Homeಕರ್ನಾಟಕದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ...

ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ

ಲಕ್ಷಾಂತರ ‘ದಲಿತ್‌ ಫೈಲ್ಸ್‌’ಗೆ ಮತ್ತೊಂದು ದಾರುಣ ಘಟನೆ ಸೇರ್ಪಡೆಯಾಗಿದೆ. ಆರೋಪಿ ಪರಾರಿಯಾಗಿದ್ದು, ಎಸ್‌ಟಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕನೊಬ್ಬ ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಹತ್ಯೆಗೊಳಗಾದ ಯುವತಿಯನ್ನು ದಾನೇಶ್ವರಿ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾನೇಶ್ವರಿಯ ತಂಗಿ ತೇಜೇಶ್ವರಿ ನೀಡಿದ ದೂರಿನ ಆಧಾರದ ಮೇಲೆ ಪರಾರಿಯಾಗಿರುವ ಶಿವಕುಮಾರ್ ಚಂದ್ರಶೇಖರ್ ಹಿರೇಹಾಳ ಎಂಬ ಯುವಕನ ಮೇಲೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ಲಿಂಗಾಯತ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂದು ತಿಳಿದುಬಂದಿದೆ.

ಹತ್ಯೆಗೊಳಗಾದ ದಾನೇಶ್ವರಿ ಮತ್ತು ಆರೋಪಿ ಶಿವಕುಮಾರ್ ಇಬ್ಬರು ವಿಜಯಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಅವರಿಬ್ಬರೂ ಒಟ್ಟಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ದಾನೇಶ್ವರಿಗೆ ಮಾತು ಕೊಟ್ಟಿದ್ದ ಎಂದು ಆಕೆಯ ತಂಗಿ ಪೊಲೀಸರಿಗೆ ತಿಳಿಸಿದ್ದಾರೆ.

ದಾನೇಶ್ವರಿಯು ಮದುವೆ ವಿಚಾರವನ್ನು ಶಿವಕುಮಾರ್ ಬಳಿ ಮಾತನಾಡಿದಾಗ ಆತ ತನ್ನ ಪೋಷಕರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದ. ವಿಜಯಪುರಕ್ಕೆ ಹೋಗಿ ಬಂದ ಬಳಿಕ ನಿನ್ನನ್ನು ಮದುವೆಯಾಗುವುದಿಲ್ಲ, ನಮ್ಮ ಮನೆಯವರು ಮದುವೆಗೆ ಒಪ್ಪಿಲ್ಲ, ಏಕೆಂದರೆ ನೀನು ಕೆಳಜಾತಿಗೆ ಸೇರಿರುವೆ ಎಂದು ನಿಂದಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 15 ರಂದು ದಾನೇಶ್ವರಿಯು ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದಾಗಲೂ ನೀನು ಕೆಳಜಾತಿ ಎಂದು ಜಾತಿನಿಂದನೆ ಮಾಡಿ ಹೀಯಾಳಿಸಿದ್ದ. ಅಲ್ಲದೆ ಈಗ ಮಾತನಾಡಲು ಸಾಧ್ಯವಿಲ್ಲ ಎಂದು ಯಾರು ಇಲ್ಲದ ಜಾಗಕ್ಕೆ ದಾನೇಶ್ವರಿಯನ್ನು ಕರೆಸಿಕೊಂಡು ಶಿವಕುಮಾರ್ ಮತ್ತು ಆತನ ಸ್ನೇಹಿತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತೆ ದಾನೇಶ್ವರಿಯನ್ನು ಆಸ್ಪತ್ರೆಗೆ ಸೇರಿಸಿ ಆರೋಪಿ ಶಿವಕುಮಾರ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು ಆತನ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಇನ್ನು ಯಾವುದೇ ಬಂಧನವಾಗಿಲ್ಲ.

ಮದುವೆ ವಿಚಾರವಾಗಿ ದಾನೇಶ್ವರಿ ಹಾಗೂ ಶಿವಕುಮಾರ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡ ದಾನೇಶ್ವರಿಯವರನ್ನು ಕೂಡ್ಲು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಮೃತಪಟ್ಟಿದ್ದಾರೆ.

“ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಹುಡುಗ ಬಾದಾಮಿ ಮೂಲದವನೆಂದು ತಿಳಿದುಬಂದಿದೆ. ಅವನು ವಾಸವಿದ್ದ ರೂಮಿಗೆ ಭೇಟಿ ನೀಡಿದಾಗ ಹುಡುಗ ತಲೆಮರೆಸಿಕೊಂಡಿದ್ದು, ಅವನ ಹುಡುಕಾಟ ನಡೆಯುತ್ತಿದೆ” ಎಂದು ಎಸಿಪಿ ರಮೇಶ್‌ ತಿಳಿಸಿರುವುದಾಗಿ ‘ಈ ದಿನ’ ಮಾಧ್ಯಮ ವರದಿ ಮಾಡಿದೆ.

ಯುವತಿಯ ತಂದೆ ಅಶೋಕ್ ಶರ್ಮ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ದಾನೇಶ್ವರಿಗೆ ಮದುವೆ ಮಾಡಲು ನಾವು ಸಿದ್ಧತೆಯಲ್ಲಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ನಮಗೆ ತಿಳಿಸಿದ್ದಳು. ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುವಾಗ ಪರಸ್ಪರ ಪ್ರೀತಿಸಿದ್ದಾರೆ. ನಾನು ಅವನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಆದರೆ ಅವನು ಒಪ್ಪಿರಲಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ನಿನ್ನ ಮದುವೆಯಾದರೆ ನನ್ನ ತಂದೆ ತಾಯಿ ಮನೆಗೆ ಸೇರಿಸುವುದಿಲ್ಲ ಎಂದು ಹೇಳಿರುವುದಾಗಿ ಮಗಳು ತಿಳಿಸಿದ್ದಳು” ಎಂದಿದ್ದಾರೆ.

“ನಮ್ಮ ಮಗಳು ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹೀಗಾಗಿ ಬಿಟಿಎಂ ಲೇಔಟ್‌ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿಯಿತು. ಕೂಡಲೇ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ದುಡ್ಡು ಕೂಡ ಹಾಕಿದ್ದೆ. ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಶಿವಕುಮಾರನು ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್‌ ಕೊಟ್ಟಿದ್ದಾನೆ” ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.


ಇದನ್ನೂ ಓದಿ; ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರೀ ಪೊಲೀಸರೇ ಸವರ್ಣಿ ಹುಡುಗನ ಕಡೆ ಸಪೋರ್ಟ್ ಮಾಡಿತ್ತಿರ ನೀವು ಯಾವತ್ತು ಉದ್ದಾರ ಆಗಲ್ಲ ಏಕೆಂದರೆ ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಹೇಳುತ್ತಿರಲ್ಲ ನಿಮಗೆ ಮಾನಮರ್ಯಾದೆ ಇಲ್ಲವ

  2. ಯಾಕೆಂದರೆ ಪೋಲೀಸರು ಮತ್ತು ಯಾವುದೇ ಅಧಿಕಾರಿ ವರ್ಗ ಬಲಿಷ್ಠರ ಅಥವಾ ಮೇಲ್ವರ್ಗದವರ ಪರವಾಗಿ ತಾನೆ ಕೆಲಸ ಮಾಡುವುದು

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...