Homeಕರ್ನಾಟಕಬಿಹಾರ ಸರಕಾರದಂತೆ ಕರ್ನಾಟಕದಲ್ಲೂ ಜಾತಿ ಗಣತಿ ವರದಿ ಬಹಿರಂಗಪಡಿಸಬೇಕು: ಬಿ.ಕೆ ಹರಿಪ್ರಸಾದ್‌

ಬಿಹಾರ ಸರಕಾರದಂತೆ ಕರ್ನಾಟಕದಲ್ಲೂ ಜಾತಿ ಗಣತಿ ವರದಿ ಬಹಿರಂಗಪಡಿಸಬೇಕು: ಬಿ.ಕೆ ಹರಿಪ್ರಸಾದ್‌

- Advertisement -
- Advertisement -

ಕರ್ನಾಟಕ ಸರ್ಕಾರವೂ ಕೂಡ ಬಿಹಾರ ಸರ್ಕಾರದಂತೆ ರಾಜ್ಯದಲ್ಲಿ ಈಗಾಗಲೇ ಸಿದ್ದವಾಗಿರುವ ಹಿಂದುಳಿದ ವರ್ಗಗಳ ಜಾತಿ ವರದಿಯನ್ನು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್‌ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ”ಜಾತಿ ಗಣತಿ ಬಹಿರಂಗ ಪಡಿಸುವ ಕುರಿತು ಹಾಗೂ ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯದ ವಿರುದ್ಧ ನಮ್ಮ ನಾಯಕ ರಾಹುಲ್‌ ಗಾಂಧಿ ಅವರು ಧ್ವನಿ ಎತ್ತಿದ್ದಾರೆ. ಬಿಹಾರ ಸರ್ಕಾರದಂತೆ ಕರ್ನಾಟಕ ಸರ್ಕಾರವೂ ಕೂಡ ರಾಜ್ಯದಲ್ಲಿ ಈಗಾಗಲೇ ಸಿದ್ದವಾಗಿರುವ ಹಿಂದುಳಿದ ವರ್ಗಗಳ ಜಾತಿ ವರದಿಯನ್ನ ಬಹಿರಂಗ ಪಡಿಸುವ ದಿಟ್ಟತನ ತೋರಬೇಕಿದೆ” ಎಂದು ಹೇಳಿದ್ದಾರೆ.

”INDIA” ಮೈತ್ರಿ ಕೂಟದ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡಿದ ಸರ್ಕಾರದ ಐತಿಹಾಸಿಕ ನಡೆ ಅಭಿನಂದನೀಯ. ಹಿಂದುಳಿದ, ಶೋಷಿತವೂ ಸೇರಿದಂತೆ ಎಲ್ಲಾ ವರ್ಗಗಳ ಉನ್ನತಿ ಹಾಗೂ ಅಭಿವೃದ್ಧಿಗೆ ಜಾತಿಗಣತಿ ವರದಿ ಸಹಾಯ ಮಾಡುತ್ತದೆ ಎಂಬ ವೈಜ್ಞಾನಿಕ ಧೋರಣೆ ಕಾಂಗ್ರೆಸ್ ಪಕ್ಷದ್ದಾಗಿದೆ” ಎಂದು ಹರಿಪ್ರಸಾದ್‌ ಸ್ಪಷ್ಟಪಡಿಸಿದ್ದಾರೆ.

ಬಿಹಾರದಲ್ಲಿ ಜಾತಿಗಣತಿಯ ವರದಿಯನ್ನು ಸರಕಾರ ಬಿಡುಗಡೆಗೊಳಿಸಿದೆ. ಈ ಮೂಲಕ ದೇಶದಲ್ಲಿ ಜಾತಿ ಆಧಾರಿತ ಸಮೀಕ್ಷೆಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಬಿಹಾರ ಪಾತ್ರವಾಗಿದೆ.

ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7%  ಪರಿಶಿಷ್ಟ ಜಾತಿಯ ಜನ ಮತ್ತು 1.7%  ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು  15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಯಾದವ್ ಸಮುದಾಯವು ಅತಿಹೆಚ್ಚು ಅಂದರೆ ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ.

ಈ ಜಾತಿಗಣತಿಯ ವರದಿಯು ರಾಜ್ಯದಲ್ಲಿ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಲಿದೆ. ಒಬಿಸಿಗಳಿಗೆ ಕೋಟಾಗಳನ್ನು ಹೆಚ್ಚಿಸುವ ಬೇಡಿಕೆ ಕೂಡ ಹೆಚ್ಚಾಗಳಿದೆ. ಈಗ ರಾಜ್ಯದಲ್ಲಿ ಒಬಿಸಿಗಳಿಗೆ 27% ಮೀಸಲಾತಿ ಇದೆ. 2024ರ ಲೋಕಸಭಾ ಚುನಾವಣೆಗೆ ತಿಂಗಳುಗಳ ಮೊದಲು ಬಿಡುಗಡೆಯಾದ ಈ ಅಂಕಿಅಂಶಗಳ ಪ್ರಕಾರ ಒಬಿಸಿಗಳು ರಾಜ್ಯದಲ್ಲಿ ಶೇಕಡಾ 63.1ರಷ್ಟಿದ್ದಾರೆ.

ಈ ಜಾತಿಗಣತಿ ವರದಿಯು ಬಿಹಾರದಲ್ಲಿ ಒಬಿಸಿಗಳ ಪ್ರಾಬಲ್ಯ ಮತ್ತು ಚುನಾವಣಾ ಪ್ರಭಾವವನ್ನು ಒತ್ತಿಹೇಳುತ್ತಿದೆ.

ಇದನ್ನೂ ಓದಿ: ಬಿಹಾರದ ಜಾತಿ ಗಣತಿ ಸ್ವಾಗತಾರ್ಹ, ಇದು ‘ಸರಿಯಾದ ಪರಿಹಾರ’ ಎಂದು ಕೇಂದ್ರಕ್ಕೆ ಮಾಯಾವತಿ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...