Homeರಾಜಕೀಯಎನ್‍ಆರ್‍ಸಿ: ಶುರುವಾಯಿತೇ ಶಾ ಸಂಚು? ವಿದೇಶಿ ಹೆಸರಲ್ಲಿ ಸೇನಾಧಿಕಾರಿ ಬಂಧನ

ಎನ್‍ಆರ್‍ಸಿ: ಶುರುವಾಯಿತೇ ಶಾ ಸಂಚು? ವಿದೇಶಿ ಹೆಸರಲ್ಲಿ ಸೇನಾಧಿಕಾರಿ ಬಂಧನ

ಭಾರತೀಯ ಸೇನೆಯ ಲೆಫ್ಟಿನೆಂಟ್ ‘ವಿದೇಶಿ.. ಬಂಧನದಲ್ಲೀಗ ಅವರು ‘ಪರದೇಶಿ’...

- Advertisement -
- Advertisement -

ರಾಷ್ಟ್ರೀಯ ನಾಗರೀಕತ್ವ ನೋಂದಣಿ (ಎನ್‍ಆರ್‍ಸಿ) ಈಶಾನ್ಯ ಮತ್ತು ಪೂರ್ವ ರಾಜ್ಯಗಳಲ್ಲಿ ಬಿಜೆಪಿಯ ಮ್ರಮುಖ ಚುನಾವಣಾ ವಿಷಯವಾಗಿತ್ತು. ಈ ಹಿಂದೆಯೇ ಅಸ್ಸಾಂನಂತಹ ರಾಜ್ಯದಲ್ಲಿ ಈ ಪ್ರಯೋಗ ಆರಂಭವಾಗಿದೆ. ಇದರ ಅಡಿಯಲ್ಲಿ ಭಾರತೀಯ ಸೇನೆಯಲ್ಲಿ 30 ಬರ್ಷಗಳ ಕಾಲ ಸೇವೆ ಸಲ್ಲಿಸಿದ ನಿವೃತ್ತ ಲೆಫ್ಟಿನೆಂಟ್ ಒಬ್ಬರನ್ನು ವಿದೇಶಿ ಎಂದು ಗುರುತಿಸಿ ಬಂಧಿಸಲಾಗಿದೆ. ಅವರು ಮುಸ್ಲಿಂ ಎನ್ನುವುದು ಕಾಕತಾಳೀಯವಲ್ಲ…
ಎನ್‍ಆರ್‍ಸಿ ಮುಂದೆ ಸೃಷ್ಟಿಸಲಿರುವ ಅನಾಹುತಗಳಿಗೆ ಸಾಕ್ಷಿಯಾಗಿ ಈಶಾನ್ಯ ಮತ್ತು ಪೂರ್ವ ರಾಜ್ಯಗಳಲ್ಲಿ ಹಲವಾರು ಜನರನ್ನು ವಿದೇಶಿ ವಲಸಿಗರು ಎಂದು ಗುರುತಿಸುವ ಸಂಚು ಶುರುವಾಗಿದೆ. ಮೊನ್ನೆ ಮೇ 29ರಂದು ಅಸ್ಸಾಂ ಪೊಲೀಸರು ಮೊಹಮ್ಮದ್ ಸನಾವುಲ್ಲಾ ಎಂಬ ನಿವೃತ್ತ ಗೌರವಾನ್ವಿತ ಲೆಫ್ಟಿನೆಂಟ್‍ರನ್ನು ವಶಕ್ಕೆ ಪಡೆದಿದ್ದಾರೆ. ‘ಬೋಕೊ ಫಾರಿನರ್ಸ್ ಟ್ರಿಬ್ಯುನಲ್’ ಅವರನ್ನು ವಿದೇಶಿಯೆಂದು ಗುರುತಿಸಿದೆ.
ಇದೇನೂ ಮೊದಲಲ್ಲ. ಹಲವಾರು ನಿವೃತ್ತ ಸೇನಾಧಿಕಾರಿಗಳು ಈಗಾಗಲೇ ವಿಚಾರಣೆ ಹೆಸರಲ್ಲಿ ಕಿರುಕುಳ ಅನುಭವಿಸಿದ್ದಾರೆ. ದೇಶಕ್ಕೆ ಅವರು ನೀಡಿದ ಕೊಡುಗೆಯೂ ಈ ಭಯಾನಕ ಎನ್‍ಆರ್‍ಸಿ ಮುಂದೆ ನಗಣ್ಯ. ಹೀಗಾದರೆ ಅಲ್ಲಿನ ಜನಸಾಮಾನ್ಯರ ಪರಿಸ್ಥಿತಿಯನ್ನು ಊಹಿಸಿ.
ಈ ಸಲದ ಚುನಾವಣೆ ಪ್ರಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಲವಾರು ಕಡೆ ಎನ್‍ಆರ್‍ಸಿ ವಿಷಯ ಪ್ರಸ್ತಾಪಿಸಿ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಎಲ್ಲ ಕಡೆ ಎನ್‍ಆರ್‍ಸಿ ಬಳಸಿ ನುಸುಳುಕೋರರನ್ನು ದೇಶದಿಂದ ಹೊರ ಹಾಕುತ್ತೇವೆ. ಇದರಲ್ಲಿ ಹಿಂದೂ ನಿರಾಶ್ರಿತರಿದ್ದರೆ ಅವರಿಗೆ ಇಲ್ಲಿಯ ನಾಗರಿಕತ್ವ ನೀಡುತ್ತೇವೆ. ಉಳಿದವರನ್ನು ಎತ್ತಿ ಬಿಸಾಡುತ್ತೇವೆ’ ಎಂದು ಪ್ರಚೊದನಾಜಾರ ಭಾಷಣಗಳನ್ನು ಮಾಡಿದ್ದರು. ಅವರ ಗುರಿ ಬಾಂಗ್ಲಾ ಮೂಲದ ಮುಸ್ಲಿಂರೇ ಎಂಬುದು ಸ್ಪಷ್ಟ. ಇದನ್ನು ದೇಶಾದ್ಯಂತ ವಿಸ್ರಿಸಿದರೆ ಘನಘೋರ ದೌರ್ಜನ್ಯಗಳಾಗುವುದಂತೂ ಸತ್ಯ. ಹಿಂದೊಮ್ಮೆ ಬಾಂಗ್ಲಾ ವಲಸಿಗರನ್ನು ಇದೇ ಶಾ ಕ್ರಿಮಿಕೀಟಗಳಿಗೆ ಹೋಲಿಸಿದ್ದರು. ಈ ಪುಣ್ಯಾತ್ಮನಿಗೆ ಗೃಹ ಖಾತೆ ನೀಡಿದರಂತೂ ಪರಿಸ್ಥಿತಿ ಅಧ್ವಾನವಾಗಲಿದೆ.
51 ವರ್ಷದ ಸನಾವುಲ್ಲಾ ಭಾರತೀಯ ಸೇನೆಗೆ ಸಾಮಾನ್ಯ ಸೈನಿಕನಾಗಿ ಸೇವೆಗೆ ಸೇರಿ, ಜಮ್ಮು-ಕಾಶ್ಮೀರ ಮತ್ತು ಮಣಿಪುರಗಳಲ್ಲಿ ಆಂತರಿಕ ಸಶಸ್ತ್ರ ಬಂಡಾಯಗಳ ವಿರುದ್ಧದ ಹೋರಾಟದಲ್ಲಿ ಪಾಲೊಂಡಿದ್ದಾರೆ. ಅವರ ಸೇವೆ ಮನ್ನಿಸಿ 2014ರಲ್ಲಿ ರಾಷ್ಟ್ಪತಿ ಅವರಿಗೆ ಜೂನಿಯರ್ ಕಮೀಚನ್ ಅಧಿಕಾರಿ ದರ್ಜಗೆ ಬಡ್ತಿ ನೀಡಿದ್ದಾರೆ.
ನಿವೃತ್ತಿ ನಂತರ ಅವರು ಅಸ್ಸಾಂ ಗಡಿ ಭದ್ರತಾ ಪಡೆಗೆ ಎಸ್‍ಐ ಎಂದು ನೇಮಕಗೊಂಡಿದ್ದರು. ಈಗ ಫಾರಿನರ್ಸ್ ಟ್ರಿಬ್ಯುನಲ್ (ಎಫ್‍ಟಿ) ಸೂಚನೆಯ ಮೇರೆಗೆ ಅದೇ ಪೊಲೀಸರೇ ಅವರನ್ನು ಅರೆಸ್ಟಟ ಮಾಡಿದ್ದಾರೆ. ಅವರನ್ನು ಈಗ ಗೋಲ್‍ಪಾರಾ ಡಿಟೆನ್ಸನ್ ಕೇಂದ್ರದಲ್ಲಿ ಇಡಲಾಗಿದೆ. ಸನಾವುಲ್ಲಾ ಬಂಧನದ ವಿರುದ್ಧ ಹೈಕೋರ್ಟಿಗೆ ಹೋಗಲಿರುವ ವಕೀಲ ಅಮಾನ್ ವಡುದ್ ‘ಕ್ವಿಂಟ್’ನೊಂದಿಗೆ ಮಾತನಾಡಿ, ಫಾರಿನರ್ಸ್ ಟ್ರಿಬ್ಯುನಲ್ ಸರಿಯಾದ ತನಿಖೆ ಮಾಡದೇ ಸನಾವುಲ್ಲಾ ಅವರನ್ನು ವಿದೇಶಿ ನಾಗರಿಕ ಎಂದು ಹೇಳಿರುವುದು ಅಕ್ಷಮ್ಯ, 30 ವರ್ಷ ಈ ದೇಶದ ಸೇನೆಯ ಭಾಗವಾಗಿದ್ದವರಿಗೇ ಈ ಸ್ಥಿತಿಯಾದರೆ ಜನಸಾಮಾನ್ಯರ ಪಾಡೇನು? ಎಂದು ಪ್ರಶ್ನಿಸಿದ್ದಾರೆ.
ಅಸ್ಸಾಂ ಗಡಿ ಭದ್ರತಾ ಪೊಲೀಸರ5ನ್ನೂ ದೂರಿರುವ ಅವರು, ವೆರಿಫಿಕೆಷನ್ ರಿಪೋರ್ಟಿನಲ್ಲಿ ಸನಾವುಲ್ಲಾ ಒಬ್ಬ ದಿನಗೂಲಿ ಕಾರ್ಮಿಕ ಎಂದು ಉಲ್ಲೇಖಿಸಿದ್ದಾರೆ ಎಂದೂ ತಿಳಿಸಿದ್ದಾರೆ. ಎಫ್‍ಟಿ ವರದಿಯಲ್ಲಿ ಸನಾವುಲ್ಲಾ ವಿದೇಶಿ ಎಂದು ನಿರ್ಧರಿಸಲು, ‘1986ರ ಮತದಾರರ ಪಟ್ಟಿಯಲ್ಲಿ 20 ವರ್ಷದವರಾಗಿದ್ದ ಅವರು ತಮ್ಮ ಹೆಸರನ್ನು ನೋಂದಾಯಿಸಿರಲಿಲ್ಲ’ ಎಂಬ ವಿಚುತ್ರ ಕಾರಣವನ್ನೂ ನೀಡಲಾಗಿದೆ. ಆದರೆ, ಮತದಾನದ ಕನಿಷ್ಠ ವಯಸ್ಸನ್ನು 21ರಿಂದ 18ಕ್ಕೆ ಇಳಿಸಿದ್ದು 1989ರಲ್ಲಿ ಎಂಬ ವಾಸ್ತವವನ್ನೂ ಕಡೆಗಣಿಸಲಾಗಿದೆ.
‘ಕೋರ್ಟಿನ ಆದೇಶದ ಮೇರೆಗೆ ಸನಾವುಲ್ಲಾ ಅವರನ್ನು ನಾವು ಬಂಧಿಸಿದ್ದೇವೆ. ಎಫ್‍ಟಿ ವರದಿಯೇ ನಮಗೆ ಫೈನಲ್/ ಸನಾವುಲ್ಲಾ ಅವರು ಕೋರ್ಟಿಗೆ ಹೋಗಲು ಅವಕಾಶಗಳಿವೆ’ ಎಂದು ಅನಿನ್‍ಗಾಂವ್‍ನ ಹೆಚ್ಚುವರಿ ಎಸ್‍ಪಿ ಸಂಜೀಬ್ ಸೈಕಿಯಾ ತಿಳಿಸಿದ್ದಾರೆ.
ಕಳೆದ ವರ್ಷವೇ ಈ ಬಗ್ಗೆ ನೋಟಿಸ್ ಬಂದಾದ ಮೇಲೆ ಸನಾವುಲ್ಲಾ ವಿವಿಧ ಪೊಲೀಸ್ ಠಾಣೆಗಳಿಗೆ ತೆರಳಿ ವಿವರ ಪರಿಶೀಲಿಸಿದ್ದಾರೆ. ಆದರೆ, ಬೋಕೊ ಎಫ್‍ಟಿ ವರದಿಯಲ್ಲಿ ಆಗಿಚ್ಯಾ ಗ್ರಾಮದ ಮೊಹಮ್ಮದ್ ಸಮಸ್ಯಲ್ ಹಕ್ ಎಂಬುವರ ಹೆಸರಿದ್ದು, ಅದನ್ನೇ ತಪ್ಪಾಗಿ ನನ್ನ ಮೇಲೆ ಕೇಸಉ ಹೂಡಲು ಎಫ್‍ಟಿ ಬಳಸಿಕೊಂಡಿದ್ದಾರೆ…. 30 ವರ್ಷ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ ನನಗೆ ವಿದೇಶಿ ಪಟ್ಟ ಕಟ್ಟಿ ಬಂಧನದಲ್ಲಿ ಇಡುವ ಉಡುಗೊರೆಯನ್ನು ನೀಡಲಾಗುತ್ತಿದೆ’ ಎಂದು ಸ್ವತ: ಸನಾವುಲ್ಲಾ ನ್ಯೂಸ್ 18 ಮಾಧ್ಯಮದ ಮುಂದೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...