Homeಕರ್ನಾಟಕಪ್ರಕಾಶ್ ರಾಜ್‌ಗೆ ಜೀವಬೆದರಿಕೆ: ವಿಕ್ರಮ್‌ ಟಿ.ವಿ ವಾಹಿನಿ ವಿರುದ್ಧ ಎಫ್‌ಐಆರ್

ಪ್ರಕಾಶ್ ರಾಜ್‌ಗೆ ಜೀವಬೆದರಿಕೆ: ವಿಕ್ರಮ್‌ ಟಿ.ವಿ ವಾಹಿನಿ ವಿರುದ್ಧ ಎಫ್‌ಐಆರ್

- Advertisement -
- Advertisement -

ಬಹು ಭಾಷಾ ನಟ ಪ್ರಕಾಶ್ ರಾಜ್ ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡುವ ವಿಡಿಯೊಗಳನ್ನು ವಿಕ್ರಮ್ ಟಿವಿ ಯೂಟ್ಯೂಬ್‌ನ ಚಾನೆಲ್ ಹರಿಬಿಟ್ಟಿದ್ದು, ಇದೀಗ ಅದರ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

”ನಟ ಪ್ರಕಾಶ್ ರಾಜ್ ಅವರು ದೂರು ನೀಡಿದ್ದಾರೆ, ಅದನ್ನು ಆಧರಿಸಿ ವಿಕ್ರಮ್ ಟಿ.ವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಲ್ಲರಿಗೂ ನೋಟಿಸ್‌ ನೀಡಿ ವಿಚಾರಣೆ ನಡೆಸಲಾಗುವುದು” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರಿನ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 506, 504, 505(2) ಸೆಕ್ಷನ್‌ ಅಡಿಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ. ಯೂಟ್ಯೂಬ್​ ಚಾನೆಲ್​ನಲ್ಲಿ ಆಗಸ್ಟ್ 14ರಂದು ಜೀವ ಬೆದರಿಕೆ ಹಾಕುವ ಸಂದೇಶದ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಅಪ್ಲೋಡ್ ಮಾಡಿರುವ 2 ವಿಡಿಯೋಗಳಲ್ಲೂ ಬೆದರಿಕೆ ಹಾಕಲಾಗಿದೆ ಎಂದು ಪ್ರಕಾಶ್​ ರಾಜ್​ ಆರೋಪಿಸಿದ್ದಾರೆ.

ಪ್ರಕಾಶ್ ರಾಜ್ ಮಾತ್ರವಲ್ಲದೇ ಅವರ ಕುಟುಂಬದವರಿಗೂ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯೂಟ್ಯೂಬ್​ ವಾಹಿನಿ ವಿರುದ್ಧ ದೂರು ನೀಡಲಾಗಿದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಪ್ರಕಾಶ್ ರಾಜ್ ನೀಡಿದ ದೂರಿನ ಅನ್ವಯ ಯೂಟ್ಯೂಬ್ ವಾಹಿ‌ನಿಯ ಮುಖ್ಯಸ್ಥ ಮತ್ತು ಸಿಬ್ಬಂದಿ ವಿರುದ್ಧ ಅಶೋಕ ನಗರ ಠಾಣೆ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ. ಸದ್ಯ ತನಿಖೆ ಆರಂಭ ಆಗಿದೆ.

ಈ ಬಗ್ಗೆ ಪ್ರಕಾಶ್ ರಾಜ್ ಅವರು ದೂರು ನೀಡಿದ್ದು, ದೂರಿನಲ್ಲಿ ”ನಟ ಹಾಗೂ ನಿರ್ದೇಶಕನಾಗಿರುವ ನಾನು ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ವಿವಿಧ ವಿಷಯಗಳ ಚರ್ಚೆ ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಸೆ.14ರಂದು ವಿಕ್ರಮ್ ಟಿ.ವಿ. ಯೂಟ್ಯೂಬ್ ಹಾಗೂ ಫೇಸ್‌ಬುಕ್‌ನಲ್ಲಿ ಎರಡು ವಿಡಿಯೊ ವೀಕ್ಷಣೆ ಮಾಡಿದೆ. ಎರಡೂ ವಿಡಿಯೊದಲ್ಲಿ ನನ್ನ ಜೀವಕ್ಕೆ ಅಪಾಯವಾಗುವ ಸಂಗತಿಗಳಿದ್ದವು” ಎಂದು ತಿಳಿಸಿದ್ದಾರೆ.

”ಬೆದರಿಕೆ ಹಾಕುವ ಸ್ಟಾಲಿನ್, ಪ್ರಕಾಶ್ ರಾಜ್‌ನಂಥವರನ್ನು ಮುಗಿಸಬೇಕೆ…? ಹಿಂದೂಗಳು ಮಾಡಬೇಕಾಗಿರುವುದು ಏನು..? ಸನಾತನ ಧರ್ಮ/ಹಿಂದೂಗಳೇ ಮಲಗೆ ಇರ್ತಿರಾ..? ಎಂಬಿತ್ಯಾದಿ ಶಬ್ದಗಳನ್ನು ಬಳಸಿ ವಿಡಿಯೊ ಮಾಡಲಾಗಿದೆ.”

”ಈ ವಿಡಿಯೊವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ವಿಡಿಯೊದಲ್ಲಿರುವ ಅಂಶಗಳು ನನಗೆ ಹಾಗೂ ನನ್ನ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡುವಂತಿವೆ ಇಂಥ ವಿಡಿಯೊ ಮಾಡಿರುವ ಟಿವಿ ವಿಕ್ರಮ್ ಟಿವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ನಿಲ್ಲದ ಕೊಲೆ ಬೆದರಿಕೆ ಪತ್ರಗಳು; ಬಸವ ತತ್ವದ ಸ್ವಾಮೀಜಿಗಳ ಬೆನ್ನು ಹತ್ತಿದ ಮತಾಂಧರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...