Homeಕರ್ನಾಟಕಸುಳ್ಳೇ ಬಿಜೆಪಿಯ ಮನೆ ದೇವರು; ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ: ಸಿದ್ದರಾಮಯ್ಯ

ಸುಳ್ಳೇ ಬಿಜೆಪಿಯ ಮನೆ ದೇವರು; ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ: ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ಮೋದಿ ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾಗಿದ್ದು, ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ್ದಾರೆ. ಅವರು ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಳೇ ಬಿಜೆಪಿಯ

ಬಿಜೆಪಿ ಯಾವ‌ ಮುಖ ಇಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ಮಾತಾಡುತ್ತಿದೆ? 4ರೂ ಹಾಲಿನ ದರ ಹೆಚ್ಚಿಸಿ ಈ 4 ರೂಪಾಯಿಯನ್ನು ನೇರವಾಗಿ ರೈತರ ಜೇಬಿಗೆ ಹಾಕಿದ್ದೇವೆ. ಸರ್ಕಾರಕ್ಕೆ ಬರಲ್ಲ ಎಂದು ಅವರು ಹೇಳಿದ್ದಾರೆ. ಅವರು ಬಿಜೆಪಿ ಸರ್ಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡುತ್ತಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಆರೋಪ ಪಟ್ಟಿ ಹಾಕಿದ್ದನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿ, ಆರೆಸ್ಸೆಸ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಈ ಆರೆಸ್ಸೆಸ್ ಪರಿವಾರಕ್ಕೆ ಭಾರತದ ಬೆಲೆಯೂ ಗೊತ್ತಿಲ್ಲ. ಸ್ವಾತಂತ್ರ್ಯದ ಬೆಲೆಯೂ ಗೊತ್ತಿಲ್ಲ ಹೇಳಿದ್ದಾರೆ.

ಆರೆಸ್ಸೆಸ್‌ನವರ ದೇಶದ್ರೋಹದ ವಿರುದ್ಧ ಮತ್ತೊಂದು ಸ್ವಾತಂತ್ರ್ಯ ಹೋರಾಟದ ಮಾದರಿ ದೇಶಾದ್ಯಂತ ನಡೆಸೋಣ. ಅದಕ್ಕೆ ಸಜ್ಜಾಗಿ ಎಂದು ಮುಖ್ಯಮಂತ್ರಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. “ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ” ಎಂದು ಅವರು ಹೇಳಿದ್ದಾರೆ.

” ಸುಳ್ಳೇ ಬಿಜೆಪಿಯ ಮನೆ ದೇವರು. ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ. ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ. ನಾವು ಸುಳ್ಳಿನ ಕಾರ್ಖಾನೆ RSS ನ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ. ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ?” ಎಂದು ಅವರು ಪ್ರಶ್ನಿಸಿದ್ದಾರೆ.

ತಮ್ಮ ಸರ್ಕಾರ ಏರಿಕೆ ಮಾಡಿರುವ ಹಾಲಿನ ಬೆಲೆಯನ್ನು ಸಮರ್ಥಿಸಿಕೊಂಡ ಅವರು, ಏರಿಕೆ ಮಾಡಲಾದ 4 ರೂ ರೈತರ ಜೇಬಿಗೆ ಹೋಗುತ್ತಿದೆ. ಸರ್ಕಾರಕ್ಕೆ ಬರುತ್ತಿಲ್ಲ. ನೀವು ಗ್ಯಾಸ್ ಬೆಲೆ ಹತ್ತಾರು ಬಾರಿ ಹೆಚ್ಚಿಸಿ ಈಗ ಮತ್ತೆ 50 ರೂ ಹೆಚ್ಚಿಸಿದ್ದೀರಿ. ಈ ಹೆಚ್ಚುವರಿ ಹಣ ಯಾರಿಗೆ ಹೋಗುತ್ತಿದೆ ಹೇಳಿ ಎಂದು ಕೇಂದ್ರ ಸರ್ಕಾರದ ಆಡಳಿತರೂಢ ಬಿಜೆಪಿಗೆ ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಂದಿನ ವಿಚಾರಣೆಯವರೆಗೆ ವಕ್ಫ್‌ನಲ್ಲಿ ಯಾವುದೇ ಬದಲಾವಣೆ-ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ಮುಂದಿನ ವಿಚಾರಣೆಯವರೆಗೆ ವಕ್ಫ್‌ನಲ್ಲಿ ಯಾವುದೇ ಬದಲಾವಣೆ-ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...