Homeಕರ್ನಾಟಕಶರಾವತಿ ಕಣಿವೆಯ ಕೂಗು

ಶರಾವತಿ ಕಣಿವೆಯ ಕೂಗು

ಏನದು ಯೋಜನೆ? ಯಾಕೆ ಈ ಮಟ್ಟದ ವಿರೋಧ

- Advertisement -
- Advertisement -

ಕಳೆದ ಒಂದು ವಾರದಿಂದ ಶರಾವತಿ ಕಣಿವೆ ಕದಲುತ್ತಿದೆ. ಉಪಮುಖ್ಯಮಂತ್ರಿ ಡಾಜಿ.ಪರಮೇಶ್ವರ್ ಅವರು ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ನಿಭಾಯಿಸಲು ಶರಾವತಿ ನದಿಯ ನೀರನ್ನು ತರುವ 12,500 ಕೋಟಿ ರೂಪಾಯಿ ವೆಚ್ಚದ ಯೋಜನೆಯೊಂದಕ್ಕೆ ಡಿಪಿಆರ್ ತಯಾರಿಸಲು ಆದೇಶ ನೀಡಲಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದೇ ತಡ ಶರಾವತಿಯ ಎಡ ಬಲಗಳ ಊರುಗಳ ಜನರೆಲ್ಲ ಕೆಂಡಾಮಂಡಲವಾಗಿದ್ದಾರೆ. ಅವರು ಹಾಗೆ ಹೇಳಿದ ಎರಡೇ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಜನಾಂದೋಲನವೊಂದು ಶುರುವಾಗಿ ಈಗ ಜಿಲ್ಲೆಯ ಪ್ರತಿ ತಾಲ್ಲೂಕು ಪ್ರತಿ ಹೋಬಳಿ ಹಾಗೂ ಪ್ರತಿ ಊರಿನಲ್ಲೂ ಪ್ರತಿಧ್ವನಿಸತೊಡಗಿದೆ. ಚಳವಳಿಗಳ ತವರೂರೆಂದೇ ಹೆಸರಾಗಿರುವ ಶಿವಮೊಗ್ಗ ಜಿಲ್ಲೆ ಹಲವಾರು ವರ್ಷಗಳ ನಂತರ ಬೃಹತ್ ಮಟ್ಟದ ಹೋರಾಟವೊಂದಕ್ಕೆ ಸಾಕ್ಷಿಯಾಗಿದ್ದು ಜುಲೈ 10ನೇ ತಾರೀಖಿನಂದು ಕರೆನೀಡಿರುವ ಶಿವಮೊಗ್ಗ ಜಿಲ್ಲೆ ಬಂದ್ ಬಹುತೇಕ ಯಶಸ್ವಿಗೊಳ್ಳುವುದು ಖಚಿತವಾಗಿದೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್- ಜೆಡಿಎಸ್ ಸರ್ಕಾರ ಭಾರೀ ಮುಖಭಂಗಕ್ಕೊಳಗಾಗಲಿರುವುದೂ ನಿಜ. ಮಾತ್ರವಲ್ಲ ಈ ವಿಷಯ ವಿರೋಧ ಪಕ್ಷವಾಗಿರುವ ಬಿಜೆಪಿಗೂ ಮಲೆನಾಡಿನಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಅಭಿಪ್ರಾಯ ರೂಪಿಸಲು ಹೇಳಿ ಮಾಡಿಸಿದಂತಿದೆ. ಈಗಾಗಲೇ ಈ ಭಾಗದ ಹಲವು ಕಾಂಗ್ರೆಸ್-ಜೆಡಿಎಸ್ ನಾಯಕರು, ಕಾರ್ಯಕರ್ತರು ಸರ್ಕಾರವನ್ನು ಸಮರ್ಥಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.


ಏನದು ಯೋಜನೆ?
ಯಾಕೆ ಈ ಮಟ್ಟದ ವಿರೋಧ
2031ನೇ ಇಸವಿಗೆ ಬೆಂಗಳೂರು ಎದುರಿಸುವ ಕುಡಿಯುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು 2010ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿವೃತ್ತ ಚೀಫ್ ಎಂಜಿನಿಯರ್ ತ್ಯಾಗರಾಜ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಅದು 2014ರಲ್ಲಿ ವರದಿ ಸಲ್ಲಿಸಿ ಇರುವ ಎಲ್ಲಾ ಮಾರ್ಗಗಳ ಪೈಕಿ ಶರಾವತಿ ನದಿಯಿಂದ ನೀರು ತರುವುದೇ ಉತ್ತಮ ಮಾರ್ಗ ಎಂದು ಶಿಫಾರಸು ನೀಡಿತ್ತು. ಆದರೆ 2014ಲ್ಲೇ ಈ ವರದಿ ಪ್ರಾಯೋಗಿಕವಲ್ಲ ಎಂಬ ಅಭಿಪ್ರಾಯಗಳು ತಜ್ಞ ವಲಯದಿಂದ ಬಂದಿದ್ದವು. ಇದರ ನಂತರ 2016ರಲ್ಲಿ ಕೇಂದ್ರ ಜಲ ಆಯೋಗದ ಮಾಜಿ ಅಧ್ಯಕ್ಷ ಎ.ಕೆ. ಬಜಾಜ್ ನೇತೃತ್ವದ ಸಮಿತಿಯೊಂದನ್ನು ನೇಮಿಸಲಾಗಿತ್ತು.

ಆದರೆ ಹಾಲಿ ಸರ್ಕಾರ 2014ರ ತ್ಯಾಗರಾಜ್ ಸಮಿತಿ ವರದಿಯನ್ನೇ ಹಠ ಹಿಡಿದು ಜಾರಿಗೊಳಿಸಲು ಹೊರಟಿರುವುದು ತೀವ್ರ ಟೀಕೆಗೆ, ಜನವಿರೋಧಕ್ಕೆ ಕಾರಣವಾಗುವುದು ಮಾತ್ರವಲ್ಲ ಅನುಮಾನಗಳಿಗೂ ಕಾರಣವಾಗಿದೆ. 12 ಸಾವಿರ ಕೋಟಿ ರೂಪಾಯಿಗಳ ಯೋಜನೆಯನ್ನು ಡಿಸಿಎಂ ಘೋಷಿಸುವುದರ ಹಿಂದೆ ಬೆಂಗಳೂರಿಗೆ ನೀರು ತರುವುದಕ್ಕಿಂತಲೂ ಹೆಚ್ಚಾಗಿ ತಮ್ಮ ತಿಜೋರಿ ಭರ್ತಿ ಮಾಡಿಕೊಳ್ಳುವ ಉದ್ದೇಶವೇ ಇರಬಹುದೆ ಎಂದು ಗುಮಾನಿ ಎದ್ದಿದೆ. ಈಗಗಲೇ 18 ಸಾವಿರ ಕೋಟಿ ವೆಚ್ಚದ ಇಂತಹುವೇ ಒಂದು ಅಪ್ರಾಯೋಗಿಕ ಫ್ಲಾಪ್ ಯೋಜನೆಯನ್ನು ಎತ್ತಿನಹೊಳೆ ಹೆಸರಲ್ಲಿ ಜಾರಿಗೊಳಿಸಿ, ಅತ್ತ ನದಿ ಒರತೆಗಳೂ ಬತ್ತಿ ಇತ್ತ ನೀರೂ ಇಲ್ಲದ ಸ್ಥಿತಿ ಉಂಟಾಗಿರುವ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಅಂತಹುದ್ದೇ ಮತ್ತೊಂದು ಯೋಜನೆ ಘೋಷಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
ಶರಾವತಿ ಕಣಿವೆಯ ಜನತೆ ಈ ಮಟ್ಟದಲ್ಲಿ ಪ್ರತಿಕ್ರಿಯಿಸಲು ಕಳೆದ ಎಂಟು ದಶಕಗಳಿಂದಲೂ ಪದೇ ಪದೇ ಅಭಿವೃದ್ಧಿ ಹೆಸರಿನ ಯೋಜನೆಗಳಿಗೆ ಅವರು ತಲೆ ಕೊಟ್ಟುಕೊಂಡು ಬಂದಿರುವುದೇ ಆಗಿದೆ. 1940ರ ದಶಕದಷ್ಟು ಹಿಂದೆಯೇ ಹಿರೇಭಾಸ್ಕರ ಜಲಾಶಯಕ್ಕಾಗಿ ಮನೆ ಮಠ ತೊರೆದು ಬೀದಿಗೆ ಬಿದ್ದವರು ಮತ್ತೆ 1964ರಲ್ಲಿ ಲಿಂಗನಮಕ್ಕಿ ಅಣೆಕಟ್ಟೆಯಾದಾಗ, ನಂತರ ತಲಕಳಲೆ ಅಣೆಕಟ್ಟೆಯಾದಾಗ ಮತ್ತೆ ಮತ್ತೆ ಬೀದಿಗೆ ಬಿದ್ದರು. ವಾರಾಹಿ ನದಿಗೆ ಅಡ್ಡಲಾಗಿ ಮಾಣಿ, ಚಕ್ರಾ ನದಿಗೆ ಸಾವೆಹಕ್ಲು ಅಣೆಕಟ್ಟೆ ಕಟ್ಟುವಾಗ ಕತ್ತಲಿಗೆ ತಳ್ಳಲ್ಪಟ್ಟ ಲಕ್ಷಾಂತರ ಜನರ ಬದುಕು ಇಷ್ಟು ದಶಕಗಳಾದರೂ ಬೆಳಕು ಕಾಣಲೇ ಇಲ್ಲ. ನಾಡಿಗೇ ಬೆಳಕು ಕೊಟ್ಟ ಶರಾವತಿ, ವಾರಾಹಿಯರ ಮಕ್ಕಳ ಬದುಕು ಕತ್ತಲಲ್ಲೇ ಉಳಿಯಿತು. ಸರ್ಕಾರಗಳು ನೀಡಿದ್ದು ಪುಗಸಟ್ಟೆ ಭರವಸೆಗಳನ್ನು ಮಾತ್ರವೇ ಹೊರತು ಪುಡಿಗಾಸಿನ ಪರಿಹಾರವೂ ದೊರೆಯಲಿಲ್ಲ. ಇಂತಹ ಸನ್ನಿವೇಶದಲ್ಲಿ ಶರಾವತಿ ಮಕ್ಕಳ ಪ್ರಶ್ನೆ ಇದು- ರಾಜ್ಯವನ್ನು ಏಳಿಗೆ ಮಾಡಲು ಜಾರಿ ಮಾಡಿದ ಯೋಜನೆಗಳ ಮೂಲಕ ನಮ್ಮ ಬದುಕುಗಳನ್ನೇ ಮುಳುಗಡೆ ಮಾಡಿರುವ ನೀವು ಇನ್ನೂ ನಮ್ಮ ಮೇಲೆ ಎಷ್ಟು ಸಲ ದೌರ್ಜನ್ಯ ನಡೆಸುತ್ತೀರಿ ಎಂದು ಅವರೀಗ ತಿರುಗಿ ಬಿದ್ದಿದ್ದಾರೆ.

ಸಮುದ್ರಕ್ಕೆ ಪೋಲಾಗಿ ಹೋಗುವ ನೀರು?

ಶರಾವತಿ ನದಿಯನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ಕುರಿತು ಸುದ್ದಿ ಮಾಧ್ಯಮಗಳೆದುರು ಮಾತಾಡಿರುವ ಮಾನ್ಯ ಉಪಮುಖ್ಯಮಂತ್ರಿಗಳು “ಸಮುದ್ರಕ್ಕೆ ಪೋಲಾಗಿ ಹೋಗುವ ನೀರನ್ನು ಬೆಂಗಳೂರಿಗೆ ತರಿಸುತ್ತೇವೆ” ಎಂದು ಆಡಿರುವ ಮಾತು ಈ ಭಾಗದ ಜನರಿಗೆ ಆಕ್ರೋಶವನ್ನೇ ತರಿಸಿದೆ. ಜೋಗ ಜಲಪಾತದ ನಂತರದಲ್ಲಿ ಶರಾವತಿಯ ಟೇಲ್‍ಎಂಡ್‍ನಲ್ಲಿ ಈ ನದಿಯ ಹರಿವನ್ನೇ ಆಶ್ರಯಿಸಿ ಬದುಕುತ್ತಿರುವ ನೂರಾರು ಎಷ್ಟೋ ಹಳ್ಳಿಗಳ ಸಾವಿರಾರು ಮೀನುಗಾರರ, ಕೃಷಿಕರ ಮಾನವ ಹಕ್ಕಿನ ಉಲ್ಲಂಘನೆಯ ಮಾತೂ ಹೌದಾಗಿದೆ. ಈ ನೀರನ್ನೇ ಆಶ್ರಯಿಸಿರುವ ಅಸಂಖ್ಯಾತ ಜಲಚರಗಳ, ವನ್ಯಜೀವಿಗಳ ಪಾಲಿನ ಮರಣಶಾಸನವೂ ಹೌದು. ಅಷ್ಟಕ್ಕೂ ಕಳೆದ ಕೆಲವು ದಶಕಗಳಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿ ನದೀಪಾತ್ರವೇ ಕಿರಿದಾಗಿ ಹೋಗಿರುವ ಬಗ್ಗೆ ಇವರಿಗೇನಾದರೂ ಕಾಳಜಿ ಇದೆಯೇ? ಲಿಂಗನಮಕ್ಕಿ ಅಣೆಕಟ್ಟೆ ಪೂರ್ತಿ ತುಂಬಿದಾಗ 155 ಟಿಎಂಸಿ ನೀರು ಹಿಡಿದಿಡುತ್ತದೆ ಎನ್ನಲಾಗಿದೆ. ಆದರೆ ಈಗ ಡ್ಯಾಮಿನಲ್ಲ್ಲಿ ಶೇಕಡಾ 40ರಷ್ಟು ಹೂಳು ತುಂಬಿಕೊಂಡಿದೆ. ಕಳೆದ ಒಂದು ದಶಕದಲ್ಲಿ ಅಣೆಕಟ್ಟೆ ಪೂರ್ತಿ ತುಂಬಿರುವುದು ಕೇವಲ ಎರಡು ಸಲ ಮಾತ್ರ. ಉಳಿದ ವರ್ಷಗಳಲ್ಲಿ ಮಳೆಯ ಕೊರತೆಯಿಂದಾಗಿ ಅರ್ಧ ಮಟ್ಟವನ್ನೂ ತುಂಬಿರುವುದಿಲ್ಲ. ಈ ಸ್ಥಿತಿಯಲ್ಲಿ 30 ಟಿಎಂಸಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಮಾತೆಷ್ಟು ಅವಿವೇಕತನದ್ದು ಎಂಬುದು ಸ್ಪಷ್ಟವಾಗಿದೆ.

ಕಾವೇರಿದ ಶರಾವತಿ ಕಣಿವೆ

ಶರಾವತಿಯಿಂದ ಬೆಂಗಳೂರಿಗೆ ನೀರು ಒಯ್ಯುವ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ. ಪ್ರಾಣ ಕೊಟ್ಟೇವು ಶರಾವತಿ ಬಿಡೆವು ಎಂಬ ಘೋಷಣೆಗಳು ಈಗ ಈ ಭಾಗದ ಹಳ್ಳಿಹಳ್ಳಿಗಳಲ್ಲಿ ಮೊಳಗತೊಡಗಿವೆ. ಕಾಂಗ್ರೆಸ್ ಜೆಡಿಎಸ್‍ಗಳನ್ನೂ ಒಳಗೊಂಡಂತೆ ಈ ಭಾಗದ ರಾಜಕೀಯ ಮುಖಂಡರು ಯೋಜನೆಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾದ್ಯಂತ ಹರಳುಗಟ್ಟುತ್ತಿರುವ ಆಂದೋಲನಕ್ಕೆ ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ ನಾಯಕತ್ವ ನೀಡುತ್ತಿದೆ. ನಾಡಿನ ಹಿರಿಯ ಸಾಹಿತಿ ನಾ ಡಿಸೋಜಾ ಇದರ ಗೌರವಾಧ್ಯಕ್ಷರಾಗಿ ತಮ್ಮ 86ರ ಇಳಿ ವಯಸ್ಸಿನಲ್ಲಿಯೂ ಹಳ್ಳಿಗಳಿಗೆ ಹೋಗಿ ಸಭೆಗಳಲ್ಲಿ ಭಾಗವಹಿಸುತ್ತಾ ಯುವಕರಿಗೆಲ್ಲಾ ಪ್ರೇರಣೆಯಾಗಿದ್ದಾರೆ. ಸಾಗರ ತಾಲ್ಲೂಕಿನ ಆವಿನಹಳ್ಳಿ, ತುಮರಿ, ತ್ಯಾಗತಿ, ಆನಂದಪುರ, ಹೊಸನಗರ, ರಿಪ್ಪನ್ ಪೇಟೆ, ಬಿದನೂರು-ನಗರ, ಶಿರಾಳಕೊಪ್ಪ, ಸೊರಬದ ಎಲ್ಲ ಹೋಬಳಿ ಕೇಂದ್ರಗಳು ಹೀಗೆ ಎಲ್ಲಾ ಕಡೆಗಳಲ್ಲಿ ಇದುವರೆಗೆ ನೂರಾರು ಸಭೆಗಳು ನಡೆದಿವೆ, ಸ್ಥಳೀಯವಾಗಿ ಸಣ್ಣ, ದೊಡ್ಡ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ.
ಒಟ್ಟಿನಲ್ಲಿ ಜುಲೈ 10ರಂದು ಇಡೀ ಶಿವಮೊಗ್ಗ ಜಿಲ್ಲೆಯ ವ್ಯಾಪಾರ-ವಹಿವಾಟು, ಮತ್ತೆಲ್ಲ ಆರ್ಥಿಕ ಶೈಕ್ಷಣಿಕ ಚಟುವಟಿಕೆಗಳು ಸ್ತಬ್ದಗೊಳ್ಳುವುದಂತೂ ಖಚಿತವಾಗಿದೆ. ಒಂದೊಮ್ಮೆ ಇದಕ್ಕೂ ಸರ್ಕಾರ ಬಗ್ಗದಿದ್ದರೆ ಇಡೀ ಮಲೆನಾಡು ವ್ಯಘ್ರಗೊಳ್ಳಲೂಬಹುದು… ಸರ್ಕಾರಕ್ಕೆ ಜವಾಬ್ದಾರಿ, ಜನರ ಆತಂಕಗಳನ್ನು ಕೇಳಿಸಿಕೊಳ್ಳುವ ಮನಸ್ಸು ಇರುವುದೇ ನಿಜವಾದರೆ ಯಾವುದೇ ಅನಾಹುತಗಳಿಗೆ ಮೊದಲು ಈ ಯೋಜನೆ ಕೈ ಬಿಡಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...