Homeಮುಖಪುಟಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

- Advertisement -
- Advertisement -

‘ಇಸ್ಲಾಂ ಕುರಿತು ಅಂಬೇಡ್ಕರ್ ಮನದಿಂಗಿತ’ ಎಂಬ ವಿಚಾರದ ಬಗ್ಗೆ ಚಕ್ರವರ್ತಿ ಸೂಲಿಬೆಲೆಯವರು ಮಾತನಾಡಿದ್ದಾರೆ. ಮಹಾ ಮಾನವತಾವಾದಿಯಾಗಿದ್ದ ಡಾ.ಬಿ.ಆರ್. ಆಂಬೇಡ್ಕರ್ ಮುಸ್ಲಿಂ ದ್ವೇಷಿಯಾಗಿದ್ದರು ಎಂದು ಬಿಂಬಿಸಿ ಅಂಬೇಡ್ಕರ್ ಮತ್ತು ಮುಸ್ಲಿಮರನ್ನು ಏಕಕಾಲದಲ್ಲಿ ಅವಮಾನಿಸಲು ಸೂಲಿಬೆಲೆ ಹೆಣಗಾಡಿದ್ದಾರೆ‌. ಅಂಬೇಡ್ಕರ್‌ಗೆ ಮಹಾಮಾನವತಾವಾದಿಯ ವ್ಯಕ್ತಿತ್ವವಿದೆ. ಅಂಬೇಡ್ಕರ್ ಘನತೆಯ ಕುಂದು ತರುವ ಸಂಘಪರಿವಾರದ ಹಳೇ ಕುತಂತ್ರವೇ ಸೂಲಿಬೆಲೆಯ ಈ ಪ್ರಯತ್ನವಾಗಿದೆ. ಅದನ್ನು ಹೊರತುಪಡಿಸಿದರೆ ಯಾವುದೇ ಜನಾಂಗ ಅಥವಾ ಸಮುದಾಯವನ್ನು ಪೂರ್ವಾಗ್ರಹ ಪೀಡಿತವಾಗಿ ನೋಡುವ ವ್ಯಕ್ತಿತ್ವ ಅಂಬೇಡ್ಕರರದ್ದಲ್ಲ.

ಆಗಿನ ಕಾಲಘಟ್ಟದಲ್ಲಿ ಅಂಬೇಡ್ಕರ್‌ಗೆ ಮುಸ್ಲಿಮರ ನಡವಳಿಕೆ ಬಗ್ಗೆ ಆಕ್ಷೇಪಗಳು ಇದ್ದಿದ್ದು ನಿಜ. ‘ಇಸ್ಲಾಂ ಕೂಡಾ ದಲಿತರ ಬಗೆಗೆ ಅಸ್ಪೃಶ್ಯ ನಿಲುವನ್ನು ಹೊಂದಿತ್ತು. ಹಾಗಾಗಿ ಅಂಬೇಡ್ಕರ್ ಇಸ್ಲಾಂ ವಿರುದ್ದ ಆಕ್ರೋಶಿತರಾಗಿದ್ದರು’ ಎಂದು ಸೂಲಿಬೆಲೆ ಹೇಳುತ್ತಾರೆ. ಇದು ಬಾಗಶಃ ನಿಜ. ಆದರೆ ಅದಕ್ಕೆ ಕಾರಣ ಇಸ್ಲಾಂ ಧರ್ಮ ಅಲ್ಲ. ಇಸ್ಲಾಂ ಧರ್ಮದ ಮೂಲ ಆಶಯಗಳು ಒಳ್ಳೆಯದಿದ್ದು, ಅದು ಭಾರತದಲ್ಲಿ ಹಿಂದೂ ಸಮಾಜವನ್ನು ಅನುಕರಣೆ ಮಾಡಿ ಕೆಟ್ಟ ದಾರಿ ಹಿಡಿದಿದೆ ಎಂದೇ ಅಂಬೇಡ್ಕರ್ ಭಾವಿಸಿದ್ದರು.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

ಹಿಂದೂ ಧರ್ಮೀಯ ಮೇಲ್ವರ್ಗಗಳ ಜೊತೆ ಆರ್ಥಿಕ, ಸಾಮಾಜಿಕ, ರಾಜಕೀಯ ಮಿಳಿತವನ್ನು ಹೊಂದಿದ್ದ ಮುಸ್ಲಿಮರು ತಮ್ಮ ಧರ್ಮದಲ್ಲಿ ಇಲ್ಲದ ಅಸ್ಪೃಶ್ಯತೆಯನ್ನು ಹಿಂದೂಗಳಿಂದ ಎರವಲು ಪಡೆದಿದ್ದರು ಎಂದು ಅಂಬೇಡ್ಕರ್‌ಗೆ ಅಸಮಾದಾನ ಇತ್ತು. ಇದು ಹಿಂದೂ ಧರ್ಮದ ತಾನೂ ಕೆಟ್ಟಿದ್ದಲ್ಲದೇ ಇಸ್ಲಾಂ ಧರ್ಮವನ್ನೂ ಕೆಡಿಸಿತ್ತು ಎಂಬ ಬಗೆಗಿನ ಅಸಮಾದಾನವಷ್ಟೆ.

PC : Pinterest

“ಮುಸ್ಲೀಮರ ಆಗಿನ ರಾಜಕೀಯದ ಬಗೆಗೆ” ಅಂಬೇಡ್ಕರ್ ಅಸಮಾದಾನಕ್ಕೆ ಇನ್ನೊಂದು ಮುಖ್ಯ ಕಾರಣ ಮನುವಾದಿ ಹಿಂದೂ ನಾಯಕರ ತಾಳಕ್ಕೆ ಕುಣಿಯುತ್ತಿದ್ದ ಮುಸ್ಲಿಂ ನಾಯಕರ ಧೋರಣೆ. ದಲಿತರ ಅಭಿವೃದ್ದಿ ವಿಚಾರವನ್ನು ಅಂಬೇಡ್ಕರ್ ಎತ್ತಿದಾಗ ಹಿಂದೂ ಮನುವಾದಿ ನಾಯಕರು ಮುಸ್ಲಿಂ ನಾಯಕರನ್ನು ಎತ್ತಿಕಟ್ಟುತ್ತಿದ್ದರು.

ಸರಳವಾಗಿ ಹೇಳುವುದಾದರೆ, ತಮ್ಮ ಹಿಂದಿನ ಅಧಿಕಾರವನ್ನು ಪಡೆಯಲು ಮನುವಾದಿ ಹಿಂದೂ ನಾಯಕರು ತಮ್ಮ ಹಿಡನ್ ಅಜೆಂಡಾದ ಭಾಗವಾಗಿ ಮುಸ್ಲಿಮರ ಬೇಡಿಕೆಗಳೆಲ್ಲವಕ್ಕೂ ಒಪ್ಪಿಗೆ ನೀಡುತ್ತಿದ್ದರು. ದಲಿತರು ಹಿಂದೂಗಳಲ್ಲ ಎಂಬುದು ಅಂಬೇಡ್ಕರ್ ಅವರ ನಿಲುವಾಗಿತ್ತು. ಅದಕ್ಕಾಗಿಯೇ ಹಿಂದೂ ಮತ್ತು ಮುಸ್ಲಿಂ ಎಂದು ಪ್ರತ್ಯೇಕಿಸಲು “ಅವಕಾಶವನ್ನು ಎರಡು ಪಾಲು” ಮಾತ್ರ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು?

ಆದರೆ ಅವಕಾಶವನ್ನು “ಮೂರು ಪಾಲು ಮಾಡಿ” ಎಂಬುದು ಅಂಬೇಡ್ಕರ್ ಆಗ್ರಹವಾಗಿತ್ತು. ಒಂದೋ ದಲಿತರು ಹಿಂದೂಗಳೆಂದು ಒಪ್ಪಬೇಕಿತ್ತು. ಹಾಗೆ ಒಪ್ಪಿದರೆ ಸಾಮಾಜಿಕವಾಗಿ, ರಾಜಕೀಯವಾಗಿ ದಲಿತರಿಗೆ ಅನ್ಯಾಯವಾಗುತ್ತಿತ್ತು.‌‌ ಮೀಸಲಾತಿಯಿಂದ ವಂಚಿತರಾಗುತ್ತಿದ್ದರು. ಹಿಂದೂ ಮನುವಾದಿ ನಾಯಕರ ಈ ಅಜೆಂಡಾ ಆಗಿನ ಮುಸ್ಲಿಂ ನಾಯಕರಿಗೆ ಅರ್ಥ ಆಗುತ್ತಿರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ಮುಸ್ಲಿಂ ಕೋಮುವಾದಿ, ಮುಸ್ಲಿಂ ದಲಿತ ವಿರೋಧಿ ನಿಲುವನ್ನು ಅಂಬೇಡ್ಕರ್ ವಿರೋಧಿಸಿದರೇ ವಿನಹ ಅವರು ಇಸ್ಲಾಂ ಧರ್ಮವಿರೋಧಿ ಆಗಿರಲಿಲ್ಲ.

ಅಂಬೇಡ್ಕರ್ ಸಾರಥ್ಯದ ‘ಬಹಿಷ್ಕೃತ ಭಾರತ’ ಪತ್ರಿಕೆಯಲ್ಲಿ ಮುಸ್ಲಿಂ ಚಿಂತಕರ, ಸಮಾಜವಾದಿಗಳ ಲೇಖನಗಳು ಪ್ರಕಟವಾಗುತ್ತಿದ್ದವು. ಆ ಎಲ್ಲಾ ಲೇಖನಗಳು ಮುಸ್ಲಿಮರ ಸಾಮಾಜಿಕ, ರಾಜಕೀಯ, ಅರ್ಥಿಕ ಸುಧಾರಣೆಯ ಪರವಾಗಿದ್ದವೇ ಆಗಿದ್ದವು. ಒಂದು ಹಂತದಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವ ಬಗ್ಗೆಯೂ ಡಾ ಬಿ ಆರ್ ಅಂಬೇಡ್ಕರ್ ಯೋಚಿಸಿದ್ದರು.

ಮುಸ್ಲಿಮರು ಮತ್ತು ದಲಿತರ ಉದ್ದಾರ ಅಂಬೇಡ್ಕರ್‌ರ ಒಂದು ದೊಡ್ಡ ಆಶಯವಾಗಿತ್ತು. ಅದಕ್ಕಾಗಿಯೇ ಅವರು ಸಂವಿದಾನ ರಚನಾ ಸಭೆಯನ್ನು ಪ್ರವೇಶ ಮಾಡಬೇಕಿತ್ತು. ಯಾರೂ ಕೂಡಾ ಅಂಬೇಡ್ಕರ್‌ರನ್ನು ಈ ನಿಟ್ಟಿನಲ್ಲಿ ಬೆಂಬಲಿಸದೇ ಇದ್ದಾಗ ಅಸೆಂಬ್ಲಿಯಲ್ಲಿ ಯೋಗೇಂದ್ರನಾಥ್ ಮಂಡಲ್ ಅಂಬೇಡ್ಕರ್ ಹೆಸರನ್ನು ಸೂಚಿಸಿದ್ದರು. ಈ ಸೂಚನೆಗೆ ಬೆಂಬಲ‌ ನೀಡಿದ್ದು ಮುಸ್ಲಿಂ ಲೀಗ್. ಇದರಿಂದಾಗಿಯೇ ಅಂಬೇಡ್ಕರ್ ಸಂವಿಧಾನ ರಚನಾ ಸಭೆ ಪ್ರವೇಶಿಸುವುದು ಸಾಧ್ಯವಾಯಿತು. ಸಂವಿಧಾನದಲ್ಲಿ ದಲಿತರು, ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರು ಮತ್ತು ಶೋಷಿತರಿಗೆ ಸಮಾನ ಹಕ್ಕುಗಳು ಮತ್ತು ಮೀಸಲಾತಿಗಳನ್ನು ನೀಡಲು ಸಾಧ್ಯವಾಯಿತು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಮಹಾ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಇಸ್ಲಾಂ ವಿರೋಧಿಯಾಗಿದ್ದರು ಎನ್ನುವ ಚಕ್ರವರ್ತಿ ಸೂಲಿಬೆಲೆ ಈ ಮೂಲಕ ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಯಾಗಿದ್ದರು. ಕೋಮುವಾದದ ವಿರೋಧವೆಂದರೆ ಅದು ಹಿಂದೂ ಕೋಮುವಾದವಿರಲಿ, ಮುಸ್ಲಿಮ್ ಕೋಮುವಾದವಿರಲಿ, ಕೋಮುವಾದಕ್ಕೆ ವಿರೋಧವಷ್ಟೆ. ಜನಾಂಗ, ಸಮುದಾಯದ ವಿರೋಧಿ ಎಂದರ್ಥವಲ್ಲ.

ಡಾ.ಬಿ.ಆರ್. ಅಂಬೇಡ್ಕರ್ ಅವರ ಈಗಿನ ಭಾರತೀಯ ವಾರಸುದಾರರಾದ ಹಿಂದೂ ಮುಸ್ಲಿಮರೆಲ್ಲರೂ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಗಳೇ ಆಗಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ ಅಂಬೇಡ್ಕರ್ ವಿರೋಧಿ ಕುತಂತ್ರಕ್ಕೆ ಈ ನೆಲದ ಅಂಬೇಡ್ಕರ್‌ ವಾದಿಗಳು ಬಲಿಯಾಗುವುದಿಲ್ಲ. ಅಂಬೇಡ್ಕರ್ ವಾದ ಎಂದರೆ ಪ್ರಜ್ಞೆ ಎಂಬ ಪ್ರಾಥಮಿಕ ಜ್ಞಾನವೇ ಇಲ್ಲದೆ ಸೂಲಿಬೆಲೆ ವ್ಯರ್ಥ ಪ್ರಯತ್ನ ಮಾಡಿದ್ದಾರಷ್ಟೆ.

ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

<iframe width="1280" height="720" src="https://www.youtube.com/embed/s3N8ypUOxec" title="YouTube video player" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...