Homeಮುಖಪುಟಡೆನ್ಮಾರ್ಕ್ ರಾಜಕುಮಾರನಿಲ್ಲದ ’ಹ್ಯಾಮ್ಲೆಟ್’: ಮೋದಿ ಭಾಷಣಕ್ಕೆ ಕಾಂಗ್ರೆಸ್ ಟೀಕೆ

ಡೆನ್ಮಾರ್ಕ್ ರಾಜಕುಮಾರನಿಲ್ಲದ ’ಹ್ಯಾಮ್ಲೆಟ್’: ಮೋದಿ ಭಾಷಣಕ್ಕೆ ಕಾಂಗ್ರೆಸ್ ಟೀಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಭಾಷಣವು ಡೆನ್ಮಾರ್ಕ್ ರಾಜಕುಮಾರನಿಲ್ಲದ ಷೇಕ್ಸ್‌ಪಿಯರ್‌ನ ಹ್ಯಾಮ್ಲೆಟ್‌‍ನಂತಿದೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಅಭಿಷೇಕ್ ಮನು ಸಿಂಘ್ವಿಯವರು ಭಾಷಣವನ್ನು ಮಾರ್ಗಸೂಚಿಯಿಲ್ಲದ ಭಾಷಣವೆಂದು ಟೀಕಿಸಿದ್ದಾರೆ.

“ಹ್ಯಾಮ್ಲೆಟ್” ಷೇಕ್ಸ್‌ಪಿಯರ್‌ ಬರೆದಿರುವ ಇಂಗ್ಲೀಷಿನ ಪ್ರಸಿದ್ದ ನಾಟಕವಾಗಿದ್ದು ಅದರಲ್ಲಿ ಡೆನ್ಮಾರ್ಕ್ ರಾಜಕುಮಾರನದ್ದು ಪ್ರಮುಖ ಪಾತ್ರವಾಗಿದೆ.

ಬಡವರು, ಮಧ್ಯಮ ವರ್ಗದವರು ಮತ್ತು ಸಣ್ಣ ಉದ್ಯಮಗಳಿಗೆ ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಸಿಂಘ್ವಿ ಟ್ವಿಟ್ಟರಿನಲ್ಲಿ ಪ್ರಧಾನ ಮಂತ್ರಿಯನ್ನು ಕೋರಿದ್ದಾರೆ.

ಸಿಂಘ್ವಿ ಟೀಕಿಸಿದ ಕೆಲವೇ ನಿಮಿಷಗಳಲ್ಲಿ ಹಲವಾರು ಕಾಂಗ್ರೆಸ್ ನಾಯಕರು ಪ್ರಧಾನ ಮಂತ್ರಿಯ ಭಾಷಣವನ್ನು ತರಾಟೆಗೆ ತೆಗೆದುಕೊಂಡರು.

ಮಾಜಿ ಹಣಕಾಸು ಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರು ಟ್ವೀಟ್ ಮಾಡಿ “ಹಣವಿದೆ, ಆಹಾರವಿದೆ, ಆದರೆ ಸರ್ಕಾರ ಹಣ ಅಥವಾ ಆಹಾರವನ್ನು ಬಿಡುಗಡೆ ಮಾಡುತ್ತಿಲ್ಲ, ಪ್ರೀತಿಯ ದೇಶವೇ ಅತ್ತು ಬಿಡು” ಎಂದು ಹೇಳಿದ್ದಾರೆ.

ಮುಂದುವರೆದ ಚಿದಂಬರಂ, “ಮುಖ್ಯಮಂತ್ರಿಗಳು ಇಟ್ಟ ಹಣದ ಬೇಡಿಕೆಯು ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಮಾರ್ಚ್ 25, 2020 ರ ಕೆಟ್ಟ ಪ್ಯಾಕೇಜ್‌ಗೆ ಒಂದು ರೂಪಾಯಿ ಕೂಡ ಸೇರಿಸಲಾಗಿಲ್ಲ. ರಘುರಾಮ್ ರಾಜನ್‌ನಿಂದ ಹಿಡಿದು ಜೀನ್ ಡ್ರೆಜ್‌ವರೆಗೆ, ಪ್ರಭಾತ್ ಪಟ್ನಾಯಕ್‌ನಿಂದ ಹಿಡಿದು ಅಭಿಜಿತ್ ಬ್ಯಾನರ್ಜಿವರೆಗೆ ಅವರ ಸಲಹೆಗೆ ಕಿವುಡಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು 10,000 ದಾಟಿದ ಬೆನ್ನಲ್ಲೇ ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದಾರೆ. “ಎಲ್ಲರ ಸಲಹೆಗಳನ್ನು ಗಣನೆಗೆ ತೆಗೆದುಕೊಂಡ ನಂತರ ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ” ಎಂದು ಅವರು ತಮ್ಮ 25 ನಿಮಿಷಗಳ ಭಾಷಣದಲ್ಲಿ ಹೇಳಿದ್ದಾರೆ.

“ಏಪ್ರಿಲ್ 20 ರವರೆಗೆ, ಪ್ರತಿ ಜಿಲ್ಲೆ, ಪ್ರತಿ ರಾಜ್ಯವನ್ನು ಲಾಕ್ ಡೌನ್ ಸರಿಯಾಗಿ ಅನುಸರಿಸಲಾಗಿದೆಯೆ ಎಂದು ಸೂಕ್ಷ್ಮವಾಗಿ ಗಮನಿಸಲಾಗುವುದು. ಅದರ ನಂತರ ನಾವು ನಿರ್ಬಂಧಗಳನ್ನು ಸಡಿಲಿಸುವ ಬಗ್ಗೆ ನಿರ್ಧರಿಸಬಹುದು” ಎಂದು ಪ್ರಧಾನಿ ಹೇಳಿದ್ದಾರೆ.

ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಲಾಕ್ ಡೌನ್ ವಿಸ್ತರಣೆಯನ್ನು ಬೆಂಬಲಿಸುತ್ತಿದ್ದರೂ, ಪ್ರಧಾನಿ ಮೋದಿ ಅವರು ಬಡವರಿಗೆ ಗಂಭೀರ ಪರಿಹಾರವನ್ನು ಘೋಷಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...