Homeಕರೋನಾ ತಲ್ಲಣಹಬ್ಬಗಳಲ್ಲಿ ಸೈನಿಕರಿಗಾಗಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ಹಬ್ಬಗಳಲ್ಲಿ ಸೈನಿಕರಿಗಾಗಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ಹಬ್ಬದ ಸಂದರ್ಭದಲ್ಲಿ ದೇಶದ ಜನತೆ ಸ್ವದೇಶಿ ಹಾಗೂ ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಾಗಿ ಬಳಸಿ ಎಂದು ಪ್ರಧಾನಿ ಮನವಿ ನೀಡಿದ್ದಾರೆ.

- Advertisement -
- Advertisement -

ದೇಶದ ಧೈರ್ಯಶಾಲಿ ಸೈನಿಕರು ಮತ್ತು ಭದ್ರತಾ ಪಡೆಗಳೊಂದಿಗೆ ಭಾರತ ದೃಢವಾಗಿ ನಿಂತಿದೆ. ಕೊರೊನಾ ಸಾಂಕ್ರಾಮಿಕದ ನಡುವೆ ಹಬ್ಬಗಳನ್ನು ಆಚರಿಸುವಾಗ ಸೈನಿಕರಿಗಾಗಿ ದೀಪ ಬೆಳಗಿಸಬೇಕೆಂದು ದೇಶದ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಈ ತಿಂಗಳ ಮನ್‌ ಕಿ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದಸರಾ ಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿ, ದೇಶಾದ್ಯಂತ ಕೊರೊನಾ ಉಲ್ಬಣಗೊಳ್ಳುತ್ತಿರುವ ಈ ಸಮಯದಲ್ಲಿ ಹಬ್ಬಗಳನ್ನು ಆಚರಿಸುವಾಗ ಜನರು ತಾಳ್ಮೆ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

“ದೇಶದ ಜನರನ್ನು, ದೇಶವನ್ನು ಹೊರಗಿನ ದಾಳಿಗಳಿಂದ ಸುರಕ್ಷಿತವಾಗಿರಿಸಲು ನಮ್ಮ ಸೈನಿಕರು ತಮ್ಮ ಕುಟುಂಬಗಳಿಂದ ದೂರ ಇದ್ದು ಸೇವೆ ಸಲ್ಲಿಸುತ್ತಿದ್ದಾರೆ. ಈ ಸಮಯದಲ್ಲಿ ಈದ್, ದೀಪಾವಳಿಯಂತಹ ಹಲವಾರು ಹಬ್ಬಗಳು ನಡೆಯಲಿವೆ. ಈ ಹಬ್ಬಗಳ ಸಮಯದಲ್ಲಿ, ಗಡಿಯಲ್ಲಿ ನಿಂತಿರುವ ನಮ್ಮ ಕೆಚ್ಚೆದೆಯ ಸೈನಿಕರನ್ನು ಸಹ ನಾವು ನೆನಪಿನಲ್ಲಿಟ್ಟುಕೊಳ್ಳಬೇಕು”. ಎಂದಿದ್ದಾರೆ.

’ಭಾರತ ಮಾತೆಯ ಈ ಧೈರ್ಯಶಾಲಿ ಪುತ್ರರು ಮತ್ತು ಹೆಣ್ಣುಮಕ್ಕಳ ಗೌರವಾರ್ಥವಾಗಿ ನಾವು ಮನೆಯಲ್ಲಿ ಸೈನಿಕರಿಗಾಗಿ ದೀಪವನ್ನು ಬೆಳಗಿಸಬೇಕಾಗಿದೆ’ ಎಂದು ಪ್ರಧಾನಿ ಮೋದಿ ಮನ್ ಕಿ ಬಾತ್ ರೇಡಿಯೋ ಭಾಷಣದಲ್ಲಿ ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ ಮುಗಿದಿದೆ, ಆದರೆ ಕೊರೊನಾ ಮುಗಿದಿಲ್ಲ: ಪ್ರಧಾನಿ ಮೋದಿ ಎಚ್ಚರಿಕೆ

ಭಾರತ-ಚೀನಾ ಭಿನ್ನಾಭಿಪ್ರಾಯಕ್ಕೆ ಸಿಲುಕಿರುವ ಈ ಸಮಯದಲ್ಲಿ ಪ್ರಧಾನಿ ಮೋದಿಯವರ ಈ ಅಭಿಪ್ರಾಯಗಳು ವ್ಯಕ್ತಪಡಿಸಿದ್ದಾರೆ. ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಸುಮಾರು 3,500 ಕಿ.ಮೀ ಉದ್ದದ ಗಡಿಯಲ್ಲಿ ಚೀನಾ ತನ್ನ ಸೈನ್ಯ ಮತ್ತು ಶಸ್ತ್ರಾಸ್ತ್ರಗಳನ್ನು ಗಮನಾರ್ಹವಾಗಿ ಬಲಪಡಿಸಿದ್ದು, ಲಡಾಖ್‌ನಲ್ಲಿ ಉದ್ವಿಗ್ನತೆ ಕಡಿಮೆಗೊಳ್ಳುವ ಯಾವುದೇ ಲಕ್ಷಣ ಕಾಣಿಸಿಲ್ಲ.

ಕೊರೊನಾ ವಿರುದ್ಧದ ಯುದ್ಧದಲ್ಲಿ ಗೆಲುವು ಖಚಿತವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನಮಗೆಲ್ಲಾ ಸಂಯಮ ಮುಖ್ಯ ಎಂದಿದ್ದಾರೆ. ಹಬ್ಬದ ಸಂದರ್ಭದಲ್ಲಿ ದೇಶದ ಜನತೆ ಸ್ವದೇಶಿ ಹಾಗೂ ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಾಗಿ ಬಳಸಿ ಎಂದು ಪ್ರಧಾನಿ ಕರೆ ನೀಡಿದ್ದಾರೆ.

ಹಬ್ಬದ ಆಚರಣೆಯಲ್ಲಿ ಕೊರೊನಾ ನಿಯಮಾವಳಿಗಳನ್ನು ಮರೆಯಬೇಡಿ. ಮಾಸ್ಕ್, ಸಾಮಾಜಿಕ ಅಂತರ ಪಾಲಿಸಿ ಎಂದಿದ್ದಾರೆ. ಅಲ್ಲದೇ ಕೊರೊನಾ ಸಂದರ್ಭದಲ್ಲಿ ಖಾದಿ ಮಾಸ್ಕ್‌ಗಳು ಜನಪ್ರಿಯವಾಗಿವೆ. ಮೆಕ್ಸಿಕೊದ ಒಕ್ಸಾಕ ಪ್ರದೇಶದಲ್ಲಿಯೂ ಖಾದಿ ಮಾಸ್ಕ್ ತಯಾರಿಸಲಾಗುತ್ತಿದೆ. ಖಾದಿಯು ಪರಿಸರಸ್ನೇಹಿಯೂ ಶರೀರಸ್ನೇಹಿಯೂ ಆಗಿದೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...