Homeಕರೋನಾ ತಲ್ಲಣಹಬ್ಬಗಳಲ್ಲಿ ಸೈನಿಕರಿಗಾಗಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ಹಬ್ಬಗಳಲ್ಲಿ ಸೈನಿಕರಿಗಾಗಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ಹಬ್ಬದ ಸಂದರ್ಭದಲ್ಲಿ ದೇಶದ ಜನತೆ ಸ್ವದೇಶಿ ಹಾಗೂ ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಾಗಿ ಬಳಸಿ ಎಂದು ಪ್ರಧಾನಿ ಮನವಿ ನೀಡಿದ್ದಾರೆ.

- Advertisement -
- Advertisement -

ದೇಶದ ಧೈರ್ಯಶಾಲಿ ಸೈನಿಕರು ಮತ್ತು ಭದ್ರತಾ ಪಡೆಗಳೊಂದಿಗೆ ಭಾರತ ದೃಢವಾಗಿ ನಿಂತಿದೆ. ಕೊರೊನಾ ಸಾಂಕ್ರಾಮಿಕದ ನಡುವೆ ಹಬ್ಬಗಳನ್ನು ಆಚರಿಸುವಾಗ ಸೈನಿಕರಿಗಾಗಿ ದೀಪ ಬೆಳಗಿಸಬೇಕೆಂದು ದೇಶದ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಈ ತಿಂಗಳ ಮನ್‌ ಕಿ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದಸರಾ ಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿ, ದೇಶಾದ್ಯಂತ ಕೊರೊನಾ ಉಲ್ಬಣಗೊಳ್ಳುತ್ತಿರುವ ಈ ಸಮಯದಲ್ಲಿ ಹಬ್ಬಗಳನ್ನು ಆಚರಿಸುವಾಗ ಜನರು ತಾಳ್ಮೆ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

“ದೇಶದ ಜನರನ್ನು, ದೇಶವನ್ನು ಹೊರಗಿನ ದಾಳಿಗಳಿಂದ ಸುರಕ್ಷಿತವಾಗಿರಿಸಲು ನಮ್ಮ ಸೈನಿಕರು ತಮ್ಮ ಕುಟುಂಬಗಳಿಂದ ದೂರ ಇದ್ದು ಸೇವೆ ಸಲ್ಲಿಸುತ್ತಿದ್ದಾರೆ. ಈ ಸಮಯದಲ್ಲಿ ಈದ್, ದೀಪಾವಳಿಯಂತಹ ಹಲವಾರು ಹಬ್ಬಗಳು ನಡೆಯಲಿವೆ. ಈ ಹಬ್ಬಗಳ ಸಮಯದಲ್ಲಿ, ಗಡಿಯಲ್ಲಿ ನಿಂತಿರುವ ನಮ್ಮ ಕೆಚ್ಚೆದೆಯ ಸೈನಿಕರನ್ನು ಸಹ ನಾವು ನೆನಪಿನಲ್ಲಿಟ್ಟುಕೊಳ್ಳಬೇಕು”. ಎಂದಿದ್ದಾರೆ.

’ಭಾರತ ಮಾತೆಯ ಈ ಧೈರ್ಯಶಾಲಿ ಪುತ್ರರು ಮತ್ತು ಹೆಣ್ಣುಮಕ್ಕಳ ಗೌರವಾರ್ಥವಾಗಿ ನಾವು ಮನೆಯಲ್ಲಿ ಸೈನಿಕರಿಗಾಗಿ ದೀಪವನ್ನು ಬೆಳಗಿಸಬೇಕಾಗಿದೆ’ ಎಂದು ಪ್ರಧಾನಿ ಮೋದಿ ಮನ್ ಕಿ ಬಾತ್ ರೇಡಿಯೋ ಭಾಷಣದಲ್ಲಿ ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ ಮುಗಿದಿದೆ, ಆದರೆ ಕೊರೊನಾ ಮುಗಿದಿಲ್ಲ: ಪ್ರಧಾನಿ ಮೋದಿ ಎಚ್ಚರಿಕೆ

ಭಾರತ-ಚೀನಾ ಭಿನ್ನಾಭಿಪ್ರಾಯಕ್ಕೆ ಸಿಲುಕಿರುವ ಈ ಸಮಯದಲ್ಲಿ ಪ್ರಧಾನಿ ಮೋದಿಯವರ ಈ ಅಭಿಪ್ರಾಯಗಳು ವ್ಯಕ್ತಪಡಿಸಿದ್ದಾರೆ. ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಸುಮಾರು 3,500 ಕಿ.ಮೀ ಉದ್ದದ ಗಡಿಯಲ್ಲಿ ಚೀನಾ ತನ್ನ ಸೈನ್ಯ ಮತ್ತು ಶಸ್ತ್ರಾಸ್ತ್ರಗಳನ್ನು ಗಮನಾರ್ಹವಾಗಿ ಬಲಪಡಿಸಿದ್ದು, ಲಡಾಖ್‌ನಲ್ಲಿ ಉದ್ವಿಗ್ನತೆ ಕಡಿಮೆಗೊಳ್ಳುವ ಯಾವುದೇ ಲಕ್ಷಣ ಕಾಣಿಸಿಲ್ಲ.

ಕೊರೊನಾ ವಿರುದ್ಧದ ಯುದ್ಧದಲ್ಲಿ ಗೆಲುವು ಖಚಿತವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನಮಗೆಲ್ಲಾ ಸಂಯಮ ಮುಖ್ಯ ಎಂದಿದ್ದಾರೆ. ಹಬ್ಬದ ಸಂದರ್ಭದಲ್ಲಿ ದೇಶದ ಜನತೆ ಸ್ವದೇಶಿ ಹಾಗೂ ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಾಗಿ ಬಳಸಿ ಎಂದು ಪ್ರಧಾನಿ ಕರೆ ನೀಡಿದ್ದಾರೆ.

ಹಬ್ಬದ ಆಚರಣೆಯಲ್ಲಿ ಕೊರೊನಾ ನಿಯಮಾವಳಿಗಳನ್ನು ಮರೆಯಬೇಡಿ. ಮಾಸ್ಕ್, ಸಾಮಾಜಿಕ ಅಂತರ ಪಾಲಿಸಿ ಎಂದಿದ್ದಾರೆ. ಅಲ್ಲದೇ ಕೊರೊನಾ ಸಂದರ್ಭದಲ್ಲಿ ಖಾದಿ ಮಾಸ್ಕ್‌ಗಳು ಜನಪ್ರಿಯವಾಗಿವೆ. ಮೆಕ್ಸಿಕೊದ ಒಕ್ಸಾಕ ಪ್ರದೇಶದಲ್ಲಿಯೂ ಖಾದಿ ಮಾಸ್ಕ್ ತಯಾರಿಸಲಾಗುತ್ತಿದೆ. ಖಾದಿಯು ಪರಿಸರಸ್ನೇಹಿಯೂ ಶರೀರಸ್ನೇಹಿಯೂ ಆಗಿದೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...