Homeಕರ್ನಾಟಕಕೋವಿಡ್‌ ನಿರ್ಬಂಧ ತೆರವು : ಪ್ರವಾಸಿ ತಾಣಗಳತ್ತ ಜನ-ಹಂಪಿಯಲ್ಲಿ ಜನ ಜಂಗುಳಿ

ಕೋವಿಡ್‌ ನಿರ್ಬಂಧ ತೆರವು : ಪ್ರವಾಸಿ ತಾಣಗಳತ್ತ ಜನ-ಹಂಪಿಯಲ್ಲಿ ಜನ ಜಂಗುಳಿ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆಯ ಅಲೆ ಕಡಿಮೆಯಾಗುತ್ತಿದ್ದಂತೆ ಅನ್ ಲಾಕ್ ಪ್ರಕ್ರಿಯೆ ತೀವ್ರಗೊಂಡಿದೆ. ಪ್ರವಾಸಿ ತಾಣಗಳಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಸರ್ಕಾರ ಸಡಿಲಗೊಳಿಸಿದೆ. ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಪಾಲಿಸಿ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅವಕಾಶವನ್ನು ಮಾಡಿಕೊಡಲಾಗಿದೆ. ಪ್ರವಾಸಿ ತಾಣಗಳು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗುತ್ತಿದ್ದಂತೆ ಎಲ್ಲೆಡೆ ಜನರು ಒಮ್ಮೆಲೇ ಮುಗಿ ಬೀಳುತ್ತಿದ್ದಾರೆ.

ಸುಮಾರು 3 ತಿಂಗಳು ಮನೆಯಲ್ಲಿಯೇ ಕುಳಿತಿದ್ದ ಜನರು ರೆಕ್ಕ ಬಲಿತ ಹಕ್ಕಿಗಳಂತೆ ನಾಡಿನ ಪ್ರವಾಸಿ ತಾಣಗಳಿಗೆ ಟೆಂಪೊ, ವ್ಯಾನು, ಬಸ್ಸು ಕಾರುಗಳಲ್ಲಿ ತೆರಳಿದ್ದಾರೆ. ನಿರ್ಬಂಧಗಳನ್ನು ಸಡಿಲಿಸಿ ವಾರ ಕಳೆಯುವ ಮುನ್ನವೇ ಮೈಸೂರು, ಹಂಪಿ, ಚಿಕ್ಕಮಗಳೂರು, ಸಕಲೇಶಪುರ, ಜೋಗ ಜಲಪಾತದಲ್ಲಿ ಜನ ಸಂದಣಿ ಸೇರಿದೆ. ಕೋವಿಡ್‌ ನಿಯಮಗಳನ್ನು ಗಾಳಿಗೆ ತೂರಿ ಮಾಸ್ಕು, ಸಾಮಾಜಿಕ ಅಂತರವನ್ನು ಮರೆತಿರುವ ಚಿತ್ರಗಳು ಸರ್ವೇ ಸಾಮಾನ್ಯವಾಗಿದೆ.

ವಿಶ್ವವಿಖ್ಯಾತ ಹಂಪಿಗೆ ವೀಕೆಂಡ್ ಹಿನ್ನಲೆಯಲ್ಲಿ ಇಂದು ಸಾಕಷ್ಟು ಜನ ಪ್ರವಾಸಿಗರು ಆಗಮಿಸಿದ್ದಾರೆ, ಕಳೆದ ಎರಡು ವಾರ ವೀಕೆಂಡ್ ಲಾಕ್ ಡೌನ್ ಇದ್ದು, ಈ ಕಾರಣಕ್ಕಾಗಿ ಪ್ರವಾಸಿಗರ ಸಂಖ್ಯೆ ಕಡಿಮೆ ಇತ್ತು. ಈ ವಾರದಿಂದ ವೀಕೆಂಡ್ ಕರ್ಫ್ಯೂ ಇಲ್ಲದ ಕಾರಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಯಿಂದ ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ.

ವಿರುಪಾಕ್ಷ ದೇವಾಲಯ, ವಿಜಯ ವಿಠ್ಠಲ ಮಂದಿರ ಸೇರಿದಂತೆ ಇಲ್ಲಿ ಪ್ರಾವಾಸಿ ತಾಣಗಳಲ್ಲಿ ಆಗಮಿಸಿದ್ದಾರೆ, ಬಂದಿರುವ ಪ್ರವಾಸಿಗರಲ್ಲಿ ಬಹುತೇಕತರು ಮಾಸ್ಕ್ , ಸಮಾಜಿಕ ಅಂತರ ಕಾಪಾಡಿಕೊಂಡಿಲ್ಲ, ಪ್ರವಾಸಿ ತಾಣಗಳಲ್ಲಿ ಬರುವವರು ಸಮಾಜಿಕ ಅಂತರ ಮರೆತಿದ್ದಾರೆ.

ಹಂಪಿಯಲ್ಲಿ ಇಕೋ ಟೂರಿಸಂ ಇರುವುದರಿಂದ ಎಲೆಕ್ಟ್ರಿಕ್‌ ವಾಹನಗಳಲ್ಲಿ ಸಂಚರಿಸಬೇಕು, ಎಲೆಕ್ಟ್ರಿಕ್ ವಾಹನಗಳಲ್ಲಿ ಫುಲ್ ಆಗಿ ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಪ್ರವಾಸಿಗರ ನಿರ್ಲಕ್ಷ್ಯ ಹಾಗೂ ಹಂಪಿ ಅಭಿವೃದ್ಧಿ ಪ್ರಾಧಿಕಾರ, ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಕೊರೊನಾ ಮೂರನೆಯ ಅಲೆಗೆ ಹಂಪಿಯ ಪ್ರವಾಸಿ ತಾಣಗಳು ಆಹ್ವಾನ ನೀಡುವಂತೆ ಆಗಿದೆ.

ಇದನ್ನೂ ಓದಿ: ಕರ್ನಾಟಕಕ್ಕೂ ಬಂತು ವಿಸ್ಟಾಡೋಮ್ ರೈಲು: ನಾಳೆ ಮಂಗಳೂರು-ಬೆಂಗಳೂರು ನಡುವೆ ಮೊದಲ ಓಡಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...