Homeಕರ್ನಾಟಕಸುಳ್ಳೇ ಬಿಜೆಪಿಯ ಮನೆ ದೇವರು; ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ: ಸಿದ್ದರಾಮಯ್ಯ

ಸುಳ್ಳೇ ಬಿಜೆಪಿಯ ಮನೆ ದೇವರು; ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ: ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ಮೋದಿ ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾಗಿದ್ದು, ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ್ದಾರೆ. ಅವರು ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಳೇ ಬಿಜೆಪಿಯ

ಬಿಜೆಪಿ ಯಾವ‌ ಮುಖ ಇಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ಮಾತಾಡುತ್ತಿದೆ? 4ರೂ ಹಾಲಿನ ದರ ಹೆಚ್ಚಿಸಿ ಈ 4 ರೂಪಾಯಿಯನ್ನು ನೇರವಾಗಿ ರೈತರ ಜೇಬಿಗೆ ಹಾಕಿದ್ದೇವೆ. ಸರ್ಕಾರಕ್ಕೆ ಬರಲ್ಲ ಎಂದು ಅವರು ಹೇಳಿದ್ದಾರೆ. ಅವರು ಬಿಜೆಪಿ ಸರ್ಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡುತ್ತಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಆರೋಪ ಪಟ್ಟಿ ಹಾಕಿದ್ದನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿ, ಆರೆಸ್ಸೆಸ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಈ ಆರೆಸ್ಸೆಸ್ ಪರಿವಾರಕ್ಕೆ ಭಾರತದ ಬೆಲೆಯೂ ಗೊತ್ತಿಲ್ಲ. ಸ್ವಾತಂತ್ರ್ಯದ ಬೆಲೆಯೂ ಗೊತ್ತಿಲ್ಲ ಹೇಳಿದ್ದಾರೆ.

ಆರೆಸ್ಸೆಸ್‌ನವರ ದೇಶದ್ರೋಹದ ವಿರುದ್ಧ ಮತ್ತೊಂದು ಸ್ವಾತಂತ್ರ್ಯ ಹೋರಾಟದ ಮಾದರಿ ದೇಶಾದ್ಯಂತ ನಡೆಸೋಣ. ಅದಕ್ಕೆ ಸಜ್ಜಾಗಿ ಎಂದು ಮುಖ್ಯಮಂತ್ರಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. “ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ” ಎಂದು ಅವರು ಹೇಳಿದ್ದಾರೆ.

” ಸುಳ್ಳೇ ಬಿಜೆಪಿಯ ಮನೆ ದೇವರು. ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ. ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ. ನಾವು ಸುಳ್ಳಿನ ಕಾರ್ಖಾನೆ RSS ನ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ. ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ?” ಎಂದು ಅವರು ಪ್ರಶ್ನಿಸಿದ್ದಾರೆ.

ತಮ್ಮ ಸರ್ಕಾರ ಏರಿಕೆ ಮಾಡಿರುವ ಹಾಲಿನ ಬೆಲೆಯನ್ನು ಸಮರ್ಥಿಸಿಕೊಂಡ ಅವರು, ಏರಿಕೆ ಮಾಡಲಾದ 4 ರೂ ರೈತರ ಜೇಬಿಗೆ ಹೋಗುತ್ತಿದೆ. ಸರ್ಕಾರಕ್ಕೆ ಬರುತ್ತಿಲ್ಲ. ನೀವು ಗ್ಯಾಸ್ ಬೆಲೆ ಹತ್ತಾರು ಬಾರಿ ಹೆಚ್ಚಿಸಿ ಈಗ ಮತ್ತೆ 50 ರೂ ಹೆಚ್ಚಿಸಿದ್ದೀರಿ. ಈ ಹೆಚ್ಚುವರಿ ಹಣ ಯಾರಿಗೆ ಹೋಗುತ್ತಿದೆ ಹೇಳಿ ಎಂದು ಕೇಂದ್ರ ಸರ್ಕಾರದ ಆಡಳಿತರೂಢ ಬಿಜೆಪಿಗೆ ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಂದಿನ ವಿಚಾರಣೆಯವರೆಗೆ ವಕ್ಫ್‌ನಲ್ಲಿ ಯಾವುದೇ ಬದಲಾವಣೆ-ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ಮುಂದಿನ ವಿಚಾರಣೆಯವರೆಗೆ ವಕ್ಫ್‌ನಲ್ಲಿ ಯಾವುದೇ ಬದಲಾವಣೆ-ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...