Homeಕರ್ನಾಟಕಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

- Advertisement -
- Advertisement -

ಪೋಸ್ಟ್ ಕಾರ್ಡ್ ಕನ್ನಡ ಸದಾ ಫೇಕ್ ನ್ಯೂಸ್‍ಗಳನ್ನೆ ಹಾಸೊದ್ದುಕೊಂಡಿರುವ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಒಂದು ಬಲಪಂಥೀಯ ಸಾಮಾಜಿಕ ಜಾಲತಾಣ. ಸುಳ್ಳು ಸುದ್ದಿಗಳಿಗೆ ಕುಖ್ಯಾತಿಯಾಗಿರುವ ಆ ಸಾಮಾಜಿಕ ಜಾಲತಾಣ ಈಗ ಮತ್ತೊಂದು ಅಂತಹದ್ದೆ ಸುಳ್ಳು ಸುದ್ದಿಯನ್ನು ಹೊಂದಿರುವ ಪೋಸ್ಟರ್‌ವೊಂದನ್ನು ಶೇರ್ ಮಾಡಿತ್ತು, ಆ ಪೋಸ್ಟರ್‌ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಬರಹವನ್ನು ಪ್ರಕಟಿಸಿತ್ತು, ಪೋಸ್ಟರ್‌ನಲ್ಲಿರುವುದು ಹಸಿ ಸುಳ್ಳು ಎಂದು ವಾರ್ತಾಭಾರತಿ ಆಧಾರ ಸಹಿತ ವರದಿ ಮಾಡಿತ್ತು. ಅಲ್ಲಿ ಸುದ್ದಿ ಪ್ರಕಟಣೆಯಾಗುತ್ತಿದಂತೆ ಇತ್ತ ಪೋಸ್ಟ್ ಕಾರ್ಡ್ ತನ್ನ ಪೇಜ್ ನಲ್ಲಿ ಪ್ರಕಟಗೊಂಡ ಸುಳ್ಳು ಸುದ್ದಿಯ ಪೋಸ್ಟರ್‌ ಅನ್ನು ಡಿಲೀಟ್ ಮಾಡುವ ಮೂಲಕ ಮತ್ತೆ ಜನರೆದುರು ಬೆತ್ತಲಾಗಿದೆ.

ಪೋಸ್ಟ್ ಕಾರ್ಡ್ ತಾನು ಪ್ರಕಟಿಸಿದ್ದ ಪೋಸ್ಟರ್‌ನಲ್ಲಿ “ ನಮ್ಮ ಇಸ್ಲಾಂನಲ್ಲಿ ಹೆಣ್ಣನ್ನ ಮಕ್ಕಳನ್ನು ಹೆರುವ ಕೃಷಿ ಎಂದು ಪರಿಗಣಿಸಲಾಗಿದೆ. ನಾವೆಲ್ಲರೂ ಮುಸ್ಲಿಂ ಧರ್ಮವನ್ನು ತೊರೆದು ಹಿಂದೂ ಆಗಲಿದ್ದೇವೆ ಮತ್ತು ಹಿಂದೂ ಹುಡುಗರನ್ನು ಮದುವೆಯಾಗುತ್ತೇವೆ, ಮತ್ತೆ ಯಾವುದೇ ತಲಾಕ್ ಇಲ್ಲ, ಹಲಾಲ್ ಕೂಡ ಇಲ್ಲ. ಸನಾತನ ಹಿಂದೂ ಧರ್ಮ ನಮ್ಮದಾಗಲಿ” ಎಂದು ಬರೆದಿದ್ದ ಪೋಸ್ಟರ್ ನಲ್ಲಿ ಫಾತಿಮಾ ಖುರೇಷಿ, ಮುಂಬೈ ಎಂದು ಹೆಸರು ಹಾಕಿ ಮುಸ್ಲಿಂ ಮಹಿಳೆಯೊಬ್ಬರ ಫೋಟೋ ಹಾಕಲಾಗಿತ್ತು. ಜೊತೆಗೆ “ಇಸ್ಲಾಂನಲ್ಲಿ ಹೆಣ್ಣನ್ನು ಭೋಗದ ವಸ್ತುವಂತೆ ಬಳಸುತ್ತಿದ್ದಾರೆ ಎಂದು ಮುಸ್ಲಿಂ ಹೆಣ್ಣು ಮಕ್ಕಳೇ ಒಪ್ಪಿಕೊಂಡು ಹಿಂದೂ ಧರ್ಮದತ್ತ ಮುಖ ಮಾಡಸುತ್ತಿದ್ದಾರೆ .” ಎಂದು ಬರೆದ ಪೋಸ್ಟರ್‌ಅನ್ನು ಪ್ರಕಟಿಸಿತ್ತು.

ಪೋಸ್ಟ್ ಕಾರ್ಡ್ ಕನ್ನಡ ಪ್ರಕಟಿಸಿದ್ದ ಸುಳ್ಳು ಸುದ್ದಿ

ಈ ಪೋಸ್ಟರ್ ಎರಡು ವಾರಗಳ ಹಿಂದೆ ಹಿಂದಿ ಭಾಷೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದೇ ಮಹಿಳೆಯ ಫೋಟೋ ಬಳಸಿ, ಹಿಂದಿಯಲ್ಲಿ ಬರೆದಿದ್ದ ಬರಹವನ್ನು ಕನ್ನಡಕ್ಕೆ ಅನುವಾದಿಸಿ ಮತ್ತಷ್ಟು ದ್ವೇಷ ಹರಡುವ ಸಾಲುಗಳನ್ನು ಸೇರಿಸಿ ಪೋಸ್ಟರ್ ರೂಪಿಸಿರುವುದು ಫ್ಯಾಕ್ಟ್‌ ಚೆಕ್ ಮೂಲಕ ತಿಳಿದುಬಂದಿದೆ. ನಕಲು ಮಾಡಿರುವ ಸುದ್ದಿಯು 2019ರಲ್ಲಿ ನ್ಯೂಸ್ ಮೊಬೈಲ್.ಇನ್ ಪ್ರಕಟವಾಗಿರುವುದನ್ನು ಕಾಣಬಹುದು. ಹಾಗಾಗಿ ಇದೊಂದು ತಿರುಚಲ್ಪಟ್ಟ ಸುದ್ದಿ ಎಂದು ತಿಳಿದುಬಂದಿದೆ.

ಗೂಗಲ್ ಮೂಲಕ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಪೋಸ್ಟರ್ ನಲ್ಲಿ ಇರುವ ಮಹಿಳೆಯ ಫೋಟೋ ಮರಿಯಮ್ ಖಾಲಿಕ್ ಎಂಬುವವರದು ಎಂದು ತಿಳಿದು ಬಂದಿದ್ದು, ಪೋಸ್ಟ್ ಕಾರ್ಡ್ ನಲ್ಲಿ ಅವರ ಹೆಸರನ್ನು ಫಾತಿಮಾ ಖುರೇಷಿ, ಮುಂಬೈ ಎಂಬ ಹೆಸರಿನಲ್ಲಿ ಕಪೋಲಕಲ್ಪಿತ ಹೇಳಿಕೆಯನ್ನು ಪ್ರಕಟಿಸಿದೆ. 2013ರ ಸೆಪ್ಟಂಬರ್ 20 ರಂದು ಗ್ಲೋಬಲ್ ಎಜುಕೇಶನ್ ಮಾನಿಟರಿಂಗ್ (GEM) ಸೈಟ್‍ನಲ್ಲಿ  ಪ್ರಕಟಿಸಿದ ವರದಿಯಲ್ಲಿ ಈ ಮಹಿಳೆಯು ನೊಬೆಲ್ ಪುರಸ್ಕೃತೆ ಮಲಾಲಾ ಯೂಸಫ್‍ಜಾಯ್ ಅವರ ಶಿಕ್ಷಕಿ ಮರಿಯಮ್ ಖಾಲಿಕ್ ಎಂದು ತಿಳಿದುಬಂದಿದೆ. ನ್ಯೂಯಾರ್ಕ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಕಿಯರ ಶಿಕ್ಷಣದ ಮಹತ್ವ ಕುರಿತು ಮರಿಯಮ್ ಮಾತನಾಡುತ್ತಿದ್ದ ಸಂದರ್ಭದಲ್ಲಿ ತೆಗೆದ ಫೋಟೋ ಆಗಿದ್ದು, “ ನ್ಯೂಯಾರ್ಕ್‍ನಲ್ಲಿ ನಡೆದ ಇಎಫ್ಎ ವರದಿ ಸಮಾರಂಭದಲ್ಲಿ ಭಾಷಣ ನೀಡುತ್ತಿರುವ ಮರಿಯಲ್” ಎಂದು ಶೀರ್ಷಿಕೆ ನೀಡಲಾಗಿದೆ.

ಇದೇ ಲೇಖನವನ್ನು ವಿಶ್ವಸಂಸ್ಥೆಯ ಬಾಲಕಿಯರ ಶಿಕ್ಷಣ ಉಪಕ್ರಮದ ವೆಬ್‍ಸೈಟ್‍ನಲ್ಲಿಯೂ ಪ್ರಕಟಿಸಿದೆ. ವಿಶ್ವ ಸಂಸ್ಥೆಯ ಅಧಿಕೃತ ಯೂಟ್ಯೂಬ್ ಚಾನೆಲ್‍ನಲ್ಲಿ ಕೂಡ ಈ ವಿಡಿಯೊ ಅಪ್ಲೋಡ್ ಮಾಡಲಾಗಿದೆ. ಇನ್ನು ಪೋಸ್ಟ್ ಕಾರ್ಡ್ ಪ್ರಕಟಿಸಿದ ಪೋಸ್ಟರ್‌ನಲ್ಲಿ ದಾಖಲಾಗಿರುವ ಹೇಳಿಕೆಗಳಿಗೆ ಯಾವುದೇ ದಾಖಲೆಗಳಿಲ್ಲ ಎಂಬುದು ಖಚಿತವಾಗಿದೆ.

ಈ ಸುದ್ದಿಯನ್ನು ಪ್ರಕಟಿಸುತ್ತಿದ್ದಂತೆ ಪೋಸ್ಟ್ ಕಾರ್ಡ್‍ನಲ್ಲಿ ಪೋಸ್ಟ್ ಮಾಡಿದ್ದ ಸುಳ್ಳು ಸುದ್ದಿಯ ಪೋಸ್ಟರ್ ಮಾಯವಾಗಿದೆ. ಅದನ್ನು ಪೋಸ್ಟ್ ಕಾರ್ಡ್ ಡಿಲೀಟ್ ಮಾಡಿದೆ. ಇದರಿಂದ ನಾವೆಲ್ಲ ತಿಳಿದುಕೊಳ್ಳಬೇಕಿರುವುದು ಏನೆಂದರೆ ಈ ಪೇಜ್‍ಅನ್ನು ಫಾಲೋ ಮಾಡುವ ಅನೇಕ ಮುಗ್ದ ಜನರು ಇವರು ಹೇಳುವ ಸುಳ್ಳನ್ನೆ ನಿಜವೆಂದು ನಂಬಿ ಮೋಸಹೋಗುವ ಮತ್ತು ಈಗಾಗಲೇ ಮೋಸ ಹೋಗಿರವ ಅಸಂಖ್ಯ ಜನರಿದ್ದಾರೆ. ಹಾಗಾಗಿ ಪೋಸ್ಟ್ ಕಾರ್ಡ್‍ನಲ್ಲಿ ಬರುವ ಸುದ್ದಿಗಳನ್ನು ನಂಬಿ ಮೋಸ ಹೋಗುವ ಮುನ್ನ ಅದರ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಎಂಬುದು ನಾನು ಗೌರಿ ಪತ್ರಿಕೆಯ ಆಶಯ. ಪೋಸ್ಟ್ ಕಾರ್ಡ್ ಬಿತ್ತುವ ವಿಷ ಬೀಜಗಳಿಗೆ ಬಲಿಯಾಗುವ ಮುನ್ನ ಮುಗ್ದ ಜನರು ಎಚ್ಚೆತ್ತುಕೊಳ್ಳಬೆಕು.


ಇದನ್ನು ಓದಿರಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...