Homeಕರ್ನಾಟಕಬಲಪಂಥೀಯ ಸಂಘಟನೆಯಿಂದ ಜೀವಬೆದರಿಕೆ: ವಿಚಾರವಾದಿಗಳಿಗೆ ರಕ್ಷಣೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

ಬಲಪಂಥೀಯ ಸಂಘಟನೆಯಿಂದ ಜೀವಬೆದರಿಕೆ: ವಿಚಾರವಾದಿಗಳಿಗೆ ರಕ್ಷಣೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

- Advertisement -
- Advertisement -

ನಾಡಿನ ಖ್ಯಾತ ಬರಹಗಾರರು, ವಿಚಾರವಾದಿಗಳು ಮತ್ತು ಶಿಕ್ಷಣತಜ್ಞರಿಗೆ ಬಲಪಂಥೀಯ ಸಂಘಟನೆಯವರು ಜೀವಬೆದರಿಕೆಯ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಹಾಗಾಗಿ ನಾಡಿನ 15ಕ್ಕೂ ಹೆಚ್ಚು ವಿಚಾರವಾದಿಗಳಿಗೆ ರಕ್ಷಣೆ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಯಾವೆಲ್ಲ ಲೇಖಕರು ಮತ್ತು ಬುದ್ಧಿಜೀವಿಗಳು ಬೆದರಿಕೆ ಎದುರಿಸುತ್ತಿದ್ದಾರೋ ಅವರಿಗೆಲ್ಲ ಭದ್ರತೆ ಒದಗಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

ಕಳೆದ ವರ್ಷ ರಾಜ್ಯ ಬಿಜೆಪಿ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮತ್ತು ಇತರ ಧಾರ್ಮಿಕ ಉಡುಪುಗಳ ನಿಷೇಧ ಹೇರಿದ್ದವು ಇದಕ್ಕೆ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದವು. ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಬಗ್ಗೆ ಕಳವಳ ವ್ಯಕ್ತಪಡಿಸಿ 61 ಬುದ್ದಿಜೀವಿಗಳು ಬಹಿರಂಗ ಪತ್ರ ಬರೆದಿದ್ದರು.

ಆ ಬಳಿಕ ಅವರಿಗೆ ಬೆದರಿಕೆ ಪತ್ರಗಳು ಬರಲಾರಂಭಿಸಿದವು. ಸಾಹಿತಿಗಳಾದ ಎಸ್ ಜಿ ಸಿದ್ದರಾಮಯ್ಯ, ವಸುಂಧರಾ ಭೂಪತಿ, ಕುಂ ವೀರಭದ್ರಪ್ಪ, ಪ್ರಾಧ್ಯಾಪಕರಾದ ಮರುಳಸಿದ್ದಪ್ಪ ಮತ್ತು ಬಣಜಗೆರೆ ಜಯಪ್ರಕಾಶ್ ಸೇರಿದಂತೆ ಅನೇಕರು ಕರ್ನಾಟಕ ಸರ್ಕಾರಕ್ಕೆ ಭದ್ರತೆ ಕೋರಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಈ ಹಿಂದೆ ರಾಜ್ಯದಲ್ಲಿ ಸಾಹಿತಿ ಎಂಎಂ ಕಲ್ಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಯಿತು. ಇದೀಗ ಹೋರಾಟಗಾರರಿಗೆ ಅದೇ ರೀತಿ ನಿಮ್ಮನ್ನು ಹತ್ಯೆ ಮಾಡಲಾಗುವುದು ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.

ಗುಂಡಿನ ದಾಳಿಯಲ್ಲಿ ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ.ಕಲಬುರ್ಗಿ ಸಾವನ್ನಪ್ಪಿದ್ದರು. ಆಗಸ್ಟ್ 30, 2015 ರಂದು ಕರ್ನಾಟಕದ ಧಾರವಾಡ ಜಿಲ್ಲೆಯ ಅವರ ಮನೆಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಹಿಂದುತ್ವ ರಾಜಕಾರಣದ ವಿರುದ್ಧ ಕಟುವಾದ ಅಭಿಪ್ರಾಯಗಳಿಗೆ ಹೆಸರಾದ ಪತ್ರಕರ್ತೆ ಲಂಕೇಶ್ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಸೆಪ್ಟೆಂಬರ್ 5, 2017 ರಂದು ಬಂದೂಕುಧಾರಿಗಳು ಹತ್ಯೆ ಮಾಡಿದರು.

ಎರಡೂ ಕೊಲೆ ಪ್ರಕರಣಗಳ ಚಾರ್ಜ್‌ಶೀಟ್‌ಗಳಲ್ಲಿ ಆರು ವ್ಯಕ್ತಿಗಳನ್ನು ಶಂಕಿತರೆಂದು ಪಟ್ಟಿ ಮಾಡಲಾಗಿದೆ. ಆದಾಗ್ಯೂ, ಕಲ್ಬುರ್ಗಿ ಪ್ರಕರಣದ ಆರೋಪಪಟ್ಟಿಯಲ್ಲಿ ಈ ವ್ಯಕ್ತಿಗಳು ಅನಾಮಧೇಯ ಸಂಘಟನೆಯಿಂದ ಬಂದವರು ಎಂದು ಹೇಳುತ್ತದೆ. ಆದರೆ ಲಂಕೇಶ್ ಹತ್ಯೆಯಲ್ಲಿ ದಾಖಲಾಗಿರುವವರು ಅವರನ್ನು ಹಿಂದುತ್ವ ಸಂಸ್ಥೆ ಸನಾತನ ಸಂಸ್ಥೆಯ ಸದಸ್ಯರು ಎಂದು ಹೆಸರಿಸಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರವು ಶಾಲಾ ಪಠ್ಯಪುಸ್ತಕಗಳ “ಕೇಸರಿಕರಣ”ವನ್ನು ವಿರೋಧಿಸಿದ ಸಿದ್ದರಾಮಯ್ಯ ಮತ್ತು ರಾಮಚಂದ್ರಪ್ಪ ಅವರಂತಹ ಸಾಹಿತಿಗಳ ಜತೆ ಒಡನಾಟ ಬೇಡ ಎಂಬ ಎಚ್ಚರಿಕೆ ಪತ್ರ ಬಂದಿತ್ತು ಎಂದು ಭೂಪತಿ ಪೊಲೀಸರಿಗೆ ದೂರು ನೀಡಿದ್ದರು.

ವೀರಭದ್ರಪ್ಪ ಅವರು “ಹಿಂದೂ ವಿರೋಧಿ” ಎಂದು ಆರೋಪಿಸಿ “ಅವರ ಅಂತ್ಯಕ್ರಿಯೆಗೆ ಸಿದ್ಧರಾಗಿ” ಎಂದು ಬೆದರಿಕೆಯ ಪತ್ರ ಬಂದಿತ್ತು ಎಂದು ಹೇಳಿದ್ದರು.

ಪರಮೇಶ್ವರ್ ಅವರು ಶುಕ್ರವಾರ ಈ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

”ಗೌರಿ ಲಂಕೇಶ್ ಮತ್ತು ಪ್ರೊಫೆಸರ್ ಕಲ್ಬುರ್ಗಿ ಅವರ ಹತ್ಯೆಯನ್ನು ನಾವು ಮರೆತಿಲ್ಲ. ಬರಹಗಾರರಿಗೆ ರಕ್ಷಣೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಶನಿವಾರದ ಸಭೆಯಲ್ಲಿ ನಾವು ಬರಹಗಾರರಿಂದ ಎಲ್ಲಾ ವಿವರಗಳನ್ನು ಪಡೆಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಜೂನ್ 2022 ರಿಂದ ತನಗೆ ಅಂತಹ 13 ಪತ್ರಗಳು ಬಂದಿವೆ ಎಂದು ಜಯಪ್ರಕಾಶ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

”ಪಠ್ಯಪುಸ್ತಕಗಳ ಪರಿಷ್ಕರಣೆಯಂತಹ ವಿಷಯಗಳಲ್ಲಿ ನಾವು ಸರ್ಕಾರದ ವಿರುದ್ಧ ಹೇಳಿಕೆಗಳನ್ನು ನೀಡಿದಾಗ ನಮಗೆ ಬೆದರಿಕೆ ಪತ್ರಗಳು ಬರುತ್ತವೆ ರಾಜ್ಯದ ವಿವಿಧ ಭಾಗಗಳಿಂದ ಪತ್ರಗಳನ್ನು ಪೋಸ್ಟ್ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರವು ಜಾಗೃತ ತಂಡವನ್ನು ರಚಿಸಿತು. ಈಗಲೂ ನಮಗೆ ಅಂತಹ ಪತ್ರಗಳು ಬರುತ್ತಿವೆ. ಈ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸುತ್ತೇವೆ” ಎಂದರು.

ಇಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯ ಹರಿಹರ ಮೂಲದ ಪ್ರದೀಪ್ ಎಂಬಾತನನ್ನು ಪೊಲೀಸರು ಮೇ ತಿಂಗಳಲ್ಲಿ ಬಂಧಿಸಿದ್ದರು ಆದರೂ ಕೂಡ ಲೇಖಕರಿಗೆ ಪತ್ರಗಳು ಬರುತ್ತಲೇ ಇವೆ.

ಇದನ್ನೂ ಓದಿ: ದಾಭೋಲ್ಕರ್, ಪನ್ಸಾರೆ, ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆಗೆ ಸಂಬಂಧ ಇದೆಯಾ?ಸುಪ್ರೀಂಕೋರ್ಟ್ ಪ್ರಶ್ನೆ

ಬಲಪಂಥೀಯ ಸಂಘಟನೆಗಳಿಂದ ವಿಚಾರವಾದಿಗಳಿಗೆ ಜೀವಬೆದರಿಕೆ 

ಬಹುಭಾಷಾ ನಟ ಮತ್ತು ನಿರ್ದೇಶಕ ಪ್ರಕಾಶ್ ರಾಜ್ ಅವರು ಹಿಂದಿನಿಂದಲೂ ಹಿಂದುತ್ವ ರಾಜಕೀಯ ಮತ್ತು ಬಲಪಂಥೀಯ ಉಗ್ರವಾದದ ಕಟು ಟೀಕಾಕಾರರಾಗಿದ್ದು, ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ಮಧ್ಯವಯಸ್ಕ ವ್ಯಕ್ತಿಯೊಬ್ಬರು ಹಣೆಯ ಮೇಲೆ ‘ತಿಲಕ’ ಮತ್ತು ಕೊರಳಲ್ಲಿ ಕುಂಕುಮದ ಸ್ಕಾರ್ಫ್ ಅನ್ನು ಹೊಂದಿದ್ದು, ನಟ ಪ್ರಕಾಶ್ ರಾಜ್‌ರನ್ನು ‘ಕೊಲೆ’ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

20ಕ್ಕೂ ಹೆಚ್ಚು ಲೇಖಕರಿಗೆ ಬೆದರಿಕೆ ಇದೆ

ಕರ್ನಾಟಕದಲ್ಲಿ ಬಲಪಂಥೀಯ ಶಕ್ತಿಗಳಿಂದ ಬೆದರಿಕೆ ಪತ್ರಗಳು ಬುದ್ಧಿಜೀವಿ ಪ್ರಕಾಶ್ ರಾಜ್ ಅವರಿಗೆ  ಮಾತ್ರ ಬಂದಿರುವುದಲ್ಲ, ರಂಗಭೂಮಿ ಮತ್ತು ಸಿನಿಮಾ ನಟರು, ಬರಹಗಾರರು ಮತ್ತು ರಾಜಕೀಯ ವಿಮರ್ಶಕರು ಸೇರಿದಂತೆ 20ಕ್ಕೂ ಹೆಚ್ಚು ಬುದ್ಧಿಜೀವಿಗಳು ಜೀವಬೆದರಿಕೆ ಎದುರಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊಗಳ ಮೂಲಕ ಅಥವಾ ಅವರ ವಿಳಾಸಗಳಿಗೆ ಪತ್ರಗಳ ಮೂಲಕ ವಿವಿಧ ರೀತಿಯ ಬೆದರಿಕೆಗಳನ್ನು ಅವರು ಎದುರಿಸುತ್ತಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ, ಬರಹಗಾರರು, ಸಾರ್ವಜನಿಕ ಬುದ್ಧಿಜೀವಿಗಳು, ನಾಟಕಕಾರರು ಮತ್ತು ಸಿನಿ ಕಲಾವಿದರಿಗೆ ಅನಾಮಧೇಯ ಬೆದರಿಕೆಗಳು ಬಂದಿವೆ. ಇತ್ತೀಚೆಗೆ ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಂಪತಿ, ಪ್ರಾಧ್ಯಾಪಕ ಬರಗೂರು ರಾಮಚಂದ್ರಪ್ಪ, ಖ್ಯಾತ ವಿಮರ್ಶಕ ಕೆ ಮರುಳಸಿದ್ದಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್‌ಜಿ ಸಿದ್ದರಾಮಯ್ಯ, ಬರಹಗಾರ ಕುಂ. ವೀರಭದ್ರಪ್ಪ ಮತ್ತು ಬರಹಗಾರ ಬಿ ಎಲ್ ವೇಣು ಇನ್ನೂ ಅನೇಕರು ಬೆದರಿಕೆ ಎದುರಿಸಿದ್ದಾರೆ.

ಇತ್ತೀಚೆಗೆ ಬರಹಗಾರ ಬಂಜಗೆರೆ ಜಯಪ್ರಕಾಶ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು. ಎಂ ಎಂ ಕಲಬುರ್ಗಿ ಮತ್ತು ಪತ್ರಕರ್ತೆ, ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆಗೈದವರ ಹಿಟ್ ಲಿಸ್ಟ್‌ನಲ್ಲಿ ಅವರ ಹೆಸರು ಕಾಣಿಸಿಕೊಂಡಿದೆ. ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಲೇಖಕರು ಕಳೆದ ಹತ್ತು ವರ್ಷಗಳಿಂದ ರಾತ್ರಿಯಿಡೀ ಪೊಲೀಸ್ ಭದ್ರತೆಯನ್ನು ಪಡೆಯುತ್ತಿದ್ದಾರೆ.

ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಅವರನ್ನು ಕೊಂದವರು ಯಾರು?

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಮತ್ತು ಕನ್ನಡದ ಪ್ರಮುಖ ಲೇಖಕರಲ್ಲಿ ಒಬ್ಬರಾದ ಎಸ್ ಜಿ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದು, ”ನಾವು ಯಾವುದೇ ಧರ್ಮದ ಪರ ಅಥವಾ ವಿರುದ್ಧವಾಗಿಲ್ಲ. ನಾವು ಭಾರತೀಯ ಸಂವಿಧಾನವನ್ನು ಬಲವಾಗಿ ನಂಬುತ್ತೇವೆ. ಕರ್ನಾಟಕದಂತಹ ಮುಕ್ತ ರಾಜ್ಯದಲ್ಲಿ ಎಲ್ಲರ ಸೌಹಾರ್ದಯುತ ಬದುಕಿಗಾಗಿ ನಾವು ಮಾತನಾಡುತ್ತೇವೆ. ಅದು ನಮ್ಮ ಹಕ್ಕು ಕೂಡ. ಭಯದ ಮನೋವಿಕಾರವನ್ನು ಸೃಷ್ಟಿಸುವ ಮೂಲಕ ಯಾರೂ ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಗೌರಿ ಲಂಕೇಶ್ ಮತ್ತು ಎಂ.ಎಂ.ಕಲಬುರ್ಗಿ ಅವರನ್ನು ಕೊಂದವರು ಯಾರು ಎಂಬುದು ಎಲ್ಲರಿಗೂ ಗೊತ್ತು. ಸಂವಿಧಾನ, ಸ್ವಾತಂತ್ರ್ಯ ಮತ್ತು ಸಮಾನತೆಯ ಬಗ್ಗೆ ಅರಿವು ಮೂಡಿಸುವ ಬರಹಗಾರರಿಗೆ ಮುಕ್ತ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಭದ್ರತೆಯ ಅಡಿಯಲ್ಲಿ ಬದುಕುವುದು ಅಸಂಬದ್ಧ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...