Homeಕರ್ನಾಟಕದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ...

ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ

ಲಕ್ಷಾಂತರ ‘ದಲಿತ್‌ ಫೈಲ್ಸ್‌’ಗೆ ಮತ್ತೊಂದು ದಾರುಣ ಘಟನೆ ಸೇರ್ಪಡೆಯಾಗಿದೆ. ಆರೋಪಿ ಪರಾರಿಯಾಗಿದ್ದು, ಎಸ್‌ಟಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕನೊಬ್ಬ ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಹತ್ಯೆಗೊಳಗಾದ ಯುವತಿಯನ್ನು ದಾನೇಶ್ವರಿ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾನೇಶ್ವರಿಯ ತಂಗಿ ತೇಜೇಶ್ವರಿ ನೀಡಿದ ದೂರಿನ ಆಧಾರದ ಮೇಲೆ ಪರಾರಿಯಾಗಿರುವ ಶಿವಕುಮಾರ್ ಚಂದ್ರಶೇಖರ್ ಹಿರೇಹಾಳ ಎಂಬ ಯುವಕನ ಮೇಲೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ಲಿಂಗಾಯತ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂದು ತಿಳಿದುಬಂದಿದೆ.

ಹತ್ಯೆಗೊಳಗಾದ ದಾನೇಶ್ವರಿ ಮತ್ತು ಆರೋಪಿ ಶಿವಕುಮಾರ್ ಇಬ್ಬರು ವಿಜಯಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಅವರಿಬ್ಬರೂ ಒಟ್ಟಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ದಾನೇಶ್ವರಿಗೆ ಮಾತು ಕೊಟ್ಟಿದ್ದ ಎಂದು ಆಕೆಯ ತಂಗಿ ಪೊಲೀಸರಿಗೆ ತಿಳಿಸಿದ್ದಾರೆ.

ದಾನೇಶ್ವರಿಯು ಮದುವೆ ವಿಚಾರವನ್ನು ಶಿವಕುಮಾರ್ ಬಳಿ ಮಾತನಾಡಿದಾಗ ಆತ ತನ್ನ ಪೋಷಕರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದ. ವಿಜಯಪುರಕ್ಕೆ ಹೋಗಿ ಬಂದ ಬಳಿಕ ನಿನ್ನನ್ನು ಮದುವೆಯಾಗುವುದಿಲ್ಲ, ನಮ್ಮ ಮನೆಯವರು ಮದುವೆಗೆ ಒಪ್ಪಿಲ್ಲ, ಏಕೆಂದರೆ ನೀನು ಕೆಳಜಾತಿಗೆ ಸೇರಿರುವೆ ಎಂದು ನಿಂದಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 15 ರಂದು ದಾನೇಶ್ವರಿಯು ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದಾಗಲೂ ನೀನು ಕೆಳಜಾತಿ ಎಂದು ಜಾತಿನಿಂದನೆ ಮಾಡಿ ಹೀಯಾಳಿಸಿದ್ದ. ಅಲ್ಲದೆ ಈಗ ಮಾತನಾಡಲು ಸಾಧ್ಯವಿಲ್ಲ ಎಂದು ಯಾರು ಇಲ್ಲದ ಜಾಗಕ್ಕೆ ದಾನೇಶ್ವರಿಯನ್ನು ಕರೆಸಿಕೊಂಡು ಶಿವಕುಮಾರ್ ಮತ್ತು ಆತನ ಸ್ನೇಹಿತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತೆ ದಾನೇಶ್ವರಿಯನ್ನು ಆಸ್ಪತ್ರೆಗೆ ಸೇರಿಸಿ ಆರೋಪಿ ಶಿವಕುಮಾರ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು ಆತನ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಇನ್ನು ಯಾವುದೇ ಬಂಧನವಾಗಿಲ್ಲ.

ಮದುವೆ ವಿಚಾರವಾಗಿ ದಾನೇಶ್ವರಿ ಹಾಗೂ ಶಿವಕುಮಾರ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡ ದಾನೇಶ್ವರಿಯವರನ್ನು ಕೂಡ್ಲು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಮೃತಪಟ್ಟಿದ್ದಾರೆ.

“ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಹುಡುಗ ಬಾದಾಮಿ ಮೂಲದವನೆಂದು ತಿಳಿದುಬಂದಿದೆ. ಅವನು ವಾಸವಿದ್ದ ರೂಮಿಗೆ ಭೇಟಿ ನೀಡಿದಾಗ ಹುಡುಗ ತಲೆಮರೆಸಿಕೊಂಡಿದ್ದು, ಅವನ ಹುಡುಕಾಟ ನಡೆಯುತ್ತಿದೆ” ಎಂದು ಎಸಿಪಿ ರಮೇಶ್‌ ತಿಳಿಸಿರುವುದಾಗಿ ‘ಈ ದಿನ’ ಮಾಧ್ಯಮ ವರದಿ ಮಾಡಿದೆ.

ಯುವತಿಯ ತಂದೆ ಅಶೋಕ್ ಶರ್ಮ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ದಾನೇಶ್ವರಿಗೆ ಮದುವೆ ಮಾಡಲು ನಾವು ಸಿದ್ಧತೆಯಲ್ಲಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ನಮಗೆ ತಿಳಿಸಿದ್ದಳು. ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುವಾಗ ಪರಸ್ಪರ ಪ್ರೀತಿಸಿದ್ದಾರೆ. ನಾನು ಅವನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಆದರೆ ಅವನು ಒಪ್ಪಿರಲಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ನಿನ್ನ ಮದುವೆಯಾದರೆ ನನ್ನ ತಂದೆ ತಾಯಿ ಮನೆಗೆ ಸೇರಿಸುವುದಿಲ್ಲ ಎಂದು ಹೇಳಿರುವುದಾಗಿ ಮಗಳು ತಿಳಿಸಿದ್ದಳು” ಎಂದಿದ್ದಾರೆ.

“ನಮ್ಮ ಮಗಳು ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹೀಗಾಗಿ ಬಿಟಿಎಂ ಲೇಔಟ್‌ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿಯಿತು. ಕೂಡಲೇ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ದುಡ್ಡು ಕೂಡ ಹಾಕಿದ್ದೆ. ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಶಿವಕುಮಾರನು ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್‌ ಕೊಟ್ಟಿದ್ದಾನೆ” ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.


ಇದನ್ನೂ ಓದಿ; ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರೀ ಪೊಲೀಸರೇ ಸವರ್ಣಿ ಹುಡುಗನ ಕಡೆ ಸಪೋರ್ಟ್ ಮಾಡಿತ್ತಿರ ನೀವು ಯಾವತ್ತು ಉದ್ದಾರ ಆಗಲ್ಲ ಏಕೆಂದರೆ ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಹೇಳುತ್ತಿರಲ್ಲ ನಿಮಗೆ ಮಾನಮರ್ಯಾದೆ ಇಲ್ಲವ

  2. ಯಾಕೆಂದರೆ ಪೋಲೀಸರು ಮತ್ತು ಯಾವುದೇ ಅಧಿಕಾರಿ ವರ್ಗ ಬಲಿಷ್ಠರ ಅಥವಾ ಮೇಲ್ವರ್ಗದವರ ಪರವಾಗಿ ತಾನೆ ಕೆಲಸ ಮಾಡುವುದು

LEAVE A REPLY

Please enter your comment!
Please enter your name here

- Advertisment -

ದೇಶದ ಜನರಿಗೆ ‘SIR, EVM, ECI’ಗಳಿಂದ ಸ್ವಾತಂತ್ರ್ಯ ಬೇಕಿದೆ: ಎದ್ದೇಳು ಕರ್ನಾಟಕ

ಬೆಂಗಳೂರು: ಭಾರತವು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ, ದೇಶದ ಪ್ರಜೆಗಳು ತಮ್ಮ ಅತಿ ಅಮೂಲ್ಯವಾದ ‘ಮತದಾನದ ಹಕ್ಕನ್ನು’ ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಈ ದೇಶದ ಜನರಿಗೆ ಈಗ ‘SIR (ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ),...

ಹನೂರು | ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ : ಇಲಾಖೆಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ

ಅರಣ್ಯದಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ನಾಲ್ವರು ಮತ್ತು ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ...

ಪ್ರಧಾನಿ ಮೋದಿ ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಉಲ್ಟಾ, ಕಾಂಗ್ರೆಸ್ ವ್ಯಂಗ್ಯ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಬಣ್ಣಗಳ ಸರಣಿಯನ್ನು ಬೆಟ್ಟು ಮಾಡಿರುವ ಕಾಂಗ್ರೆಸ್ ಪಕ್ಷ, ಪ್ರಧಾನಿಯವರು ಭಾರತದ ಬದಲು ಐರ್ಲೆಂಡ್‌ನ ಸ್ವಾತಂತ್ರ್ಯ...

“ಹತಾಶೆಯ ಸ್ಪಷ್ಟ ಸಂಕೇತ” : ಪ್ರಧಾನಿ ಮೋದಿಯ ‘ದಿಮಾಗಿ ನಕ್ಸಲ್ಸ್’ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಪ್ರಧಾನಿ ಮೋದಿಯ 'ದಿಮಾಗಿ ನಕ್ಸಲ್ಸ್' (ಮಾನಸಿಕ ನಕ್ಸಲರು) ಹೇಳಿಕೆಗೆ ಶನಿವಾರ (ಆ.15) ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು 'ಹತಾಶೆಯ ಸ್ಪಷ್ಟ ಸಂಕೇತ' ಎಂದು ತಿರುಗೇಟು ನೀಡಿದ್ದಾರೆ. ಮೋದಿಯವರು ಈ...

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...