Homeಕರ್ನಾಟಕಶರಾವತಿ ಕಣಿವೆಯ ಕೂಗು

ಶರಾವತಿ ಕಣಿವೆಯ ಕೂಗು

ಏನದು ಯೋಜನೆ? ಯಾಕೆ ಈ ಮಟ್ಟದ ವಿರೋಧ

- Advertisement -
- Advertisement -

ಕಳೆದ ಒಂದು ವಾರದಿಂದ ಶರಾವತಿ ಕಣಿವೆ ಕದಲುತ್ತಿದೆ. ಉಪಮುಖ್ಯಮಂತ್ರಿ ಡಾಜಿ.ಪರಮೇಶ್ವರ್ ಅವರು ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ನಿಭಾಯಿಸಲು ಶರಾವತಿ ನದಿಯ ನೀರನ್ನು ತರುವ 12,500 ಕೋಟಿ ರೂಪಾಯಿ ವೆಚ್ಚದ ಯೋಜನೆಯೊಂದಕ್ಕೆ ಡಿಪಿಆರ್ ತಯಾರಿಸಲು ಆದೇಶ ನೀಡಲಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದೇ ತಡ ಶರಾವತಿಯ ಎಡ ಬಲಗಳ ಊರುಗಳ ಜನರೆಲ್ಲ ಕೆಂಡಾಮಂಡಲವಾಗಿದ್ದಾರೆ. ಅವರು ಹಾಗೆ ಹೇಳಿದ ಎರಡೇ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಜನಾಂದೋಲನವೊಂದು ಶುರುವಾಗಿ ಈಗ ಜಿಲ್ಲೆಯ ಪ್ರತಿ ತಾಲ್ಲೂಕು ಪ್ರತಿ ಹೋಬಳಿ ಹಾಗೂ ಪ್ರತಿ ಊರಿನಲ್ಲೂ ಪ್ರತಿಧ್ವನಿಸತೊಡಗಿದೆ. ಚಳವಳಿಗಳ ತವರೂರೆಂದೇ ಹೆಸರಾಗಿರುವ ಶಿವಮೊಗ್ಗ ಜಿಲ್ಲೆ ಹಲವಾರು ವರ್ಷಗಳ ನಂತರ ಬೃಹತ್ ಮಟ್ಟದ ಹೋರಾಟವೊಂದಕ್ಕೆ ಸಾಕ್ಷಿಯಾಗಿದ್ದು ಜುಲೈ 10ನೇ ತಾರೀಖಿನಂದು ಕರೆನೀಡಿರುವ ಶಿವಮೊಗ್ಗ ಜಿಲ್ಲೆ ಬಂದ್ ಬಹುತೇಕ ಯಶಸ್ವಿಗೊಳ್ಳುವುದು ಖಚಿತವಾಗಿದೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್- ಜೆಡಿಎಸ್ ಸರ್ಕಾರ ಭಾರೀ ಮುಖಭಂಗಕ್ಕೊಳಗಾಗಲಿರುವುದೂ ನಿಜ. ಮಾತ್ರವಲ್ಲ ಈ ವಿಷಯ ವಿರೋಧ ಪಕ್ಷವಾಗಿರುವ ಬಿಜೆಪಿಗೂ ಮಲೆನಾಡಿನಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಅಭಿಪ್ರಾಯ ರೂಪಿಸಲು ಹೇಳಿ ಮಾಡಿಸಿದಂತಿದೆ. ಈಗಾಗಲೇ ಈ ಭಾಗದ ಹಲವು ಕಾಂಗ್ರೆಸ್-ಜೆಡಿಎಸ್ ನಾಯಕರು, ಕಾರ್ಯಕರ್ತರು ಸರ್ಕಾರವನ್ನು ಸಮರ್ಥಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.


ಏನದು ಯೋಜನೆ?
ಯಾಕೆ ಈ ಮಟ್ಟದ ವಿರೋಧ
2031ನೇ ಇಸವಿಗೆ ಬೆಂಗಳೂರು ಎದುರಿಸುವ ಕುಡಿಯುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು 2010ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿವೃತ್ತ ಚೀಫ್ ಎಂಜಿನಿಯರ್ ತ್ಯಾಗರಾಜ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಅದು 2014ರಲ್ಲಿ ವರದಿ ಸಲ್ಲಿಸಿ ಇರುವ ಎಲ್ಲಾ ಮಾರ್ಗಗಳ ಪೈಕಿ ಶರಾವತಿ ನದಿಯಿಂದ ನೀರು ತರುವುದೇ ಉತ್ತಮ ಮಾರ್ಗ ಎಂದು ಶಿಫಾರಸು ನೀಡಿತ್ತು. ಆದರೆ 2014ಲ್ಲೇ ಈ ವರದಿ ಪ್ರಾಯೋಗಿಕವಲ್ಲ ಎಂಬ ಅಭಿಪ್ರಾಯಗಳು ತಜ್ಞ ವಲಯದಿಂದ ಬಂದಿದ್ದವು. ಇದರ ನಂತರ 2016ರಲ್ಲಿ ಕೇಂದ್ರ ಜಲ ಆಯೋಗದ ಮಾಜಿ ಅಧ್ಯಕ್ಷ ಎ.ಕೆ. ಬಜಾಜ್ ನೇತೃತ್ವದ ಸಮಿತಿಯೊಂದನ್ನು ನೇಮಿಸಲಾಗಿತ್ತು.

ಆದರೆ ಹಾಲಿ ಸರ್ಕಾರ 2014ರ ತ್ಯಾಗರಾಜ್ ಸಮಿತಿ ವರದಿಯನ್ನೇ ಹಠ ಹಿಡಿದು ಜಾರಿಗೊಳಿಸಲು ಹೊರಟಿರುವುದು ತೀವ್ರ ಟೀಕೆಗೆ, ಜನವಿರೋಧಕ್ಕೆ ಕಾರಣವಾಗುವುದು ಮಾತ್ರವಲ್ಲ ಅನುಮಾನಗಳಿಗೂ ಕಾರಣವಾಗಿದೆ. 12 ಸಾವಿರ ಕೋಟಿ ರೂಪಾಯಿಗಳ ಯೋಜನೆಯನ್ನು ಡಿಸಿಎಂ ಘೋಷಿಸುವುದರ ಹಿಂದೆ ಬೆಂಗಳೂರಿಗೆ ನೀರು ತರುವುದಕ್ಕಿಂತಲೂ ಹೆಚ್ಚಾಗಿ ತಮ್ಮ ತಿಜೋರಿ ಭರ್ತಿ ಮಾಡಿಕೊಳ್ಳುವ ಉದ್ದೇಶವೇ ಇರಬಹುದೆ ಎಂದು ಗುಮಾನಿ ಎದ್ದಿದೆ. ಈಗಗಲೇ 18 ಸಾವಿರ ಕೋಟಿ ವೆಚ್ಚದ ಇಂತಹುವೇ ಒಂದು ಅಪ್ರಾಯೋಗಿಕ ಫ್ಲಾಪ್ ಯೋಜನೆಯನ್ನು ಎತ್ತಿನಹೊಳೆ ಹೆಸರಲ್ಲಿ ಜಾರಿಗೊಳಿಸಿ, ಅತ್ತ ನದಿ ಒರತೆಗಳೂ ಬತ್ತಿ ಇತ್ತ ನೀರೂ ಇಲ್ಲದ ಸ್ಥಿತಿ ಉಂಟಾಗಿರುವ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಅಂತಹುದ್ದೇ ಮತ್ತೊಂದು ಯೋಜನೆ ಘೋಷಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
ಶರಾವತಿ ಕಣಿವೆಯ ಜನತೆ ಈ ಮಟ್ಟದಲ್ಲಿ ಪ್ರತಿಕ್ರಿಯಿಸಲು ಕಳೆದ ಎಂಟು ದಶಕಗಳಿಂದಲೂ ಪದೇ ಪದೇ ಅಭಿವೃದ್ಧಿ ಹೆಸರಿನ ಯೋಜನೆಗಳಿಗೆ ಅವರು ತಲೆ ಕೊಟ್ಟುಕೊಂಡು ಬಂದಿರುವುದೇ ಆಗಿದೆ. 1940ರ ದಶಕದಷ್ಟು ಹಿಂದೆಯೇ ಹಿರೇಭಾಸ್ಕರ ಜಲಾಶಯಕ್ಕಾಗಿ ಮನೆ ಮಠ ತೊರೆದು ಬೀದಿಗೆ ಬಿದ್ದವರು ಮತ್ತೆ 1964ರಲ್ಲಿ ಲಿಂಗನಮಕ್ಕಿ ಅಣೆಕಟ್ಟೆಯಾದಾಗ, ನಂತರ ತಲಕಳಲೆ ಅಣೆಕಟ್ಟೆಯಾದಾಗ ಮತ್ತೆ ಮತ್ತೆ ಬೀದಿಗೆ ಬಿದ್ದರು. ವಾರಾಹಿ ನದಿಗೆ ಅಡ್ಡಲಾಗಿ ಮಾಣಿ, ಚಕ್ರಾ ನದಿಗೆ ಸಾವೆಹಕ್ಲು ಅಣೆಕಟ್ಟೆ ಕಟ್ಟುವಾಗ ಕತ್ತಲಿಗೆ ತಳ್ಳಲ್ಪಟ್ಟ ಲಕ್ಷಾಂತರ ಜನರ ಬದುಕು ಇಷ್ಟು ದಶಕಗಳಾದರೂ ಬೆಳಕು ಕಾಣಲೇ ಇಲ್ಲ. ನಾಡಿಗೇ ಬೆಳಕು ಕೊಟ್ಟ ಶರಾವತಿ, ವಾರಾಹಿಯರ ಮಕ್ಕಳ ಬದುಕು ಕತ್ತಲಲ್ಲೇ ಉಳಿಯಿತು. ಸರ್ಕಾರಗಳು ನೀಡಿದ್ದು ಪುಗಸಟ್ಟೆ ಭರವಸೆಗಳನ್ನು ಮಾತ್ರವೇ ಹೊರತು ಪುಡಿಗಾಸಿನ ಪರಿಹಾರವೂ ದೊರೆಯಲಿಲ್ಲ. ಇಂತಹ ಸನ್ನಿವೇಶದಲ್ಲಿ ಶರಾವತಿ ಮಕ್ಕಳ ಪ್ರಶ್ನೆ ಇದು- ರಾಜ್ಯವನ್ನು ಏಳಿಗೆ ಮಾಡಲು ಜಾರಿ ಮಾಡಿದ ಯೋಜನೆಗಳ ಮೂಲಕ ನಮ್ಮ ಬದುಕುಗಳನ್ನೇ ಮುಳುಗಡೆ ಮಾಡಿರುವ ನೀವು ಇನ್ನೂ ನಮ್ಮ ಮೇಲೆ ಎಷ್ಟು ಸಲ ದೌರ್ಜನ್ಯ ನಡೆಸುತ್ತೀರಿ ಎಂದು ಅವರೀಗ ತಿರುಗಿ ಬಿದ್ದಿದ್ದಾರೆ.

ಸಮುದ್ರಕ್ಕೆ ಪೋಲಾಗಿ ಹೋಗುವ ನೀರು?

ಶರಾವತಿ ನದಿಯನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ಕುರಿತು ಸುದ್ದಿ ಮಾಧ್ಯಮಗಳೆದುರು ಮಾತಾಡಿರುವ ಮಾನ್ಯ ಉಪಮುಖ್ಯಮಂತ್ರಿಗಳು “ಸಮುದ್ರಕ್ಕೆ ಪೋಲಾಗಿ ಹೋಗುವ ನೀರನ್ನು ಬೆಂಗಳೂರಿಗೆ ತರಿಸುತ್ತೇವೆ” ಎಂದು ಆಡಿರುವ ಮಾತು ಈ ಭಾಗದ ಜನರಿಗೆ ಆಕ್ರೋಶವನ್ನೇ ತರಿಸಿದೆ. ಜೋಗ ಜಲಪಾತದ ನಂತರದಲ್ಲಿ ಶರಾವತಿಯ ಟೇಲ್‍ಎಂಡ್‍ನಲ್ಲಿ ಈ ನದಿಯ ಹರಿವನ್ನೇ ಆಶ್ರಯಿಸಿ ಬದುಕುತ್ತಿರುವ ನೂರಾರು ಎಷ್ಟೋ ಹಳ್ಳಿಗಳ ಸಾವಿರಾರು ಮೀನುಗಾರರ, ಕೃಷಿಕರ ಮಾನವ ಹಕ್ಕಿನ ಉಲ್ಲಂಘನೆಯ ಮಾತೂ ಹೌದಾಗಿದೆ. ಈ ನೀರನ್ನೇ ಆಶ್ರಯಿಸಿರುವ ಅಸಂಖ್ಯಾತ ಜಲಚರಗಳ, ವನ್ಯಜೀವಿಗಳ ಪಾಲಿನ ಮರಣಶಾಸನವೂ ಹೌದು. ಅಷ್ಟಕ್ಕೂ ಕಳೆದ ಕೆಲವು ದಶಕಗಳಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿ ನದೀಪಾತ್ರವೇ ಕಿರಿದಾಗಿ ಹೋಗಿರುವ ಬಗ್ಗೆ ಇವರಿಗೇನಾದರೂ ಕಾಳಜಿ ಇದೆಯೇ? ಲಿಂಗನಮಕ್ಕಿ ಅಣೆಕಟ್ಟೆ ಪೂರ್ತಿ ತುಂಬಿದಾಗ 155 ಟಿಎಂಸಿ ನೀರು ಹಿಡಿದಿಡುತ್ತದೆ ಎನ್ನಲಾಗಿದೆ. ಆದರೆ ಈಗ ಡ್ಯಾಮಿನಲ್ಲ್ಲಿ ಶೇಕಡಾ 40ರಷ್ಟು ಹೂಳು ತುಂಬಿಕೊಂಡಿದೆ. ಕಳೆದ ಒಂದು ದಶಕದಲ್ಲಿ ಅಣೆಕಟ್ಟೆ ಪೂರ್ತಿ ತುಂಬಿರುವುದು ಕೇವಲ ಎರಡು ಸಲ ಮಾತ್ರ. ಉಳಿದ ವರ್ಷಗಳಲ್ಲಿ ಮಳೆಯ ಕೊರತೆಯಿಂದಾಗಿ ಅರ್ಧ ಮಟ್ಟವನ್ನೂ ತುಂಬಿರುವುದಿಲ್ಲ. ಈ ಸ್ಥಿತಿಯಲ್ಲಿ 30 ಟಿಎಂಸಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಮಾತೆಷ್ಟು ಅವಿವೇಕತನದ್ದು ಎಂಬುದು ಸ್ಪಷ್ಟವಾಗಿದೆ.

ಕಾವೇರಿದ ಶರಾವತಿ ಕಣಿವೆ

ಶರಾವತಿಯಿಂದ ಬೆಂಗಳೂರಿಗೆ ನೀರು ಒಯ್ಯುವ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ. ಪ್ರಾಣ ಕೊಟ್ಟೇವು ಶರಾವತಿ ಬಿಡೆವು ಎಂಬ ಘೋಷಣೆಗಳು ಈಗ ಈ ಭಾಗದ ಹಳ್ಳಿಹಳ್ಳಿಗಳಲ್ಲಿ ಮೊಳಗತೊಡಗಿವೆ. ಕಾಂಗ್ರೆಸ್ ಜೆಡಿಎಸ್‍ಗಳನ್ನೂ ಒಳಗೊಂಡಂತೆ ಈ ಭಾಗದ ರಾಜಕೀಯ ಮುಖಂಡರು ಯೋಜನೆಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾದ್ಯಂತ ಹರಳುಗಟ್ಟುತ್ತಿರುವ ಆಂದೋಲನಕ್ಕೆ ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ ನಾಯಕತ್ವ ನೀಡುತ್ತಿದೆ. ನಾಡಿನ ಹಿರಿಯ ಸಾಹಿತಿ ನಾ ಡಿಸೋಜಾ ಇದರ ಗೌರವಾಧ್ಯಕ್ಷರಾಗಿ ತಮ್ಮ 86ರ ಇಳಿ ವಯಸ್ಸಿನಲ್ಲಿಯೂ ಹಳ್ಳಿಗಳಿಗೆ ಹೋಗಿ ಸಭೆಗಳಲ್ಲಿ ಭಾಗವಹಿಸುತ್ತಾ ಯುವಕರಿಗೆಲ್ಲಾ ಪ್ರೇರಣೆಯಾಗಿದ್ದಾರೆ. ಸಾಗರ ತಾಲ್ಲೂಕಿನ ಆವಿನಹಳ್ಳಿ, ತುಮರಿ, ತ್ಯಾಗತಿ, ಆನಂದಪುರ, ಹೊಸನಗರ, ರಿಪ್ಪನ್ ಪೇಟೆ, ಬಿದನೂರು-ನಗರ, ಶಿರಾಳಕೊಪ್ಪ, ಸೊರಬದ ಎಲ್ಲ ಹೋಬಳಿ ಕೇಂದ್ರಗಳು ಹೀಗೆ ಎಲ್ಲಾ ಕಡೆಗಳಲ್ಲಿ ಇದುವರೆಗೆ ನೂರಾರು ಸಭೆಗಳು ನಡೆದಿವೆ, ಸ್ಥಳೀಯವಾಗಿ ಸಣ್ಣ, ದೊಡ್ಡ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ.
ಒಟ್ಟಿನಲ್ಲಿ ಜುಲೈ 10ರಂದು ಇಡೀ ಶಿವಮೊಗ್ಗ ಜಿಲ್ಲೆಯ ವ್ಯಾಪಾರ-ವಹಿವಾಟು, ಮತ್ತೆಲ್ಲ ಆರ್ಥಿಕ ಶೈಕ್ಷಣಿಕ ಚಟುವಟಿಕೆಗಳು ಸ್ತಬ್ದಗೊಳ್ಳುವುದಂತೂ ಖಚಿತವಾಗಿದೆ. ಒಂದೊಮ್ಮೆ ಇದಕ್ಕೂ ಸರ್ಕಾರ ಬಗ್ಗದಿದ್ದರೆ ಇಡೀ ಮಲೆನಾಡು ವ್ಯಘ್ರಗೊಳ್ಳಲೂಬಹುದು… ಸರ್ಕಾರಕ್ಕೆ ಜವಾಬ್ದಾರಿ, ಜನರ ಆತಂಕಗಳನ್ನು ಕೇಳಿಸಿಕೊಳ್ಳುವ ಮನಸ್ಸು ಇರುವುದೇ ನಿಜವಾದರೆ ಯಾವುದೇ ಅನಾಹುತಗಳಿಗೆ ಮೊದಲು ಈ ಯೋಜನೆ ಕೈ ಬಿಡಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...