Homeಕರ್ನಾಟಕಶರಾವತಿ ಕಣಿವೆಯ ಕೂಗು

ಶರಾವತಿ ಕಣಿವೆಯ ಕೂಗು

ಏನದು ಯೋಜನೆ? ಯಾಕೆ ಈ ಮಟ್ಟದ ವಿರೋಧ

- Advertisement -
- Advertisement -

ಕಳೆದ ಒಂದು ವಾರದಿಂದ ಶರಾವತಿ ಕಣಿವೆ ಕದಲುತ್ತಿದೆ. ಉಪಮುಖ್ಯಮಂತ್ರಿ ಡಾಜಿ.ಪರಮೇಶ್ವರ್ ಅವರು ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ನಿಭಾಯಿಸಲು ಶರಾವತಿ ನದಿಯ ನೀರನ್ನು ತರುವ 12,500 ಕೋಟಿ ರೂಪಾಯಿ ವೆಚ್ಚದ ಯೋಜನೆಯೊಂದಕ್ಕೆ ಡಿಪಿಆರ್ ತಯಾರಿಸಲು ಆದೇಶ ನೀಡಲಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದೇ ತಡ ಶರಾವತಿಯ ಎಡ ಬಲಗಳ ಊರುಗಳ ಜನರೆಲ್ಲ ಕೆಂಡಾಮಂಡಲವಾಗಿದ್ದಾರೆ. ಅವರು ಹಾಗೆ ಹೇಳಿದ ಎರಡೇ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಜನಾಂದೋಲನವೊಂದು ಶುರುವಾಗಿ ಈಗ ಜಿಲ್ಲೆಯ ಪ್ರತಿ ತಾಲ್ಲೂಕು ಪ್ರತಿ ಹೋಬಳಿ ಹಾಗೂ ಪ್ರತಿ ಊರಿನಲ್ಲೂ ಪ್ರತಿಧ್ವನಿಸತೊಡಗಿದೆ. ಚಳವಳಿಗಳ ತವರೂರೆಂದೇ ಹೆಸರಾಗಿರುವ ಶಿವಮೊಗ್ಗ ಜಿಲ್ಲೆ ಹಲವಾರು ವರ್ಷಗಳ ನಂತರ ಬೃಹತ್ ಮಟ್ಟದ ಹೋರಾಟವೊಂದಕ್ಕೆ ಸಾಕ್ಷಿಯಾಗಿದ್ದು ಜುಲೈ 10ನೇ ತಾರೀಖಿನಂದು ಕರೆನೀಡಿರುವ ಶಿವಮೊಗ್ಗ ಜಿಲ್ಲೆ ಬಂದ್ ಬಹುತೇಕ ಯಶಸ್ವಿಗೊಳ್ಳುವುದು ಖಚಿತವಾಗಿದೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್- ಜೆಡಿಎಸ್ ಸರ್ಕಾರ ಭಾರೀ ಮುಖಭಂಗಕ್ಕೊಳಗಾಗಲಿರುವುದೂ ನಿಜ. ಮಾತ್ರವಲ್ಲ ಈ ವಿಷಯ ವಿರೋಧ ಪಕ್ಷವಾಗಿರುವ ಬಿಜೆಪಿಗೂ ಮಲೆನಾಡಿನಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಅಭಿಪ್ರಾಯ ರೂಪಿಸಲು ಹೇಳಿ ಮಾಡಿಸಿದಂತಿದೆ. ಈಗಾಗಲೇ ಈ ಭಾಗದ ಹಲವು ಕಾಂಗ್ರೆಸ್-ಜೆಡಿಎಸ್ ನಾಯಕರು, ಕಾರ್ಯಕರ್ತರು ಸರ್ಕಾರವನ್ನು ಸಮರ್ಥಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.


ಏನದು ಯೋಜನೆ?
ಯಾಕೆ ಈ ಮಟ್ಟದ ವಿರೋಧ
2031ನೇ ಇಸವಿಗೆ ಬೆಂಗಳೂರು ಎದುರಿಸುವ ಕುಡಿಯುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು 2010ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿವೃತ್ತ ಚೀಫ್ ಎಂಜಿನಿಯರ್ ತ್ಯಾಗರಾಜ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಅದು 2014ರಲ್ಲಿ ವರದಿ ಸಲ್ಲಿಸಿ ಇರುವ ಎಲ್ಲಾ ಮಾರ್ಗಗಳ ಪೈಕಿ ಶರಾವತಿ ನದಿಯಿಂದ ನೀರು ತರುವುದೇ ಉತ್ತಮ ಮಾರ್ಗ ಎಂದು ಶಿಫಾರಸು ನೀಡಿತ್ತು. ಆದರೆ 2014ಲ್ಲೇ ಈ ವರದಿ ಪ್ರಾಯೋಗಿಕವಲ್ಲ ಎಂಬ ಅಭಿಪ್ರಾಯಗಳು ತಜ್ಞ ವಲಯದಿಂದ ಬಂದಿದ್ದವು. ಇದರ ನಂತರ 2016ರಲ್ಲಿ ಕೇಂದ್ರ ಜಲ ಆಯೋಗದ ಮಾಜಿ ಅಧ್ಯಕ್ಷ ಎ.ಕೆ. ಬಜಾಜ್ ನೇತೃತ್ವದ ಸಮಿತಿಯೊಂದನ್ನು ನೇಮಿಸಲಾಗಿತ್ತು.

ಆದರೆ ಹಾಲಿ ಸರ್ಕಾರ 2014ರ ತ್ಯಾಗರಾಜ್ ಸಮಿತಿ ವರದಿಯನ್ನೇ ಹಠ ಹಿಡಿದು ಜಾರಿಗೊಳಿಸಲು ಹೊರಟಿರುವುದು ತೀವ್ರ ಟೀಕೆಗೆ, ಜನವಿರೋಧಕ್ಕೆ ಕಾರಣವಾಗುವುದು ಮಾತ್ರವಲ್ಲ ಅನುಮಾನಗಳಿಗೂ ಕಾರಣವಾಗಿದೆ. 12 ಸಾವಿರ ಕೋಟಿ ರೂಪಾಯಿಗಳ ಯೋಜನೆಯನ್ನು ಡಿಸಿಎಂ ಘೋಷಿಸುವುದರ ಹಿಂದೆ ಬೆಂಗಳೂರಿಗೆ ನೀರು ತರುವುದಕ್ಕಿಂತಲೂ ಹೆಚ್ಚಾಗಿ ತಮ್ಮ ತಿಜೋರಿ ಭರ್ತಿ ಮಾಡಿಕೊಳ್ಳುವ ಉದ್ದೇಶವೇ ಇರಬಹುದೆ ಎಂದು ಗುಮಾನಿ ಎದ್ದಿದೆ. ಈಗಗಲೇ 18 ಸಾವಿರ ಕೋಟಿ ವೆಚ್ಚದ ಇಂತಹುವೇ ಒಂದು ಅಪ್ರಾಯೋಗಿಕ ಫ್ಲಾಪ್ ಯೋಜನೆಯನ್ನು ಎತ್ತಿನಹೊಳೆ ಹೆಸರಲ್ಲಿ ಜಾರಿಗೊಳಿಸಿ, ಅತ್ತ ನದಿ ಒರತೆಗಳೂ ಬತ್ತಿ ಇತ್ತ ನೀರೂ ಇಲ್ಲದ ಸ್ಥಿತಿ ಉಂಟಾಗಿರುವ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಅಂತಹುದ್ದೇ ಮತ್ತೊಂದು ಯೋಜನೆ ಘೋಷಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
ಶರಾವತಿ ಕಣಿವೆಯ ಜನತೆ ಈ ಮಟ್ಟದಲ್ಲಿ ಪ್ರತಿಕ್ರಿಯಿಸಲು ಕಳೆದ ಎಂಟು ದಶಕಗಳಿಂದಲೂ ಪದೇ ಪದೇ ಅಭಿವೃದ್ಧಿ ಹೆಸರಿನ ಯೋಜನೆಗಳಿಗೆ ಅವರು ತಲೆ ಕೊಟ್ಟುಕೊಂಡು ಬಂದಿರುವುದೇ ಆಗಿದೆ. 1940ರ ದಶಕದಷ್ಟು ಹಿಂದೆಯೇ ಹಿರೇಭಾಸ್ಕರ ಜಲಾಶಯಕ್ಕಾಗಿ ಮನೆ ಮಠ ತೊರೆದು ಬೀದಿಗೆ ಬಿದ್ದವರು ಮತ್ತೆ 1964ರಲ್ಲಿ ಲಿಂಗನಮಕ್ಕಿ ಅಣೆಕಟ್ಟೆಯಾದಾಗ, ನಂತರ ತಲಕಳಲೆ ಅಣೆಕಟ್ಟೆಯಾದಾಗ ಮತ್ತೆ ಮತ್ತೆ ಬೀದಿಗೆ ಬಿದ್ದರು. ವಾರಾಹಿ ನದಿಗೆ ಅಡ್ಡಲಾಗಿ ಮಾಣಿ, ಚಕ್ರಾ ನದಿಗೆ ಸಾವೆಹಕ್ಲು ಅಣೆಕಟ್ಟೆ ಕಟ್ಟುವಾಗ ಕತ್ತಲಿಗೆ ತಳ್ಳಲ್ಪಟ್ಟ ಲಕ್ಷಾಂತರ ಜನರ ಬದುಕು ಇಷ್ಟು ದಶಕಗಳಾದರೂ ಬೆಳಕು ಕಾಣಲೇ ಇಲ್ಲ. ನಾಡಿಗೇ ಬೆಳಕು ಕೊಟ್ಟ ಶರಾವತಿ, ವಾರಾಹಿಯರ ಮಕ್ಕಳ ಬದುಕು ಕತ್ತಲಲ್ಲೇ ಉಳಿಯಿತು. ಸರ್ಕಾರಗಳು ನೀಡಿದ್ದು ಪುಗಸಟ್ಟೆ ಭರವಸೆಗಳನ್ನು ಮಾತ್ರವೇ ಹೊರತು ಪುಡಿಗಾಸಿನ ಪರಿಹಾರವೂ ದೊರೆಯಲಿಲ್ಲ. ಇಂತಹ ಸನ್ನಿವೇಶದಲ್ಲಿ ಶರಾವತಿ ಮಕ್ಕಳ ಪ್ರಶ್ನೆ ಇದು- ರಾಜ್ಯವನ್ನು ಏಳಿಗೆ ಮಾಡಲು ಜಾರಿ ಮಾಡಿದ ಯೋಜನೆಗಳ ಮೂಲಕ ನಮ್ಮ ಬದುಕುಗಳನ್ನೇ ಮುಳುಗಡೆ ಮಾಡಿರುವ ನೀವು ಇನ್ನೂ ನಮ್ಮ ಮೇಲೆ ಎಷ್ಟು ಸಲ ದೌರ್ಜನ್ಯ ನಡೆಸುತ್ತೀರಿ ಎಂದು ಅವರೀಗ ತಿರುಗಿ ಬಿದ್ದಿದ್ದಾರೆ.

ಸಮುದ್ರಕ್ಕೆ ಪೋಲಾಗಿ ಹೋಗುವ ನೀರು?

ಶರಾವತಿ ನದಿಯನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ಕುರಿತು ಸುದ್ದಿ ಮಾಧ್ಯಮಗಳೆದುರು ಮಾತಾಡಿರುವ ಮಾನ್ಯ ಉಪಮುಖ್ಯಮಂತ್ರಿಗಳು “ಸಮುದ್ರಕ್ಕೆ ಪೋಲಾಗಿ ಹೋಗುವ ನೀರನ್ನು ಬೆಂಗಳೂರಿಗೆ ತರಿಸುತ್ತೇವೆ” ಎಂದು ಆಡಿರುವ ಮಾತು ಈ ಭಾಗದ ಜನರಿಗೆ ಆಕ್ರೋಶವನ್ನೇ ತರಿಸಿದೆ. ಜೋಗ ಜಲಪಾತದ ನಂತರದಲ್ಲಿ ಶರಾವತಿಯ ಟೇಲ್‍ಎಂಡ್‍ನಲ್ಲಿ ಈ ನದಿಯ ಹರಿವನ್ನೇ ಆಶ್ರಯಿಸಿ ಬದುಕುತ್ತಿರುವ ನೂರಾರು ಎಷ್ಟೋ ಹಳ್ಳಿಗಳ ಸಾವಿರಾರು ಮೀನುಗಾರರ, ಕೃಷಿಕರ ಮಾನವ ಹಕ್ಕಿನ ಉಲ್ಲಂಘನೆಯ ಮಾತೂ ಹೌದಾಗಿದೆ. ಈ ನೀರನ್ನೇ ಆಶ್ರಯಿಸಿರುವ ಅಸಂಖ್ಯಾತ ಜಲಚರಗಳ, ವನ್ಯಜೀವಿಗಳ ಪಾಲಿನ ಮರಣಶಾಸನವೂ ಹೌದು. ಅಷ್ಟಕ್ಕೂ ಕಳೆದ ಕೆಲವು ದಶಕಗಳಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿ ನದೀಪಾತ್ರವೇ ಕಿರಿದಾಗಿ ಹೋಗಿರುವ ಬಗ್ಗೆ ಇವರಿಗೇನಾದರೂ ಕಾಳಜಿ ಇದೆಯೇ? ಲಿಂಗನಮಕ್ಕಿ ಅಣೆಕಟ್ಟೆ ಪೂರ್ತಿ ತುಂಬಿದಾಗ 155 ಟಿಎಂಸಿ ನೀರು ಹಿಡಿದಿಡುತ್ತದೆ ಎನ್ನಲಾಗಿದೆ. ಆದರೆ ಈಗ ಡ್ಯಾಮಿನಲ್ಲ್ಲಿ ಶೇಕಡಾ 40ರಷ್ಟು ಹೂಳು ತುಂಬಿಕೊಂಡಿದೆ. ಕಳೆದ ಒಂದು ದಶಕದಲ್ಲಿ ಅಣೆಕಟ್ಟೆ ಪೂರ್ತಿ ತುಂಬಿರುವುದು ಕೇವಲ ಎರಡು ಸಲ ಮಾತ್ರ. ಉಳಿದ ವರ್ಷಗಳಲ್ಲಿ ಮಳೆಯ ಕೊರತೆಯಿಂದಾಗಿ ಅರ್ಧ ಮಟ್ಟವನ್ನೂ ತುಂಬಿರುವುದಿಲ್ಲ. ಈ ಸ್ಥಿತಿಯಲ್ಲಿ 30 ಟಿಎಂಸಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಮಾತೆಷ್ಟು ಅವಿವೇಕತನದ್ದು ಎಂಬುದು ಸ್ಪಷ್ಟವಾಗಿದೆ.

ಕಾವೇರಿದ ಶರಾವತಿ ಕಣಿವೆ

ಶರಾವತಿಯಿಂದ ಬೆಂಗಳೂರಿಗೆ ನೀರು ಒಯ್ಯುವ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ. ಪ್ರಾಣ ಕೊಟ್ಟೇವು ಶರಾವತಿ ಬಿಡೆವು ಎಂಬ ಘೋಷಣೆಗಳು ಈಗ ಈ ಭಾಗದ ಹಳ್ಳಿಹಳ್ಳಿಗಳಲ್ಲಿ ಮೊಳಗತೊಡಗಿವೆ. ಕಾಂಗ್ರೆಸ್ ಜೆಡಿಎಸ್‍ಗಳನ್ನೂ ಒಳಗೊಂಡಂತೆ ಈ ಭಾಗದ ರಾಜಕೀಯ ಮುಖಂಡರು ಯೋಜನೆಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾದ್ಯಂತ ಹರಳುಗಟ್ಟುತ್ತಿರುವ ಆಂದೋಲನಕ್ಕೆ ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ ನಾಯಕತ್ವ ನೀಡುತ್ತಿದೆ. ನಾಡಿನ ಹಿರಿಯ ಸಾಹಿತಿ ನಾ ಡಿಸೋಜಾ ಇದರ ಗೌರವಾಧ್ಯಕ್ಷರಾಗಿ ತಮ್ಮ 86ರ ಇಳಿ ವಯಸ್ಸಿನಲ್ಲಿಯೂ ಹಳ್ಳಿಗಳಿಗೆ ಹೋಗಿ ಸಭೆಗಳಲ್ಲಿ ಭಾಗವಹಿಸುತ್ತಾ ಯುವಕರಿಗೆಲ್ಲಾ ಪ್ರೇರಣೆಯಾಗಿದ್ದಾರೆ. ಸಾಗರ ತಾಲ್ಲೂಕಿನ ಆವಿನಹಳ್ಳಿ, ತುಮರಿ, ತ್ಯಾಗತಿ, ಆನಂದಪುರ, ಹೊಸನಗರ, ರಿಪ್ಪನ್ ಪೇಟೆ, ಬಿದನೂರು-ನಗರ, ಶಿರಾಳಕೊಪ್ಪ, ಸೊರಬದ ಎಲ್ಲ ಹೋಬಳಿ ಕೇಂದ್ರಗಳು ಹೀಗೆ ಎಲ್ಲಾ ಕಡೆಗಳಲ್ಲಿ ಇದುವರೆಗೆ ನೂರಾರು ಸಭೆಗಳು ನಡೆದಿವೆ, ಸ್ಥಳೀಯವಾಗಿ ಸಣ್ಣ, ದೊಡ್ಡ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ.
ಒಟ್ಟಿನಲ್ಲಿ ಜುಲೈ 10ರಂದು ಇಡೀ ಶಿವಮೊಗ್ಗ ಜಿಲ್ಲೆಯ ವ್ಯಾಪಾರ-ವಹಿವಾಟು, ಮತ್ತೆಲ್ಲ ಆರ್ಥಿಕ ಶೈಕ್ಷಣಿಕ ಚಟುವಟಿಕೆಗಳು ಸ್ತಬ್ದಗೊಳ್ಳುವುದಂತೂ ಖಚಿತವಾಗಿದೆ. ಒಂದೊಮ್ಮೆ ಇದಕ್ಕೂ ಸರ್ಕಾರ ಬಗ್ಗದಿದ್ದರೆ ಇಡೀ ಮಲೆನಾಡು ವ್ಯಘ್ರಗೊಳ್ಳಲೂಬಹುದು… ಸರ್ಕಾರಕ್ಕೆ ಜವಾಬ್ದಾರಿ, ಜನರ ಆತಂಕಗಳನ್ನು ಕೇಳಿಸಿಕೊಳ್ಳುವ ಮನಸ್ಸು ಇರುವುದೇ ನಿಜವಾದರೆ ಯಾವುದೇ ಅನಾಹುತಗಳಿಗೆ ಮೊದಲು ಈ ಯೋಜನೆ ಕೈ ಬಿಡಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...