Homeಮುಖಪುಟಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

- Advertisement -
- Advertisement -

‘ಇಸ್ಲಾಂ ಕುರಿತು ಅಂಬೇಡ್ಕರ್ ಮನದಿಂಗಿತ’ ಎಂಬ ವಿಚಾರದ ಬಗ್ಗೆ ಚಕ್ರವರ್ತಿ ಸೂಲಿಬೆಲೆಯವರು ಮಾತನಾಡಿದ್ದಾರೆ. ಮಹಾ ಮಾನವತಾವಾದಿಯಾಗಿದ್ದ ಡಾ.ಬಿ.ಆರ್. ಆಂಬೇಡ್ಕರ್ ಮುಸ್ಲಿಂ ದ್ವೇಷಿಯಾಗಿದ್ದರು ಎಂದು ಬಿಂಬಿಸಿ ಅಂಬೇಡ್ಕರ್ ಮತ್ತು ಮುಸ್ಲಿಮರನ್ನು ಏಕಕಾಲದಲ್ಲಿ ಅವಮಾನಿಸಲು ಸೂಲಿಬೆಲೆ ಹೆಣಗಾಡಿದ್ದಾರೆ‌. ಅಂಬೇಡ್ಕರ್‌ಗೆ ಮಹಾಮಾನವತಾವಾದಿಯ ವ್ಯಕ್ತಿತ್ವವಿದೆ. ಅಂಬೇಡ್ಕರ್ ಘನತೆಯ ಕುಂದು ತರುವ ಸಂಘಪರಿವಾರದ ಹಳೇ ಕುತಂತ್ರವೇ ಸೂಲಿಬೆಲೆಯ ಈ ಪ್ರಯತ್ನವಾಗಿದೆ. ಅದನ್ನು ಹೊರತುಪಡಿಸಿದರೆ ಯಾವುದೇ ಜನಾಂಗ ಅಥವಾ ಸಮುದಾಯವನ್ನು ಪೂರ್ವಾಗ್ರಹ ಪೀಡಿತವಾಗಿ ನೋಡುವ ವ್ಯಕ್ತಿತ್ವ ಅಂಬೇಡ್ಕರರದ್ದಲ್ಲ.

ಆಗಿನ ಕಾಲಘಟ್ಟದಲ್ಲಿ ಅಂಬೇಡ್ಕರ್‌ಗೆ ಮುಸ್ಲಿಮರ ನಡವಳಿಕೆ ಬಗ್ಗೆ ಆಕ್ಷೇಪಗಳು ಇದ್ದಿದ್ದು ನಿಜ. ‘ಇಸ್ಲಾಂ ಕೂಡಾ ದಲಿತರ ಬಗೆಗೆ ಅಸ್ಪೃಶ್ಯ ನಿಲುವನ್ನು ಹೊಂದಿತ್ತು. ಹಾಗಾಗಿ ಅಂಬೇಡ್ಕರ್ ಇಸ್ಲಾಂ ವಿರುದ್ದ ಆಕ್ರೋಶಿತರಾಗಿದ್ದರು’ ಎಂದು ಸೂಲಿಬೆಲೆ ಹೇಳುತ್ತಾರೆ. ಇದು ಬಾಗಶಃ ನಿಜ. ಆದರೆ ಅದಕ್ಕೆ ಕಾರಣ ಇಸ್ಲಾಂ ಧರ್ಮ ಅಲ್ಲ. ಇಸ್ಲಾಂ ಧರ್ಮದ ಮೂಲ ಆಶಯಗಳು ಒಳ್ಳೆಯದಿದ್ದು, ಅದು ಭಾರತದಲ್ಲಿ ಹಿಂದೂ ಸಮಾಜವನ್ನು ಅನುಕರಣೆ ಮಾಡಿ ಕೆಟ್ಟ ದಾರಿ ಹಿಡಿದಿದೆ ಎಂದೇ ಅಂಬೇಡ್ಕರ್ ಭಾವಿಸಿದ್ದರು.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

ಹಿಂದೂ ಧರ್ಮೀಯ ಮೇಲ್ವರ್ಗಗಳ ಜೊತೆ ಆರ್ಥಿಕ, ಸಾಮಾಜಿಕ, ರಾಜಕೀಯ ಮಿಳಿತವನ್ನು ಹೊಂದಿದ್ದ ಮುಸ್ಲಿಮರು ತಮ್ಮ ಧರ್ಮದಲ್ಲಿ ಇಲ್ಲದ ಅಸ್ಪೃಶ್ಯತೆಯನ್ನು ಹಿಂದೂಗಳಿಂದ ಎರವಲು ಪಡೆದಿದ್ದರು ಎಂದು ಅಂಬೇಡ್ಕರ್‌ಗೆ ಅಸಮಾದಾನ ಇತ್ತು. ಇದು ಹಿಂದೂ ಧರ್ಮದ ತಾನೂ ಕೆಟ್ಟಿದ್ದಲ್ಲದೇ ಇಸ್ಲಾಂ ಧರ್ಮವನ್ನೂ ಕೆಡಿಸಿತ್ತು ಎಂಬ ಬಗೆಗಿನ ಅಸಮಾದಾನವಷ್ಟೆ.

PC : Pinterest

“ಮುಸ್ಲೀಮರ ಆಗಿನ ರಾಜಕೀಯದ ಬಗೆಗೆ” ಅಂಬೇಡ್ಕರ್ ಅಸಮಾದಾನಕ್ಕೆ ಇನ್ನೊಂದು ಮುಖ್ಯ ಕಾರಣ ಮನುವಾದಿ ಹಿಂದೂ ನಾಯಕರ ತಾಳಕ್ಕೆ ಕುಣಿಯುತ್ತಿದ್ದ ಮುಸ್ಲಿಂ ನಾಯಕರ ಧೋರಣೆ. ದಲಿತರ ಅಭಿವೃದ್ದಿ ವಿಚಾರವನ್ನು ಅಂಬೇಡ್ಕರ್ ಎತ್ತಿದಾಗ ಹಿಂದೂ ಮನುವಾದಿ ನಾಯಕರು ಮುಸ್ಲಿಂ ನಾಯಕರನ್ನು ಎತ್ತಿಕಟ್ಟುತ್ತಿದ್ದರು.

ಸರಳವಾಗಿ ಹೇಳುವುದಾದರೆ, ತಮ್ಮ ಹಿಂದಿನ ಅಧಿಕಾರವನ್ನು ಪಡೆಯಲು ಮನುವಾದಿ ಹಿಂದೂ ನಾಯಕರು ತಮ್ಮ ಹಿಡನ್ ಅಜೆಂಡಾದ ಭಾಗವಾಗಿ ಮುಸ್ಲಿಮರ ಬೇಡಿಕೆಗಳೆಲ್ಲವಕ್ಕೂ ಒಪ್ಪಿಗೆ ನೀಡುತ್ತಿದ್ದರು. ದಲಿತರು ಹಿಂದೂಗಳಲ್ಲ ಎಂಬುದು ಅಂಬೇಡ್ಕರ್ ಅವರ ನಿಲುವಾಗಿತ್ತು. ಅದಕ್ಕಾಗಿಯೇ ಹಿಂದೂ ಮತ್ತು ಮುಸ್ಲಿಂ ಎಂದು ಪ್ರತ್ಯೇಕಿಸಲು “ಅವಕಾಶವನ್ನು ಎರಡು ಪಾಲು” ಮಾತ್ರ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು?

ಆದರೆ ಅವಕಾಶವನ್ನು “ಮೂರು ಪಾಲು ಮಾಡಿ” ಎಂಬುದು ಅಂಬೇಡ್ಕರ್ ಆಗ್ರಹವಾಗಿತ್ತು. ಒಂದೋ ದಲಿತರು ಹಿಂದೂಗಳೆಂದು ಒಪ್ಪಬೇಕಿತ್ತು. ಹಾಗೆ ಒಪ್ಪಿದರೆ ಸಾಮಾಜಿಕವಾಗಿ, ರಾಜಕೀಯವಾಗಿ ದಲಿತರಿಗೆ ಅನ್ಯಾಯವಾಗುತ್ತಿತ್ತು.‌‌ ಮೀಸಲಾತಿಯಿಂದ ವಂಚಿತರಾಗುತ್ತಿದ್ದರು. ಹಿಂದೂ ಮನುವಾದಿ ನಾಯಕರ ಈ ಅಜೆಂಡಾ ಆಗಿನ ಮುಸ್ಲಿಂ ನಾಯಕರಿಗೆ ಅರ್ಥ ಆಗುತ್ತಿರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ಮುಸ್ಲಿಂ ಕೋಮುವಾದಿ, ಮುಸ್ಲಿಂ ದಲಿತ ವಿರೋಧಿ ನಿಲುವನ್ನು ಅಂಬೇಡ್ಕರ್ ವಿರೋಧಿಸಿದರೇ ವಿನಹ ಅವರು ಇಸ್ಲಾಂ ಧರ್ಮವಿರೋಧಿ ಆಗಿರಲಿಲ್ಲ.

ಅಂಬೇಡ್ಕರ್ ಸಾರಥ್ಯದ ‘ಬಹಿಷ್ಕೃತ ಭಾರತ’ ಪತ್ರಿಕೆಯಲ್ಲಿ ಮುಸ್ಲಿಂ ಚಿಂತಕರ, ಸಮಾಜವಾದಿಗಳ ಲೇಖನಗಳು ಪ್ರಕಟವಾಗುತ್ತಿದ್ದವು. ಆ ಎಲ್ಲಾ ಲೇಖನಗಳು ಮುಸ್ಲಿಮರ ಸಾಮಾಜಿಕ, ರಾಜಕೀಯ, ಅರ್ಥಿಕ ಸುಧಾರಣೆಯ ಪರವಾಗಿದ್ದವೇ ಆಗಿದ್ದವು. ಒಂದು ಹಂತದಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವ ಬಗ್ಗೆಯೂ ಡಾ ಬಿ ಆರ್ ಅಂಬೇಡ್ಕರ್ ಯೋಚಿಸಿದ್ದರು.

ಮುಸ್ಲಿಮರು ಮತ್ತು ದಲಿತರ ಉದ್ದಾರ ಅಂಬೇಡ್ಕರ್‌ರ ಒಂದು ದೊಡ್ಡ ಆಶಯವಾಗಿತ್ತು. ಅದಕ್ಕಾಗಿಯೇ ಅವರು ಸಂವಿದಾನ ರಚನಾ ಸಭೆಯನ್ನು ಪ್ರವೇಶ ಮಾಡಬೇಕಿತ್ತು. ಯಾರೂ ಕೂಡಾ ಅಂಬೇಡ್ಕರ್‌ರನ್ನು ಈ ನಿಟ್ಟಿನಲ್ಲಿ ಬೆಂಬಲಿಸದೇ ಇದ್ದಾಗ ಅಸೆಂಬ್ಲಿಯಲ್ಲಿ ಯೋಗೇಂದ್ರನಾಥ್ ಮಂಡಲ್ ಅಂಬೇಡ್ಕರ್ ಹೆಸರನ್ನು ಸೂಚಿಸಿದ್ದರು. ಈ ಸೂಚನೆಗೆ ಬೆಂಬಲ‌ ನೀಡಿದ್ದು ಮುಸ್ಲಿಂ ಲೀಗ್. ಇದರಿಂದಾಗಿಯೇ ಅಂಬೇಡ್ಕರ್ ಸಂವಿಧಾನ ರಚನಾ ಸಭೆ ಪ್ರವೇಶಿಸುವುದು ಸಾಧ್ಯವಾಯಿತು. ಸಂವಿಧಾನದಲ್ಲಿ ದಲಿತರು, ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರು ಮತ್ತು ಶೋಷಿತರಿಗೆ ಸಮಾನ ಹಕ್ಕುಗಳು ಮತ್ತು ಮೀಸಲಾತಿಗಳನ್ನು ನೀಡಲು ಸಾಧ್ಯವಾಯಿತು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಮಹಾ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಇಸ್ಲಾಂ ವಿರೋಧಿಯಾಗಿದ್ದರು ಎನ್ನುವ ಚಕ್ರವರ್ತಿ ಸೂಲಿಬೆಲೆ ಈ ಮೂಲಕ ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಯಾಗಿದ್ದರು. ಕೋಮುವಾದದ ವಿರೋಧವೆಂದರೆ ಅದು ಹಿಂದೂ ಕೋಮುವಾದವಿರಲಿ, ಮುಸ್ಲಿಮ್ ಕೋಮುವಾದವಿರಲಿ, ಕೋಮುವಾದಕ್ಕೆ ವಿರೋಧವಷ್ಟೆ. ಜನಾಂಗ, ಸಮುದಾಯದ ವಿರೋಧಿ ಎಂದರ್ಥವಲ್ಲ.

ಡಾ.ಬಿ.ಆರ್. ಅಂಬೇಡ್ಕರ್ ಅವರ ಈಗಿನ ಭಾರತೀಯ ವಾರಸುದಾರರಾದ ಹಿಂದೂ ಮುಸ್ಲಿಮರೆಲ್ಲರೂ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಗಳೇ ಆಗಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ ಅಂಬೇಡ್ಕರ್ ವಿರೋಧಿ ಕುತಂತ್ರಕ್ಕೆ ಈ ನೆಲದ ಅಂಬೇಡ್ಕರ್‌ ವಾದಿಗಳು ಬಲಿಯಾಗುವುದಿಲ್ಲ. ಅಂಬೇಡ್ಕರ್ ವಾದ ಎಂದರೆ ಪ್ರಜ್ಞೆ ಎಂಬ ಪ್ರಾಥಮಿಕ ಜ್ಞಾನವೇ ಇಲ್ಲದೆ ಸೂಲಿಬೆಲೆ ವ್ಯರ್ಥ ಪ್ರಯತ್ನ ಮಾಡಿದ್ದಾರಷ್ಟೆ.

ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

<iframe width="1280" height="720" src="https://www.youtube.com/embed/s3N8ypUOxec" title="YouTube video player" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...