Homeಮುಖಪುಟಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

- Advertisement -
- Advertisement -

‘ಇಸ್ಲಾಂ ಕುರಿತು ಅಂಬೇಡ್ಕರ್ ಮನದಿಂಗಿತ’ ಎಂಬ ವಿಚಾರದ ಬಗ್ಗೆ ಚಕ್ರವರ್ತಿ ಸೂಲಿಬೆಲೆಯವರು ಮಾತನಾಡಿದ್ದಾರೆ. ಮಹಾ ಮಾನವತಾವಾದಿಯಾಗಿದ್ದ ಡಾ.ಬಿ.ಆರ್. ಆಂಬೇಡ್ಕರ್ ಮುಸ್ಲಿಂ ದ್ವೇಷಿಯಾಗಿದ್ದರು ಎಂದು ಬಿಂಬಿಸಿ ಅಂಬೇಡ್ಕರ್ ಮತ್ತು ಮುಸ್ಲಿಮರನ್ನು ಏಕಕಾಲದಲ್ಲಿ ಅವಮಾನಿಸಲು ಸೂಲಿಬೆಲೆ ಹೆಣಗಾಡಿದ್ದಾರೆ‌. ಅಂಬೇಡ್ಕರ್‌ಗೆ ಮಹಾಮಾನವತಾವಾದಿಯ ವ್ಯಕ್ತಿತ್ವವಿದೆ. ಅಂಬೇಡ್ಕರ್ ಘನತೆಯ ಕುಂದು ತರುವ ಸಂಘಪರಿವಾರದ ಹಳೇ ಕುತಂತ್ರವೇ ಸೂಲಿಬೆಲೆಯ ಈ ಪ್ರಯತ್ನವಾಗಿದೆ. ಅದನ್ನು ಹೊರತುಪಡಿಸಿದರೆ ಯಾವುದೇ ಜನಾಂಗ ಅಥವಾ ಸಮುದಾಯವನ್ನು ಪೂರ್ವಾಗ್ರಹ ಪೀಡಿತವಾಗಿ ನೋಡುವ ವ್ಯಕ್ತಿತ್ವ ಅಂಬೇಡ್ಕರರದ್ದಲ್ಲ.

ಆಗಿನ ಕಾಲಘಟ್ಟದಲ್ಲಿ ಅಂಬೇಡ್ಕರ್‌ಗೆ ಮುಸ್ಲಿಮರ ನಡವಳಿಕೆ ಬಗ್ಗೆ ಆಕ್ಷೇಪಗಳು ಇದ್ದಿದ್ದು ನಿಜ. ‘ಇಸ್ಲಾಂ ಕೂಡಾ ದಲಿತರ ಬಗೆಗೆ ಅಸ್ಪೃಶ್ಯ ನಿಲುವನ್ನು ಹೊಂದಿತ್ತು. ಹಾಗಾಗಿ ಅಂಬೇಡ್ಕರ್ ಇಸ್ಲಾಂ ವಿರುದ್ದ ಆಕ್ರೋಶಿತರಾಗಿದ್ದರು’ ಎಂದು ಸೂಲಿಬೆಲೆ ಹೇಳುತ್ತಾರೆ. ಇದು ಬಾಗಶಃ ನಿಜ. ಆದರೆ ಅದಕ್ಕೆ ಕಾರಣ ಇಸ್ಲಾಂ ಧರ್ಮ ಅಲ್ಲ. ಇಸ್ಲಾಂ ಧರ್ಮದ ಮೂಲ ಆಶಯಗಳು ಒಳ್ಳೆಯದಿದ್ದು, ಅದು ಭಾರತದಲ್ಲಿ ಹಿಂದೂ ಸಮಾಜವನ್ನು ಅನುಕರಣೆ ಮಾಡಿ ಕೆಟ್ಟ ದಾರಿ ಹಿಡಿದಿದೆ ಎಂದೇ ಅಂಬೇಡ್ಕರ್ ಭಾವಿಸಿದ್ದರು.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

ಹಿಂದೂ ಧರ್ಮೀಯ ಮೇಲ್ವರ್ಗಗಳ ಜೊತೆ ಆರ್ಥಿಕ, ಸಾಮಾಜಿಕ, ರಾಜಕೀಯ ಮಿಳಿತವನ್ನು ಹೊಂದಿದ್ದ ಮುಸ್ಲಿಮರು ತಮ್ಮ ಧರ್ಮದಲ್ಲಿ ಇಲ್ಲದ ಅಸ್ಪೃಶ್ಯತೆಯನ್ನು ಹಿಂದೂಗಳಿಂದ ಎರವಲು ಪಡೆದಿದ್ದರು ಎಂದು ಅಂಬೇಡ್ಕರ್‌ಗೆ ಅಸಮಾದಾನ ಇತ್ತು. ಇದು ಹಿಂದೂ ಧರ್ಮದ ತಾನೂ ಕೆಟ್ಟಿದ್ದಲ್ಲದೇ ಇಸ್ಲಾಂ ಧರ್ಮವನ್ನೂ ಕೆಡಿಸಿತ್ತು ಎಂಬ ಬಗೆಗಿನ ಅಸಮಾದಾನವಷ್ಟೆ.

PC : Pinterest

“ಮುಸ್ಲೀಮರ ಆಗಿನ ರಾಜಕೀಯದ ಬಗೆಗೆ” ಅಂಬೇಡ್ಕರ್ ಅಸಮಾದಾನಕ್ಕೆ ಇನ್ನೊಂದು ಮುಖ್ಯ ಕಾರಣ ಮನುವಾದಿ ಹಿಂದೂ ನಾಯಕರ ತಾಳಕ್ಕೆ ಕುಣಿಯುತ್ತಿದ್ದ ಮುಸ್ಲಿಂ ನಾಯಕರ ಧೋರಣೆ. ದಲಿತರ ಅಭಿವೃದ್ದಿ ವಿಚಾರವನ್ನು ಅಂಬೇಡ್ಕರ್ ಎತ್ತಿದಾಗ ಹಿಂದೂ ಮನುವಾದಿ ನಾಯಕರು ಮುಸ್ಲಿಂ ನಾಯಕರನ್ನು ಎತ್ತಿಕಟ್ಟುತ್ತಿದ್ದರು.

ಸರಳವಾಗಿ ಹೇಳುವುದಾದರೆ, ತಮ್ಮ ಹಿಂದಿನ ಅಧಿಕಾರವನ್ನು ಪಡೆಯಲು ಮನುವಾದಿ ಹಿಂದೂ ನಾಯಕರು ತಮ್ಮ ಹಿಡನ್ ಅಜೆಂಡಾದ ಭಾಗವಾಗಿ ಮುಸ್ಲಿಮರ ಬೇಡಿಕೆಗಳೆಲ್ಲವಕ್ಕೂ ಒಪ್ಪಿಗೆ ನೀಡುತ್ತಿದ್ದರು. ದಲಿತರು ಹಿಂದೂಗಳಲ್ಲ ಎಂಬುದು ಅಂಬೇಡ್ಕರ್ ಅವರ ನಿಲುವಾಗಿತ್ತು. ಅದಕ್ಕಾಗಿಯೇ ಹಿಂದೂ ಮತ್ತು ಮುಸ್ಲಿಂ ಎಂದು ಪ್ರತ್ಯೇಕಿಸಲು “ಅವಕಾಶವನ್ನು ಎರಡು ಪಾಲು” ಮಾತ್ರ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು?

ಆದರೆ ಅವಕಾಶವನ್ನು “ಮೂರು ಪಾಲು ಮಾಡಿ” ಎಂಬುದು ಅಂಬೇಡ್ಕರ್ ಆಗ್ರಹವಾಗಿತ್ತು. ಒಂದೋ ದಲಿತರು ಹಿಂದೂಗಳೆಂದು ಒಪ್ಪಬೇಕಿತ್ತು. ಹಾಗೆ ಒಪ್ಪಿದರೆ ಸಾಮಾಜಿಕವಾಗಿ, ರಾಜಕೀಯವಾಗಿ ದಲಿತರಿಗೆ ಅನ್ಯಾಯವಾಗುತ್ತಿತ್ತು.‌‌ ಮೀಸಲಾತಿಯಿಂದ ವಂಚಿತರಾಗುತ್ತಿದ್ದರು. ಹಿಂದೂ ಮನುವಾದಿ ನಾಯಕರ ಈ ಅಜೆಂಡಾ ಆಗಿನ ಮುಸ್ಲಿಂ ನಾಯಕರಿಗೆ ಅರ್ಥ ಆಗುತ್ತಿರಲಿಲ್ಲ. ಹಾಗಾಗಿ ಅನಿವಾರ್ಯವಾಗಿ ಮುಸ್ಲಿಂ ಕೋಮುವಾದಿ, ಮುಸ್ಲಿಂ ದಲಿತ ವಿರೋಧಿ ನಿಲುವನ್ನು ಅಂಬೇಡ್ಕರ್ ವಿರೋಧಿಸಿದರೇ ವಿನಹ ಅವರು ಇಸ್ಲಾಂ ಧರ್ಮವಿರೋಧಿ ಆಗಿರಲಿಲ್ಲ.

ಅಂಬೇಡ್ಕರ್ ಸಾರಥ್ಯದ ‘ಬಹಿಷ್ಕೃತ ಭಾರತ’ ಪತ್ರಿಕೆಯಲ್ಲಿ ಮುಸ್ಲಿಂ ಚಿಂತಕರ, ಸಮಾಜವಾದಿಗಳ ಲೇಖನಗಳು ಪ್ರಕಟವಾಗುತ್ತಿದ್ದವು. ಆ ಎಲ್ಲಾ ಲೇಖನಗಳು ಮುಸ್ಲಿಮರ ಸಾಮಾಜಿಕ, ರಾಜಕೀಯ, ಅರ್ಥಿಕ ಸುಧಾರಣೆಯ ಪರವಾಗಿದ್ದವೇ ಆಗಿದ್ದವು. ಒಂದು ಹಂತದಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವ ಬಗ್ಗೆಯೂ ಡಾ ಬಿ ಆರ್ ಅಂಬೇಡ್ಕರ್ ಯೋಚಿಸಿದ್ದರು.

ಮುಸ್ಲಿಮರು ಮತ್ತು ದಲಿತರ ಉದ್ದಾರ ಅಂಬೇಡ್ಕರ್‌ರ ಒಂದು ದೊಡ್ಡ ಆಶಯವಾಗಿತ್ತು. ಅದಕ್ಕಾಗಿಯೇ ಅವರು ಸಂವಿದಾನ ರಚನಾ ಸಭೆಯನ್ನು ಪ್ರವೇಶ ಮಾಡಬೇಕಿತ್ತು. ಯಾರೂ ಕೂಡಾ ಅಂಬೇಡ್ಕರ್‌ರನ್ನು ಈ ನಿಟ್ಟಿನಲ್ಲಿ ಬೆಂಬಲಿಸದೇ ಇದ್ದಾಗ ಅಸೆಂಬ್ಲಿಯಲ್ಲಿ ಯೋಗೇಂದ್ರನಾಥ್ ಮಂಡಲ್ ಅಂಬೇಡ್ಕರ್ ಹೆಸರನ್ನು ಸೂಚಿಸಿದ್ದರು. ಈ ಸೂಚನೆಗೆ ಬೆಂಬಲ‌ ನೀಡಿದ್ದು ಮುಸ್ಲಿಂ ಲೀಗ್. ಇದರಿಂದಾಗಿಯೇ ಅಂಬೇಡ್ಕರ್ ಸಂವಿಧಾನ ರಚನಾ ಸಭೆ ಪ್ರವೇಶಿಸುವುದು ಸಾಧ್ಯವಾಯಿತು. ಸಂವಿಧಾನದಲ್ಲಿ ದಲಿತರು, ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರು ಮತ್ತು ಶೋಷಿತರಿಗೆ ಸಮಾನ ಹಕ್ಕುಗಳು ಮತ್ತು ಮೀಸಲಾತಿಗಳನ್ನು ನೀಡಲು ಸಾಧ್ಯವಾಯಿತು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಮಹಾ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಇಸ್ಲಾಂ ವಿರೋಧಿಯಾಗಿದ್ದರು ಎನ್ನುವ ಚಕ್ರವರ್ತಿ ಸೂಲಿಬೆಲೆ ಈ ಮೂಲಕ ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಯಾಗಿದ್ದರು. ಕೋಮುವಾದದ ವಿರೋಧವೆಂದರೆ ಅದು ಹಿಂದೂ ಕೋಮುವಾದವಿರಲಿ, ಮುಸ್ಲಿಮ್ ಕೋಮುವಾದವಿರಲಿ, ಕೋಮುವಾದಕ್ಕೆ ವಿರೋಧವಷ್ಟೆ. ಜನಾಂಗ, ಸಮುದಾಯದ ವಿರೋಧಿ ಎಂದರ್ಥವಲ್ಲ.

ಡಾ.ಬಿ.ಆರ್. ಅಂಬೇಡ್ಕರ್ ಅವರ ಈಗಿನ ಭಾರತೀಯ ವಾರಸುದಾರರಾದ ಹಿಂದೂ ಮುಸ್ಲಿಮರೆಲ್ಲರೂ ಕೋಮುವಾದ, ಅಸ್ಪೃಶ್ಯತೆ, ಅಸಮಾನತೆಯ ವಿರೋಧಿಗಳೇ ಆಗಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ ಅಂಬೇಡ್ಕರ್ ವಿರೋಧಿ ಕುತಂತ್ರಕ್ಕೆ ಈ ನೆಲದ ಅಂಬೇಡ್ಕರ್‌ ವಾದಿಗಳು ಬಲಿಯಾಗುವುದಿಲ್ಲ. ಅಂಬೇಡ್ಕರ್ ವಾದ ಎಂದರೆ ಪ್ರಜ್ಞೆ ಎಂಬ ಪ್ರಾಥಮಿಕ ಜ್ಞಾನವೇ ಇಲ್ಲದೆ ಸೂಲಿಬೆಲೆ ವ್ಯರ್ಥ ಪ್ರಯತ್ನ ಮಾಡಿದ್ದಾರಷ್ಟೆ.

ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

<iframe width="1280" height="720" src="https://www.youtube.com/embed/s3N8ypUOxec" title="YouTube video player" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...