Homeಮುಖಪುಟಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

- Advertisement -
- Advertisement -

‘ಇಸ್ಲಾಂ ಕುರಿತು ಅಂಬೇಡ್ಕರ್ ಮನದಿಂಗಿತ’ ಎಂಬ ವಿಚಾರದ ಬಗ್ಗೆ ಚಕ್ರವರ್ತಿ ಸೂಲಿಬೆಲೆಯವರು ಮಾತನಾಡಿದ್ದಾರೆ. ಮಹಾ ಮಾನವತಾವಾದಿಯಾಗಿದ್ದ ಡಾ.ಬಿ.ಆರ್. ಆಂಬೇಡ್ಕರ್ ಮುಸ್ಲಿಂ ದ್ವೇಷಿಯಾಗಿದ್ದರು ಎಂದು ಬಿಂಬಿಸಿ ಅಂಬೇಡ್ಕರ್ ಮತ್ತು ಮುಸ್ಲಿಮರನ್ನು ಏಕಕಾಲದಲ್ಲಿ ಅವಮಾನಿಸಲು ಸೂಲಿಬೆಲೆ ಹೆಣಗಾಡಿದ್ದಾರೆ‌. ಅಂಬೇಡ್ಕರ್‌ಗೆ ಮಹಾಮಾನವತಾವಾದಿಯ ವ್ಯಕ್ತಿತ್ವವಿದೆ. ಅಂಬೇಡ್ಕರ್ ಘನತೆಯ ಕುಂದು ತರುವ ಸಂಘಪರಿವಾರದ ಹಳೇ ಕುತಂತ್ರವೇ ಸೂಲಿಬೆಲೆಯ ಈ ಪ್ರಯತ್ನವಾಗಿದೆ. ಅದನ್ನು ಹೊರತುಪಡಿಸಿದರೆ ಯಾವುದೇ ಜನಾಂಗ ಅಥವಾ ಸಮುದಾಯವನ್ನು ಪೂರ್ವಾಗ್ರಹ ಪೀಡಿತವಾಗಿ ನೋಡುವ ವ್ಯಕ್ತಿತ್ವ ಅಂಬೇಡ್ಕರರದ್ದಲ್ಲ.

ಆಗಿನ ಕಾಲಘಟ್ಟದಲ್ಲಿ ಅಂಬೇಡ್ಕರ್‌ಗೆ ಮುಸ್ಲಿಮರ ನಡವಳಿಕೆ ಬಗ್ಗೆ ಆಕ್ಷೇಪಗಳು ಇದ್ದಿದ್ದು ನಿಜ. ‘ಇಸ್ಲಾಂ ಕೂಡಾ ದಲಿತರ ಬಗೆಗೆ ಅಸ್ಪೃಶ್ಯ ನಿಲುವನ್ನು ಹೊಂದಿತ್ತು. ಹಾಗಾಗಿ ಅಂಬೇಡ್ಕರ್ ಇಸ್ಲಾಂ ವಿರುದ್ದ ಆಕ್ರೋಶಿತರಾಗಿದ್ದರು’ ಎಂದು ಸೂಲಿಬೆಲೆ ಹೇಳುತ್ತಾರೆ. ಇದು ಬಾಗಶಃ ನಿಜ. ಆದರೆ ಅದಕ್ಕೆ ಕಾರಣ ಇಸ್ಲಾಂ ಧರ್ಮ ಅಲ್ಲ. ಇಸ್ಲಾಂ ಧರ್ಮದ ಮೂಲ ಆಶಯಗಳು ಒಳ್ಳೆಯದಿದ್ದು, ಅದು ಭಾರತದಲ್ಲಿ ಹಿಂದೂ ಸಮಾಜವನ್ನು ಅನುಕರಣೆ ಮಾಡಿ ಕೆಟ್ಟ ದಾರಿ ಹಿಡಿದಿದೆ ಎಂದೇ ಅಂಬೇಡ್ಕರ್ ಭಾವಿಸಿದ್ದರು.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

ಹಿಂದೂ ಧರ್ಮೀಯ ಮೇಲ್ವರ್ಗಗಳ ಜೊತೆ ಆರ್ಥಿಕ, ಸಾಮಾಜಿಕ, ರಾಜಕೀಯ ಮಿಳಿತವನ್ನು ಹೊಂದಿದ್ದ ಮುಸ್ಲಿಮರು ತಮ್ಮ ಧರ್ಮದಲ್ಲಿ ಇಲ್ಲದ ಅಸ್ಪೃಶ್ಯತೆಯನ್ನು ಹಿಂದೂಗಳಿಂದ ಎರವಲು ಪಡೆದಿದ್ದರು ಎಂದು ಅಂಬೇಡ್ಕರ್‌ಗೆ ಅಸಮಾದಾನ ಇತ್ತು. ಇದು ಹಿಂದೂ ಧರ್ಮದ ತಾನೂ ಕೆಟ್ಟಿದ್ದಲ್ಲದೇ ಇಸ್ಲಾಂ ಧರ್ಮವನ್ನೂ ಕೆಡಿಸಿತ್ತು ಎಂಬ ಬಗೆಗಿನ ಅಸಮಾದಾನವಷ್ಟೆ.

PC : Pinterest

“ಮುಸ್ಲೀಮರ ಆಗಿನ ರಾಜಕೀಯದ ಬಗೆಗೆ” ಅಂಬೇಡ್ಕರ್ ಅಸಮಾದಾನಕ್ಕೆ ಇನ್ನೊಂದು ಮುಖ್ಯ ಕಾರಣ ಮನುವಾದಿ ಹಿಂದೂ ನಾಯಕರ ತಾಳಕ್ಕೆ ಕುಣಿಯುತ್ತಿದ್ದ ಮುಸ್ಲಿಂ ನಾಯಕರ ಧೋರಣೆ. ದಲಿತರ ಅಭಿವೃದ್ದಿ ವಿಚಾರವನ್ನು ಅಂಬೇಡ್ಕರ್ ಎತ್ತಿದಾಗ ಹಿಂದೂ ಮನುವಾದಿ ನಾಯಕರು ಮುಸ್ಲಿಂ ನಾಯಕರನ್ನು ಎತ್ತಿಕಟ್ಟುತ್ತಿದ್ದರು.

ಸರಳವಾಗಿ ಹೇಳುವುದಾದರೆ, ತಮ್ಮ ಹಿಂದಿನ ಅಧಿಕಾರವನ್ನು ಪಡೆಯಲು ಮನುವಾದಿ ಹಿಂದೂ ನಾಯಕರು ತಮ್ಮ ಹಿಡನ್ ಅಜೆಂಡಾದ ಭಾಗವಾಗಿ ಮುಸ್ಲಿಮರ ಬೇಡಿಕೆಗಳೆಲ್ಲವಕ್ಕೂ ಒಪ್ಪಿಗೆ ನೀಡುತ್ತಿದ್ದರು. ದಲಿತರು ಹಿಂದೂಗಳಲ್ಲ ಎಂಬುದು ಅಂಬೇಡ್ಕರ್ ಅವರ ನಿಲುವಾಗಿತ್ತು. ಅದಕ್ಕಾಗಿಯೇ ಹಿಂದೂ ಮತ್ತು ಮುಸ್ಲಿಂ ಎಂದು ಪ್ರತ್ಯೇಕಿಸಲು “ಅವಕಾಶವನ್ನು ಎರಡು ಪಾಲು” ಮಾತ್ರ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು?

ಆದರೆ ಅವಕಾಶವನ್ನು “ಮೂರು ಪಾಲು ಮಾಡಿ” ಎಂಬುದು ಅಂಬೇಡ್ಕರ್ ಆಗ್ರಹವಾಗಿತ್ತು. ಒಂದೋ ದಲಿತರು ಹಿಂದೂಗಳೆಂದು ಒಪ್ಪಬೇಕಿತ್ತು. ಹಾಗೆ ಒಪ್ಪಿದರೆ ಸಾಮಾಜಿಕವಾಗಿ, ರಾಜಕೀಯವಾಗಿ ದಲಿತರಿಗೆ ಅನ್ಯಾಯವಾಗುತ್ತಿತ್ತು.‌‌ ಮೀಸಲಾತಿಯಿಂದ ವಂಚಿತರಾಗುತ್ತಿದ್ದರು. ಹಿಂದೂ ಮನುವಾದಿ ನಾಯಕರ ಈ ಅಜೆಂಡಾ ಆಗಿನ ಮುಸ್ಲಿಂ ನಾಯಕರಿಗೆ ಅರ್ಥ ಆಗುತ್ತಿರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ಮುಸ್ಲಿಂ ಕೋಮುವಾದಿ, ಮುಸ್ಲಿಂ ದಲಿತ ವಿರೋಧಿ ನಿಲುವನ್ನು ಅಂಬೇಡ್ಕರ್ ವಿರೋಧಿಸಿದರೇ ವಿನಹ ಅವರು ಇಸ್ಲಾಂ ಧರ್ಮವಿರೋಧಿ ಆಗಿರಲಿಲ್ಲ.

ಅಂಬೇಡ್ಕರ್ ಸಾರಥ್ಯದ ‘ಬಹಿಷ್ಕೃತ ಭಾರತ’ ಪತ್ರಿಕೆಯಲ್ಲಿ ಮುಸ್ಲಿಂ ಚಿಂತಕರ, ಸಮಾಜವಾದಿಗಳ ಲೇಖನಗಳು ಪ್ರಕಟವಾಗುತ್ತಿದ್ದವು. ಆ ಎಲ್ಲಾ ಲೇಖನಗಳು ಮುಸ್ಲಿಮರ ಸಾಮಾಜಿಕ, ರಾಜಕೀಯ, ಅರ್ಥಿಕ ಸುಧಾರಣೆಯ ಪರವಾಗಿದ್ದವೇ ಆಗಿದ್ದವು. ಒಂದು ಹಂತದಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವ ಬಗ್ಗೆಯೂ ಡಾ ಬಿ ಆರ್ ಅಂಬೇಡ್ಕರ್ ಯೋಚಿಸಿದ್ದರು.

ಮುಸ್ಲಿಮರು ಮತ್ತು ದಲಿತರ ಉದ್ದಾರ ಅಂಬೇಡ್ಕರ್‌ರ ಒಂದು ದೊಡ್ಡ ಆಶಯವಾಗಿತ್ತು. ಅದಕ್ಕಾಗಿಯೇ ಅವರು ಸಂವಿದಾನ ರಚನಾ ಸಭೆಯನ್ನು ಪ್ರವೇಶ ಮಾಡಬೇಕಿತ್ತು. ಯಾರೂ ಕೂಡಾ ಅಂಬೇಡ್ಕರ್‌ರನ್ನು ಈ ನಿಟ್ಟಿನಲ್ಲಿ ಬೆಂಬಲಿಸದೇ ಇದ್ದಾಗ ಅಸೆಂಬ್ಲಿಯಲ್ಲಿ ಯೋಗೇಂದ್ರನಾಥ್ ಮಂಡಲ್ ಅಂಬೇಡ್ಕರ್ ಹೆಸರನ್ನು ಸೂಚಿಸಿದ್ದರು. ಈ ಸೂಚನೆಗೆ ಬೆಂಬಲ‌ ನೀಡಿದ್ದು ಮುಸ್ಲಿಂ ಲೀಗ್. ಇದರಿಂದಾಗಿಯೇ ಅಂಬೇಡ್ಕರ್ ಸಂವಿಧಾನ ರಚನಾ ಸಭೆ ಪ್ರವೇಶಿಸುವುದು ಸಾಧ್ಯವಾಯಿತು. ಸಂವಿಧಾನದಲ್ಲಿ ದಲಿತರು, ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರು ಮತ್ತು ಶೋಷಿತರಿಗೆ ಸಮಾನ ಹಕ್ಕುಗಳು ಮತ್ತು ಮೀಸಲಾತಿಗಳನ್ನು ನೀಡಲು ಸಾಧ್ಯವಾಯಿತು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಮಹಾ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಇಸ್ಲಾಂ ವಿರೋಧಿಯಾಗಿದ್ದರು ಎನ್ನುವ ಚಕ್ರವರ್ತಿ ಸೂಲಿಬೆಲೆ ಈ ಮೂಲಕ ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಯಾಗಿದ್ದರು. ಕೋಮುವಾದದ ವಿರೋಧವೆಂದರೆ ಅದು ಹಿಂದೂ ಕೋಮುವಾದವಿರಲಿ, ಮುಸ್ಲಿಮ್ ಕೋಮುವಾದವಿರಲಿ, ಕೋಮುವಾದಕ್ಕೆ ವಿರೋಧವಷ್ಟೆ. ಜನಾಂಗ, ಸಮುದಾಯದ ವಿರೋಧಿ ಎಂದರ್ಥವಲ್ಲ.

ಡಾ.ಬಿ.ಆರ್. ಅಂಬೇಡ್ಕರ್ ಅವರ ಈಗಿನ ಭಾರತೀಯ ವಾರಸುದಾರರಾದ ಹಿಂದೂ ಮುಸ್ಲಿಮರೆಲ್ಲರೂ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಗಳೇ ಆಗಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ ಅಂಬೇಡ್ಕರ್ ವಿರೋಧಿ ಕುತಂತ್ರಕ್ಕೆ ಈ ನೆಲದ ಅಂಬೇಡ್ಕರ್‌ ವಾದಿಗಳು ಬಲಿಯಾಗುವುದಿಲ್ಲ. ಅಂಬೇಡ್ಕರ್ ವಾದ ಎಂದರೆ ಪ್ರಜ್ಞೆ ಎಂಬ ಪ್ರಾಥಮಿಕ ಜ್ಞಾನವೇ ಇಲ್ಲದೆ ಸೂಲಿಬೆಲೆ ವ್ಯರ್ಥ ಪ್ರಯತ್ನ ಮಾಡಿದ್ದಾರಷ್ಟೆ.

ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

<iframe width="1280" height="720" src="https://www.youtube.com/embed/s3N8ypUOxec" title="YouTube video player" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...