Homeಕರ್ನಾಟಕಶರಾವತಿ ಕಣಿವೆಯ ಕೂಗು

ಶರಾವತಿ ಕಣಿವೆಯ ಕೂಗು

ಏನದು ಯೋಜನೆ? ಯಾಕೆ ಈ ಮಟ್ಟದ ವಿರೋಧ

- Advertisement -
- Advertisement -

ಕಳೆದ ಒಂದು ವಾರದಿಂದ ಶರಾವತಿ ಕಣಿವೆ ಕದಲುತ್ತಿದೆ. ಉಪಮುಖ್ಯಮಂತ್ರಿ ಡಾಜಿ.ಪರಮೇಶ್ವರ್ ಅವರು ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ನಿಭಾಯಿಸಲು ಶರಾವತಿ ನದಿಯ ನೀರನ್ನು ತರುವ 12,500 ಕೋಟಿ ರೂಪಾಯಿ ವೆಚ್ಚದ ಯೋಜನೆಯೊಂದಕ್ಕೆ ಡಿಪಿಆರ್ ತಯಾರಿಸಲು ಆದೇಶ ನೀಡಲಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದೇ ತಡ ಶರಾವತಿಯ ಎಡ ಬಲಗಳ ಊರುಗಳ ಜನರೆಲ್ಲ ಕೆಂಡಾಮಂಡಲವಾಗಿದ್ದಾರೆ. ಅವರು ಹಾಗೆ ಹೇಳಿದ ಎರಡೇ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಜನಾಂದೋಲನವೊಂದು ಶುರುವಾಗಿ ಈಗ ಜಿಲ್ಲೆಯ ಪ್ರತಿ ತಾಲ್ಲೂಕು ಪ್ರತಿ ಹೋಬಳಿ ಹಾಗೂ ಪ್ರತಿ ಊರಿನಲ್ಲೂ ಪ್ರತಿಧ್ವನಿಸತೊಡಗಿದೆ. ಚಳವಳಿಗಳ ತವರೂರೆಂದೇ ಹೆಸರಾಗಿರುವ ಶಿವಮೊಗ್ಗ ಜಿಲ್ಲೆ ಹಲವಾರು ವರ್ಷಗಳ ನಂತರ ಬೃಹತ್ ಮಟ್ಟದ ಹೋರಾಟವೊಂದಕ್ಕೆ ಸಾಕ್ಷಿಯಾಗಿದ್ದು ಜುಲೈ 10ನೇ ತಾರೀಖಿನಂದು ಕರೆನೀಡಿರುವ ಶಿವಮೊಗ್ಗ ಜಿಲ್ಲೆ ಬಂದ್ ಬಹುತೇಕ ಯಶಸ್ವಿಗೊಳ್ಳುವುದು ಖಚಿತವಾಗಿದೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್- ಜೆಡಿಎಸ್ ಸರ್ಕಾರ ಭಾರೀ ಮುಖಭಂಗಕ್ಕೊಳಗಾಗಲಿರುವುದೂ ನಿಜ. ಮಾತ್ರವಲ್ಲ ಈ ವಿಷಯ ವಿರೋಧ ಪಕ್ಷವಾಗಿರುವ ಬಿಜೆಪಿಗೂ ಮಲೆನಾಡಿನಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಅಭಿಪ್ರಾಯ ರೂಪಿಸಲು ಹೇಳಿ ಮಾಡಿಸಿದಂತಿದೆ. ಈಗಾಗಲೇ ಈ ಭಾಗದ ಹಲವು ಕಾಂಗ್ರೆಸ್-ಜೆಡಿಎಸ್ ನಾಯಕರು, ಕಾರ್ಯಕರ್ತರು ಸರ್ಕಾರವನ್ನು ಸಮರ್ಥಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.


ಏನದು ಯೋಜನೆ?
ಯಾಕೆ ಈ ಮಟ್ಟದ ವಿರೋಧ
2031ನೇ ಇಸವಿಗೆ ಬೆಂಗಳೂರು ಎದುರಿಸುವ ಕುಡಿಯುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು 2010ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿವೃತ್ತ ಚೀಫ್ ಎಂಜಿನಿಯರ್ ತ್ಯಾಗರಾಜ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಅದು 2014ರಲ್ಲಿ ವರದಿ ಸಲ್ಲಿಸಿ ಇರುವ ಎಲ್ಲಾ ಮಾರ್ಗಗಳ ಪೈಕಿ ಶರಾವತಿ ನದಿಯಿಂದ ನೀರು ತರುವುದೇ ಉತ್ತಮ ಮಾರ್ಗ ಎಂದು ಶಿಫಾರಸು ನೀಡಿತ್ತು. ಆದರೆ 2014ಲ್ಲೇ ಈ ವರದಿ ಪ್ರಾಯೋಗಿಕವಲ್ಲ ಎಂಬ ಅಭಿಪ್ರಾಯಗಳು ತಜ್ಞ ವಲಯದಿಂದ ಬಂದಿದ್ದವು. ಇದರ ನಂತರ 2016ರಲ್ಲಿ ಕೇಂದ್ರ ಜಲ ಆಯೋಗದ ಮಾಜಿ ಅಧ್ಯಕ್ಷ ಎ.ಕೆ. ಬಜಾಜ್ ನೇತೃತ್ವದ ಸಮಿತಿಯೊಂದನ್ನು ನೇಮಿಸಲಾಗಿತ್ತು.

ಆದರೆ ಹಾಲಿ ಸರ್ಕಾರ 2014ರ ತ್ಯಾಗರಾಜ್ ಸಮಿತಿ ವರದಿಯನ್ನೇ ಹಠ ಹಿಡಿದು ಜಾರಿಗೊಳಿಸಲು ಹೊರಟಿರುವುದು ತೀವ್ರ ಟೀಕೆಗೆ, ಜನವಿರೋಧಕ್ಕೆ ಕಾರಣವಾಗುವುದು ಮಾತ್ರವಲ್ಲ ಅನುಮಾನಗಳಿಗೂ ಕಾರಣವಾಗಿದೆ. 12 ಸಾವಿರ ಕೋಟಿ ರೂಪಾಯಿಗಳ ಯೋಜನೆಯನ್ನು ಡಿಸಿಎಂ ಘೋಷಿಸುವುದರ ಹಿಂದೆ ಬೆಂಗಳೂರಿಗೆ ನೀರು ತರುವುದಕ್ಕಿಂತಲೂ ಹೆಚ್ಚಾಗಿ ತಮ್ಮ ತಿಜೋರಿ ಭರ್ತಿ ಮಾಡಿಕೊಳ್ಳುವ ಉದ್ದೇಶವೇ ಇರಬಹುದೆ ಎಂದು ಗುಮಾನಿ ಎದ್ದಿದೆ. ಈಗಗಲೇ 18 ಸಾವಿರ ಕೋಟಿ ವೆಚ್ಚದ ಇಂತಹುವೇ ಒಂದು ಅಪ್ರಾಯೋಗಿಕ ಫ್ಲಾಪ್ ಯೋಜನೆಯನ್ನು ಎತ್ತಿನಹೊಳೆ ಹೆಸರಲ್ಲಿ ಜಾರಿಗೊಳಿಸಿ, ಅತ್ತ ನದಿ ಒರತೆಗಳೂ ಬತ್ತಿ ಇತ್ತ ನೀರೂ ಇಲ್ಲದ ಸ್ಥಿತಿ ಉಂಟಾಗಿರುವ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಅಂತಹುದ್ದೇ ಮತ್ತೊಂದು ಯೋಜನೆ ಘೋಷಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
ಶರಾವತಿ ಕಣಿವೆಯ ಜನತೆ ಈ ಮಟ್ಟದಲ್ಲಿ ಪ್ರತಿಕ್ರಿಯಿಸಲು ಕಳೆದ ಎಂಟು ದಶಕಗಳಿಂದಲೂ ಪದೇ ಪದೇ ಅಭಿವೃದ್ಧಿ ಹೆಸರಿನ ಯೋಜನೆಗಳಿಗೆ ಅವರು ತಲೆ ಕೊಟ್ಟುಕೊಂಡು ಬಂದಿರುವುದೇ ಆಗಿದೆ. 1940ರ ದಶಕದಷ್ಟು ಹಿಂದೆಯೇ ಹಿರೇಭಾಸ್ಕರ ಜಲಾಶಯಕ್ಕಾಗಿ ಮನೆ ಮಠ ತೊರೆದು ಬೀದಿಗೆ ಬಿದ್ದವರು ಮತ್ತೆ 1964ರಲ್ಲಿ ಲಿಂಗನಮಕ್ಕಿ ಅಣೆಕಟ್ಟೆಯಾದಾಗ, ನಂತರ ತಲಕಳಲೆ ಅಣೆಕಟ್ಟೆಯಾದಾಗ ಮತ್ತೆ ಮತ್ತೆ ಬೀದಿಗೆ ಬಿದ್ದರು. ವಾರಾಹಿ ನದಿಗೆ ಅಡ್ಡಲಾಗಿ ಮಾಣಿ, ಚಕ್ರಾ ನದಿಗೆ ಸಾವೆಹಕ್ಲು ಅಣೆಕಟ್ಟೆ ಕಟ್ಟುವಾಗ ಕತ್ತಲಿಗೆ ತಳ್ಳಲ್ಪಟ್ಟ ಲಕ್ಷಾಂತರ ಜನರ ಬದುಕು ಇಷ್ಟು ದಶಕಗಳಾದರೂ ಬೆಳಕು ಕಾಣಲೇ ಇಲ್ಲ. ನಾಡಿಗೇ ಬೆಳಕು ಕೊಟ್ಟ ಶರಾವತಿ, ವಾರಾಹಿಯರ ಮಕ್ಕಳ ಬದುಕು ಕತ್ತಲಲ್ಲೇ ಉಳಿಯಿತು. ಸರ್ಕಾರಗಳು ನೀಡಿದ್ದು ಪುಗಸಟ್ಟೆ ಭರವಸೆಗಳನ್ನು ಮಾತ್ರವೇ ಹೊರತು ಪುಡಿಗಾಸಿನ ಪರಿಹಾರವೂ ದೊರೆಯಲಿಲ್ಲ. ಇಂತಹ ಸನ್ನಿವೇಶದಲ್ಲಿ ಶರಾವತಿ ಮಕ್ಕಳ ಪ್ರಶ್ನೆ ಇದು- ರಾಜ್ಯವನ್ನು ಏಳಿಗೆ ಮಾಡಲು ಜಾರಿ ಮಾಡಿದ ಯೋಜನೆಗಳ ಮೂಲಕ ನಮ್ಮ ಬದುಕುಗಳನ್ನೇ ಮುಳುಗಡೆ ಮಾಡಿರುವ ನೀವು ಇನ್ನೂ ನಮ್ಮ ಮೇಲೆ ಎಷ್ಟು ಸಲ ದೌರ್ಜನ್ಯ ನಡೆಸುತ್ತೀರಿ ಎಂದು ಅವರೀಗ ತಿರುಗಿ ಬಿದ್ದಿದ್ದಾರೆ.

ಸಮುದ್ರಕ್ಕೆ ಪೋಲಾಗಿ ಹೋಗುವ ನೀರು?

ಶರಾವತಿ ನದಿಯನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ಕುರಿತು ಸುದ್ದಿ ಮಾಧ್ಯಮಗಳೆದುರು ಮಾತಾಡಿರುವ ಮಾನ್ಯ ಉಪಮುಖ್ಯಮಂತ್ರಿಗಳು “ಸಮುದ್ರಕ್ಕೆ ಪೋಲಾಗಿ ಹೋಗುವ ನೀರನ್ನು ಬೆಂಗಳೂರಿಗೆ ತರಿಸುತ್ತೇವೆ” ಎಂದು ಆಡಿರುವ ಮಾತು ಈ ಭಾಗದ ಜನರಿಗೆ ಆಕ್ರೋಶವನ್ನೇ ತರಿಸಿದೆ. ಜೋಗ ಜಲಪಾತದ ನಂತರದಲ್ಲಿ ಶರಾವತಿಯ ಟೇಲ್‍ಎಂಡ್‍ನಲ್ಲಿ ಈ ನದಿಯ ಹರಿವನ್ನೇ ಆಶ್ರಯಿಸಿ ಬದುಕುತ್ತಿರುವ ನೂರಾರು ಎಷ್ಟೋ ಹಳ್ಳಿಗಳ ಸಾವಿರಾರು ಮೀನುಗಾರರ, ಕೃಷಿಕರ ಮಾನವ ಹಕ್ಕಿನ ಉಲ್ಲಂಘನೆಯ ಮಾತೂ ಹೌದಾಗಿದೆ. ಈ ನೀರನ್ನೇ ಆಶ್ರಯಿಸಿರುವ ಅಸಂಖ್ಯಾತ ಜಲಚರಗಳ, ವನ್ಯಜೀವಿಗಳ ಪಾಲಿನ ಮರಣಶಾಸನವೂ ಹೌದು. ಅಷ್ಟಕ್ಕೂ ಕಳೆದ ಕೆಲವು ದಶಕಗಳಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿ ನದೀಪಾತ್ರವೇ ಕಿರಿದಾಗಿ ಹೋಗಿರುವ ಬಗ್ಗೆ ಇವರಿಗೇನಾದರೂ ಕಾಳಜಿ ಇದೆಯೇ? ಲಿಂಗನಮಕ್ಕಿ ಅಣೆಕಟ್ಟೆ ಪೂರ್ತಿ ತುಂಬಿದಾಗ 155 ಟಿಎಂಸಿ ನೀರು ಹಿಡಿದಿಡುತ್ತದೆ ಎನ್ನಲಾಗಿದೆ. ಆದರೆ ಈಗ ಡ್ಯಾಮಿನಲ್ಲ್ಲಿ ಶೇಕಡಾ 40ರಷ್ಟು ಹೂಳು ತುಂಬಿಕೊಂಡಿದೆ. ಕಳೆದ ಒಂದು ದಶಕದಲ್ಲಿ ಅಣೆಕಟ್ಟೆ ಪೂರ್ತಿ ತುಂಬಿರುವುದು ಕೇವಲ ಎರಡು ಸಲ ಮಾತ್ರ. ಉಳಿದ ವರ್ಷಗಳಲ್ಲಿ ಮಳೆಯ ಕೊರತೆಯಿಂದಾಗಿ ಅರ್ಧ ಮಟ್ಟವನ್ನೂ ತುಂಬಿರುವುದಿಲ್ಲ. ಈ ಸ್ಥಿತಿಯಲ್ಲಿ 30 ಟಿಎಂಸಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಮಾತೆಷ್ಟು ಅವಿವೇಕತನದ್ದು ಎಂಬುದು ಸ್ಪಷ್ಟವಾಗಿದೆ.

ಕಾವೇರಿದ ಶರಾವತಿ ಕಣಿವೆ

ಶರಾವತಿಯಿಂದ ಬೆಂಗಳೂರಿಗೆ ನೀರು ಒಯ್ಯುವ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ. ಪ್ರಾಣ ಕೊಟ್ಟೇವು ಶರಾವತಿ ಬಿಡೆವು ಎಂಬ ಘೋಷಣೆಗಳು ಈಗ ಈ ಭಾಗದ ಹಳ್ಳಿಹಳ್ಳಿಗಳಲ್ಲಿ ಮೊಳಗತೊಡಗಿವೆ. ಕಾಂಗ್ರೆಸ್ ಜೆಡಿಎಸ್‍ಗಳನ್ನೂ ಒಳಗೊಂಡಂತೆ ಈ ಭಾಗದ ರಾಜಕೀಯ ಮುಖಂಡರು ಯೋಜನೆಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾದ್ಯಂತ ಹರಳುಗಟ್ಟುತ್ತಿರುವ ಆಂದೋಲನಕ್ಕೆ ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ ನಾಯಕತ್ವ ನೀಡುತ್ತಿದೆ. ನಾಡಿನ ಹಿರಿಯ ಸಾಹಿತಿ ನಾ ಡಿಸೋಜಾ ಇದರ ಗೌರವಾಧ್ಯಕ್ಷರಾಗಿ ತಮ್ಮ 86ರ ಇಳಿ ವಯಸ್ಸಿನಲ್ಲಿಯೂ ಹಳ್ಳಿಗಳಿಗೆ ಹೋಗಿ ಸಭೆಗಳಲ್ಲಿ ಭಾಗವಹಿಸುತ್ತಾ ಯುವಕರಿಗೆಲ್ಲಾ ಪ್ರೇರಣೆಯಾಗಿದ್ದಾರೆ. ಸಾಗರ ತಾಲ್ಲೂಕಿನ ಆವಿನಹಳ್ಳಿ, ತುಮರಿ, ತ್ಯಾಗತಿ, ಆನಂದಪುರ, ಹೊಸನಗರ, ರಿಪ್ಪನ್ ಪೇಟೆ, ಬಿದನೂರು-ನಗರ, ಶಿರಾಳಕೊಪ್ಪ, ಸೊರಬದ ಎಲ್ಲ ಹೋಬಳಿ ಕೇಂದ್ರಗಳು ಹೀಗೆ ಎಲ್ಲಾ ಕಡೆಗಳಲ್ಲಿ ಇದುವರೆಗೆ ನೂರಾರು ಸಭೆಗಳು ನಡೆದಿವೆ, ಸ್ಥಳೀಯವಾಗಿ ಸಣ್ಣ, ದೊಡ್ಡ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ.
ಒಟ್ಟಿನಲ್ಲಿ ಜುಲೈ 10ರಂದು ಇಡೀ ಶಿವಮೊಗ್ಗ ಜಿಲ್ಲೆಯ ವ್ಯಾಪಾರ-ವಹಿವಾಟು, ಮತ್ತೆಲ್ಲ ಆರ್ಥಿಕ ಶೈಕ್ಷಣಿಕ ಚಟುವಟಿಕೆಗಳು ಸ್ತಬ್ದಗೊಳ್ಳುವುದಂತೂ ಖಚಿತವಾಗಿದೆ. ಒಂದೊಮ್ಮೆ ಇದಕ್ಕೂ ಸರ್ಕಾರ ಬಗ್ಗದಿದ್ದರೆ ಇಡೀ ಮಲೆನಾಡು ವ್ಯಘ್ರಗೊಳ್ಳಲೂಬಹುದು… ಸರ್ಕಾರಕ್ಕೆ ಜವಾಬ್ದಾರಿ, ಜನರ ಆತಂಕಗಳನ್ನು ಕೇಳಿಸಿಕೊಳ್ಳುವ ಮನಸ್ಸು ಇರುವುದೇ ನಿಜವಾದರೆ ಯಾವುದೇ ಅನಾಹುತಗಳಿಗೆ ಮೊದಲು ಈ ಯೋಜನೆ ಕೈ ಬಿಡಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....