Homeಕರ್ನಾಟಕಬಿಹಾರ ಸರಕಾರದಂತೆ ಕರ್ನಾಟಕದಲ್ಲೂ ಜಾತಿ ಗಣತಿ ವರದಿ ಬಹಿರಂಗಪಡಿಸಬೇಕು: ಬಿ.ಕೆ ಹರಿಪ್ರಸಾದ್‌

ಬಿಹಾರ ಸರಕಾರದಂತೆ ಕರ್ನಾಟಕದಲ್ಲೂ ಜಾತಿ ಗಣತಿ ವರದಿ ಬಹಿರಂಗಪಡಿಸಬೇಕು: ಬಿ.ಕೆ ಹರಿಪ್ರಸಾದ್‌

- Advertisement -
- Advertisement -

ಕರ್ನಾಟಕ ಸರ್ಕಾರವೂ ಕೂಡ ಬಿಹಾರ ಸರ್ಕಾರದಂತೆ ರಾಜ್ಯದಲ್ಲಿ ಈಗಾಗಲೇ ಸಿದ್ದವಾಗಿರುವ ಹಿಂದುಳಿದ ವರ್ಗಗಳ ಜಾತಿ ವರದಿಯನ್ನು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್‌ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ”ಜಾತಿ ಗಣತಿ ಬಹಿರಂಗ ಪಡಿಸುವ ಕುರಿತು ಹಾಗೂ ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯದ ವಿರುದ್ಧ ನಮ್ಮ ನಾಯಕ ರಾಹುಲ್‌ ಗಾಂಧಿ ಅವರು ಧ್ವನಿ ಎತ್ತಿದ್ದಾರೆ. ಬಿಹಾರ ಸರ್ಕಾರದಂತೆ ಕರ್ನಾಟಕ ಸರ್ಕಾರವೂ ಕೂಡ ರಾಜ್ಯದಲ್ಲಿ ಈಗಾಗಲೇ ಸಿದ್ದವಾಗಿರುವ ಹಿಂದುಳಿದ ವರ್ಗಗಳ ಜಾತಿ ವರದಿಯನ್ನ ಬಹಿರಂಗ ಪಡಿಸುವ ದಿಟ್ಟತನ ತೋರಬೇಕಿದೆ” ಎಂದು ಹೇಳಿದ್ದಾರೆ.

”INDIA” ಮೈತ್ರಿ ಕೂಟದ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡಿದ ಸರ್ಕಾರದ ಐತಿಹಾಸಿಕ ನಡೆ ಅಭಿನಂದನೀಯ. ಹಿಂದುಳಿದ, ಶೋಷಿತವೂ ಸೇರಿದಂತೆ ಎಲ್ಲಾ ವರ್ಗಗಳ ಉನ್ನತಿ ಹಾಗೂ ಅಭಿವೃದ್ಧಿಗೆ ಜಾತಿಗಣತಿ ವರದಿ ಸಹಾಯ ಮಾಡುತ್ತದೆ ಎಂಬ ವೈಜ್ಞಾನಿಕ ಧೋರಣೆ ಕಾಂಗ್ರೆಸ್ ಪಕ್ಷದ್ದಾಗಿದೆ” ಎಂದು ಹರಿಪ್ರಸಾದ್‌ ಸ್ಪಷ್ಟಪಡಿಸಿದ್ದಾರೆ.

ಬಿಹಾರದಲ್ಲಿ ಜಾತಿಗಣತಿಯ ವರದಿಯನ್ನು ಸರಕಾರ ಬಿಡುಗಡೆಗೊಳಿಸಿದೆ. ಈ ಮೂಲಕ ದೇಶದಲ್ಲಿ ಜಾತಿ ಆಧಾರಿತ ಸಮೀಕ್ಷೆಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಬಿಹಾರ ಪಾತ್ರವಾಗಿದೆ.

ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7%  ಪರಿಶಿಷ್ಟ ಜಾತಿಯ ಜನ ಮತ್ತು 1.7%  ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು  15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಯಾದವ್ ಸಮುದಾಯವು ಅತಿಹೆಚ್ಚು ಅಂದರೆ ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ.

ಈ ಜಾತಿಗಣತಿಯ ವರದಿಯು ರಾಜ್ಯದಲ್ಲಿ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಲಿದೆ. ಒಬಿಸಿಗಳಿಗೆ ಕೋಟಾಗಳನ್ನು ಹೆಚ್ಚಿಸುವ ಬೇಡಿಕೆ ಕೂಡ ಹೆಚ್ಚಾಗಳಿದೆ. ಈಗ ರಾಜ್ಯದಲ್ಲಿ ಒಬಿಸಿಗಳಿಗೆ 27% ಮೀಸಲಾತಿ ಇದೆ. 2024ರ ಲೋಕಸಭಾ ಚುನಾವಣೆಗೆ ತಿಂಗಳುಗಳ ಮೊದಲು ಬಿಡುಗಡೆಯಾದ ಈ ಅಂಕಿಅಂಶಗಳ ಪ್ರಕಾರ ಒಬಿಸಿಗಳು ರಾಜ್ಯದಲ್ಲಿ ಶೇಕಡಾ 63.1ರಷ್ಟಿದ್ದಾರೆ.

ಈ ಜಾತಿಗಣತಿ ವರದಿಯು ಬಿಹಾರದಲ್ಲಿ ಒಬಿಸಿಗಳ ಪ್ರಾಬಲ್ಯ ಮತ್ತು ಚುನಾವಣಾ ಪ್ರಭಾವವನ್ನು ಒತ್ತಿಹೇಳುತ್ತಿದೆ.

ಇದನ್ನೂ ಓದಿ: ಬಿಹಾರದ ಜಾತಿ ಗಣತಿ ಸ್ವಾಗತಾರ್ಹ, ಇದು ‘ಸರಿಯಾದ ಪರಿಹಾರ’ ಎಂದು ಕೇಂದ್ರಕ್ಕೆ ಮಾಯಾವತಿ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...