Homeಕರ್ನಾಟಕಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

- Advertisement -
- Advertisement -

ಪೋಸ್ಟ್ ಕಾರ್ಡ್ ಕನ್ನಡ ಸದಾ ಫೇಕ್ ನ್ಯೂಸ್‍ಗಳನ್ನೆ ಹಾಸೊದ್ದುಕೊಂಡಿರುವ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಒಂದು ಬಲಪಂಥೀಯ ಸಾಮಾಜಿಕ ಜಾಲತಾಣ. ಸುಳ್ಳು ಸುದ್ದಿಗಳಿಗೆ ಕುಖ್ಯಾತಿಯಾಗಿರುವ ಆ ಸಾಮಾಜಿಕ ಜಾಲತಾಣ ಈಗ ಮತ್ತೊಂದು ಅಂತಹದ್ದೆ ಸುಳ್ಳು ಸುದ್ದಿಯನ್ನು ಹೊಂದಿರುವ ಪೋಸ್ಟರ್‌ವೊಂದನ್ನು ಶೇರ್ ಮಾಡಿತ್ತು, ಆ ಪೋಸ್ಟರ್‌ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಬರಹವನ್ನು ಪ್ರಕಟಿಸಿತ್ತು, ಪೋಸ್ಟರ್‌ನಲ್ಲಿರುವುದು ಹಸಿ ಸುಳ್ಳು ಎಂದು ವಾರ್ತಾಭಾರತಿ ಆಧಾರ ಸಹಿತ ವರದಿ ಮಾಡಿತ್ತು. ಅಲ್ಲಿ ಸುದ್ದಿ ಪ್ರಕಟಣೆಯಾಗುತ್ತಿದಂತೆ ಇತ್ತ ಪೋಸ್ಟ್ ಕಾರ್ಡ್ ತನ್ನ ಪೇಜ್ ನಲ್ಲಿ ಪ್ರಕಟಗೊಂಡ ಸುಳ್ಳು ಸುದ್ದಿಯ ಪೋಸ್ಟರ್‌ ಅನ್ನು ಡಿಲೀಟ್ ಮಾಡುವ ಮೂಲಕ ಮತ್ತೆ ಜನರೆದುರು ಬೆತ್ತಲಾಗಿದೆ.

ಪೋಸ್ಟ್ ಕಾರ್ಡ್ ತಾನು ಪ್ರಕಟಿಸಿದ್ದ ಪೋಸ್ಟರ್‌ನಲ್ಲಿ “ ನಮ್ಮ ಇಸ್ಲಾಂನಲ್ಲಿ ಹೆಣ್ಣನ್ನ ಮಕ್ಕಳನ್ನು ಹೆರುವ ಕೃಷಿ ಎಂದು ಪರಿಗಣಿಸಲಾಗಿದೆ. ನಾವೆಲ್ಲರೂ ಮುಸ್ಲಿಂ ಧರ್ಮವನ್ನು ತೊರೆದು ಹಿಂದೂ ಆಗಲಿದ್ದೇವೆ ಮತ್ತು ಹಿಂದೂ ಹುಡುಗರನ್ನು ಮದುವೆಯಾಗುತ್ತೇವೆ, ಮತ್ತೆ ಯಾವುದೇ ತಲಾಕ್ ಇಲ್ಲ, ಹಲಾಲ್ ಕೂಡ ಇಲ್ಲ. ಸನಾತನ ಹಿಂದೂ ಧರ್ಮ ನಮ್ಮದಾಗಲಿ” ಎಂದು ಬರೆದಿದ್ದ ಪೋಸ್ಟರ್ ನಲ್ಲಿ ಫಾತಿಮಾ ಖುರೇಷಿ, ಮುಂಬೈ ಎಂದು ಹೆಸರು ಹಾಕಿ ಮುಸ್ಲಿಂ ಮಹಿಳೆಯೊಬ್ಬರ ಫೋಟೋ ಹಾಕಲಾಗಿತ್ತು. ಜೊತೆಗೆ “ಇಸ್ಲಾಂನಲ್ಲಿ ಹೆಣ್ಣನ್ನು ಭೋಗದ ವಸ್ತುವಂತೆ ಬಳಸುತ್ತಿದ್ದಾರೆ ಎಂದು ಮುಸ್ಲಿಂ ಹೆಣ್ಣು ಮಕ್ಕಳೇ ಒಪ್ಪಿಕೊಂಡು ಹಿಂದೂ ಧರ್ಮದತ್ತ ಮುಖ ಮಾಡಸುತ್ತಿದ್ದಾರೆ .” ಎಂದು ಬರೆದ ಪೋಸ್ಟರ್‌ಅನ್ನು ಪ್ರಕಟಿಸಿತ್ತು.

ಪೋಸ್ಟ್ ಕಾರ್ಡ್ ಕನ್ನಡ ಪ್ರಕಟಿಸಿದ್ದ ಸುಳ್ಳು ಸುದ್ದಿ

ಈ ಪೋಸ್ಟರ್ ಎರಡು ವಾರಗಳ ಹಿಂದೆ ಹಿಂದಿ ಭಾಷೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದೇ ಮಹಿಳೆಯ ಫೋಟೋ ಬಳಸಿ, ಹಿಂದಿಯಲ್ಲಿ ಬರೆದಿದ್ದ ಬರಹವನ್ನು ಕನ್ನಡಕ್ಕೆ ಅನುವಾದಿಸಿ ಮತ್ತಷ್ಟು ದ್ವೇಷ ಹರಡುವ ಸಾಲುಗಳನ್ನು ಸೇರಿಸಿ ಪೋಸ್ಟರ್ ರೂಪಿಸಿರುವುದು ಫ್ಯಾಕ್ಟ್‌ ಚೆಕ್ ಮೂಲಕ ತಿಳಿದುಬಂದಿದೆ. ನಕಲು ಮಾಡಿರುವ ಸುದ್ದಿಯು 2019ರಲ್ಲಿ ನ್ಯೂಸ್ ಮೊಬೈಲ್.ಇನ್ ಪ್ರಕಟವಾಗಿರುವುದನ್ನು ಕಾಣಬಹುದು. ಹಾಗಾಗಿ ಇದೊಂದು ತಿರುಚಲ್ಪಟ್ಟ ಸುದ್ದಿ ಎಂದು ತಿಳಿದುಬಂದಿದೆ.

ಗೂಗಲ್ ಮೂಲಕ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಪೋಸ್ಟರ್ ನಲ್ಲಿ ಇರುವ ಮಹಿಳೆಯ ಫೋಟೋ ಮರಿಯಮ್ ಖಾಲಿಕ್ ಎಂಬುವವರದು ಎಂದು ತಿಳಿದು ಬಂದಿದ್ದು, ಪೋಸ್ಟ್ ಕಾರ್ಡ್ ನಲ್ಲಿ ಅವರ ಹೆಸರನ್ನು ಫಾತಿಮಾ ಖುರೇಷಿ, ಮುಂಬೈ ಎಂಬ ಹೆಸರಿನಲ್ಲಿ ಕಪೋಲಕಲ್ಪಿತ ಹೇಳಿಕೆಯನ್ನು ಪ್ರಕಟಿಸಿದೆ. 2013ರ ಸೆಪ್ಟಂಬರ್ 20 ರಂದು ಗ್ಲೋಬಲ್ ಎಜುಕೇಶನ್ ಮಾನಿಟರಿಂಗ್ (GEM) ಸೈಟ್‍ನಲ್ಲಿ  ಪ್ರಕಟಿಸಿದ ವರದಿಯಲ್ಲಿ ಈ ಮಹಿಳೆಯು ನೊಬೆಲ್ ಪುರಸ್ಕೃತೆ ಮಲಾಲಾ ಯೂಸಫ್‍ಜಾಯ್ ಅವರ ಶಿಕ್ಷಕಿ ಮರಿಯಮ್ ಖಾಲಿಕ್ ಎಂದು ತಿಳಿದುಬಂದಿದೆ. ನ್ಯೂಯಾರ್ಕ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಕಿಯರ ಶಿಕ್ಷಣದ ಮಹತ್ವ ಕುರಿತು ಮರಿಯಮ್ ಮಾತನಾಡುತ್ತಿದ್ದ ಸಂದರ್ಭದಲ್ಲಿ ತೆಗೆದ ಫೋಟೋ ಆಗಿದ್ದು, “ ನ್ಯೂಯಾರ್ಕ್‍ನಲ್ಲಿ ನಡೆದ ಇಎಫ್ಎ ವರದಿ ಸಮಾರಂಭದಲ್ಲಿ ಭಾಷಣ ನೀಡುತ್ತಿರುವ ಮರಿಯಲ್” ಎಂದು ಶೀರ್ಷಿಕೆ ನೀಡಲಾಗಿದೆ.

ಇದೇ ಲೇಖನವನ್ನು ವಿಶ್ವಸಂಸ್ಥೆಯ ಬಾಲಕಿಯರ ಶಿಕ್ಷಣ ಉಪಕ್ರಮದ ವೆಬ್‍ಸೈಟ್‍ನಲ್ಲಿಯೂ ಪ್ರಕಟಿಸಿದೆ. ವಿಶ್ವ ಸಂಸ್ಥೆಯ ಅಧಿಕೃತ ಯೂಟ್ಯೂಬ್ ಚಾನೆಲ್‍ನಲ್ಲಿ ಕೂಡ ಈ ವಿಡಿಯೊ ಅಪ್ಲೋಡ್ ಮಾಡಲಾಗಿದೆ. ಇನ್ನು ಪೋಸ್ಟ್ ಕಾರ್ಡ್ ಪ್ರಕಟಿಸಿದ ಪೋಸ್ಟರ್‌ನಲ್ಲಿ ದಾಖಲಾಗಿರುವ ಹೇಳಿಕೆಗಳಿಗೆ ಯಾವುದೇ ದಾಖಲೆಗಳಿಲ್ಲ ಎಂಬುದು ಖಚಿತವಾಗಿದೆ.

ಈ ಸುದ್ದಿಯನ್ನು ಪ್ರಕಟಿಸುತ್ತಿದ್ದಂತೆ ಪೋಸ್ಟ್ ಕಾರ್ಡ್‍ನಲ್ಲಿ ಪೋಸ್ಟ್ ಮಾಡಿದ್ದ ಸುಳ್ಳು ಸುದ್ದಿಯ ಪೋಸ್ಟರ್ ಮಾಯವಾಗಿದೆ. ಅದನ್ನು ಪೋಸ್ಟ್ ಕಾರ್ಡ್ ಡಿಲೀಟ್ ಮಾಡಿದೆ. ಇದರಿಂದ ನಾವೆಲ್ಲ ತಿಳಿದುಕೊಳ್ಳಬೇಕಿರುವುದು ಏನೆಂದರೆ ಈ ಪೇಜ್‍ಅನ್ನು ಫಾಲೋ ಮಾಡುವ ಅನೇಕ ಮುಗ್ದ ಜನರು ಇವರು ಹೇಳುವ ಸುಳ್ಳನ್ನೆ ನಿಜವೆಂದು ನಂಬಿ ಮೋಸಹೋಗುವ ಮತ್ತು ಈಗಾಗಲೇ ಮೋಸ ಹೋಗಿರವ ಅಸಂಖ್ಯ ಜನರಿದ್ದಾರೆ. ಹಾಗಾಗಿ ಪೋಸ್ಟ್ ಕಾರ್ಡ್‍ನಲ್ಲಿ ಬರುವ ಸುದ್ದಿಗಳನ್ನು ನಂಬಿ ಮೋಸ ಹೋಗುವ ಮುನ್ನ ಅದರ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಎಂಬುದು ನಾನು ಗೌರಿ ಪತ್ರಿಕೆಯ ಆಶಯ. ಪೋಸ್ಟ್ ಕಾರ್ಡ್ ಬಿತ್ತುವ ವಿಷ ಬೀಜಗಳಿಗೆ ಬಲಿಯಾಗುವ ಮುನ್ನ ಮುಗ್ದ ಜನರು ಎಚ್ಚೆತ್ತುಕೊಳ್ಳಬೆಕು.


ಇದನ್ನು ಓದಿರಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...