Homeಕರ್ನಾಟಕದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ...

ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ

ಲಕ್ಷಾಂತರ ‘ದಲಿತ್‌ ಫೈಲ್ಸ್‌’ಗೆ ಮತ್ತೊಂದು ದಾರುಣ ಘಟನೆ ಸೇರ್ಪಡೆಯಾಗಿದೆ. ಆರೋಪಿ ಪರಾರಿಯಾಗಿದ್ದು, ಎಸ್‌ಟಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕನೊಬ್ಬ ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಹತ್ಯೆಗೊಳಗಾದ ಯುವತಿಯನ್ನು ದಾನೇಶ್ವರಿ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾನೇಶ್ವರಿಯ ತಂಗಿ ತೇಜೇಶ್ವರಿ ನೀಡಿದ ದೂರಿನ ಆಧಾರದ ಮೇಲೆ ಪರಾರಿಯಾಗಿರುವ ಶಿವಕುಮಾರ್ ಚಂದ್ರಶೇಖರ್ ಹಿರೇಹಾಳ ಎಂಬ ಯುವಕನ ಮೇಲೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ಲಿಂಗಾಯತ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂದು ತಿಳಿದುಬಂದಿದೆ.

ಹತ್ಯೆಗೊಳಗಾದ ದಾನೇಶ್ವರಿ ಮತ್ತು ಆರೋಪಿ ಶಿವಕುಮಾರ್ ಇಬ್ಬರು ವಿಜಯಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಅವರಿಬ್ಬರೂ ಒಟ್ಟಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ದಾನೇಶ್ವರಿಗೆ ಮಾತು ಕೊಟ್ಟಿದ್ದ ಎಂದು ಆಕೆಯ ತಂಗಿ ಪೊಲೀಸರಿಗೆ ತಿಳಿಸಿದ್ದಾರೆ.

ದಾನೇಶ್ವರಿಯು ಮದುವೆ ವಿಚಾರವನ್ನು ಶಿವಕುಮಾರ್ ಬಳಿ ಮಾತನಾಡಿದಾಗ ಆತ ತನ್ನ ಪೋಷಕರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದ. ವಿಜಯಪುರಕ್ಕೆ ಹೋಗಿ ಬಂದ ಬಳಿಕ ನಿನ್ನನ್ನು ಮದುವೆಯಾಗುವುದಿಲ್ಲ, ನಮ್ಮ ಮನೆಯವರು ಮದುವೆಗೆ ಒಪ್ಪಿಲ್ಲ, ಏಕೆಂದರೆ ನೀನು ಕೆಳಜಾತಿಗೆ ಸೇರಿರುವೆ ಎಂದು ನಿಂದಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 15 ರಂದು ದಾನೇಶ್ವರಿಯು ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದಾಗಲೂ ನೀನು ಕೆಳಜಾತಿ ಎಂದು ಜಾತಿನಿಂದನೆ ಮಾಡಿ ಹೀಯಾಳಿಸಿದ್ದ. ಅಲ್ಲದೆ ಈಗ ಮಾತನಾಡಲು ಸಾಧ್ಯವಿಲ್ಲ ಎಂದು ಯಾರು ಇಲ್ಲದ ಜಾಗಕ್ಕೆ ದಾನೇಶ್ವರಿಯನ್ನು ಕರೆಸಿಕೊಂಡು ಶಿವಕುಮಾರ್ ಮತ್ತು ಆತನ ಸ್ನೇಹಿತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತೆ ದಾನೇಶ್ವರಿಯನ್ನು ಆಸ್ಪತ್ರೆಗೆ ಸೇರಿಸಿ ಆರೋಪಿ ಶಿವಕುಮಾರ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು ಆತನ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಇನ್ನು ಯಾವುದೇ ಬಂಧನವಾಗಿಲ್ಲ.

ಮದುವೆ ವಿಚಾರವಾಗಿ ದಾನೇಶ್ವರಿ ಹಾಗೂ ಶಿವಕುಮಾರ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡ ದಾನೇಶ್ವರಿಯವರನ್ನು ಕೂಡ್ಲು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಮೃತಪಟ್ಟಿದ್ದಾರೆ.

“ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಹುಡುಗ ಬಾದಾಮಿ ಮೂಲದವನೆಂದು ತಿಳಿದುಬಂದಿದೆ. ಅವನು ವಾಸವಿದ್ದ ರೂಮಿಗೆ ಭೇಟಿ ನೀಡಿದಾಗ ಹುಡುಗ ತಲೆಮರೆಸಿಕೊಂಡಿದ್ದು, ಅವನ ಹುಡುಕಾಟ ನಡೆಯುತ್ತಿದೆ” ಎಂದು ಎಸಿಪಿ ರಮೇಶ್‌ ತಿಳಿಸಿರುವುದಾಗಿ ‘ಈ ದಿನ’ ಮಾಧ್ಯಮ ವರದಿ ಮಾಡಿದೆ.

ಯುವತಿಯ ತಂದೆ ಅಶೋಕ್ ಶರ್ಮ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ದಾನೇಶ್ವರಿಗೆ ಮದುವೆ ಮಾಡಲು ನಾವು ಸಿದ್ಧತೆಯಲ್ಲಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ನಮಗೆ ತಿಳಿಸಿದ್ದಳು. ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುವಾಗ ಪರಸ್ಪರ ಪ್ರೀತಿಸಿದ್ದಾರೆ. ನಾನು ಅವನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಆದರೆ ಅವನು ಒಪ್ಪಿರಲಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ನಿನ್ನ ಮದುವೆಯಾದರೆ ನನ್ನ ತಂದೆ ತಾಯಿ ಮನೆಗೆ ಸೇರಿಸುವುದಿಲ್ಲ ಎಂದು ಹೇಳಿರುವುದಾಗಿ ಮಗಳು ತಿಳಿಸಿದ್ದಳು” ಎಂದಿದ್ದಾರೆ.

“ನಮ್ಮ ಮಗಳು ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹೀಗಾಗಿ ಬಿಟಿಎಂ ಲೇಔಟ್‌ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿಯಿತು. ಕೂಡಲೇ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ದುಡ್ಡು ಕೂಡ ಹಾಕಿದ್ದೆ. ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಶಿವಕುಮಾರನು ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್‌ ಕೊಟ್ಟಿದ್ದಾನೆ” ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.


ಇದನ್ನೂ ಓದಿ; ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರೀ ಪೊಲೀಸರೇ ಸವರ್ಣಿ ಹುಡುಗನ ಕಡೆ ಸಪೋರ್ಟ್ ಮಾಡಿತ್ತಿರ ನೀವು ಯಾವತ್ತು ಉದ್ದಾರ ಆಗಲ್ಲ ಏಕೆಂದರೆ ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಹೇಳುತ್ತಿರಲ್ಲ ನಿಮಗೆ ಮಾನಮರ್ಯಾದೆ ಇಲ್ಲವ

  2. ಯಾಕೆಂದರೆ ಪೋಲೀಸರು ಮತ್ತು ಯಾವುದೇ ಅಧಿಕಾರಿ ವರ್ಗ ಬಲಿಷ್ಠರ ಅಥವಾ ಮೇಲ್ವರ್ಗದವರ ಪರವಾಗಿ ತಾನೆ ಕೆಲಸ ಮಾಡುವುದು

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...