Homeಮುಖಪುಟಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

- Advertisement -
- Advertisement -

‘ಇಸ್ಲಾಂ ಕುರಿತು ಅಂಬೇಡ್ಕರ್ ಮನದಿಂಗಿತ’ ಎಂಬ ವಿಚಾರದ ಬಗ್ಗೆ ಚಕ್ರವರ್ತಿ ಸೂಲಿಬೆಲೆಯವರು ಮಾತನಾಡಿದ್ದಾರೆ. ಮಹಾ ಮಾನವತಾವಾದಿಯಾಗಿದ್ದ ಡಾ.ಬಿ.ಆರ್. ಆಂಬೇಡ್ಕರ್ ಮುಸ್ಲಿಂ ದ್ವೇಷಿಯಾಗಿದ್ದರು ಎಂದು ಬಿಂಬಿಸಿ ಅಂಬೇಡ್ಕರ್ ಮತ್ತು ಮುಸ್ಲಿಮರನ್ನು ಏಕಕಾಲದಲ್ಲಿ ಅವಮಾನಿಸಲು ಸೂಲಿಬೆಲೆ ಹೆಣಗಾಡಿದ್ದಾರೆ‌. ಅಂಬೇಡ್ಕರ್‌ಗೆ ಮಹಾಮಾನವತಾವಾದಿಯ ವ್ಯಕ್ತಿತ್ವವಿದೆ. ಅಂಬೇಡ್ಕರ್ ಘನತೆಯ ಕುಂದು ತರುವ ಸಂಘಪರಿವಾರದ ಹಳೇ ಕುತಂತ್ರವೇ ಸೂಲಿಬೆಲೆಯ ಈ ಪ್ರಯತ್ನವಾಗಿದೆ. ಅದನ್ನು ಹೊರತುಪಡಿಸಿದರೆ ಯಾವುದೇ ಜನಾಂಗ ಅಥವಾ ಸಮುದಾಯವನ್ನು ಪೂರ್ವಾಗ್ರಹ ಪೀಡಿತವಾಗಿ ನೋಡುವ ವ್ಯಕ್ತಿತ್ವ ಅಂಬೇಡ್ಕರರದ್ದಲ್ಲ.

ಆಗಿನ ಕಾಲಘಟ್ಟದಲ್ಲಿ ಅಂಬೇಡ್ಕರ್‌ಗೆ ಮುಸ್ಲಿಮರ ನಡವಳಿಕೆ ಬಗ್ಗೆ ಆಕ್ಷೇಪಗಳು ಇದ್ದಿದ್ದು ನಿಜ. ‘ಇಸ್ಲಾಂ ಕೂಡಾ ದಲಿತರ ಬಗೆಗೆ ಅಸ್ಪೃಶ್ಯ ನಿಲುವನ್ನು ಹೊಂದಿತ್ತು. ಹಾಗಾಗಿ ಅಂಬೇಡ್ಕರ್ ಇಸ್ಲಾಂ ವಿರುದ್ದ ಆಕ್ರೋಶಿತರಾಗಿದ್ದರು’ ಎಂದು ಸೂಲಿಬೆಲೆ ಹೇಳುತ್ತಾರೆ. ಇದು ಬಾಗಶಃ ನಿಜ. ಆದರೆ ಅದಕ್ಕೆ ಕಾರಣ ಇಸ್ಲಾಂ ಧರ್ಮ ಅಲ್ಲ. ಇಸ್ಲಾಂ ಧರ್ಮದ ಮೂಲ ಆಶಯಗಳು ಒಳ್ಳೆಯದಿದ್ದು, ಅದು ಭಾರತದಲ್ಲಿ ಹಿಂದೂ ಸಮಾಜವನ್ನು ಅನುಕರಣೆ ಮಾಡಿ ಕೆಟ್ಟ ದಾರಿ ಹಿಡಿದಿದೆ ಎಂದೇ ಅಂಬೇಡ್ಕರ್ ಭಾವಿಸಿದ್ದರು.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

ಹಿಂದೂ ಧರ್ಮೀಯ ಮೇಲ್ವರ್ಗಗಳ ಜೊತೆ ಆರ್ಥಿಕ, ಸಾಮಾಜಿಕ, ರಾಜಕೀಯ ಮಿಳಿತವನ್ನು ಹೊಂದಿದ್ದ ಮುಸ್ಲಿಮರು ತಮ್ಮ ಧರ್ಮದಲ್ಲಿ ಇಲ್ಲದ ಅಸ್ಪೃಶ್ಯತೆಯನ್ನು ಹಿಂದೂಗಳಿಂದ ಎರವಲು ಪಡೆದಿದ್ದರು ಎಂದು ಅಂಬೇಡ್ಕರ್‌ಗೆ ಅಸಮಾದಾನ ಇತ್ತು. ಇದು ಹಿಂದೂ ಧರ್ಮದ ತಾನೂ ಕೆಟ್ಟಿದ್ದಲ್ಲದೇ ಇಸ್ಲಾಂ ಧರ್ಮವನ್ನೂ ಕೆಡಿಸಿತ್ತು ಎಂಬ ಬಗೆಗಿನ ಅಸಮಾದಾನವಷ್ಟೆ.

PC : Pinterest

“ಮುಸ್ಲೀಮರ ಆಗಿನ ರಾಜಕೀಯದ ಬಗೆಗೆ” ಅಂಬೇಡ್ಕರ್ ಅಸಮಾದಾನಕ್ಕೆ ಇನ್ನೊಂದು ಮುಖ್ಯ ಕಾರಣ ಮನುವಾದಿ ಹಿಂದೂ ನಾಯಕರ ತಾಳಕ್ಕೆ ಕುಣಿಯುತ್ತಿದ್ದ ಮುಸ್ಲಿಂ ನಾಯಕರ ಧೋರಣೆ. ದಲಿತರ ಅಭಿವೃದ್ದಿ ವಿಚಾರವನ್ನು ಅಂಬೇಡ್ಕರ್ ಎತ್ತಿದಾಗ ಹಿಂದೂ ಮನುವಾದಿ ನಾಯಕರು ಮುಸ್ಲಿಂ ನಾಯಕರನ್ನು ಎತ್ತಿಕಟ್ಟುತ್ತಿದ್ದರು.

ಸರಳವಾಗಿ ಹೇಳುವುದಾದರೆ, ತಮ್ಮ ಹಿಂದಿನ ಅಧಿಕಾರವನ್ನು ಪಡೆಯಲು ಮನುವಾದಿ ಹಿಂದೂ ನಾಯಕರು ತಮ್ಮ ಹಿಡನ್ ಅಜೆಂಡಾದ ಭಾಗವಾಗಿ ಮುಸ್ಲಿಮರ ಬೇಡಿಕೆಗಳೆಲ್ಲವಕ್ಕೂ ಒಪ್ಪಿಗೆ ನೀಡುತ್ತಿದ್ದರು. ದಲಿತರು ಹಿಂದೂಗಳಲ್ಲ ಎಂಬುದು ಅಂಬೇಡ್ಕರ್ ಅವರ ನಿಲುವಾಗಿತ್ತು. ಅದಕ್ಕಾಗಿಯೇ ಹಿಂದೂ ಮತ್ತು ಮುಸ್ಲಿಂ ಎಂದು ಪ್ರತ್ಯೇಕಿಸಲು “ಅವಕಾಶವನ್ನು ಎರಡು ಪಾಲು” ಮಾತ್ರ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು?

ಆದರೆ ಅವಕಾಶವನ್ನು “ಮೂರು ಪಾಲು ಮಾಡಿ” ಎಂಬುದು ಅಂಬೇಡ್ಕರ್ ಆಗ್ರಹವಾಗಿತ್ತು. ಒಂದೋ ದಲಿತರು ಹಿಂದೂಗಳೆಂದು ಒಪ್ಪಬೇಕಿತ್ತು. ಹಾಗೆ ಒಪ್ಪಿದರೆ ಸಾಮಾಜಿಕವಾಗಿ, ರಾಜಕೀಯವಾಗಿ ದಲಿತರಿಗೆ ಅನ್ಯಾಯವಾಗುತ್ತಿತ್ತು.‌‌ ಮೀಸಲಾತಿಯಿಂದ ವಂಚಿತರಾಗುತ್ತಿದ್ದರು. ಹಿಂದೂ ಮನುವಾದಿ ನಾಯಕರ ಈ ಅಜೆಂಡಾ ಆಗಿನ ಮುಸ್ಲಿಂ ನಾಯಕರಿಗೆ ಅರ್ಥ ಆಗುತ್ತಿರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ಮುಸ್ಲಿಂ ಕೋಮುವಾದಿ, ಮುಸ್ಲಿಂ ದಲಿತ ವಿರೋಧಿ ನಿಲುವನ್ನು ಅಂಬೇಡ್ಕರ್ ವಿರೋಧಿಸಿದರೇ ವಿನಹ ಅವರು ಇಸ್ಲಾಂ ಧರ್ಮವಿರೋಧಿ ಆಗಿರಲಿಲ್ಲ.

ಅಂಬೇಡ್ಕರ್ ಸಾರಥ್ಯದ ‘ಬಹಿಷ್ಕೃತ ಭಾರತ’ ಪತ್ರಿಕೆಯಲ್ಲಿ ಮುಸ್ಲಿಂ ಚಿಂತಕರ, ಸಮಾಜವಾದಿಗಳ ಲೇಖನಗಳು ಪ್ರಕಟವಾಗುತ್ತಿದ್ದವು. ಆ ಎಲ್ಲಾ ಲೇಖನಗಳು ಮುಸ್ಲಿಮರ ಸಾಮಾಜಿಕ, ರಾಜಕೀಯ, ಅರ್ಥಿಕ ಸುಧಾರಣೆಯ ಪರವಾಗಿದ್ದವೇ ಆಗಿದ್ದವು. ಒಂದು ಹಂತದಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವ ಬಗ್ಗೆಯೂ ಡಾ ಬಿ ಆರ್ ಅಂಬೇಡ್ಕರ್ ಯೋಚಿಸಿದ್ದರು.

ಮುಸ್ಲಿಮರು ಮತ್ತು ದಲಿತರ ಉದ್ದಾರ ಅಂಬೇಡ್ಕರ್‌ರ ಒಂದು ದೊಡ್ಡ ಆಶಯವಾಗಿತ್ತು. ಅದಕ್ಕಾಗಿಯೇ ಅವರು ಸಂವಿದಾನ ರಚನಾ ಸಭೆಯನ್ನು ಪ್ರವೇಶ ಮಾಡಬೇಕಿತ್ತು. ಯಾರೂ ಕೂಡಾ ಅಂಬೇಡ್ಕರ್‌ರನ್ನು ಈ ನಿಟ್ಟಿನಲ್ಲಿ ಬೆಂಬಲಿಸದೇ ಇದ್ದಾಗ ಅಸೆಂಬ್ಲಿಯಲ್ಲಿ ಯೋಗೇಂದ್ರನಾಥ್ ಮಂಡಲ್ ಅಂಬೇಡ್ಕರ್ ಹೆಸರನ್ನು ಸೂಚಿಸಿದ್ದರು. ಈ ಸೂಚನೆಗೆ ಬೆಂಬಲ‌ ನೀಡಿದ್ದು ಮುಸ್ಲಿಂ ಲೀಗ್. ಇದರಿಂದಾಗಿಯೇ ಅಂಬೇಡ್ಕರ್ ಸಂವಿಧಾನ ರಚನಾ ಸಭೆ ಪ್ರವೇಶಿಸುವುದು ಸಾಧ್ಯವಾಯಿತು. ಸಂವಿಧಾನದಲ್ಲಿ ದಲಿತರು, ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರು ಮತ್ತು ಶೋಷಿತರಿಗೆ ಸಮಾನ ಹಕ್ಕುಗಳು ಮತ್ತು ಮೀಸಲಾತಿಗಳನ್ನು ನೀಡಲು ಸಾಧ್ಯವಾಯಿತು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಮಹಾ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಇಸ್ಲಾಂ ವಿರೋಧಿಯಾಗಿದ್ದರು ಎನ್ನುವ ಚಕ್ರವರ್ತಿ ಸೂಲಿಬೆಲೆ ಈ ಮೂಲಕ ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಯಾಗಿದ್ದರು. ಕೋಮುವಾದದ ವಿರೋಧವೆಂದರೆ ಅದು ಹಿಂದೂ ಕೋಮುವಾದವಿರಲಿ, ಮುಸ್ಲಿಮ್ ಕೋಮುವಾದವಿರಲಿ, ಕೋಮುವಾದಕ್ಕೆ ವಿರೋಧವಷ್ಟೆ. ಜನಾಂಗ, ಸಮುದಾಯದ ವಿರೋಧಿ ಎಂದರ್ಥವಲ್ಲ.

ಡಾ.ಬಿ.ಆರ್. ಅಂಬೇಡ್ಕರ್ ಅವರ ಈಗಿನ ಭಾರತೀಯ ವಾರಸುದಾರರಾದ ಹಿಂದೂ ಮುಸ್ಲಿಮರೆಲ್ಲರೂ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಗಳೇ ಆಗಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ ಅಂಬೇಡ್ಕರ್ ವಿರೋಧಿ ಕುತಂತ್ರಕ್ಕೆ ಈ ನೆಲದ ಅಂಬೇಡ್ಕರ್‌ ವಾದಿಗಳು ಬಲಿಯಾಗುವುದಿಲ್ಲ. ಅಂಬೇಡ್ಕರ್ ವಾದ ಎಂದರೆ ಪ್ರಜ್ಞೆ ಎಂಬ ಪ್ರಾಥಮಿಕ ಜ್ಞಾನವೇ ಇಲ್ಲದೆ ಸೂಲಿಬೆಲೆ ವ್ಯರ್ಥ ಪ್ರಯತ್ನ ಮಾಡಿದ್ದಾರಷ್ಟೆ.

ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

<iframe width="1280" height="720" src="https://www.youtube.com/embed/s3N8ypUOxec" title="YouTube video player" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...