Homeಮುಖಪುಟಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

- Advertisement -
- Advertisement -

‘ಇಸ್ಲಾಂ ಕುರಿತು ಅಂಬೇಡ್ಕರ್ ಮನದಿಂಗಿತ’ ಎಂಬ ವಿಚಾರದ ಬಗ್ಗೆ ಚಕ್ರವರ್ತಿ ಸೂಲಿಬೆಲೆಯವರು ಮಾತನಾಡಿದ್ದಾರೆ. ಮಹಾ ಮಾನವತಾವಾದಿಯಾಗಿದ್ದ ಡಾ.ಬಿ.ಆರ್. ಆಂಬೇಡ್ಕರ್ ಮುಸ್ಲಿಂ ದ್ವೇಷಿಯಾಗಿದ್ದರು ಎಂದು ಬಿಂಬಿಸಿ ಅಂಬೇಡ್ಕರ್ ಮತ್ತು ಮುಸ್ಲಿಮರನ್ನು ಏಕಕಾಲದಲ್ಲಿ ಅವಮಾನಿಸಲು ಸೂಲಿಬೆಲೆ ಹೆಣಗಾಡಿದ್ದಾರೆ‌. ಅಂಬೇಡ್ಕರ್‌ಗೆ ಮಹಾಮಾನವತಾವಾದಿಯ ವ್ಯಕ್ತಿತ್ವವಿದೆ. ಅಂಬೇಡ್ಕರ್ ಘನತೆಯ ಕುಂದು ತರುವ ಸಂಘಪರಿವಾರದ ಹಳೇ ಕುತಂತ್ರವೇ ಸೂಲಿಬೆಲೆಯ ಈ ಪ್ರಯತ್ನವಾಗಿದೆ. ಅದನ್ನು ಹೊರತುಪಡಿಸಿದರೆ ಯಾವುದೇ ಜನಾಂಗ ಅಥವಾ ಸಮುದಾಯವನ್ನು ಪೂರ್ವಾಗ್ರಹ ಪೀಡಿತವಾಗಿ ನೋಡುವ ವ್ಯಕ್ತಿತ್ವ ಅಂಬೇಡ್ಕರರದ್ದಲ್ಲ.

ಆಗಿನ ಕಾಲಘಟ್ಟದಲ್ಲಿ ಅಂಬೇಡ್ಕರ್‌ಗೆ ಮುಸ್ಲಿಮರ ನಡವಳಿಕೆ ಬಗ್ಗೆ ಆಕ್ಷೇಪಗಳು ಇದ್ದಿದ್ದು ನಿಜ. ‘ಇಸ್ಲಾಂ ಕೂಡಾ ದಲಿತರ ಬಗೆಗೆ ಅಸ್ಪೃಶ್ಯ ನಿಲುವನ್ನು ಹೊಂದಿತ್ತು. ಹಾಗಾಗಿ ಅಂಬೇಡ್ಕರ್ ಇಸ್ಲಾಂ ವಿರುದ್ದ ಆಕ್ರೋಶಿತರಾಗಿದ್ದರು’ ಎಂದು ಸೂಲಿಬೆಲೆ ಹೇಳುತ್ತಾರೆ. ಇದು ಬಾಗಶಃ ನಿಜ. ಆದರೆ ಅದಕ್ಕೆ ಕಾರಣ ಇಸ್ಲಾಂ ಧರ್ಮ ಅಲ್ಲ. ಇಸ್ಲಾಂ ಧರ್ಮದ ಮೂಲ ಆಶಯಗಳು ಒಳ್ಳೆಯದಿದ್ದು, ಅದು ಭಾರತದಲ್ಲಿ ಹಿಂದೂ ಸಮಾಜವನ್ನು ಅನುಕರಣೆ ಮಾಡಿ ಕೆಟ್ಟ ದಾರಿ ಹಿಡಿದಿದೆ ಎಂದೇ ಅಂಬೇಡ್ಕರ್ ಭಾವಿಸಿದ್ದರು.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

ಹಿಂದೂ ಧರ್ಮೀಯ ಮೇಲ್ವರ್ಗಗಳ ಜೊತೆ ಆರ್ಥಿಕ, ಸಾಮಾಜಿಕ, ರಾಜಕೀಯ ಮಿಳಿತವನ್ನು ಹೊಂದಿದ್ದ ಮುಸ್ಲಿಮರು ತಮ್ಮ ಧರ್ಮದಲ್ಲಿ ಇಲ್ಲದ ಅಸ್ಪೃಶ್ಯತೆಯನ್ನು ಹಿಂದೂಗಳಿಂದ ಎರವಲು ಪಡೆದಿದ್ದರು ಎಂದು ಅಂಬೇಡ್ಕರ್‌ಗೆ ಅಸಮಾದಾನ ಇತ್ತು. ಇದು ಹಿಂದೂ ಧರ್ಮದ ತಾನೂ ಕೆಟ್ಟಿದ್ದಲ್ಲದೇ ಇಸ್ಲಾಂ ಧರ್ಮವನ್ನೂ ಕೆಡಿಸಿತ್ತು ಎಂಬ ಬಗೆಗಿನ ಅಸಮಾದಾನವಷ್ಟೆ.

PC : Pinterest

“ಮುಸ್ಲೀಮರ ಆಗಿನ ರಾಜಕೀಯದ ಬಗೆಗೆ” ಅಂಬೇಡ್ಕರ್ ಅಸಮಾದಾನಕ್ಕೆ ಇನ್ನೊಂದು ಮುಖ್ಯ ಕಾರಣ ಮನುವಾದಿ ಹಿಂದೂ ನಾಯಕರ ತಾಳಕ್ಕೆ ಕುಣಿಯುತ್ತಿದ್ದ ಮುಸ್ಲಿಂ ನಾಯಕರ ಧೋರಣೆ. ದಲಿತರ ಅಭಿವೃದ್ದಿ ವಿಚಾರವನ್ನು ಅಂಬೇಡ್ಕರ್ ಎತ್ತಿದಾಗ ಹಿಂದೂ ಮನುವಾದಿ ನಾಯಕರು ಮುಸ್ಲಿಂ ನಾಯಕರನ್ನು ಎತ್ತಿಕಟ್ಟುತ್ತಿದ್ದರು.

ಸರಳವಾಗಿ ಹೇಳುವುದಾದರೆ, ತಮ್ಮ ಹಿಂದಿನ ಅಧಿಕಾರವನ್ನು ಪಡೆಯಲು ಮನುವಾದಿ ಹಿಂದೂ ನಾಯಕರು ತಮ್ಮ ಹಿಡನ್ ಅಜೆಂಡಾದ ಭಾಗವಾಗಿ ಮುಸ್ಲಿಮರ ಬೇಡಿಕೆಗಳೆಲ್ಲವಕ್ಕೂ ಒಪ್ಪಿಗೆ ನೀಡುತ್ತಿದ್ದರು. ದಲಿತರು ಹಿಂದೂಗಳಲ್ಲ ಎಂಬುದು ಅಂಬೇಡ್ಕರ್ ಅವರ ನಿಲುವಾಗಿತ್ತು. ಅದಕ್ಕಾಗಿಯೇ ಹಿಂದೂ ಮತ್ತು ಮುಸ್ಲಿಂ ಎಂದು ಪ್ರತ್ಯೇಕಿಸಲು “ಅವಕಾಶವನ್ನು ಎರಡು ಪಾಲು” ಮಾತ್ರ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು?

ಆದರೆ ಅವಕಾಶವನ್ನು “ಮೂರು ಪಾಲು ಮಾಡಿ” ಎಂಬುದು ಅಂಬೇಡ್ಕರ್ ಆಗ್ರಹವಾಗಿತ್ತು. ಒಂದೋ ದಲಿತರು ಹಿಂದೂಗಳೆಂದು ಒಪ್ಪಬೇಕಿತ್ತು. ಹಾಗೆ ಒಪ್ಪಿದರೆ ಸಾಮಾಜಿಕವಾಗಿ, ರಾಜಕೀಯವಾಗಿ ದಲಿತರಿಗೆ ಅನ್ಯಾಯವಾಗುತ್ತಿತ್ತು.‌‌ ಮೀಸಲಾತಿಯಿಂದ ವಂಚಿತರಾಗುತ್ತಿದ್ದರು. ಹಿಂದೂ ಮನುವಾದಿ ನಾಯಕರ ಈ ಅಜೆಂಡಾ ಆಗಿನ ಮುಸ್ಲಿಂ ನಾಯಕರಿಗೆ ಅರ್ಥ ಆಗುತ್ತಿರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ಮುಸ್ಲಿಂ ಕೋಮುವಾದಿ, ಮುಸ್ಲಿಂ ದಲಿತ ವಿರೋಧಿ ನಿಲುವನ್ನು ಅಂಬೇಡ್ಕರ್ ವಿರೋಧಿಸಿದರೇ ವಿನಹ ಅವರು ಇಸ್ಲಾಂ ಧರ್ಮವಿರೋಧಿ ಆಗಿರಲಿಲ್ಲ.

ಅಂಬೇಡ್ಕರ್ ಸಾರಥ್ಯದ ‘ಬಹಿಷ್ಕೃತ ಭಾರತ’ ಪತ್ರಿಕೆಯಲ್ಲಿ ಮುಸ್ಲಿಂ ಚಿಂತಕರ, ಸಮಾಜವಾದಿಗಳ ಲೇಖನಗಳು ಪ್ರಕಟವಾಗುತ್ತಿದ್ದವು. ಆ ಎಲ್ಲಾ ಲೇಖನಗಳು ಮುಸ್ಲಿಮರ ಸಾಮಾಜಿಕ, ರಾಜಕೀಯ, ಅರ್ಥಿಕ ಸುಧಾರಣೆಯ ಪರವಾಗಿದ್ದವೇ ಆಗಿದ್ದವು. ಒಂದು ಹಂತದಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವ ಬಗ್ಗೆಯೂ ಡಾ ಬಿ ಆರ್ ಅಂಬೇಡ್ಕರ್ ಯೋಚಿಸಿದ್ದರು.

ಮುಸ್ಲಿಮರು ಮತ್ತು ದಲಿತರ ಉದ್ದಾರ ಅಂಬೇಡ್ಕರ್‌ರ ಒಂದು ದೊಡ್ಡ ಆಶಯವಾಗಿತ್ತು. ಅದಕ್ಕಾಗಿಯೇ ಅವರು ಸಂವಿದಾನ ರಚನಾ ಸಭೆಯನ್ನು ಪ್ರವೇಶ ಮಾಡಬೇಕಿತ್ತು. ಯಾರೂ ಕೂಡಾ ಅಂಬೇಡ್ಕರ್‌ರನ್ನು ಈ ನಿಟ್ಟಿನಲ್ಲಿ ಬೆಂಬಲಿಸದೇ ಇದ್ದಾಗ ಅಸೆಂಬ್ಲಿಯಲ್ಲಿ ಯೋಗೇಂದ್ರನಾಥ್ ಮಂಡಲ್ ಅಂಬೇಡ್ಕರ್ ಹೆಸರನ್ನು ಸೂಚಿಸಿದ್ದರು. ಈ ಸೂಚನೆಗೆ ಬೆಂಬಲ‌ ನೀಡಿದ್ದು ಮುಸ್ಲಿಂ ಲೀಗ್. ಇದರಿಂದಾಗಿಯೇ ಅಂಬೇಡ್ಕರ್ ಸಂವಿಧಾನ ರಚನಾ ಸಭೆ ಪ್ರವೇಶಿಸುವುದು ಸಾಧ್ಯವಾಯಿತು. ಸಂವಿಧಾನದಲ್ಲಿ ದಲಿತರು, ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರು ಮತ್ತು ಶೋಷಿತರಿಗೆ ಸಮಾನ ಹಕ್ಕುಗಳು ಮತ್ತು ಮೀಸಲಾತಿಗಳನ್ನು ನೀಡಲು ಸಾಧ್ಯವಾಯಿತು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಮಹಾ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಇಸ್ಲಾಂ ವಿರೋಧಿಯಾಗಿದ್ದರು ಎನ್ನುವ ಚಕ್ರವರ್ತಿ ಸೂಲಿಬೆಲೆ ಈ ಮೂಲಕ ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಯಾಗಿದ್ದರು. ಕೋಮುವಾದದ ವಿರೋಧವೆಂದರೆ ಅದು ಹಿಂದೂ ಕೋಮುವಾದವಿರಲಿ, ಮುಸ್ಲಿಮ್ ಕೋಮುವಾದವಿರಲಿ, ಕೋಮುವಾದಕ್ಕೆ ವಿರೋಧವಷ್ಟೆ. ಜನಾಂಗ, ಸಮುದಾಯದ ವಿರೋಧಿ ಎಂದರ್ಥವಲ್ಲ.

ಡಾ.ಬಿ.ಆರ್. ಅಂಬೇಡ್ಕರ್ ಅವರ ಈಗಿನ ಭಾರತೀಯ ವಾರಸುದಾರರಾದ ಹಿಂದೂ ಮುಸ್ಲಿಮರೆಲ್ಲರೂ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಗಳೇ ಆಗಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ ಅಂಬೇಡ್ಕರ್ ವಿರೋಧಿ ಕುತಂತ್ರಕ್ಕೆ ಈ ನೆಲದ ಅಂಬೇಡ್ಕರ್‌ ವಾದಿಗಳು ಬಲಿಯಾಗುವುದಿಲ್ಲ. ಅಂಬೇಡ್ಕರ್ ವಾದ ಎಂದರೆ ಪ್ರಜ್ಞೆ ಎಂಬ ಪ್ರಾಥಮಿಕ ಜ್ಞಾನವೇ ಇಲ್ಲದೆ ಸೂಲಿಬೆಲೆ ವ್ಯರ್ಥ ಪ್ರಯತ್ನ ಮಾಡಿದ್ದಾರಷ್ಟೆ.

ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

<iframe width="1280" height="720" src="https://www.youtube.com/embed/s3N8ypUOxec" title="YouTube video player" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...