Homeಕರೋನಾ ತಲ್ಲಣಹಬ್ಬಗಳಲ್ಲಿ ಸೈನಿಕರಿಗಾಗಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ಹಬ್ಬಗಳಲ್ಲಿ ಸೈನಿಕರಿಗಾಗಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ಹಬ್ಬದ ಸಂದರ್ಭದಲ್ಲಿ ದೇಶದ ಜನತೆ ಸ್ವದೇಶಿ ಹಾಗೂ ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಾಗಿ ಬಳಸಿ ಎಂದು ಪ್ರಧಾನಿ ಮನವಿ ನೀಡಿದ್ದಾರೆ.

- Advertisement -
- Advertisement -

ದೇಶದ ಧೈರ್ಯಶಾಲಿ ಸೈನಿಕರು ಮತ್ತು ಭದ್ರತಾ ಪಡೆಗಳೊಂದಿಗೆ ಭಾರತ ದೃಢವಾಗಿ ನಿಂತಿದೆ. ಕೊರೊನಾ ಸಾಂಕ್ರಾಮಿಕದ ನಡುವೆ ಹಬ್ಬಗಳನ್ನು ಆಚರಿಸುವಾಗ ಸೈನಿಕರಿಗಾಗಿ ದೀಪ ಬೆಳಗಿಸಬೇಕೆಂದು ದೇಶದ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಈ ತಿಂಗಳ ಮನ್‌ ಕಿ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದಸರಾ ಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿ, ದೇಶಾದ್ಯಂತ ಕೊರೊನಾ ಉಲ್ಬಣಗೊಳ್ಳುತ್ತಿರುವ ಈ ಸಮಯದಲ್ಲಿ ಹಬ್ಬಗಳನ್ನು ಆಚರಿಸುವಾಗ ಜನರು ತಾಳ್ಮೆ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

“ದೇಶದ ಜನರನ್ನು, ದೇಶವನ್ನು ಹೊರಗಿನ ದಾಳಿಗಳಿಂದ ಸುರಕ್ಷಿತವಾಗಿರಿಸಲು ನಮ್ಮ ಸೈನಿಕರು ತಮ್ಮ ಕುಟುಂಬಗಳಿಂದ ದೂರ ಇದ್ದು ಸೇವೆ ಸಲ್ಲಿಸುತ್ತಿದ್ದಾರೆ. ಈ ಸಮಯದಲ್ಲಿ ಈದ್, ದೀಪಾವಳಿಯಂತಹ ಹಲವಾರು ಹಬ್ಬಗಳು ನಡೆಯಲಿವೆ. ಈ ಹಬ್ಬಗಳ ಸಮಯದಲ್ಲಿ, ಗಡಿಯಲ್ಲಿ ನಿಂತಿರುವ ನಮ್ಮ ಕೆಚ್ಚೆದೆಯ ಸೈನಿಕರನ್ನು ಸಹ ನಾವು ನೆನಪಿನಲ್ಲಿಟ್ಟುಕೊಳ್ಳಬೇಕು”. ಎಂದಿದ್ದಾರೆ.

’ಭಾರತ ಮಾತೆಯ ಈ ಧೈರ್ಯಶಾಲಿ ಪುತ್ರರು ಮತ್ತು ಹೆಣ್ಣುಮಕ್ಕಳ ಗೌರವಾರ್ಥವಾಗಿ ನಾವು ಮನೆಯಲ್ಲಿ ಸೈನಿಕರಿಗಾಗಿ ದೀಪವನ್ನು ಬೆಳಗಿಸಬೇಕಾಗಿದೆ’ ಎಂದು ಪ್ರಧಾನಿ ಮೋದಿ ಮನ್ ಕಿ ಬಾತ್ ರೇಡಿಯೋ ಭಾಷಣದಲ್ಲಿ ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ ಮುಗಿದಿದೆ, ಆದರೆ ಕೊರೊನಾ ಮುಗಿದಿಲ್ಲ: ಪ್ರಧಾನಿ ಮೋದಿ ಎಚ್ಚರಿಕೆ

ಭಾರತ-ಚೀನಾ ಭಿನ್ನಾಭಿಪ್ರಾಯಕ್ಕೆ ಸಿಲುಕಿರುವ ಈ ಸಮಯದಲ್ಲಿ ಪ್ರಧಾನಿ ಮೋದಿಯವರ ಈ ಅಭಿಪ್ರಾಯಗಳು ವ್ಯಕ್ತಪಡಿಸಿದ್ದಾರೆ. ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಸುಮಾರು 3,500 ಕಿ.ಮೀ ಉದ್ದದ ಗಡಿಯಲ್ಲಿ ಚೀನಾ ತನ್ನ ಸೈನ್ಯ ಮತ್ತು ಶಸ್ತ್ರಾಸ್ತ್ರಗಳನ್ನು ಗಮನಾರ್ಹವಾಗಿ ಬಲಪಡಿಸಿದ್ದು, ಲಡಾಖ್‌ನಲ್ಲಿ ಉದ್ವಿಗ್ನತೆ ಕಡಿಮೆಗೊಳ್ಳುವ ಯಾವುದೇ ಲಕ್ಷಣ ಕಾಣಿಸಿಲ್ಲ.

ಕೊರೊನಾ ವಿರುದ್ಧದ ಯುದ್ಧದಲ್ಲಿ ಗೆಲುವು ಖಚಿತವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನಮಗೆಲ್ಲಾ ಸಂಯಮ ಮುಖ್ಯ ಎಂದಿದ್ದಾರೆ. ಹಬ್ಬದ ಸಂದರ್ಭದಲ್ಲಿ ದೇಶದ ಜನತೆ ಸ್ವದೇಶಿ ಹಾಗೂ ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಾಗಿ ಬಳಸಿ ಎಂದು ಪ್ರಧಾನಿ ಕರೆ ನೀಡಿದ್ದಾರೆ.

ಹಬ್ಬದ ಆಚರಣೆಯಲ್ಲಿ ಕೊರೊನಾ ನಿಯಮಾವಳಿಗಳನ್ನು ಮರೆಯಬೇಡಿ. ಮಾಸ್ಕ್, ಸಾಮಾಜಿಕ ಅಂತರ ಪಾಲಿಸಿ ಎಂದಿದ್ದಾರೆ. ಅಲ್ಲದೇ ಕೊರೊನಾ ಸಂದರ್ಭದಲ್ಲಿ ಖಾದಿ ಮಾಸ್ಕ್‌ಗಳು ಜನಪ್ರಿಯವಾಗಿವೆ. ಮೆಕ್ಸಿಕೊದ ಒಕ್ಸಾಕ ಪ್ರದೇಶದಲ್ಲಿಯೂ ಖಾದಿ ಮಾಸ್ಕ್ ತಯಾರಿಸಲಾಗುತ್ತಿದೆ. ಖಾದಿಯು ಪರಿಸರಸ್ನೇಹಿಯೂ ಶರೀರಸ್ನೇಹಿಯೂ ಆಗಿದೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...