Homeಕರ್ನಾಟಕತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು: ಕಣ್ಕಟ್ಟು ಪುಸ್ತಕದ ಕುರಿತ ಸಂವಾದದಲ್ಲಿ ಎಸ್‌.ಜಿ ಸಿದ್ದರಾಮಯ್ಯ

ತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು: ಕಣ್ಕಟ್ಟು ಪುಸ್ತಕದ ಕುರಿತ ಸಂವಾದದಲ್ಲಿ ಎಸ್‌.ಜಿ ಸಿದ್ದರಾಮಯ್ಯ

ಬಾಲಕಾರ್ಮಿಕ ಪದ್ದತಿ ನಿಷೇಧಿಸಲಾಗಿದೆ. ಆದರೆ 6ನೇ ತರಗತಿಯಿಂದಲೇ ಕೌಶಲ್ಯದ ಹೆಸರಲ್ಲಿ ಕುಲಕಸುಬುಗಳನ್ನು ಹೇರಲಾಗುತ್ತಿದೆ. ಕೌಶಲ್ಯವೆಂಬ ಕಣ್ಕಟ್ಟು, ಜೀತವೆಂಬ ಕ್ರೌರ್ಯವನ್ನು ಮರೆಸುತ್ತಿದೆ.

- Advertisement -
- Advertisement -

ತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು. ತಮಿಳುನಾಡನ್ನು ನಾವು ಮಾದರಿಯಾಗಿ ತೆಗೆದುಕೊಂಡು ಆ ಧೈರ್ಯವನ್ನು ಹೀಗಿನ ಸರ್ಕಾರ ತೋರಬೇಕು. ಇಲ್ಲದಿದ್ದರೆ ತನ್ನ ಪ್ರಣಾಳಿಕೆಗೆ ತಾನೇ ಮಾಡಿಕೊಂಡ ದ್ರೋಹವಾಗುತ್ತದೆ ಎಂದು ಹಿರಿಯ ಚಿಂತಕರಾದ ಎಸ್‌.ಜಿ ಸಿದ್ದರಾಮಯ್ಯನವರು ಅಭಿಪ್ರಾಯಪಟ್ಟರು.

ಹೊಸ ಶಿಕ್ಷಣ ನೀತಿಯ ಕುರಿತು ಬಿ. ಶ್ರಿಪಾದ್ ಭಟ್‌ರವರು ಬರೆದಿರುವ ಕಣ್ಕಟ್ಟು ಪುಸ್ತಕದ ಕುರಿತ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಸರ್ಕಾರ ಯಾವಾಗಲೂ ಆರೋಗ್ಯ ಮತ್ತು ಶಿಕ್ಷಣವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಆಗ ಮಾತ್ರ ಸುಧಾರಣೆ ಸಾಧ್ಯ. ಆದರೆ ಅವು ಖಾಸಗೀಕರಣಗೊಂಡಲ್ಲಿ ಅಸಮಾನತೆ ಹೆಚ್ಚುತ್ತದೆ. ಇಂದಿನ ಶಿಕ್ಷಣ ಮತ್ತು ಆರೋಗ್ಯದ ವ್ಯಾಪರೀಕರಣವು ಸರ್ಕಾರದ ಅಸಮರ್ಥತೆಯನ್ನು ಸೂಚಿಸುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇಂದಿಗೂ ಕೇವಲ ಕೆಲವೇ ಶಿಕ್ಷಕರ ಇಚ್ಛಾಶಕ್ತಿಯಿಂದ ಹಲವು ಶಾಲೆಗಳು ಎಷ್ಟು ಅಭಿವೃದ್ದಿಯಾಗಿವೆ ಎಂಬುದನ್ನು ನೋಡಬಹುದು. ಆದರೆ ಸರ್ಕಾರದ ಸರಿಯಾದ ಮೇಲ್ವಿಚಾರಣೆ ಇಲ್ಲದಿರುವುದು, ರಾಜಕಾರಣಗಳು ಶಿಕ್ಷಣವನ್ನು ದಂಧೆಯಾಗಿಸಿರುವುದು ಇಂದಿನ ಶಿಕ್ಷಣದ ದುಸ್ಥಿತಿಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಎನ್‌ಇಪಿ ಹೆಸರಿನಲ್ಲಿ ನಾಗ್ಪುರ ಎಜುಕೇಷನ್ ಪಾಲಿಸಿ ತಂದು ಶಿಕ್ಷಣವನ್ನು ಮತ್ತಷ್ಟು ಹಿಂದಕ್ಕೆ ಒಯ್ಯುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಕಾಣದ ಕೈಗಳು ಈ ಎನ್‌ಇಪಿಯನ್ನು ರಚಿಸಿದ್ದಾರೆ. ಅದರ ಅನಾಹುತಗಳನ್ನು ಶ್ರೀಪಾದ್‌ ಭಟ್‌ರವರು ಎಳ ಎಳೆಯಾಗಿ ಈ ಕೃತಿಯಲ್ಲಿ ಬಿಚ್ಚಿಟ್ಟಿದ್ದಾರೆ. ನಮ್ಮ ರಾಜಕಾರಣಿಗಳು ಎನ್‌ಇಪಿ ಜಾರಿಗೊಳಿಸುವ ಮೂಲಕ ಅಜ್ಞಾನಿಗಳಾಗಿ, ಅವಿವೇಕಿಗಳಾಗಿ ವರ್ತಿಸುತ್ತಾರೆ. ಶಿಕ್ಷಣ ಯಾವಾಗಲೂ ನೆಲಮೂಲದಿಂದ ಮೇಲಕ್ಕೆ ಬರಬೇಕು. ಆದರೆ ಶಿಕ್ಷಣ ನೀತಿಯನ್ನು ಉನ್ನತ ಶಿಕ್ಷಣದಿಂದ ಅಂದರೆ ಮೇಲಿನಿಂದ ಕೆಳಕ್ಕೆ ಜಾರಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎನ್‌ಇಪಿ ಜಾರಿಯಾದಾಗಿನಿಂದ ಪ್ರವೇಶ, ದಾಖಲಾತಿ ಎಲ್ಲವೂ ಆನ್‌ಲೈನ್‌ ಮಾಡುವ ಮೂಲಕ ಡ್ರಾಪ್‌ಔಟ್‌ಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈಗಾಗಲೇ ದೇಶದಲ್ಲಿ 65 ಲಕ್ಷ ಮಕ್ಕಳು ಡ್ರಾಪ್‌ಔಟ್ ಆಗಿದ್ದಾರೆ ಎಂದು ಹೈಕೋರ್ಟ್ ಹೇಳುತ್ತಿದೆ. ಈ ಎನ್‌ಇಪಿ ವಿದ್ಯಾರ್ಥಿಗಳಿಗೆ ಆಮಿಷ ತೋರಿಸಿ ವಂಚಿಸುವಂತಿದೆ. ಏಕೆಂದರೆ ಸರ್ಕಾರಕ್ಕೆ ಅಗ್ಗಕ್ಕೆ ದುಡಿಯುವ ಅಗ್ನಿವೀರರು ಬೇಕಿದೆ, ಕಾಲಾಳುಗಳಾಗಿ ಬೀದಿಯಲ್ಲಿ ಮಚ್ಚಿಡಿದು ಹೊಡೆದಾಡುವವರು ಬೇಕಾಗಿದೆ. ಇದನ್ನು ಸೂಕ್ಷ್ಮವಾಗಿ ಗ್ರಹಿಸಬೇಕು. ಇಲ್ಲದಿದ್ದರೆ ನಮ್ಮ ದೇಶ ಉಳಿಯುವುದಿಲ್ಲ ಎಂದರು.

ನಮ್ಮದು ಬಹುಸಂಸ್ಕೃತಿಗಳ ರಾಷ್ಟ್ರ. ಯಾವುದೇ ಸಮುದಾಯ ಬರೀ ರಾಜಕೀಯ ಸ್ವಾತಂತ್ರ್ಯ ಪಡೆದರೆ ಸಾಲದು, ಸಾಂಸ್ಕೃತಿಕ ಸ್ವಾತಂತ್ರ್ಯವೂ ಮುಖ್ಯ. ಇಲ್ಲದಿದ್ದರೆ ಅದು ವಿನಾಶವಾಗುತ್ತದೆ ಎಂದು ಆಫ್ರಿಕಾದ ಶಿಕ್ಷಣ ತಜ್ಞ ಗೂಗಿ ವಾ ಥಿಯೊಂಗೊ ಹೇಳಿದ್ದಾರೆ. ಅದೇ ರೀತಿಯಲ್ಲಿ ಆಫ್ರಿಕಾದ ಸಮುದಾಯಗಳು ನಾಶವಾಗುತ್ತಿದ್ದು, ನಮ್ಮ ದೇಶವೂ ಅದೇ ದಾರಿಯಲ್ಲಿದೆ ಎಂದು ಎಸ್‌.ಜಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

2500 ವರ್ಷಗಳ ಸಾಂಸ್ಕೃತಿಕ ದಾಷ್ಯದಿಂದ ನಮ್ಮ ಸಮುದಾಯಗಳು ಇನ್ನೂ ಬಿಡುಗಡೆಗೊಂಡಿಲ್ಲ. ಆ ಹಾದಿಯಲ್ಲಿದ್ದಾಗಲೆ ಈ ಎನ್‌ಇಪಿ ಬಂದಿದ್ದು, ಮತ್ತೆ ಚಾತುರ್ವಣ್ಯಕ್ಕೆ ದೂಡುವ ಯತ್ನ ನಡೆಯುತ್ತಿದೆ. ಅಸಮಾನತೆಯನ್ನು ನೆಲೆಗೊಳಿಸಿ ಶಿಕ್ಷಣ ವಂಚಿಸಲಾಗುತ್ತಿದೆ. ಒಂದು ಕಡೆ ಬಾಲಕಾರ್ಮಿಕ ನಿಷೇಧಿಸುವ ಕಾನೂನಿದೆ. ಇನ್ನೊಂದೆಡೆ ಆರನೇ ತರಗತಿಯಿಂದಲೇ ಕೌಶಲ್ಯ ಕಲಿಸುವ ಹೆಸರಿನಲ್ಲಿ ಕುಲಕಸುಬುಗಳನ್ನು ಮಾಡಲು ಮಕ್ಕಳನ್ನು ಪ್ರೇರಿಪಿಸಲಾಗುತ್ತಿದೆ. ಕೌಶಲ್ಯ ಎನ್ನುವ ಕಣ್ಕಟ್ಟು, ಜೀತ ಎನ್ನುವ ಕ್ರೌರ್ಯವನ್ನು ಮರೆಸುತ್ತಿದೆ ಎಂದರು.

ಈ ಅಪಾಯಗಳ ಬಗ್ಗೆ ಯಾರೂ ಎಚ್ಚೆತ್ತುಕೊಳ್ಳಬೇಕಿತ್ತೊ ಅವರೆ ಅವುಗಳನ್ನು ಹೊತ್ತು ಮೆರೆಸುವ ಹಾಗೆ ಮಾಡಲಾಗುತ್ತಿದೆ. ನಮ್ಮ ಶಿಕ್ಷಣ ಸಚಿವರುಗಳು ಮೊದಲ ಎನ್‌ಇಪಿ ಕುರಿತಂತೆ ತಿಳುವಳಿಕೆ ಪಡೆಯಬೇಕಾದರೆ ಈ ಪುಸ್ತಕ ಓದಬೇಕಾಗಿದೆ. ಮೊದಲು ಎನ್‌ಇಪಿ ಕಿತ್ತೊಗೆಯಿರಿ. ಈ ದೇಶಕ್ಕೆ ಅದರ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೊಷಿಸಿದ್ದನ್ನು ಈಡೇರಿಸಬೇಕು. ಇದೇ ವರ್ಷವೇ ಕಿತ್ತೋಗೆಯಬೇಕು ಎಂದು ಅವರು ಆಗ್ರಹಿಸಿದರು.

ಎಲ್ಲರನ್ನೂ ಒಳಗೊಳ್ಳುವ ಹಾಗೆ ಕೊಠಾರಿ ಶಿಕ್ಷಣ ನೀತಿಯನ್ನು ರೂಪಿಸಲಾಗಿತ್ತು. ಮೀಸಲಾತಿಯನ್ನು ಅದಕ್ಕಾಗಿಯೇ ಜಾರಿಗೊಳಿಸಲಾಗಿದೆ. ಆದರೆ ಮೀಸಲಾತಿಯ ಕುರಿತು ಈ ಎನ್‌ಇಪಿಯಲ್ಲಿ ಪ್ರಸ್ತಾಪವೇ ಇಲ್ಲ. ಆದರೆ ಮೆರಿಟ್ ಆಧಾರಿತ ಸ್ಕಾಲರ್‌ಶಿಪ್‌ ಬಗ್ಗೆ ಮಾತ್ರ ಇದು ಮಾತಾಡುತ್ತದೆ. ಇಡಬ್ಲೂಎಸ್‌ ಬಂದಂತೆ ಎನ್‌ಇಪಿ ಕೂಡ ಕಣ್ಕಟ್ಟಿನೊಂದಿಗೆ ಜಾರಿಗೊಳಿಸುವ ಹುನ್ನಾರ ನಡೆಯುತ್ತಿದೆ. ಮಾನವೀಕರಣಗೊಂಡ ಸಮಾಜ, ಸಾಮಾಜಿಕ ನ್ಯಾಯದ ಸಮಾಜ ಬೇಕಾದರೆ ವರ್ಣನೀತಿಯನ್ನು, ಸನಾತನಾ ಮೌಲ್ಯಗಳನ್ನು ಪೋಷಿಸುವ ಎನ್‌ಇಪಿಯನ್ನು ರದ್ದುಗೊಳಿಸಬೇಕು ಎಂದರು.

ಮತೀಯವಾದವನ್ನು ಹೇರಲಾಗುತ್ತಿದೆ: ಡಾ.ಎಚ್.ಡಿ ಉಮಾಶಂಕರ್ ಆತಂಕ

ಎನ್‌ಇಪಿ ಜಾರಿಯಾದ ನಂತರದ ರಾಜ್ಯಶಾಸ್ತ್ರ ಪಠ್ಯಕ್ರಮದಲ್ಲಿ ರಾಮಾಯಣದಲ್ಲಿ ರಾಮರಾಜ್ಯದ ಪರಿಕಲ್ಪನೆ, ಆಧ್ಯಾತ್ಮಿಕ ಚಿಂತನೆಗಳು, ವರ್ಣಧರ್ಮ ಎಂದರೇನು? ಧರ್ಮ ಎಂದರೇನು? ಎಂಬಂತಹ ಪಾಠಗಳನ್ನು ಸೇರಿಸಲಾಗಿದೆ. ಭಾರತ ಮತ್ತು ಸಂವಿಧಾನ ಪಾಠದಲ್ಲಿ ಭಾರತೀಯ ಜ್ಞಾನಪರಂಪರೆ, ಗುರುಕುಲ ಪದ್ಧತಿಯ ಬಗ್ಗೆ ಚರ್ಚಿಸಲಾಗಿದೆ. ಆ ಮೂಲಕ ವಿದ್ಯಾರ್ಥಿಗಳ ಮೇಲೆ ಮತೀಯವಾದವನ್ನು ಹೇರಲಾಗುತ್ತಿದೆ ಎಂದು ಪ್ರಾಧ್ಯಾಪಕರಾದ ಡಾ.ಎಚ್.ಡಿ ಉಮಾಶಂಕರ್ ಆತಂಕ ವ್ಯಕ್ತಪಡಿಸಿದರು.

ಎನ್‌ಇಪಿಯನ್ನು ಜಾರಿಗೊಳಿಸಿದಾಗ ನಾವು ವಿಷಯ ಆಯ್ಕೆಗೆ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯವಿದೆ, ಕಲಿಕಾ ಸಮಯವನ್ನು ಕಡಿತಗೊಳಿಸಲಾಗಿದೆ, ಕೌಶಲ್ಯಭಿವೃದ್ದಿ ಕಡೆ ತೆಗೆದುಕೊಂಡು ಹೋಗಲು ಸಾಧ್ಯವಾಗಬಹುದು, ನಿರಂತರ ಮೌಲ್ಯಮೌಪನ ಸಾಧ್ಯ ಎಂದು ನಂಬಿದ್ದೆವು. ಆದರೆ ಎರಡು ವರ್ಷದ ನಂತರ ಅದೆಲ್ಲವೂ ಸುಳ್ಳಾಗಿದ್ದು ವಿದ್ಯಾರ್ಥಿಗಳ ಡ್ರಾಪ್‌ಔಟ್ ಮಾತ್ರ ಹೆಚ್ಚುತ್ತಿದೆ ಎಂದರು.

ಪಿಯುಸಿ ಮುಗಿಸಿ ಬಂದ ವಿದ್ಯಾರ್ಥಿಗಳಿಗೆ ಯಾವುದೇ ತಯಾರಿ ಇರುವುದಿಲ್ಲ. ಆನ್‌ಲೈನ್‌ ಮೂಲಕ ಅಡ್ಮಿಷನ್, ಪರೀಕ್ಷೆ ಶುಲ್ಕ ಎಲ್ಲವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಾಗಿದೆ. ಬಹಳ ವಿದ್ಯಾರ್ಥಿಗಳ ಬಳಿ ಮೊಬೈಲ್, ಡೇಟಾ ಇರುವುದಿಲ್ಲ. ಇದೆಲ್ಲ ದೊಡ್ಡ ತೊಡಕಾಗಿದೆ. ಫೀಸ್ ಕಟ್ಟಲು ಬಾರದ ಕೆಲ ವಿದ್ಯಾರ್ಥಿಗಳು ಪರೀಕ್ಷೆಯನ್ನೇ ಬರೆದಿಲ್ಲ. ವಿಷಯಗಳ ಆಯ್ಕೆಯಲ್ಲಿ ಗೊಂದಲಗಳು ಮುಂದುವರಿದಿವೆ ಎಂದರು.

ಇದು ನಾಗ್ಪುರ ಎಜುಕೇಶನ್ ಪಾಲಿಸಿ: ಡಾ. ರವಿಕುಮಾರ್ ಬಾಗಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದಕ್ಷಿಣ ಭಾರತವನ್ನು, ಕರ್ನಾಟಕವನ್ನು ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದೆ. ಹಾಗಾಗಿ ಇಲ್ಲಿ ಮಾತ್ರವೇ ಮೊದಲು ಎನ್‌ಇಪಿ ಜಾರಿಗೊಳಿಸಿದ್ದಾರೆ. ಇದಕ್ಕೆ ನಮ್ಮ ರಾಜಕೀಯ ನಾಯಕರು ಸಹ ಅದನ್ನು ಹೊತ್ತು ಮೆರೆಸಿ ಅವಸರವರಸವಾಗಿ ಆರಂಭಿಸಿದರು. ಆದರೆ ಅದು ಹೊಸ ಶಿಕ್ಷಣ ನೀತಿಯ ಬದಲಿಗೆ ನಾಗ್ಪುರ ಎಜುಕೇಶನ್ ಪಾಲಿಸಿ ಎಂಬುದು ಸಾಬೀತಾಗಿದೆ ಎಂದು ಪ್ರಾಧ್ಯಾಪಕರಾದ ಡಾ. ರವಿಕುಮಾರ್ ಬಾಗಿ ಅಭಿಪ್ರಾಯಪಟ್ಟರು.

ಒಂದು ದೇಶದ ಸಾಮಾಜಿಕ ವ್ಯವಸ್ಥೆಯನ್ನು ದುರ್ಬಲಗೊಳಿಸಬೇಕೆಂದರೆ ಆ ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶಗೊಳಿಸಿದರೆ ಸಾಕು. ಆ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಸಂವಿಧಾನ ಎಲ್ಲರಿಗೂ ಸಮಾನವಾದ ಶಿಕ್ಷಣವನ್ನು ಕೊಡಬೇಕು ಎಂದು ಬಯಸುತ್ತದೆ. ಆದರೆ ಎನ್‌ಇಪಿ ಅದಕ್ಕೆ ವ್ಯತಿರಿಕ್ತವಾಗಿದೆ. ಮತೀಯತೆಯನ್ನು, ಕೆಲವೇ ವರ್ಗದ ಹಿತಾಸಕ್ತಿಯನ್ನು, ಸನಾತನ ಸಂಸ್ಕೃತಿಯ ಮೌಲ್ಯಗಳನ್ನು ಬಿತ್ತುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಲೆ ಎಂಬ ವ್ಯವಸ್ಥೆಯೆ ಇನ್ನೂ ಸಾಮಾಜೀಕರಣಗೊಂಡಿಲ್ಲ. ವೈಚಾರಿಕೆತೆ, ವೈಜ್ಞಾನಿಕತೆ ಎಂಬುದಕ್ಕೆ ಇಲ್ಲಿ ಅವಕಾಶವೇ ಇಲ್ಲ. ಪಶ್ಚಿಮದ ರಾಷ್ಟ್ರಗಳು ಮುಂದಕ್ಕೆ ಚಲಿಸಿದರೆ, ನಾವು ಹಿಂದಕ್ಕೆ ಓಡುತ್ತಿದ್ದೇವೆ. ಸಂಸ್ಕೃತ ಎನ್ನುವ ಸತ್ತಿರುವ ಭಾಷೆಗೆ ಒಂದು ವಿವಿ ಕಟ್ಟಿ ಅದಕ್ಕೆ ಸಾವಿರಾರು ಕೋಟಿ ರೂ ಖರ್ಚು ಮಾಡಲು ನಮ್ಮ ಸರ್ಕಾರಗಳು ಮುಂದಾಗುತ್ತಿವೆ. ಅವರಿಗೆ ನಮ್ಮ ಕನ್ನಡ ಸರ್ಕಾರಿ ಶಾಲೆಗಳು ಕಾಣುತ್ತಿಲ್ಲ ಎಂದರು.

ಪುಸ್ತಕದ ಕುರಿತು ಪ್ರಾಧ್ಯಾಪಕರಾದ ಪ್ರೊ. ವಿನುತಾ, ವಿ.ಎಲ್ ನರಸಿಂಹಮೂರ್ತಿ, ಎಸ್‌ಎಫ್‌ಐ ಮುಖಂಡರಾದ ಭೀಮನಗೌಡ ಸಂಕೇಶ್ವರಹಾಳ ಮಾತನಾಡಿದರು. ಕೆ.ಎಸ್ ವಿಮಲರವರು ಪ್ರಾಸ್ತವಿಕವಾಗಿ ಮಾತನಾಡಿದರು. ಪುಸ್ತಕದ ಲೇಖಕರಾದ ಶ್ರೀಪಾದ್ ಭಟ್, ಕೌದಿ ಪ್ರಕಾಶನದ ಮುರಳಿ ಮೋಹನ್ ಕಾಟಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅನ್ನ ಭಾಗ್ಯ, ಒಕ್ಕೂಟ ತತ್ವ ಮತ್ತು ಕರ್ನಾಟಕ ವಿರೋಧಿ ದಳ (ಕವಿದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...