Homeರಾಷ್ಟ್ರೀಯಆರೆಸ್ಸೆಸ್‌‌ನಂತೆ ಪಿಎಫ್‌‌ಐ ಕೂಡಾ ದೈಹಿಕ ಶಿಕ್ಷಣದ ನೆಪದಲ್ಲಿ ಯುವಕರ ಬ್ರೈನ್ ವಾಶ್‌ ಮಾಡುತ್ತಿದೆ: ಬಿಹಾರದ ಹಿರಿಯ...

ಆರೆಸ್ಸೆಸ್‌‌ನಂತೆ ಪಿಎಫ್‌‌ಐ ಕೂಡಾ ದೈಹಿಕ ಶಿಕ್ಷಣದ ನೆಪದಲ್ಲಿ ಯುವಕರ ಬ್ರೈನ್ ವಾಶ್‌ ಮಾಡುತ್ತಿದೆ: ಬಿಹಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ

- Advertisement -
- Advertisement -

ಬಿಹಾರ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು ತಾವು ಪತ್ತೆ ಹಚ್ಚಿದ ಭಯೋತ್ಪಾದನಾ ಘಟಕದ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಅವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌)ದೊಂದಿಗೆ ಹೋಲಿಸಿ ವಿವಾದಕ್ಕೆ ಗುರಿಯಾಗಿದ್ದಾರೆ. ರಾಜ್ಯ ಪೊಲೀಸರು ಬುಧವಾರ ಪಾಟ್ನಾದಲ್ಲಿ ಶಂಕಿತ ಭಯೋತ್ಪಾದನಾ ಘಟಕವನ್ನು ಭೇದಿಸಿ, ಪಿಎಫ್‌ಐ ಜೊತೆ ಸಂಪರ್ಕ ಹೊಂದಿರುವ ಇಬ್ಬರನ್ನು ಬಂಧಿಸಿದ್ದಾರೆ.

“ಆರ್‌ಎಸ್‌ಎಸ್‌‌ನ ಶಾಖೆಗಳು ಮತ್ತು ತರಬೇತಿ ಇರುವಂತೆಯೇ, ದೈಹಿಕ ಶಿಕ್ಷಣದ ನೆಪದಲ್ಲಿ ಪಿಎಫ್‌ಐ ಯುವಕರನ್ನು ತಮ್ಮ ಕೇಂದ್ರಕ್ಕೆ ಕರೆದು ಅವರ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದೆ ಮತ್ತು ಅವರ ಬ್ರೈನ್‌ವಾಶ್ ಮಾಡಲು ಪ್ರಯತ್ನಿಸುತ್ತಿದೆ” ಎಂದು ಪಾಟ್ನಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಾನವಜೀತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಂದಿನ 48 ಗಂಟೆಗಳ ಒಳಗೆ ಧಿಲ್ಲೋನ್ ಅವರಿಂದ ವಿವರಣೆಯನ್ನು ಪಡೆಯುವಂತೆ ಉನ್ನತ ಪೊಲೀಸ್ ಅಧಿಕಾರಿಗಳನ್ನು ಕೇಳಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

“ಪಾಟ್ನಾ ಎಸ್‌ಎಸ್‌ಪಿ ಇಂತಹ ಹೇಳಿಕೆಯನ್ನು ತಕ್ಷಣವೇ ಹಿಂಪಡೆದು, ಅದಕ್ಕಾಗಿ ಕ್ಷಮೆಯಾಚಿಸಬೇಕು” ಎಂದು ರಾಜ್ಯಸಭಾ ಸದಸ್ಯ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಟ್ವೀಟ್ ಮಾಡಿದ್ದಾರೆ.

“ಇದು ಎಸ್‌ಎಸ್‌ಪಿ ತನ್ನ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದೆ ಎಂದು ತೋರಿಸುತ್ತದೆ. ಆರ್‌ಎಸ್‌ಎಸ್‌ನಂತಹ ರಾಷ್ಟ್ರೀಯತಾವಾದಿ ಸಂಘಟನೆಯನ್ನು ನೀವು ಪಿಎಫ್‌ಐ ಜೊತೆ ಹೇಗೆ ಹೋಲಿಸುತ್ತೀರಿ?” ಎಂದು ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಬಚೌಲ್ ಹೇಳಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಆದರೆ ಜೀತನ್ ರಾಮ್ ಮಾಂಝಿ ಅವರ ಹಿಂದೂಸ್ತಾನ್ ಅವಾಮ್ ಮೋರ್ಚಾ ಪಕ್ಷವೂ ಪೊಲೀಸ್‌ ಅಧಿಕಾರಿಯನ್ನು ಬೆಂಬಲಿಸಿದ್ದು, ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಹಿಂದೂಸ್ತಾನಿ ಅವಾಮ್ ಮೋರ್ಚಾದ ಮುಖ್ಯ ವಕ್ತಾರ ಡ್ಯಾನಿಶ್ ರಿಜ್ವಾನ್, ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. “ಅವರು ಹೇಳಿದ್ದು, ಆರ್‌ಎಸ್‌ಎಸ್‌ನ ಶಾಖೆಗಳ ರೀತಿಯಲ್ಲಿ ಪಿಎಫ್‌ಐ ಕೂಡಾ ಮಾಡುತ್ತಿದೆ ಎಂದಾಗಿದೆ. ಅವರು ಆರ್‌ಎಸ್‌ಎಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಕರೆದಿಲ್ಲ” ಎಂದು ಹೇಳಿದ್ದಾರೆ.

ಪಿಎಫ್‌ಐ ಜೊತೆಗೆ ಸಂಪರ್ಕ ಹೊಂದಿರುವ ‘ಸಂಭಾವ್ಯ ಭಯೋತ್ಪಾದನಾ ಘಟಕ’ದ ಪತ್ತೆಯ ಕುರಿತು ಮಾಧ್ಯಮದೊಂದಿಗಿನ ಸಂವಾದದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯು ಈ ಹೇಳಿಕೆಯನ್ನು ನೀಡಿದ್ದಾರೆ. ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿ ಪ್ರವಾಸದಲ್ಲಿದ್ದ ಪಾಟ್ನಾದಿಂದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ಗುಂಪಿನ ಚಟುವಟಿಕೆಗಳು ಪ್ರಧಾನಿಯವರ ಭೇಟಿಯನ್ನು ಯಾವುದೇ ರೀತಿಯಲ್ಲಿ ಗುರಿಯಾಗಿಸಿಕೊಂಡಿವೆಯೇ ಎಂಬ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಈ ಬಂಧನಗಳಿಗೂ ಪ್ರಧಾನಿ ಭೇಟಿಗೂ ಯಾವುದೇ ಸಂಬಂಧವಿಲ್ಲ. ಭೇಟಿಯ ಸಮಯದಲ್ಲಿ ಹೆಚ್ಚಿನ ಜಾಗರೂಕತೆಗಾಗಿ, ಸಾಮಾಜಿಕ ಮಾಧ್ಯಮಗಳ ಹೆಚ್ಚಿನ ನಿಗಾ ಸೇರಿದಂತೆ, ನಾವು PFI ಚಟುವಟಿಕೆಗಳನ್ನು ನೋಡಿದೆವು. ಅವರು ಭಾರತದ ಏಕತೆ ಮತ್ತು ಸಾರ್ವಭೌಮತೆಗೆ ವಿರುದ್ಧವಾದ ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯಿಂದ ಇಸ್ಲಾಮೋಫೋಬಿಕ್ ಹೇಳಿಕೆ : ತೀವ್ರ ಆಕ್ರೋಶ

ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ 'ಶಾಂತಿ ಸಭೆ'ಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು 'ಇಸ್ಲಾಮೋಫೋಬಿಕ್' ಹೇಳಿಕೆ ನೀಡಿರುವುದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಧಿಕಾರಿಯ ಹೇಳಿಕೆ ರಾಜಕೀಯ ನಾಯಕರು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...