Homeಮುಖಪುಟಲಿಖಿಂಪುರ್‌: ಪತ್ರಕರ್ತ ಮತ್ತು ರೈತರ ಕುಟುಂಬಗಳಿಗೆ 50 ಲಕ್ಷ ರೂ ನೀಡುವುದಾಗಿ ಘೋಷಿಸಿದ ಛತ್ತೀಸ್‌ಗಡ, ಪಂಜಾಬ್...

ಲಿಖಿಂಪುರ್‌: ಪತ್ರಕರ್ತ ಮತ್ತು ರೈತರ ಕುಟುಂಬಗಳಿಗೆ 50 ಲಕ್ಷ ರೂ ನೀಡುವುದಾಗಿ ಘೋಷಿಸಿದ ಛತ್ತೀಸ್‌ಗಡ, ಪಂಜಾಬ್ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದ ಲಿಖಿಂಪುರ್‌ ಖೇರಿಯ ಹತ್ಯಾಕಾಂಡದಲ್ಲಿ ಮೃತಪಟ್ಟ ನಾಲ್ವರು ರೈತರು ಹಾಗೂ ಪತ್ರಕರ್ತನ ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿಗಳ ಆರ್ಥಿಕ ನೆರವನ್ನು ನೀಡುವುದಾಗಿ ಛತ್ತೀಸ್‌ಗಡ ಮತ್ತು ಪಂಜಾಬ್ ಸರ್ಕಾರಗಳು ಬುಧವಾರ ಘೋಷಿಸಿವೆ.

ಕಾಂಗ್ರೆಸ್ ಆಡಳಿತವಿರುವ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಈಗಾಗಲೆ, ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಲಕ್ನೋಗೆ ಆಗಮಿಸಿದ್ದಾರೆ. ಅಲ್ಲಿಂದ ಅವರು ಲಿಖಿಂಪುರ್‌ ಖೇರಿಗೆ ಹೋಗಿ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ತೆರಳಲಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರು ಲಿಖಿಂಪುರ್‌ ಹತ್ಯಾಕಾಂಡವನ್ನು 1919 ರಲ್ಲಿ ಬ್ರಿಟೀಷರಿಂದ ನಡೆದ ಜಲಿಯನ್‌ ವಲಾಬಾಗ್ ಹತ್ಯಾಕಾಂಡಕ್ಕೆ ಹೋಲಿಸಿದ್ದು, ಯುಪಿ ಸರ್ಕಾರವು ಪ್ರಜಾಪ್ರಭುತ್ವವನ್ನು ಅಣಕಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಿಖಿಂಪುರ್‌ ಘಟನಾ ಸ್ಥಳದಲ್ಲಿ ರೈತರ ನಡುವೆ ಉಗ್ರರಿದ್ದರು: ಅಜಯ್ ಮಿಶ್ರಾ

“ಲಿಖಿಂಪುರ್‌ ಹಿಂಸಾಚಾರದಲ್ಲಿ ಮೃತಪಟ್ಟ ರೈತರು ಮತ್ತು ಪತ್ರಕರ್ತನ ಕುಟುಂಬಗಳಿಗೆ ನಮ್ಮ ಸರ್ಕಾರ ತಲಾ 50 ಲಕ್ಷವನ್ನು ನೀಡುತ್ತದೆ” ಎಂದು ಅವರು ಘೋಷಿಸಿದ್ದಾರೆ.

ಚನ್ನಿ ಅವರದೇ ಮಾತುಗಳನ್ನು ಪ್ರತಿಧ್ವನಿಸಿದ ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತಮ್ಮ ಸರ್ಕಾರ ಕೂಡಾ ರೈತರ ಕುಟುಂಬಗಳಿಗೆ ಮತ್ತು ಪತ್ರಕರ್ತನಿಗೆ 50 ಲಕ್ಷ ರೂಪಾಯಿಗಳನ್ನು ನೀಡಲಿದೆ ಎಂದು ಹೇಳಿದ್ದಾರೆ.

ಲಖಿಂಪುರ್‌‌ ಖೇರಿಯಲ್ಲಿ ಭಾನುವಾರದಂದು ಕಾರ್ಯಕ್ರಮವೊಂದಕ್ಕೆ ಅಜಯ್ ಮಿಶ್ರಾ ಆಗಮಿಸಿದ್ದಾಗ, ರೈತರು ಅವರ ವಿರುದ್ದ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ಮುಗಿಸಿ ವಾಪಾಸು ಹೋಗುತ್ತಿದ್ದ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಲಾಗಿತ್ತು. ಘಟನೆಯ ವಿಡಿಯೊ ಕೂಡಾ ವೈರಲ್ ಆಗಿದೆ. ಘಟನೆಯಲ್ಲಿ ನಾಲ್ಕು ರೈತರು ಸೇರಿದಂತೆ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ.

ಘಟನೆಯ ಕುರಿತು ಆಶಿಶ್ ಮಿಶ್ರಾ ವಿರುದ್ಧ ಯುಪಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ, ಆದರೆ ಇದುವರೆಗೂ ಬಂಧಿಸಿಲ್ಲ. ಘಟನಾ ಸ್ಥಳದಲ್ಲಿದ್ದ ವಾಹನ ತನಗೆ ಸೇರಿದ್ದು ಎಂದು ಸಚಿವರು ಒಪ್ಪಿಕೊಂಡಿದ್ದರೂ, ಅವರು ಹಾಗೂ ಅವರ ಮಗ ಆಶೀಶ್ ಮಿಶ್ರಾ ಸ್ಥಳದಲ್ಲಿ ಇರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...