Homeರಾಜಕೀಯಎನ್‍ಆರ್‍ಸಿ: ಶುರುವಾಯಿತೇ ಶಾ ಸಂಚು? ವಿದೇಶಿ ಹೆಸರಲ್ಲಿ ಸೇನಾಧಿಕಾರಿ ಬಂಧನ

ಎನ್‍ಆರ್‍ಸಿ: ಶುರುವಾಯಿತೇ ಶಾ ಸಂಚು? ವಿದೇಶಿ ಹೆಸರಲ್ಲಿ ಸೇನಾಧಿಕಾರಿ ಬಂಧನ

ಭಾರತೀಯ ಸೇನೆಯ ಲೆಫ್ಟಿನೆಂಟ್ ‘ವಿದೇಶಿ.. ಬಂಧನದಲ್ಲೀಗ ಅವರು ‘ಪರದೇಶಿ’...

- Advertisement -
- Advertisement -

ರಾಷ್ಟ್ರೀಯ ನಾಗರೀಕತ್ವ ನೋಂದಣಿ (ಎನ್‍ಆರ್‍ಸಿ) ಈಶಾನ್ಯ ಮತ್ತು ಪೂರ್ವ ರಾಜ್ಯಗಳಲ್ಲಿ ಬಿಜೆಪಿಯ ಮ್ರಮುಖ ಚುನಾವಣಾ ವಿಷಯವಾಗಿತ್ತು. ಈ ಹಿಂದೆಯೇ ಅಸ್ಸಾಂನಂತಹ ರಾಜ್ಯದಲ್ಲಿ ಈ ಪ್ರಯೋಗ ಆರಂಭವಾಗಿದೆ. ಇದರ ಅಡಿಯಲ್ಲಿ ಭಾರತೀಯ ಸೇನೆಯಲ್ಲಿ 30 ಬರ್ಷಗಳ ಕಾಲ ಸೇವೆ ಸಲ್ಲಿಸಿದ ನಿವೃತ್ತ ಲೆಫ್ಟಿನೆಂಟ್ ಒಬ್ಬರನ್ನು ವಿದೇಶಿ ಎಂದು ಗುರುತಿಸಿ ಬಂಧಿಸಲಾಗಿದೆ. ಅವರು ಮುಸ್ಲಿಂ ಎನ್ನುವುದು ಕಾಕತಾಳೀಯವಲ್ಲ…
ಎನ್‍ಆರ್‍ಸಿ ಮುಂದೆ ಸೃಷ್ಟಿಸಲಿರುವ ಅನಾಹುತಗಳಿಗೆ ಸಾಕ್ಷಿಯಾಗಿ ಈಶಾನ್ಯ ಮತ್ತು ಪೂರ್ವ ರಾಜ್ಯಗಳಲ್ಲಿ ಹಲವಾರು ಜನರನ್ನು ವಿದೇಶಿ ವಲಸಿಗರು ಎಂದು ಗುರುತಿಸುವ ಸಂಚು ಶುರುವಾಗಿದೆ. ಮೊನ್ನೆ ಮೇ 29ರಂದು ಅಸ್ಸಾಂ ಪೊಲೀಸರು ಮೊಹಮ್ಮದ್ ಸನಾವುಲ್ಲಾ ಎಂಬ ನಿವೃತ್ತ ಗೌರವಾನ್ವಿತ ಲೆಫ್ಟಿನೆಂಟ್‍ರನ್ನು ವಶಕ್ಕೆ ಪಡೆದಿದ್ದಾರೆ. ‘ಬೋಕೊ ಫಾರಿನರ್ಸ್ ಟ್ರಿಬ್ಯುನಲ್’ ಅವರನ್ನು ವಿದೇಶಿಯೆಂದು ಗುರುತಿಸಿದೆ.
ಇದೇನೂ ಮೊದಲಲ್ಲ. ಹಲವಾರು ನಿವೃತ್ತ ಸೇನಾಧಿಕಾರಿಗಳು ಈಗಾಗಲೇ ವಿಚಾರಣೆ ಹೆಸರಲ್ಲಿ ಕಿರುಕುಳ ಅನುಭವಿಸಿದ್ದಾರೆ. ದೇಶಕ್ಕೆ ಅವರು ನೀಡಿದ ಕೊಡುಗೆಯೂ ಈ ಭಯಾನಕ ಎನ್‍ಆರ್‍ಸಿ ಮುಂದೆ ನಗಣ್ಯ. ಹೀಗಾದರೆ ಅಲ್ಲಿನ ಜನಸಾಮಾನ್ಯರ ಪರಿಸ್ಥಿತಿಯನ್ನು ಊಹಿಸಿ.
ಈ ಸಲದ ಚುನಾವಣೆ ಪ್ರಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಲವಾರು ಕಡೆ ಎನ್‍ಆರ್‍ಸಿ ವಿಷಯ ಪ್ರಸ್ತಾಪಿಸಿ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಎಲ್ಲ ಕಡೆ ಎನ್‍ಆರ್‍ಸಿ ಬಳಸಿ ನುಸುಳುಕೋರರನ್ನು ದೇಶದಿಂದ ಹೊರ ಹಾಕುತ್ತೇವೆ. ಇದರಲ್ಲಿ ಹಿಂದೂ ನಿರಾಶ್ರಿತರಿದ್ದರೆ ಅವರಿಗೆ ಇಲ್ಲಿಯ ನಾಗರಿಕತ್ವ ನೀಡುತ್ತೇವೆ. ಉಳಿದವರನ್ನು ಎತ್ತಿ ಬಿಸಾಡುತ್ತೇವೆ’ ಎಂದು ಪ್ರಚೊದನಾಜಾರ ಭಾಷಣಗಳನ್ನು ಮಾಡಿದ್ದರು. ಅವರ ಗುರಿ ಬಾಂಗ್ಲಾ ಮೂಲದ ಮುಸ್ಲಿಂರೇ ಎಂಬುದು ಸ್ಪಷ್ಟ. ಇದನ್ನು ದೇಶಾದ್ಯಂತ ವಿಸ್ರಿಸಿದರೆ ಘನಘೋರ ದೌರ್ಜನ್ಯಗಳಾಗುವುದಂತೂ ಸತ್ಯ. ಹಿಂದೊಮ್ಮೆ ಬಾಂಗ್ಲಾ ವಲಸಿಗರನ್ನು ಇದೇ ಶಾ ಕ್ರಿಮಿಕೀಟಗಳಿಗೆ ಹೋಲಿಸಿದ್ದರು. ಈ ಪುಣ್ಯಾತ್ಮನಿಗೆ ಗೃಹ ಖಾತೆ ನೀಡಿದರಂತೂ ಪರಿಸ್ಥಿತಿ ಅಧ್ವಾನವಾಗಲಿದೆ.
51 ವರ್ಷದ ಸನಾವುಲ್ಲಾ ಭಾರತೀಯ ಸೇನೆಗೆ ಸಾಮಾನ್ಯ ಸೈನಿಕನಾಗಿ ಸೇವೆಗೆ ಸೇರಿ, ಜಮ್ಮು-ಕಾಶ್ಮೀರ ಮತ್ತು ಮಣಿಪುರಗಳಲ್ಲಿ ಆಂತರಿಕ ಸಶಸ್ತ್ರ ಬಂಡಾಯಗಳ ವಿರುದ್ಧದ ಹೋರಾಟದಲ್ಲಿ ಪಾಲೊಂಡಿದ್ದಾರೆ. ಅವರ ಸೇವೆ ಮನ್ನಿಸಿ 2014ರಲ್ಲಿ ರಾಷ್ಟ್ಪತಿ ಅವರಿಗೆ ಜೂನಿಯರ್ ಕಮೀಚನ್ ಅಧಿಕಾರಿ ದರ್ಜಗೆ ಬಡ್ತಿ ನೀಡಿದ್ದಾರೆ.
ನಿವೃತ್ತಿ ನಂತರ ಅವರು ಅಸ್ಸಾಂ ಗಡಿ ಭದ್ರತಾ ಪಡೆಗೆ ಎಸ್‍ಐ ಎಂದು ನೇಮಕಗೊಂಡಿದ್ದರು. ಈಗ ಫಾರಿನರ್ಸ್ ಟ್ರಿಬ್ಯುನಲ್ (ಎಫ್‍ಟಿ) ಸೂಚನೆಯ ಮೇರೆಗೆ ಅದೇ ಪೊಲೀಸರೇ ಅವರನ್ನು ಅರೆಸ್ಟಟ ಮಾಡಿದ್ದಾರೆ. ಅವರನ್ನು ಈಗ ಗೋಲ್‍ಪಾರಾ ಡಿಟೆನ್ಸನ್ ಕೇಂದ್ರದಲ್ಲಿ ಇಡಲಾಗಿದೆ. ಸನಾವುಲ್ಲಾ ಬಂಧನದ ವಿರುದ್ಧ ಹೈಕೋರ್ಟಿಗೆ ಹೋಗಲಿರುವ ವಕೀಲ ಅಮಾನ್ ವಡುದ್ ‘ಕ್ವಿಂಟ್’ನೊಂದಿಗೆ ಮಾತನಾಡಿ, ಫಾರಿನರ್ಸ್ ಟ್ರಿಬ್ಯುನಲ್ ಸರಿಯಾದ ತನಿಖೆ ಮಾಡದೇ ಸನಾವುಲ್ಲಾ ಅವರನ್ನು ವಿದೇಶಿ ನಾಗರಿಕ ಎಂದು ಹೇಳಿರುವುದು ಅಕ್ಷಮ್ಯ, 30 ವರ್ಷ ಈ ದೇಶದ ಸೇನೆಯ ಭಾಗವಾಗಿದ್ದವರಿಗೇ ಈ ಸ್ಥಿತಿಯಾದರೆ ಜನಸಾಮಾನ್ಯರ ಪಾಡೇನು? ಎಂದು ಪ್ರಶ್ನಿಸಿದ್ದಾರೆ.
ಅಸ್ಸಾಂ ಗಡಿ ಭದ್ರತಾ ಪೊಲೀಸರ5ನ್ನೂ ದೂರಿರುವ ಅವರು, ವೆರಿಫಿಕೆಷನ್ ರಿಪೋರ್ಟಿನಲ್ಲಿ ಸನಾವುಲ್ಲಾ ಒಬ್ಬ ದಿನಗೂಲಿ ಕಾರ್ಮಿಕ ಎಂದು ಉಲ್ಲೇಖಿಸಿದ್ದಾರೆ ಎಂದೂ ತಿಳಿಸಿದ್ದಾರೆ. ಎಫ್‍ಟಿ ವರದಿಯಲ್ಲಿ ಸನಾವುಲ್ಲಾ ವಿದೇಶಿ ಎಂದು ನಿರ್ಧರಿಸಲು, ‘1986ರ ಮತದಾರರ ಪಟ್ಟಿಯಲ್ಲಿ 20 ವರ್ಷದವರಾಗಿದ್ದ ಅವರು ತಮ್ಮ ಹೆಸರನ್ನು ನೋಂದಾಯಿಸಿರಲಿಲ್ಲ’ ಎಂಬ ವಿಚುತ್ರ ಕಾರಣವನ್ನೂ ನೀಡಲಾಗಿದೆ. ಆದರೆ, ಮತದಾನದ ಕನಿಷ್ಠ ವಯಸ್ಸನ್ನು 21ರಿಂದ 18ಕ್ಕೆ ಇಳಿಸಿದ್ದು 1989ರಲ್ಲಿ ಎಂಬ ವಾಸ್ತವವನ್ನೂ ಕಡೆಗಣಿಸಲಾಗಿದೆ.
‘ಕೋರ್ಟಿನ ಆದೇಶದ ಮೇರೆಗೆ ಸನಾವುಲ್ಲಾ ಅವರನ್ನು ನಾವು ಬಂಧಿಸಿದ್ದೇವೆ. ಎಫ್‍ಟಿ ವರದಿಯೇ ನಮಗೆ ಫೈನಲ್/ ಸನಾವುಲ್ಲಾ ಅವರು ಕೋರ್ಟಿಗೆ ಹೋಗಲು ಅವಕಾಶಗಳಿವೆ’ ಎಂದು ಅನಿನ್‍ಗಾಂವ್‍ನ ಹೆಚ್ಚುವರಿ ಎಸ್‍ಪಿ ಸಂಜೀಬ್ ಸೈಕಿಯಾ ತಿಳಿಸಿದ್ದಾರೆ.
ಕಳೆದ ವರ್ಷವೇ ಈ ಬಗ್ಗೆ ನೋಟಿಸ್ ಬಂದಾದ ಮೇಲೆ ಸನಾವುಲ್ಲಾ ವಿವಿಧ ಪೊಲೀಸ್ ಠಾಣೆಗಳಿಗೆ ತೆರಳಿ ವಿವರ ಪರಿಶೀಲಿಸಿದ್ದಾರೆ. ಆದರೆ, ಬೋಕೊ ಎಫ್‍ಟಿ ವರದಿಯಲ್ಲಿ ಆಗಿಚ್ಯಾ ಗ್ರಾಮದ ಮೊಹಮ್ಮದ್ ಸಮಸ್ಯಲ್ ಹಕ್ ಎಂಬುವರ ಹೆಸರಿದ್ದು, ಅದನ್ನೇ ತಪ್ಪಾಗಿ ನನ್ನ ಮೇಲೆ ಕೇಸಉ ಹೂಡಲು ಎಫ್‍ಟಿ ಬಳಸಿಕೊಂಡಿದ್ದಾರೆ…. 30 ವರ್ಷ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ ನನಗೆ ವಿದೇಶಿ ಪಟ್ಟ ಕಟ್ಟಿ ಬಂಧನದಲ್ಲಿ ಇಡುವ ಉಡುಗೊರೆಯನ್ನು ನೀಡಲಾಗುತ್ತಿದೆ’ ಎಂದು ಸ್ವತ: ಸನಾವುಲ್ಲಾ ನ್ಯೂಸ್ 18 ಮಾಧ್ಯಮದ ಮುಂದೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...