Homeಕರ್ನಾಟಕಶರಾವತಿ ಕಣಿವೆಯ ಕೂಗು

ಶರಾವತಿ ಕಣಿವೆಯ ಕೂಗು

ಏನದು ಯೋಜನೆ? ಯಾಕೆ ಈ ಮಟ್ಟದ ವಿರೋಧ

- Advertisement -
- Advertisement -

ಕಳೆದ ಒಂದು ವಾರದಿಂದ ಶರಾವತಿ ಕಣಿವೆ ಕದಲುತ್ತಿದೆ. ಉಪಮುಖ್ಯಮಂತ್ರಿ ಡಾಜಿ.ಪರಮೇಶ್ವರ್ ಅವರು ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ನಿಭಾಯಿಸಲು ಶರಾವತಿ ನದಿಯ ನೀರನ್ನು ತರುವ 12,500 ಕೋಟಿ ರೂಪಾಯಿ ವೆಚ್ಚದ ಯೋಜನೆಯೊಂದಕ್ಕೆ ಡಿಪಿಆರ್ ತಯಾರಿಸಲು ಆದೇಶ ನೀಡಲಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದೇ ತಡ ಶರಾವತಿಯ ಎಡ ಬಲಗಳ ಊರುಗಳ ಜನರೆಲ್ಲ ಕೆಂಡಾಮಂಡಲವಾಗಿದ್ದಾರೆ. ಅವರು ಹಾಗೆ ಹೇಳಿದ ಎರಡೇ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಜನಾಂದೋಲನವೊಂದು ಶುರುವಾಗಿ ಈಗ ಜಿಲ್ಲೆಯ ಪ್ರತಿ ತಾಲ್ಲೂಕು ಪ್ರತಿ ಹೋಬಳಿ ಹಾಗೂ ಪ್ರತಿ ಊರಿನಲ್ಲೂ ಪ್ರತಿಧ್ವನಿಸತೊಡಗಿದೆ. ಚಳವಳಿಗಳ ತವರೂರೆಂದೇ ಹೆಸರಾಗಿರುವ ಶಿವಮೊಗ್ಗ ಜಿಲ್ಲೆ ಹಲವಾರು ವರ್ಷಗಳ ನಂತರ ಬೃಹತ್ ಮಟ್ಟದ ಹೋರಾಟವೊಂದಕ್ಕೆ ಸಾಕ್ಷಿಯಾಗಿದ್ದು ಜುಲೈ 10ನೇ ತಾರೀಖಿನಂದು ಕರೆನೀಡಿರುವ ಶಿವಮೊಗ್ಗ ಜಿಲ್ಲೆ ಬಂದ್ ಬಹುತೇಕ ಯಶಸ್ವಿಗೊಳ್ಳುವುದು ಖಚಿತವಾಗಿದೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್- ಜೆಡಿಎಸ್ ಸರ್ಕಾರ ಭಾರೀ ಮುಖಭಂಗಕ್ಕೊಳಗಾಗಲಿರುವುದೂ ನಿಜ. ಮಾತ್ರವಲ್ಲ ಈ ವಿಷಯ ವಿರೋಧ ಪಕ್ಷವಾಗಿರುವ ಬಿಜೆಪಿಗೂ ಮಲೆನಾಡಿನಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಅಭಿಪ್ರಾಯ ರೂಪಿಸಲು ಹೇಳಿ ಮಾಡಿಸಿದಂತಿದೆ. ಈಗಾಗಲೇ ಈ ಭಾಗದ ಹಲವು ಕಾಂಗ್ರೆಸ್-ಜೆಡಿಎಸ್ ನಾಯಕರು, ಕಾರ್ಯಕರ್ತರು ಸರ್ಕಾರವನ್ನು ಸಮರ್ಥಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.


ಏನದು ಯೋಜನೆ?
ಯಾಕೆ ಈ ಮಟ್ಟದ ವಿರೋಧ
2031ನೇ ಇಸವಿಗೆ ಬೆಂಗಳೂರು ಎದುರಿಸುವ ಕುಡಿಯುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು 2010ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿವೃತ್ತ ಚೀಫ್ ಎಂಜಿನಿಯರ್ ತ್ಯಾಗರಾಜ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಅದು 2014ರಲ್ಲಿ ವರದಿ ಸಲ್ಲಿಸಿ ಇರುವ ಎಲ್ಲಾ ಮಾರ್ಗಗಳ ಪೈಕಿ ಶರಾವತಿ ನದಿಯಿಂದ ನೀರು ತರುವುದೇ ಉತ್ತಮ ಮಾರ್ಗ ಎಂದು ಶಿಫಾರಸು ನೀಡಿತ್ತು. ಆದರೆ 2014ಲ್ಲೇ ಈ ವರದಿ ಪ್ರಾಯೋಗಿಕವಲ್ಲ ಎಂಬ ಅಭಿಪ್ರಾಯಗಳು ತಜ್ಞ ವಲಯದಿಂದ ಬಂದಿದ್ದವು. ಇದರ ನಂತರ 2016ರಲ್ಲಿ ಕೇಂದ್ರ ಜಲ ಆಯೋಗದ ಮಾಜಿ ಅಧ್ಯಕ್ಷ ಎ.ಕೆ. ಬಜಾಜ್ ನೇತೃತ್ವದ ಸಮಿತಿಯೊಂದನ್ನು ನೇಮಿಸಲಾಗಿತ್ತು.

ಆದರೆ ಹಾಲಿ ಸರ್ಕಾರ 2014ರ ತ್ಯಾಗರಾಜ್ ಸಮಿತಿ ವರದಿಯನ್ನೇ ಹಠ ಹಿಡಿದು ಜಾರಿಗೊಳಿಸಲು ಹೊರಟಿರುವುದು ತೀವ್ರ ಟೀಕೆಗೆ, ಜನವಿರೋಧಕ್ಕೆ ಕಾರಣವಾಗುವುದು ಮಾತ್ರವಲ್ಲ ಅನುಮಾನಗಳಿಗೂ ಕಾರಣವಾಗಿದೆ. 12 ಸಾವಿರ ಕೋಟಿ ರೂಪಾಯಿಗಳ ಯೋಜನೆಯನ್ನು ಡಿಸಿಎಂ ಘೋಷಿಸುವುದರ ಹಿಂದೆ ಬೆಂಗಳೂರಿಗೆ ನೀರು ತರುವುದಕ್ಕಿಂತಲೂ ಹೆಚ್ಚಾಗಿ ತಮ್ಮ ತಿಜೋರಿ ಭರ್ತಿ ಮಾಡಿಕೊಳ್ಳುವ ಉದ್ದೇಶವೇ ಇರಬಹುದೆ ಎಂದು ಗುಮಾನಿ ಎದ್ದಿದೆ. ಈಗಗಲೇ 18 ಸಾವಿರ ಕೋಟಿ ವೆಚ್ಚದ ಇಂತಹುವೇ ಒಂದು ಅಪ್ರಾಯೋಗಿಕ ಫ್ಲಾಪ್ ಯೋಜನೆಯನ್ನು ಎತ್ತಿನಹೊಳೆ ಹೆಸರಲ್ಲಿ ಜಾರಿಗೊಳಿಸಿ, ಅತ್ತ ನದಿ ಒರತೆಗಳೂ ಬತ್ತಿ ಇತ್ತ ನೀರೂ ಇಲ್ಲದ ಸ್ಥಿತಿ ಉಂಟಾಗಿರುವ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಅಂತಹುದ್ದೇ ಮತ್ತೊಂದು ಯೋಜನೆ ಘೋಷಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
ಶರಾವತಿ ಕಣಿವೆಯ ಜನತೆ ಈ ಮಟ್ಟದಲ್ಲಿ ಪ್ರತಿಕ್ರಿಯಿಸಲು ಕಳೆದ ಎಂಟು ದಶಕಗಳಿಂದಲೂ ಪದೇ ಪದೇ ಅಭಿವೃದ್ಧಿ ಹೆಸರಿನ ಯೋಜನೆಗಳಿಗೆ ಅವರು ತಲೆ ಕೊಟ್ಟುಕೊಂಡು ಬಂದಿರುವುದೇ ಆಗಿದೆ. 1940ರ ದಶಕದಷ್ಟು ಹಿಂದೆಯೇ ಹಿರೇಭಾಸ್ಕರ ಜಲಾಶಯಕ್ಕಾಗಿ ಮನೆ ಮಠ ತೊರೆದು ಬೀದಿಗೆ ಬಿದ್ದವರು ಮತ್ತೆ 1964ರಲ್ಲಿ ಲಿಂಗನಮಕ್ಕಿ ಅಣೆಕಟ್ಟೆಯಾದಾಗ, ನಂತರ ತಲಕಳಲೆ ಅಣೆಕಟ್ಟೆಯಾದಾಗ ಮತ್ತೆ ಮತ್ತೆ ಬೀದಿಗೆ ಬಿದ್ದರು. ವಾರಾಹಿ ನದಿಗೆ ಅಡ್ಡಲಾಗಿ ಮಾಣಿ, ಚಕ್ರಾ ನದಿಗೆ ಸಾವೆಹಕ್ಲು ಅಣೆಕಟ್ಟೆ ಕಟ್ಟುವಾಗ ಕತ್ತಲಿಗೆ ತಳ್ಳಲ್ಪಟ್ಟ ಲಕ್ಷಾಂತರ ಜನರ ಬದುಕು ಇಷ್ಟು ದಶಕಗಳಾದರೂ ಬೆಳಕು ಕಾಣಲೇ ಇಲ್ಲ. ನಾಡಿಗೇ ಬೆಳಕು ಕೊಟ್ಟ ಶರಾವತಿ, ವಾರಾಹಿಯರ ಮಕ್ಕಳ ಬದುಕು ಕತ್ತಲಲ್ಲೇ ಉಳಿಯಿತು. ಸರ್ಕಾರಗಳು ನೀಡಿದ್ದು ಪುಗಸಟ್ಟೆ ಭರವಸೆಗಳನ್ನು ಮಾತ್ರವೇ ಹೊರತು ಪುಡಿಗಾಸಿನ ಪರಿಹಾರವೂ ದೊರೆಯಲಿಲ್ಲ. ಇಂತಹ ಸನ್ನಿವೇಶದಲ್ಲಿ ಶರಾವತಿ ಮಕ್ಕಳ ಪ್ರಶ್ನೆ ಇದು- ರಾಜ್ಯವನ್ನು ಏಳಿಗೆ ಮಾಡಲು ಜಾರಿ ಮಾಡಿದ ಯೋಜನೆಗಳ ಮೂಲಕ ನಮ್ಮ ಬದುಕುಗಳನ್ನೇ ಮುಳುಗಡೆ ಮಾಡಿರುವ ನೀವು ಇನ್ನೂ ನಮ್ಮ ಮೇಲೆ ಎಷ್ಟು ಸಲ ದೌರ್ಜನ್ಯ ನಡೆಸುತ್ತೀರಿ ಎಂದು ಅವರೀಗ ತಿರುಗಿ ಬಿದ್ದಿದ್ದಾರೆ.

ಸಮುದ್ರಕ್ಕೆ ಪೋಲಾಗಿ ಹೋಗುವ ನೀರು?

ಶರಾವತಿ ನದಿಯನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ಕುರಿತು ಸುದ್ದಿ ಮಾಧ್ಯಮಗಳೆದುರು ಮಾತಾಡಿರುವ ಮಾನ್ಯ ಉಪಮುಖ್ಯಮಂತ್ರಿಗಳು “ಸಮುದ್ರಕ್ಕೆ ಪೋಲಾಗಿ ಹೋಗುವ ನೀರನ್ನು ಬೆಂಗಳೂರಿಗೆ ತರಿಸುತ್ತೇವೆ” ಎಂದು ಆಡಿರುವ ಮಾತು ಈ ಭಾಗದ ಜನರಿಗೆ ಆಕ್ರೋಶವನ್ನೇ ತರಿಸಿದೆ. ಜೋಗ ಜಲಪಾತದ ನಂತರದಲ್ಲಿ ಶರಾವತಿಯ ಟೇಲ್‍ಎಂಡ್‍ನಲ್ಲಿ ಈ ನದಿಯ ಹರಿವನ್ನೇ ಆಶ್ರಯಿಸಿ ಬದುಕುತ್ತಿರುವ ನೂರಾರು ಎಷ್ಟೋ ಹಳ್ಳಿಗಳ ಸಾವಿರಾರು ಮೀನುಗಾರರ, ಕೃಷಿಕರ ಮಾನವ ಹಕ್ಕಿನ ಉಲ್ಲಂಘನೆಯ ಮಾತೂ ಹೌದಾಗಿದೆ. ಈ ನೀರನ್ನೇ ಆಶ್ರಯಿಸಿರುವ ಅಸಂಖ್ಯಾತ ಜಲಚರಗಳ, ವನ್ಯಜೀವಿಗಳ ಪಾಲಿನ ಮರಣಶಾಸನವೂ ಹೌದು. ಅಷ್ಟಕ್ಕೂ ಕಳೆದ ಕೆಲವು ದಶಕಗಳಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿ ನದೀಪಾತ್ರವೇ ಕಿರಿದಾಗಿ ಹೋಗಿರುವ ಬಗ್ಗೆ ಇವರಿಗೇನಾದರೂ ಕಾಳಜಿ ಇದೆಯೇ? ಲಿಂಗನಮಕ್ಕಿ ಅಣೆಕಟ್ಟೆ ಪೂರ್ತಿ ತುಂಬಿದಾಗ 155 ಟಿಎಂಸಿ ನೀರು ಹಿಡಿದಿಡುತ್ತದೆ ಎನ್ನಲಾಗಿದೆ. ಆದರೆ ಈಗ ಡ್ಯಾಮಿನಲ್ಲ್ಲಿ ಶೇಕಡಾ 40ರಷ್ಟು ಹೂಳು ತುಂಬಿಕೊಂಡಿದೆ. ಕಳೆದ ಒಂದು ದಶಕದಲ್ಲಿ ಅಣೆಕಟ್ಟೆ ಪೂರ್ತಿ ತುಂಬಿರುವುದು ಕೇವಲ ಎರಡು ಸಲ ಮಾತ್ರ. ಉಳಿದ ವರ್ಷಗಳಲ್ಲಿ ಮಳೆಯ ಕೊರತೆಯಿಂದಾಗಿ ಅರ್ಧ ಮಟ್ಟವನ್ನೂ ತುಂಬಿರುವುದಿಲ್ಲ. ಈ ಸ್ಥಿತಿಯಲ್ಲಿ 30 ಟಿಎಂಸಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಮಾತೆಷ್ಟು ಅವಿವೇಕತನದ್ದು ಎಂಬುದು ಸ್ಪಷ್ಟವಾಗಿದೆ.

ಕಾವೇರಿದ ಶರಾವತಿ ಕಣಿವೆ

ಶರಾವತಿಯಿಂದ ಬೆಂಗಳೂರಿಗೆ ನೀರು ಒಯ್ಯುವ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ. ಪ್ರಾಣ ಕೊಟ್ಟೇವು ಶರಾವತಿ ಬಿಡೆವು ಎಂಬ ಘೋಷಣೆಗಳು ಈಗ ಈ ಭಾಗದ ಹಳ್ಳಿಹಳ್ಳಿಗಳಲ್ಲಿ ಮೊಳಗತೊಡಗಿವೆ. ಕಾಂಗ್ರೆಸ್ ಜೆಡಿಎಸ್‍ಗಳನ್ನೂ ಒಳಗೊಂಡಂತೆ ಈ ಭಾಗದ ರಾಜಕೀಯ ಮುಖಂಡರು ಯೋಜನೆಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾದ್ಯಂತ ಹರಳುಗಟ್ಟುತ್ತಿರುವ ಆಂದೋಲನಕ್ಕೆ ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ ನಾಯಕತ್ವ ನೀಡುತ್ತಿದೆ. ನಾಡಿನ ಹಿರಿಯ ಸಾಹಿತಿ ನಾ ಡಿಸೋಜಾ ಇದರ ಗೌರವಾಧ್ಯಕ್ಷರಾಗಿ ತಮ್ಮ 86ರ ಇಳಿ ವಯಸ್ಸಿನಲ್ಲಿಯೂ ಹಳ್ಳಿಗಳಿಗೆ ಹೋಗಿ ಸಭೆಗಳಲ್ಲಿ ಭಾಗವಹಿಸುತ್ತಾ ಯುವಕರಿಗೆಲ್ಲಾ ಪ್ರೇರಣೆಯಾಗಿದ್ದಾರೆ. ಸಾಗರ ತಾಲ್ಲೂಕಿನ ಆವಿನಹಳ್ಳಿ, ತುಮರಿ, ತ್ಯಾಗತಿ, ಆನಂದಪುರ, ಹೊಸನಗರ, ರಿಪ್ಪನ್ ಪೇಟೆ, ಬಿದನೂರು-ನಗರ, ಶಿರಾಳಕೊಪ್ಪ, ಸೊರಬದ ಎಲ್ಲ ಹೋಬಳಿ ಕೇಂದ್ರಗಳು ಹೀಗೆ ಎಲ್ಲಾ ಕಡೆಗಳಲ್ಲಿ ಇದುವರೆಗೆ ನೂರಾರು ಸಭೆಗಳು ನಡೆದಿವೆ, ಸ್ಥಳೀಯವಾಗಿ ಸಣ್ಣ, ದೊಡ್ಡ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ.
ಒಟ್ಟಿನಲ್ಲಿ ಜುಲೈ 10ರಂದು ಇಡೀ ಶಿವಮೊಗ್ಗ ಜಿಲ್ಲೆಯ ವ್ಯಾಪಾರ-ವಹಿವಾಟು, ಮತ್ತೆಲ್ಲ ಆರ್ಥಿಕ ಶೈಕ್ಷಣಿಕ ಚಟುವಟಿಕೆಗಳು ಸ್ತಬ್ದಗೊಳ್ಳುವುದಂತೂ ಖಚಿತವಾಗಿದೆ. ಒಂದೊಮ್ಮೆ ಇದಕ್ಕೂ ಸರ್ಕಾರ ಬಗ್ಗದಿದ್ದರೆ ಇಡೀ ಮಲೆನಾಡು ವ್ಯಘ್ರಗೊಳ್ಳಲೂಬಹುದು… ಸರ್ಕಾರಕ್ಕೆ ಜವಾಬ್ದಾರಿ, ಜನರ ಆತಂಕಗಳನ್ನು ಕೇಳಿಸಿಕೊಳ್ಳುವ ಮನಸ್ಸು ಇರುವುದೇ ನಿಜವಾದರೆ ಯಾವುದೇ ಅನಾಹುತಗಳಿಗೆ ಮೊದಲು ಈ ಯೋಜನೆ ಕೈ ಬಿಡಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...