Homeಕರ್ನಾಟಕದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ...

ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ

ಲಕ್ಷಾಂತರ ‘ದಲಿತ್‌ ಫೈಲ್ಸ್‌’ಗೆ ಮತ್ತೊಂದು ದಾರುಣ ಘಟನೆ ಸೇರ್ಪಡೆಯಾಗಿದೆ. ಆರೋಪಿ ಪರಾರಿಯಾಗಿದ್ದು, ಎಸ್‌ಟಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕನೊಬ್ಬ ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಹತ್ಯೆಗೊಳಗಾದ ಯುವತಿಯನ್ನು ದಾನೇಶ್ವರಿ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾನೇಶ್ವರಿಯ ತಂಗಿ ತೇಜೇಶ್ವರಿ ನೀಡಿದ ದೂರಿನ ಆಧಾರದ ಮೇಲೆ ಪರಾರಿಯಾಗಿರುವ ಶಿವಕುಮಾರ್ ಚಂದ್ರಶೇಖರ್ ಹಿರೇಹಾಳ ಎಂಬ ಯುವಕನ ಮೇಲೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ಲಿಂಗಾಯತ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂದು ತಿಳಿದುಬಂದಿದೆ.

ಹತ್ಯೆಗೊಳಗಾದ ದಾನೇಶ್ವರಿ ಮತ್ತು ಆರೋಪಿ ಶಿವಕುಮಾರ್ ಇಬ್ಬರು ವಿಜಯಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಅವರಿಬ್ಬರೂ ಒಟ್ಟಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ದಾನೇಶ್ವರಿಗೆ ಮಾತು ಕೊಟ್ಟಿದ್ದ ಎಂದು ಆಕೆಯ ತಂಗಿ ಪೊಲೀಸರಿಗೆ ತಿಳಿಸಿದ್ದಾರೆ.

ದಾನೇಶ್ವರಿಯು ಮದುವೆ ವಿಚಾರವನ್ನು ಶಿವಕುಮಾರ್ ಬಳಿ ಮಾತನಾಡಿದಾಗ ಆತ ತನ್ನ ಪೋಷಕರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದ. ವಿಜಯಪುರಕ್ಕೆ ಹೋಗಿ ಬಂದ ಬಳಿಕ ನಿನ್ನನ್ನು ಮದುವೆಯಾಗುವುದಿಲ್ಲ, ನಮ್ಮ ಮನೆಯವರು ಮದುವೆಗೆ ಒಪ್ಪಿಲ್ಲ, ಏಕೆಂದರೆ ನೀನು ಕೆಳಜಾತಿಗೆ ಸೇರಿರುವೆ ಎಂದು ನಿಂದಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 15 ರಂದು ದಾನೇಶ್ವರಿಯು ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದಾಗಲೂ ನೀನು ಕೆಳಜಾತಿ ಎಂದು ಜಾತಿನಿಂದನೆ ಮಾಡಿ ಹೀಯಾಳಿಸಿದ್ದ. ಅಲ್ಲದೆ ಈಗ ಮಾತನಾಡಲು ಸಾಧ್ಯವಿಲ್ಲ ಎಂದು ಯಾರು ಇಲ್ಲದ ಜಾಗಕ್ಕೆ ದಾನೇಶ್ವರಿಯನ್ನು ಕರೆಸಿಕೊಂಡು ಶಿವಕುಮಾರ್ ಮತ್ತು ಆತನ ಸ್ನೇಹಿತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತೆ ದಾನೇಶ್ವರಿಯನ್ನು ಆಸ್ಪತ್ರೆಗೆ ಸೇರಿಸಿ ಆರೋಪಿ ಶಿವಕುಮಾರ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು ಆತನ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಇನ್ನು ಯಾವುದೇ ಬಂಧನವಾಗಿಲ್ಲ.

ಮದುವೆ ವಿಚಾರವಾಗಿ ದಾನೇಶ್ವರಿ ಹಾಗೂ ಶಿವಕುಮಾರ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡ ದಾನೇಶ್ವರಿಯವರನ್ನು ಕೂಡ್ಲು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಮೃತಪಟ್ಟಿದ್ದಾರೆ.

“ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಹುಡುಗ ಬಾದಾಮಿ ಮೂಲದವನೆಂದು ತಿಳಿದುಬಂದಿದೆ. ಅವನು ವಾಸವಿದ್ದ ರೂಮಿಗೆ ಭೇಟಿ ನೀಡಿದಾಗ ಹುಡುಗ ತಲೆಮರೆಸಿಕೊಂಡಿದ್ದು, ಅವನ ಹುಡುಕಾಟ ನಡೆಯುತ್ತಿದೆ” ಎಂದು ಎಸಿಪಿ ರಮೇಶ್‌ ತಿಳಿಸಿರುವುದಾಗಿ ‘ಈ ದಿನ’ ಮಾಧ್ಯಮ ವರದಿ ಮಾಡಿದೆ.

ಯುವತಿಯ ತಂದೆ ಅಶೋಕ್ ಶರ್ಮ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ದಾನೇಶ್ವರಿಗೆ ಮದುವೆ ಮಾಡಲು ನಾವು ಸಿದ್ಧತೆಯಲ್ಲಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ನಮಗೆ ತಿಳಿಸಿದ್ದಳು. ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುವಾಗ ಪರಸ್ಪರ ಪ್ರೀತಿಸಿದ್ದಾರೆ. ನಾನು ಅವನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಆದರೆ ಅವನು ಒಪ್ಪಿರಲಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ನಿನ್ನ ಮದುವೆಯಾದರೆ ನನ್ನ ತಂದೆ ತಾಯಿ ಮನೆಗೆ ಸೇರಿಸುವುದಿಲ್ಲ ಎಂದು ಹೇಳಿರುವುದಾಗಿ ಮಗಳು ತಿಳಿಸಿದ್ದಳು” ಎಂದಿದ್ದಾರೆ.

“ನಮ್ಮ ಮಗಳು ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹೀಗಾಗಿ ಬಿಟಿಎಂ ಲೇಔಟ್‌ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿಯಿತು. ಕೂಡಲೇ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ದುಡ್ಡು ಕೂಡ ಹಾಕಿದ್ದೆ. ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಶಿವಕುಮಾರನು ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್‌ ಕೊಟ್ಟಿದ್ದಾನೆ” ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.


ಇದನ್ನೂ ಓದಿ; ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರೀ ಪೊಲೀಸರೇ ಸವರ್ಣಿ ಹುಡುಗನ ಕಡೆ ಸಪೋರ್ಟ್ ಮಾಡಿತ್ತಿರ ನೀವು ಯಾವತ್ತು ಉದ್ದಾರ ಆಗಲ್ಲ ಏಕೆಂದರೆ ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಹೇಳುತ್ತಿರಲ್ಲ ನಿಮಗೆ ಮಾನಮರ್ಯಾದೆ ಇಲ್ಲವ

  2. ಯಾಕೆಂದರೆ ಪೋಲೀಸರು ಮತ್ತು ಯಾವುದೇ ಅಧಿಕಾರಿ ವರ್ಗ ಬಲಿಷ್ಠರ ಅಥವಾ ಮೇಲ್ವರ್ಗದವರ ಪರವಾಗಿ ತಾನೆ ಕೆಲಸ ಮಾಡುವುದು

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...