Homeಕರೋನಾ ತಲ್ಲಣಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24x7 ಸಭೆ ನಡೆಸುತ್ತಾರೆ: ಕೇಂದ್ರ ಆರೋಗ್ಯ...

ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ ಆರೋಗ್ಯ ಸಚಿವ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು “ಕೊರೊನಾ ವಾರಿಯರ್”‌ ಇದ್ದಂತೆ, ಅವರು 24×7 ಗಂಟೆಯು ಕೊರೊನಾ ವಿರುದ್ದ ಹೋರಾಟ ಮಾಡಲು ಸಭೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷ್ ವರ್ಧನ್ ಅವರು ಮಂಗಳವಾರ ಹೇಳಿದ್ದಾರೆ.

ಭಾರತದ ಎಲ್ಲಾ ಏಮ್ಸ್ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, “ನಾವು ಕಳೆದ ನಾಲ್ಕೈದು ದಿನಗಳಿಂದ ಹಲವಾರು ಆರೋಗ್ಯ ಸೌಲಭ್ಯ ಸಿಗುವಂತೆ ಮಾಡಿದ್ದೇವೆ. ಇದು ಸದ್ಯದ ಪರಿಸ್ಥಿತಿಗೆ ಬೇಕಾಗುಷ್ಟಿದೆ ಆದರೆ ಇದು ಸಾಕಾಗುವುದಿಲ್ಲ, ನಾವು ಇನ್ನೂ ವೇಗವಾಗಿ ಸಾಗಬೇಕಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು

“ಪ್ರಧಾನಿ ಮೋದಿಯವರು ‘ಕೊರೊನಾ ವಾರಿಯರ್‌’ ಇದ್ದಂತೆ. ಅವರು ಕೊರೊನಾ ವಿರುದ್ದ ಹೋರಾಡಲು 24×7 ಗಂಟೆಯು ಸಭೆ ನಡೆಸುತ್ತಿದ್ದಾರೆ. ನಿನ್ನೆ ಕೂಡಾ ಅವರು ವೈದ್ಯಕೀಯ ವೃತ್ತಿಪರರೊಂದಿಗೆ ಸಭೆ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

ಆದರೆ ಪ್ರಧಾನಿ ಮೋದಿಯು ದೇಶದಲ್ಲಿ ಕೊರೊನಾ ಉಲ್ಬಣದ ನಡುವೆಯು, ಪಶ್ಚಿಮ ಬಂಗಾಳದ ವಿಧಾನಸಭೆಯ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಬೃಹತ್‌ ಸಭೆಗಳಲ್ಲಿ ಮಾತನಾಡಿದ್ದರು.

ಕಳೆದ ಶನಿವಾರದಂದು ಬಂಗಾಳದ ಅಸನ್ಸೋಲ್‌ನ ರ‍್ಯಾಲಿಯಲ್ಲಿ ನೆರೆದ ಭಾರಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ, “ಲೋಕಸಭಾ ಚುನಾವಣೆಯ ಸಮಯದಲ್ಲಿ ನಾನು ಎರಡು ಬಾರಿ ಇಲ್ಲಿಗೆ ಬಂದಿದ್ದೇನೆ. ಆದರೆ ಮೊದಲ ಬಾರಿಗೆ ಇಂತಹ ರ‍್ಯಾಲಿಗೆ ಸಾಕ್ಷಿಯಾಗಿದ್ದೇನೆ. ಇಂದು, ನೀವು ನಿಮ್ಮ ಶಕ್ತಿಯನ್ನು ತೋರಿಸಿದ್ದೀರಿ” ಎಂದು ಉದ್ಘರಿಸಿದ್ದರು.

ಕಾಂಗ್ರೆಸ್ ಸೇರಿದಂತೆ ಹಲವರು ಇದನ್ನು ವ್ಯಾಪಕವಾಗಿ ಟೀಕಿಸಿದ್ದರು. ಕಾಂಗ್ರೆಸ್ ಪಕ್ಷವು ಪ್ರಧಾನಿಯವರನ್ನು ರೋಮ್ ದೊರೆ ನೀರೊಗೆ ಹೋಲಿಕೆ ಮಾಡಿತ್ತು.

ಇದನ್ನೂ ಓದಿ: ಯುಪಿ ಮುಖ್ಯಮಂತ್ರಿಯನ್ನು ‘ತಗಡು ಯೋಗಿ’ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...