Homeಕರ್ನಾಟಕತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು: ಕಣ್ಕಟ್ಟು ಪುಸ್ತಕದ ಕುರಿತ ಸಂವಾದದಲ್ಲಿ ಎಸ್‌.ಜಿ ಸಿದ್ದರಾಮಯ್ಯ

ತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು: ಕಣ್ಕಟ್ಟು ಪುಸ್ತಕದ ಕುರಿತ ಸಂವಾದದಲ್ಲಿ ಎಸ್‌.ಜಿ ಸಿದ್ದರಾಮಯ್ಯ

ಬಾಲಕಾರ್ಮಿಕ ಪದ್ದತಿ ನಿಷೇಧಿಸಲಾಗಿದೆ. ಆದರೆ 6ನೇ ತರಗತಿಯಿಂದಲೇ ಕೌಶಲ್ಯದ ಹೆಸರಲ್ಲಿ ಕುಲಕಸುಬುಗಳನ್ನು ಹೇರಲಾಗುತ್ತಿದೆ. ಕೌಶಲ್ಯವೆಂಬ ಕಣ್ಕಟ್ಟು, ಜೀತವೆಂಬ ಕ್ರೌರ್ಯವನ್ನು ಮರೆಸುತ್ತಿದೆ.

- Advertisement -
- Advertisement -

ತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು. ತಮಿಳುನಾಡನ್ನು ನಾವು ಮಾದರಿಯಾಗಿ ತೆಗೆದುಕೊಂಡು ಆ ಧೈರ್ಯವನ್ನು ಹೀಗಿನ ಸರ್ಕಾರ ತೋರಬೇಕು. ಇಲ್ಲದಿದ್ದರೆ ತನ್ನ ಪ್ರಣಾಳಿಕೆಗೆ ತಾನೇ ಮಾಡಿಕೊಂಡ ದ್ರೋಹವಾಗುತ್ತದೆ ಎಂದು ಹಿರಿಯ ಚಿಂತಕರಾದ ಎಸ್‌.ಜಿ ಸಿದ್ದರಾಮಯ್ಯನವರು ಅಭಿಪ್ರಾಯಪಟ್ಟರು.

ಹೊಸ ಶಿಕ್ಷಣ ನೀತಿಯ ಕುರಿತು ಬಿ. ಶ್ರಿಪಾದ್ ಭಟ್‌ರವರು ಬರೆದಿರುವ ಕಣ್ಕಟ್ಟು ಪುಸ್ತಕದ ಕುರಿತ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಸರ್ಕಾರ ಯಾವಾಗಲೂ ಆರೋಗ್ಯ ಮತ್ತು ಶಿಕ್ಷಣವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಆಗ ಮಾತ್ರ ಸುಧಾರಣೆ ಸಾಧ್ಯ. ಆದರೆ ಅವು ಖಾಸಗೀಕರಣಗೊಂಡಲ್ಲಿ ಅಸಮಾನತೆ ಹೆಚ್ಚುತ್ತದೆ. ಇಂದಿನ ಶಿಕ್ಷಣ ಮತ್ತು ಆರೋಗ್ಯದ ವ್ಯಾಪರೀಕರಣವು ಸರ್ಕಾರದ ಅಸಮರ್ಥತೆಯನ್ನು ಸೂಚಿಸುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇಂದಿಗೂ ಕೇವಲ ಕೆಲವೇ ಶಿಕ್ಷಕರ ಇಚ್ಛಾಶಕ್ತಿಯಿಂದ ಹಲವು ಶಾಲೆಗಳು ಎಷ್ಟು ಅಭಿವೃದ್ದಿಯಾಗಿವೆ ಎಂಬುದನ್ನು ನೋಡಬಹುದು. ಆದರೆ ಸರ್ಕಾರದ ಸರಿಯಾದ ಮೇಲ್ವಿಚಾರಣೆ ಇಲ್ಲದಿರುವುದು, ರಾಜಕಾರಣಗಳು ಶಿಕ್ಷಣವನ್ನು ದಂಧೆಯಾಗಿಸಿರುವುದು ಇಂದಿನ ಶಿಕ್ಷಣದ ದುಸ್ಥಿತಿಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಎನ್‌ಇಪಿ ಹೆಸರಿನಲ್ಲಿ ನಾಗ್ಪುರ ಎಜುಕೇಷನ್ ಪಾಲಿಸಿ ತಂದು ಶಿಕ್ಷಣವನ್ನು ಮತ್ತಷ್ಟು ಹಿಂದಕ್ಕೆ ಒಯ್ಯುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಕಾಣದ ಕೈಗಳು ಈ ಎನ್‌ಇಪಿಯನ್ನು ರಚಿಸಿದ್ದಾರೆ. ಅದರ ಅನಾಹುತಗಳನ್ನು ಶ್ರೀಪಾದ್‌ ಭಟ್‌ರವರು ಎಳ ಎಳೆಯಾಗಿ ಈ ಕೃತಿಯಲ್ಲಿ ಬಿಚ್ಚಿಟ್ಟಿದ್ದಾರೆ. ನಮ್ಮ ರಾಜಕಾರಣಿಗಳು ಎನ್‌ಇಪಿ ಜಾರಿಗೊಳಿಸುವ ಮೂಲಕ ಅಜ್ಞಾನಿಗಳಾಗಿ, ಅವಿವೇಕಿಗಳಾಗಿ ವರ್ತಿಸುತ್ತಾರೆ. ಶಿಕ್ಷಣ ಯಾವಾಗಲೂ ನೆಲಮೂಲದಿಂದ ಮೇಲಕ್ಕೆ ಬರಬೇಕು. ಆದರೆ ಶಿಕ್ಷಣ ನೀತಿಯನ್ನು ಉನ್ನತ ಶಿಕ್ಷಣದಿಂದ ಅಂದರೆ ಮೇಲಿನಿಂದ ಕೆಳಕ್ಕೆ ಜಾರಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎನ್‌ಇಪಿ ಜಾರಿಯಾದಾಗಿನಿಂದ ಪ್ರವೇಶ, ದಾಖಲಾತಿ ಎಲ್ಲವೂ ಆನ್‌ಲೈನ್‌ ಮಾಡುವ ಮೂಲಕ ಡ್ರಾಪ್‌ಔಟ್‌ಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈಗಾಗಲೇ ದೇಶದಲ್ಲಿ 65 ಲಕ್ಷ ಮಕ್ಕಳು ಡ್ರಾಪ್‌ಔಟ್ ಆಗಿದ್ದಾರೆ ಎಂದು ಹೈಕೋರ್ಟ್ ಹೇಳುತ್ತಿದೆ. ಈ ಎನ್‌ಇಪಿ ವಿದ್ಯಾರ್ಥಿಗಳಿಗೆ ಆಮಿಷ ತೋರಿಸಿ ವಂಚಿಸುವಂತಿದೆ. ಏಕೆಂದರೆ ಸರ್ಕಾರಕ್ಕೆ ಅಗ್ಗಕ್ಕೆ ದುಡಿಯುವ ಅಗ್ನಿವೀರರು ಬೇಕಿದೆ, ಕಾಲಾಳುಗಳಾಗಿ ಬೀದಿಯಲ್ಲಿ ಮಚ್ಚಿಡಿದು ಹೊಡೆದಾಡುವವರು ಬೇಕಾಗಿದೆ. ಇದನ್ನು ಸೂಕ್ಷ್ಮವಾಗಿ ಗ್ರಹಿಸಬೇಕು. ಇಲ್ಲದಿದ್ದರೆ ನಮ್ಮ ದೇಶ ಉಳಿಯುವುದಿಲ್ಲ ಎಂದರು.

ನಮ್ಮದು ಬಹುಸಂಸ್ಕೃತಿಗಳ ರಾಷ್ಟ್ರ. ಯಾವುದೇ ಸಮುದಾಯ ಬರೀ ರಾಜಕೀಯ ಸ್ವಾತಂತ್ರ್ಯ ಪಡೆದರೆ ಸಾಲದು, ಸಾಂಸ್ಕೃತಿಕ ಸ್ವಾತಂತ್ರ್ಯವೂ ಮುಖ್ಯ. ಇಲ್ಲದಿದ್ದರೆ ಅದು ವಿನಾಶವಾಗುತ್ತದೆ ಎಂದು ಆಫ್ರಿಕಾದ ಶಿಕ್ಷಣ ತಜ್ಞ ಗೂಗಿ ವಾ ಥಿಯೊಂಗೊ ಹೇಳಿದ್ದಾರೆ. ಅದೇ ರೀತಿಯಲ್ಲಿ ಆಫ್ರಿಕಾದ ಸಮುದಾಯಗಳು ನಾಶವಾಗುತ್ತಿದ್ದು, ನಮ್ಮ ದೇಶವೂ ಅದೇ ದಾರಿಯಲ್ಲಿದೆ ಎಂದು ಎಸ್‌.ಜಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

2500 ವರ್ಷಗಳ ಸಾಂಸ್ಕೃತಿಕ ದಾಷ್ಯದಿಂದ ನಮ್ಮ ಸಮುದಾಯಗಳು ಇನ್ನೂ ಬಿಡುಗಡೆಗೊಂಡಿಲ್ಲ. ಆ ಹಾದಿಯಲ್ಲಿದ್ದಾಗಲೆ ಈ ಎನ್‌ಇಪಿ ಬಂದಿದ್ದು, ಮತ್ತೆ ಚಾತುರ್ವಣ್ಯಕ್ಕೆ ದೂಡುವ ಯತ್ನ ನಡೆಯುತ್ತಿದೆ. ಅಸಮಾನತೆಯನ್ನು ನೆಲೆಗೊಳಿಸಿ ಶಿಕ್ಷಣ ವಂಚಿಸಲಾಗುತ್ತಿದೆ. ಒಂದು ಕಡೆ ಬಾಲಕಾರ್ಮಿಕ ನಿಷೇಧಿಸುವ ಕಾನೂನಿದೆ. ಇನ್ನೊಂದೆಡೆ ಆರನೇ ತರಗತಿಯಿಂದಲೇ ಕೌಶಲ್ಯ ಕಲಿಸುವ ಹೆಸರಿನಲ್ಲಿ ಕುಲಕಸುಬುಗಳನ್ನು ಮಾಡಲು ಮಕ್ಕಳನ್ನು ಪ್ರೇರಿಪಿಸಲಾಗುತ್ತಿದೆ. ಕೌಶಲ್ಯ ಎನ್ನುವ ಕಣ್ಕಟ್ಟು, ಜೀತ ಎನ್ನುವ ಕ್ರೌರ್ಯವನ್ನು ಮರೆಸುತ್ತಿದೆ ಎಂದರು.

ಈ ಅಪಾಯಗಳ ಬಗ್ಗೆ ಯಾರೂ ಎಚ್ಚೆತ್ತುಕೊಳ್ಳಬೇಕಿತ್ತೊ ಅವರೆ ಅವುಗಳನ್ನು ಹೊತ್ತು ಮೆರೆಸುವ ಹಾಗೆ ಮಾಡಲಾಗುತ್ತಿದೆ. ನಮ್ಮ ಶಿಕ್ಷಣ ಸಚಿವರುಗಳು ಮೊದಲ ಎನ್‌ಇಪಿ ಕುರಿತಂತೆ ತಿಳುವಳಿಕೆ ಪಡೆಯಬೇಕಾದರೆ ಈ ಪುಸ್ತಕ ಓದಬೇಕಾಗಿದೆ. ಮೊದಲು ಎನ್‌ಇಪಿ ಕಿತ್ತೊಗೆಯಿರಿ. ಈ ದೇಶಕ್ಕೆ ಅದರ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೊಷಿಸಿದ್ದನ್ನು ಈಡೇರಿಸಬೇಕು. ಇದೇ ವರ್ಷವೇ ಕಿತ್ತೋಗೆಯಬೇಕು ಎಂದು ಅವರು ಆಗ್ರಹಿಸಿದರು.

ಎಲ್ಲರನ್ನೂ ಒಳಗೊಳ್ಳುವ ಹಾಗೆ ಕೊಠಾರಿ ಶಿಕ್ಷಣ ನೀತಿಯನ್ನು ರೂಪಿಸಲಾಗಿತ್ತು. ಮೀಸಲಾತಿಯನ್ನು ಅದಕ್ಕಾಗಿಯೇ ಜಾರಿಗೊಳಿಸಲಾಗಿದೆ. ಆದರೆ ಮೀಸಲಾತಿಯ ಕುರಿತು ಈ ಎನ್‌ಇಪಿಯಲ್ಲಿ ಪ್ರಸ್ತಾಪವೇ ಇಲ್ಲ. ಆದರೆ ಮೆರಿಟ್ ಆಧಾರಿತ ಸ್ಕಾಲರ್‌ಶಿಪ್‌ ಬಗ್ಗೆ ಮಾತ್ರ ಇದು ಮಾತಾಡುತ್ತದೆ. ಇಡಬ್ಲೂಎಸ್‌ ಬಂದಂತೆ ಎನ್‌ಇಪಿ ಕೂಡ ಕಣ್ಕಟ್ಟಿನೊಂದಿಗೆ ಜಾರಿಗೊಳಿಸುವ ಹುನ್ನಾರ ನಡೆಯುತ್ತಿದೆ. ಮಾನವೀಕರಣಗೊಂಡ ಸಮಾಜ, ಸಾಮಾಜಿಕ ನ್ಯಾಯದ ಸಮಾಜ ಬೇಕಾದರೆ ವರ್ಣನೀತಿಯನ್ನು, ಸನಾತನಾ ಮೌಲ್ಯಗಳನ್ನು ಪೋಷಿಸುವ ಎನ್‌ಇಪಿಯನ್ನು ರದ್ದುಗೊಳಿಸಬೇಕು ಎಂದರು.

ಮತೀಯವಾದವನ್ನು ಹೇರಲಾಗುತ್ತಿದೆ: ಡಾ.ಎಚ್.ಡಿ ಉಮಾಶಂಕರ್ ಆತಂಕ

ಎನ್‌ಇಪಿ ಜಾರಿಯಾದ ನಂತರದ ರಾಜ್ಯಶಾಸ್ತ್ರ ಪಠ್ಯಕ್ರಮದಲ್ಲಿ ರಾಮಾಯಣದಲ್ಲಿ ರಾಮರಾಜ್ಯದ ಪರಿಕಲ್ಪನೆ, ಆಧ್ಯಾತ್ಮಿಕ ಚಿಂತನೆಗಳು, ವರ್ಣಧರ್ಮ ಎಂದರೇನು? ಧರ್ಮ ಎಂದರೇನು? ಎಂಬಂತಹ ಪಾಠಗಳನ್ನು ಸೇರಿಸಲಾಗಿದೆ. ಭಾರತ ಮತ್ತು ಸಂವಿಧಾನ ಪಾಠದಲ್ಲಿ ಭಾರತೀಯ ಜ್ಞಾನಪರಂಪರೆ, ಗುರುಕುಲ ಪದ್ಧತಿಯ ಬಗ್ಗೆ ಚರ್ಚಿಸಲಾಗಿದೆ. ಆ ಮೂಲಕ ವಿದ್ಯಾರ್ಥಿಗಳ ಮೇಲೆ ಮತೀಯವಾದವನ್ನು ಹೇರಲಾಗುತ್ತಿದೆ ಎಂದು ಪ್ರಾಧ್ಯಾಪಕರಾದ ಡಾ.ಎಚ್.ಡಿ ಉಮಾಶಂಕರ್ ಆತಂಕ ವ್ಯಕ್ತಪಡಿಸಿದರು.

ಎನ್‌ಇಪಿಯನ್ನು ಜಾರಿಗೊಳಿಸಿದಾಗ ನಾವು ವಿಷಯ ಆಯ್ಕೆಗೆ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯವಿದೆ, ಕಲಿಕಾ ಸಮಯವನ್ನು ಕಡಿತಗೊಳಿಸಲಾಗಿದೆ, ಕೌಶಲ್ಯಭಿವೃದ್ದಿ ಕಡೆ ತೆಗೆದುಕೊಂಡು ಹೋಗಲು ಸಾಧ್ಯವಾಗಬಹುದು, ನಿರಂತರ ಮೌಲ್ಯಮೌಪನ ಸಾಧ್ಯ ಎಂದು ನಂಬಿದ್ದೆವು. ಆದರೆ ಎರಡು ವರ್ಷದ ನಂತರ ಅದೆಲ್ಲವೂ ಸುಳ್ಳಾಗಿದ್ದು ವಿದ್ಯಾರ್ಥಿಗಳ ಡ್ರಾಪ್‌ಔಟ್ ಮಾತ್ರ ಹೆಚ್ಚುತ್ತಿದೆ ಎಂದರು.

ಪಿಯುಸಿ ಮುಗಿಸಿ ಬಂದ ವಿದ್ಯಾರ್ಥಿಗಳಿಗೆ ಯಾವುದೇ ತಯಾರಿ ಇರುವುದಿಲ್ಲ. ಆನ್‌ಲೈನ್‌ ಮೂಲಕ ಅಡ್ಮಿಷನ್, ಪರೀಕ್ಷೆ ಶುಲ್ಕ ಎಲ್ಲವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಾಗಿದೆ. ಬಹಳ ವಿದ್ಯಾರ್ಥಿಗಳ ಬಳಿ ಮೊಬೈಲ್, ಡೇಟಾ ಇರುವುದಿಲ್ಲ. ಇದೆಲ್ಲ ದೊಡ್ಡ ತೊಡಕಾಗಿದೆ. ಫೀಸ್ ಕಟ್ಟಲು ಬಾರದ ಕೆಲ ವಿದ್ಯಾರ್ಥಿಗಳು ಪರೀಕ್ಷೆಯನ್ನೇ ಬರೆದಿಲ್ಲ. ವಿಷಯಗಳ ಆಯ್ಕೆಯಲ್ಲಿ ಗೊಂದಲಗಳು ಮುಂದುವರಿದಿವೆ ಎಂದರು.

ಇದು ನಾಗ್ಪುರ ಎಜುಕೇಶನ್ ಪಾಲಿಸಿ: ಡಾ. ರವಿಕುಮಾರ್ ಬಾಗಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದಕ್ಷಿಣ ಭಾರತವನ್ನು, ಕರ್ನಾಟಕವನ್ನು ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದೆ. ಹಾಗಾಗಿ ಇಲ್ಲಿ ಮಾತ್ರವೇ ಮೊದಲು ಎನ್‌ಇಪಿ ಜಾರಿಗೊಳಿಸಿದ್ದಾರೆ. ಇದಕ್ಕೆ ನಮ್ಮ ರಾಜಕೀಯ ನಾಯಕರು ಸಹ ಅದನ್ನು ಹೊತ್ತು ಮೆರೆಸಿ ಅವಸರವರಸವಾಗಿ ಆರಂಭಿಸಿದರು. ಆದರೆ ಅದು ಹೊಸ ಶಿಕ್ಷಣ ನೀತಿಯ ಬದಲಿಗೆ ನಾಗ್ಪುರ ಎಜುಕೇಶನ್ ಪಾಲಿಸಿ ಎಂಬುದು ಸಾಬೀತಾಗಿದೆ ಎಂದು ಪ್ರಾಧ್ಯಾಪಕರಾದ ಡಾ. ರವಿಕುಮಾರ್ ಬಾಗಿ ಅಭಿಪ್ರಾಯಪಟ್ಟರು.

ಒಂದು ದೇಶದ ಸಾಮಾಜಿಕ ವ್ಯವಸ್ಥೆಯನ್ನು ದುರ್ಬಲಗೊಳಿಸಬೇಕೆಂದರೆ ಆ ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶಗೊಳಿಸಿದರೆ ಸಾಕು. ಆ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಸಂವಿಧಾನ ಎಲ್ಲರಿಗೂ ಸಮಾನವಾದ ಶಿಕ್ಷಣವನ್ನು ಕೊಡಬೇಕು ಎಂದು ಬಯಸುತ್ತದೆ. ಆದರೆ ಎನ್‌ಇಪಿ ಅದಕ್ಕೆ ವ್ಯತಿರಿಕ್ತವಾಗಿದೆ. ಮತೀಯತೆಯನ್ನು, ಕೆಲವೇ ವರ್ಗದ ಹಿತಾಸಕ್ತಿಯನ್ನು, ಸನಾತನ ಸಂಸ್ಕೃತಿಯ ಮೌಲ್ಯಗಳನ್ನು ಬಿತ್ತುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಲೆ ಎಂಬ ವ್ಯವಸ್ಥೆಯೆ ಇನ್ನೂ ಸಾಮಾಜೀಕರಣಗೊಂಡಿಲ್ಲ. ವೈಚಾರಿಕೆತೆ, ವೈಜ್ಞಾನಿಕತೆ ಎಂಬುದಕ್ಕೆ ಇಲ್ಲಿ ಅವಕಾಶವೇ ಇಲ್ಲ. ಪಶ್ಚಿಮದ ರಾಷ್ಟ್ರಗಳು ಮುಂದಕ್ಕೆ ಚಲಿಸಿದರೆ, ನಾವು ಹಿಂದಕ್ಕೆ ಓಡುತ್ತಿದ್ದೇವೆ. ಸಂಸ್ಕೃತ ಎನ್ನುವ ಸತ್ತಿರುವ ಭಾಷೆಗೆ ಒಂದು ವಿವಿ ಕಟ್ಟಿ ಅದಕ್ಕೆ ಸಾವಿರಾರು ಕೋಟಿ ರೂ ಖರ್ಚು ಮಾಡಲು ನಮ್ಮ ಸರ್ಕಾರಗಳು ಮುಂದಾಗುತ್ತಿವೆ. ಅವರಿಗೆ ನಮ್ಮ ಕನ್ನಡ ಸರ್ಕಾರಿ ಶಾಲೆಗಳು ಕಾಣುತ್ತಿಲ್ಲ ಎಂದರು.

ಪುಸ್ತಕದ ಕುರಿತು ಪ್ರಾಧ್ಯಾಪಕರಾದ ಪ್ರೊ. ವಿನುತಾ, ವಿ.ಎಲ್ ನರಸಿಂಹಮೂರ್ತಿ, ಎಸ್‌ಎಫ್‌ಐ ಮುಖಂಡರಾದ ಭೀಮನಗೌಡ ಸಂಕೇಶ್ವರಹಾಳ ಮಾತನಾಡಿದರು. ಕೆ.ಎಸ್ ವಿಮಲರವರು ಪ್ರಾಸ್ತವಿಕವಾಗಿ ಮಾತನಾಡಿದರು. ಪುಸ್ತಕದ ಲೇಖಕರಾದ ಶ್ರೀಪಾದ್ ಭಟ್, ಕೌದಿ ಪ್ರಕಾಶನದ ಮುರಳಿ ಮೋಹನ್ ಕಾಟಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅನ್ನ ಭಾಗ್ಯ, ಒಕ್ಕೂಟ ತತ್ವ ಮತ್ತು ಕರ್ನಾಟಕ ವಿರೋಧಿ ದಳ (ಕವಿದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...