Homeಮುಖಪುಟಅಜಯ್ ಮಿಶ್ರಾರಂತೆ ಬ್ರಿಜ್ ಭೂಷಣ್‌ರನ್ನು ಬಿಡಲು ಸಾಧ್ಯವಿಲ್ಲ: ರೈತರ ಪ್ರತಿಭಟನೆಯಲ್ಲಿ ಕುಸ್ತಿಪಟು ಬಜರಂಗ್ ಹೇಳಿಕೆ

ಅಜಯ್ ಮಿಶ್ರಾರಂತೆ ಬ್ರಿಜ್ ಭೂಷಣ್‌ರನ್ನು ಬಿಡಲು ಸಾಧ್ಯವಿಲ್ಲ: ರೈತರ ಪ್ರತಿಭಟನೆಯಲ್ಲಿ ಕುಸ್ತಿಪಟು ಬಜರಂಗ್ ಹೇಳಿಕೆ

- Advertisement -
- Advertisement -

ರೈತರು ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಗೆ ಒತ್ತಾಯಿಸಿ ಹರಿಯಾಣದ ಕುರುಕ್ಷೇತ್ರದಲ್ಲಿ ಮಹಾಪಂಚಾಯತ್ ನಡೆಸುತ್ತಿದ್ದಾರೆ. ಸೋಮುವಾರ ಪ್ರತಿಭಟನಾ ಸ್ಥಳ ಆಗಮಿಸಿದ ಕುಸ್ತಿಪಟು ಬಜರಂಗ್ ಪುನಿಯಾ ಅವರು ರೈತರಿಗೆ ಬೆಂಬಲ ಸೂಚಿಸಿದ್ದಾರೆ.

ಈ ವೇಳೆ ಮಾತನಾಡಿದ ಬಜರಂಗ್ ಪುನಿಯಾ ಅವರು, ”ರೈತರು ತಮ್ಮ ಶ್ರಮ ಮತ್ತು ಬೆಳೆಗಳಿಗೆ ಸರಿಯಾದ ಬೆಲೆಯನ್ನು ಏಕೆ ಪಡೆಯಬಾರದು? ನಾನು ಕೂಡ ರೈತರ ಕುಟುಂಬಕ್ಕೆ ಸೇರಿದವನಾದ್ದರಿಂದ ರೈತರಿಗೆ ಬೆಂಬಲ ನೀಡಲು ಇಲ್ಲಿಗೆ ಬಂದಿದ್ದೇನೆ. ನಾವು ನಮ್ಮ ಬೆಳೆಗಳ ಎಂಎಸ್‌ಪಿಯನ್ನು ಕೇಳುತ್ತಿದ್ದೇವೆ ಮತ್ತು ಸರ್ಕಾರವು ಈ ಬೇಡಿಕೆಯನ್ನು ಒಪ್ಪಿಕೊಳ್ಳಬೇಕು” ಎಂದು ಪುನಿಯಾ ಪ್ರತಿಭಟನಾ ಸ್ಥಳದಲ್ಲಿ ಆಗ್ರಹಿಸಿದರು.

”ಅಜಯ್ ಮಿಶ್ರಾ ಟೆನಿ (ಕೇಂದ್ರ ಸಚಿವ) ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ವಿಫಲವಾಗಿದೆ. ಈಗ ನಾವು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟಿಸಬೇಕಾಗಿದೆ. ನಾವೆಲ್ಲರೂ ಒಗ್ಗಟ್ಟಾಗಿ ಬಲವಾಗಿ ಧ್ವನಿ ಎತ್ತಬೇಕಿದೆ” ಎಂದು ಪುನಿಯಾ ಹೇಳಿದರು.

2021ರಲ್ಲಿ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಬೆಂಗಾವಲು ವಾಹನಗಳು ರೈತರ ಗುಂಪಿನ ನಡುವೆ ಹರಿದು ಹೋಯಿತು ರೈತರು ಸಾವಿಗೀಡಾದರು. ಈ ಲಖಿಂಪುರ ಖೇರಿ ಪ್ರಕರಣದಲ್ಲಿ ಅಜಯ್ ಮಿಶ್ರಾ ಅವರ ಪುತ್ರ ಆರೋಪಿ ಎಂದು ಹೆಸರಿಸಲಾಯಿತು. ಆಗ ರೈತರು ಭಾರೀ ಪ್ರತಿಭಟನೆ ನಡೆಸಿದರೂ ಕೂಡ ಅಜಯ್ ಮಿಶ್ರಾ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿಲ್ಲ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯದ ಆರೋಪ: ಸರ್ಕಾರದ ಉದಾಸೀನವೋ? ಆರೋಪಿಯ ರಕ್ಷಣೆಗೆ ಮಾಡುತ್ತಿರುವ ತಂತ್ರವೋ?

ಭಾನುವಾರ, ಕುಸ್ತಿಪಟುಗಳು ಹಿಂದಿಯಲ್ಲಿ ಟ್ವಿಟ್ ಮಾಡಿದ್ದು, ”ರೈತರು ತಮ್ಮ ಬೆಳೆಗಳಿಗೆ ಎಂಎಸ್‌ಪಿ ಕೇಳುತ್ತಿದ್ದಾರೆ. ಇಡೀ ದೇಶಕ್ಕೆ ಅನ್ನ ನೀಡುವ ರೈತರು ವರ್ಷವಿಡೀ ಹೊಲಗಳಲ್ಲಿ ಕಷ್ಟಪಟ್ಟು ದುಡಿಯುತ್ತಾರೆ. ಅವರ ಶ್ರಮಕ್ಕೆ, ಬೆಳೆಗೆ ಸರಿಯಾದ ಬೆಲೆ ಸಿಗಬೇಕಲ್ಲವೇ? ಈ ಹೋರಾಟದಲ್ಲಿ ಕುಸ್ತಿಪಟು ರೈತರೊಂದಿಗೆ ನಾವಿದ್ದೇವೆ. ನಾವು ಈ ಕುಟುಂಬಗಳಿಂದ ಬಂದವರು” ಎಂದು ಬರೆದಿದ್ದಾರೆ.

ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳಾದ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಈ ವರ್ಷದ ಆರಂಭದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶುಕ್ರವಾರ, ಕುಸ್ತಿಪಟುಗಳು ಸೋನೆಪತ್ ಜಿಲ್ಲೆಯ ಛೋಟು ರಾಮ್ ಧರ್ಮಶಾಲಾದಲ್ಲಿ ‘ಪಂಚಾಯತ್’ ಕರೆದರು. ಈ “ನ್ಯಾಯಕ್ಕಾಗಿ ಹೋರಾಟ”ಕ್ಕೆ ತಮ್ಮನ್ನು ಬೆಂಬಲಿಸಿದ ಖಾಪ್ ಸದಸ್ಯರು, ರೈತರು ಮತ್ತು ಮಹಿಳಾ ಸಂಘಟನೆಗಳ ಸದಸ್ಯರನ್ನು ಆಹ್ವಾನಿಸಿದರು.

ಕುಸ್ತಿಪಟುಗಳು ಬುಧವಾರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ನಡೆಸಿದ ಚರ್ಚೆಯನ್ನು ತಮ್ಮ ಬೆಂಬಲಿಗರಿಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...