Homeಮುಖಪುಟಲಿಖಿಂಪುರ್‌: ಪತ್ರಕರ್ತ ಮತ್ತು ರೈತರ ಕುಟುಂಬಗಳಿಗೆ 50 ಲಕ್ಷ ರೂ ನೀಡುವುದಾಗಿ ಘೋಷಿಸಿದ ಛತ್ತೀಸ್‌ಗಡ, ಪಂಜಾಬ್...

ಲಿಖಿಂಪುರ್‌: ಪತ್ರಕರ್ತ ಮತ್ತು ರೈತರ ಕುಟುಂಬಗಳಿಗೆ 50 ಲಕ್ಷ ರೂ ನೀಡುವುದಾಗಿ ಘೋಷಿಸಿದ ಛತ್ತೀಸ್‌ಗಡ, ಪಂಜಾಬ್ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದ ಲಿಖಿಂಪುರ್‌ ಖೇರಿಯ ಹತ್ಯಾಕಾಂಡದಲ್ಲಿ ಮೃತಪಟ್ಟ ನಾಲ್ವರು ರೈತರು ಹಾಗೂ ಪತ್ರಕರ್ತನ ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿಗಳ ಆರ್ಥಿಕ ನೆರವನ್ನು ನೀಡುವುದಾಗಿ ಛತ್ತೀಸ್‌ಗಡ ಮತ್ತು ಪಂಜಾಬ್ ಸರ್ಕಾರಗಳು ಬುಧವಾರ ಘೋಷಿಸಿವೆ.

ಕಾಂಗ್ರೆಸ್ ಆಡಳಿತವಿರುವ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಈಗಾಗಲೆ, ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಲಕ್ನೋಗೆ ಆಗಮಿಸಿದ್ದಾರೆ. ಅಲ್ಲಿಂದ ಅವರು ಲಿಖಿಂಪುರ್‌ ಖೇರಿಗೆ ಹೋಗಿ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ತೆರಳಲಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರು ಲಿಖಿಂಪುರ್‌ ಹತ್ಯಾಕಾಂಡವನ್ನು 1919 ರಲ್ಲಿ ಬ್ರಿಟೀಷರಿಂದ ನಡೆದ ಜಲಿಯನ್‌ ವಲಾಬಾಗ್ ಹತ್ಯಾಕಾಂಡಕ್ಕೆ ಹೋಲಿಸಿದ್ದು, ಯುಪಿ ಸರ್ಕಾರವು ಪ್ರಜಾಪ್ರಭುತ್ವವನ್ನು ಅಣಕಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಿಖಿಂಪುರ್‌ ಘಟನಾ ಸ್ಥಳದಲ್ಲಿ ರೈತರ ನಡುವೆ ಉಗ್ರರಿದ್ದರು: ಅಜಯ್ ಮಿಶ್ರಾ

“ಲಿಖಿಂಪುರ್‌ ಹಿಂಸಾಚಾರದಲ್ಲಿ ಮೃತಪಟ್ಟ ರೈತರು ಮತ್ತು ಪತ್ರಕರ್ತನ ಕುಟುಂಬಗಳಿಗೆ ನಮ್ಮ ಸರ್ಕಾರ ತಲಾ 50 ಲಕ್ಷವನ್ನು ನೀಡುತ್ತದೆ” ಎಂದು ಅವರು ಘೋಷಿಸಿದ್ದಾರೆ.

ಚನ್ನಿ ಅವರದೇ ಮಾತುಗಳನ್ನು ಪ್ರತಿಧ್ವನಿಸಿದ ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತಮ್ಮ ಸರ್ಕಾರ ಕೂಡಾ ರೈತರ ಕುಟುಂಬಗಳಿಗೆ ಮತ್ತು ಪತ್ರಕರ್ತನಿಗೆ 50 ಲಕ್ಷ ರೂಪಾಯಿಗಳನ್ನು ನೀಡಲಿದೆ ಎಂದು ಹೇಳಿದ್ದಾರೆ.

ಲಖಿಂಪುರ್‌‌ ಖೇರಿಯಲ್ಲಿ ಭಾನುವಾರದಂದು ಕಾರ್ಯಕ್ರಮವೊಂದಕ್ಕೆ ಅಜಯ್ ಮಿಶ್ರಾ ಆಗಮಿಸಿದ್ದಾಗ, ರೈತರು ಅವರ ವಿರುದ್ದ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ಮುಗಿಸಿ ವಾಪಾಸು ಹೋಗುತ್ತಿದ್ದ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಲಾಗಿತ್ತು. ಘಟನೆಯ ವಿಡಿಯೊ ಕೂಡಾ ವೈರಲ್ ಆಗಿದೆ. ಘಟನೆಯಲ್ಲಿ ನಾಲ್ಕು ರೈತರು ಸೇರಿದಂತೆ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ.

ಘಟನೆಯ ಕುರಿತು ಆಶಿಶ್ ಮಿಶ್ರಾ ವಿರುದ್ಧ ಯುಪಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ, ಆದರೆ ಇದುವರೆಗೂ ಬಂಧಿಸಿಲ್ಲ. ಘಟನಾ ಸ್ಥಳದಲ್ಲಿದ್ದ ವಾಹನ ತನಗೆ ಸೇರಿದ್ದು ಎಂದು ಸಚಿವರು ಒಪ್ಪಿಕೊಂಡಿದ್ದರೂ, ಅವರು ಹಾಗೂ ಅವರ ಮಗ ಆಶೀಶ್ ಮಿಶ್ರಾ ಸ್ಥಳದಲ್ಲಿ ಇರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...