಿ ಸಮಾರಂಭದಲ್ಲಿ ಭಾಷಣ ನೀಡುತ್ತಿರುವ ಮರಿಯಲ್” ಎಂದು ಶೀರ್ಷಿಕೆ ನೀಡಲಾಗಿದೆ.

ಇದೇ ಲೇಖನವನ್ನು ವಿಶ್ವಸಂಸ್ಥೆಯ ಬಾಲಕಿಯರ ಶಿಕ್ಷಣ ಉಪಕ್ರಮದ ವೆಬ್‍ಸೈಟ್‍ನಲ್ಲಿಯೂ ಪ್ರಕಟಿಸಿದೆ. ವಿಶ್ವ ಸಂಸ್ಥೆಯ ಅಧಿಕೃತ ಯೂಟ್ಯೂಬ್ ಚಾನೆಲ್‍ನಲ್ಲಿ ಕೂಡ ಈ ವಿಡಿಯೊ ಅಪ್ಲೋಡ್ ಮಾಡಲಾಗಿದೆ. ಇನ್ನು ಪೋಸ್ಟ್ ಕಾರ್ಡ್ ಪ್ರಕಟಿಸಿದ ಪೋಸ್ಟರ್‌ನಲ್ಲಿ ದಾಖಲಾಗಿರುವ ಹೇಳಿಕೆಗಳಿಗೆ ಯಾವುದೇ ದಾಖಲೆಗಳಿಲ್ಲ ಎಂಬುದು ಖಚಿತವಾಗಿದೆ.

ಈ ಸುದ್ದಿಯನ್ನು ಪ್ರಕಟಿಸುತ್ತಿದ್ದಂತೆ ಪೋಸ್ಟ್ ಕಾರ್ಡ್‍ನಲ್ಲಿ ಪೋಸ್ಟ್ ಮಾಡಿದ್ದ ಸುಳ್ಳು ಸುದ್ದಿಯ ಪೋಸ್ಟರ್ ಮಾಯವಾಗಿದೆ. ಅದನ್ನು ಪೋಸ್ಟ್ ಕಾರ್ಡ್ ಡಿಲೀಟ್ ಮಾಡಿದೆ. ಇದರಿಂದ ನಾವೆಲ್ಲ ತಿಳಿದುಕೊಳ್ಳಬೇಕಿರುವುದು ಏನೆಂದರೆ ಈ ಪೇಜ್‍ಅನ್ನು ಫಾಲೋ ಮಾಡುವ ಅನೇಕ ಮುಗ್ದ ಜನರು ಇವರು ಹೇಳುವ ಸುಳ್ಳನ್ನೆ ನಿಜವೆಂದು ನಂಬಿ ಮೋಸಹೋಗುವ ಮತ್ತು ಈಗಾಗಲೇ ಮೋಸ ಹೋಗಿರವ ಅಸಂಖ್ಯ ಜನರಿದ್ದಾರೆ. ಹಾಗಾಗಿ ಪೋಸ್ಟ್ ಕಾರ್ಡ್‍ನಲ್ಲಿ ಬರುವ ಸುದ್ದಿಗಳನ್ನು ನಂಬಿ ಮೋಸ ಹೋಗುವ ಮುನ್ನ ಅದರ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಎಂಬುದು ನಾನು ಗೌರಿ ಪತ್ರಿಕೆಯ ಆಶಯ. ಪೋಸ್ಟ್ ಕಾರ್ಡ್ ಬಿತ್ತುವ ವಿಷ ಬೀಜಗಳಿಗೆ ಬಲಿಯಾಗುವ ಮುನ್ನ ಮುಗ್ದ ಜನರು ಎಚ್ಚೆತ್ತುಕೊಳ್ಳಬೆಕು.


ಇದನ್ನು ಓದಿರಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...