Homeಕರ್ನಾಟಕದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ...

ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ

ಲಕ್ಷಾಂತರ ‘ದಲಿತ್‌ ಫೈಲ್ಸ್‌’ಗೆ ಮತ್ತೊಂದು ದಾರುಣ ಘಟನೆ ಸೇರ್ಪಡೆಯಾಗಿದೆ. ಆರೋಪಿ ಪರಾರಿಯಾಗಿದ್ದು, ಎಸ್‌ಟಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕನೊಬ್ಬ ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಹತ್ಯೆಗೊಳಗಾದ ಯುವತಿಯನ್ನು ದಾನೇಶ್ವರಿ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾನೇಶ್ವರಿಯ ತಂಗಿ ತೇಜೇಶ್ವರಿ ನೀಡಿದ ದೂರಿನ ಆಧಾರದ ಮೇಲೆ ಪರಾರಿಯಾಗಿರುವ ಶಿವಕುಮಾರ್ ಚಂದ್ರಶೇಖರ್ ಹಿರೇಹಾಳ ಎಂಬ ಯುವಕನ ಮೇಲೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ಲಿಂಗಾಯತ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂದು ತಿಳಿದುಬಂದಿದೆ.

ಹತ್ಯೆಗೊಳಗಾದ ದಾನೇಶ್ವರಿ ಮತ್ತು ಆರೋಪಿ ಶಿವಕುಮಾರ್ ಇಬ್ಬರು ವಿಜಯಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಅವರಿಬ್ಬರೂ ಒಟ್ಟಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ದಾನೇಶ್ವರಿಗೆ ಮಾತು ಕೊಟ್ಟಿದ್ದ ಎಂದು ಆಕೆಯ ತಂಗಿ ಪೊಲೀಸರಿಗೆ ತಿಳಿಸಿದ್ದಾರೆ.

ದಾನೇಶ್ವರಿಯು ಮದುವೆ ವಿಚಾರವನ್ನು ಶಿವಕುಮಾರ್ ಬಳಿ ಮಾತನಾಡಿದಾಗ ಆತ ತನ್ನ ಪೋಷಕರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದ. ವಿಜಯಪುರಕ್ಕೆ ಹೋಗಿ ಬಂದ ಬಳಿಕ ನಿನ್ನನ್ನು ಮದುವೆಯಾಗುವುದಿಲ್ಲ, ನಮ್ಮ ಮನೆಯವರು ಮದುವೆಗೆ ಒಪ್ಪಿಲ್ಲ, ಏಕೆಂದರೆ ನೀನು ಕೆಳಜಾತಿಗೆ ಸೇರಿರುವೆ ಎಂದು ನಿಂದಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 15 ರಂದು ದಾನೇಶ್ವರಿಯು ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದಾಗಲೂ ನೀನು ಕೆಳಜಾತಿ ಎಂದು ಜಾತಿನಿಂದನೆ ಮಾಡಿ ಹೀಯಾಳಿಸಿದ್ದ. ಅಲ್ಲದೆ ಈಗ ಮಾತನಾಡಲು ಸಾಧ್ಯವಿಲ್ಲ ಎಂದು ಯಾರು ಇಲ್ಲದ ಜಾಗಕ್ಕೆ ದಾನೇಶ್ವರಿಯನ್ನು ಕರೆಸಿಕೊಂಡು ಶಿವಕುಮಾರ್ ಮತ್ತು ಆತನ ಸ್ನೇಹಿತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತೆ ದಾನೇಶ್ವರಿಯನ್ನು ಆಸ್ಪತ್ರೆಗೆ ಸೇರಿಸಿ ಆರೋಪಿ ಶಿವಕುಮಾರ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು ಆತನ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಇನ್ನು ಯಾವುದೇ ಬಂಧನವಾಗಿಲ್ಲ.

ಮದುವೆ ವಿಚಾರವಾಗಿ ದಾನೇಶ್ವರಿ ಹಾಗೂ ಶಿವಕುಮಾರ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡ ದಾನೇಶ್ವರಿಯವರನ್ನು ಕೂಡ್ಲು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಮೃತಪಟ್ಟಿದ್ದಾರೆ.

“ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಹುಡುಗ ಬಾದಾಮಿ ಮೂಲದವನೆಂದು ತಿಳಿದುಬಂದಿದೆ. ಅವನು ವಾಸವಿದ್ದ ರೂಮಿಗೆ ಭೇಟಿ ನೀಡಿದಾಗ ಹುಡುಗ ತಲೆಮರೆಸಿಕೊಂಡಿದ್ದು, ಅವನ ಹುಡುಕಾಟ ನಡೆಯುತ್ತಿದೆ” ಎಂದು ಎಸಿಪಿ ರಮೇಶ್‌ ತಿಳಿಸಿರುವುದಾಗಿ ‘ಈ ದಿನ’ ಮಾಧ್ಯಮ ವರದಿ ಮಾಡಿದೆ.

ಯುವತಿಯ ತಂದೆ ಅಶೋಕ್ ಶರ್ಮ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ದಾನೇಶ್ವರಿಗೆ ಮದುವೆ ಮಾಡಲು ನಾವು ಸಿದ್ಧತೆಯಲ್ಲಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ನಮಗೆ ತಿಳಿಸಿದ್ದಳು. ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುವಾಗ ಪರಸ್ಪರ ಪ್ರೀತಿಸಿದ್ದಾರೆ. ನಾನು ಅವನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಆದರೆ ಅವನು ಒಪ್ಪಿರಲಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ನಿನ್ನ ಮದುವೆಯಾದರೆ ನನ್ನ ತಂದೆ ತಾಯಿ ಮನೆಗೆ ಸೇರಿಸುವುದಿಲ್ಲ ಎಂದು ಹೇಳಿರುವುದಾಗಿ ಮಗಳು ತಿಳಿಸಿದ್ದಳು” ಎಂದಿದ್ದಾರೆ.

“ನಮ್ಮ ಮಗಳು ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹೀಗಾಗಿ ಬಿಟಿಎಂ ಲೇಔಟ್‌ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿಯಿತು. ಕೂಡಲೇ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ದುಡ್ಡು ಕೂಡ ಹಾಕಿದ್ದೆ. ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಶಿವಕುಮಾರನು ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್‌ ಕೊಟ್ಟಿದ್ದಾನೆ” ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.


ಇದನ್ನೂ ಓದಿ; ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರೀ ಪೊಲೀಸರೇ ಸವರ್ಣಿ ಹುಡುಗನ ಕಡೆ ಸಪೋರ್ಟ್ ಮಾಡಿತ್ತಿರ ನೀವು ಯಾವತ್ತು ಉದ್ದಾರ ಆಗಲ್ಲ ಏಕೆಂದರೆ ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಹೇಳುತ್ತಿರಲ್ಲ ನಿಮಗೆ ಮಾನಮರ್ಯಾದೆ ಇಲ್ಲವ

  2. ಯಾಕೆಂದರೆ ಪೋಲೀಸರು ಮತ್ತು ಯಾವುದೇ ಅಧಿಕಾರಿ ವರ್ಗ ಬಲಿಷ್ಠರ ಅಥವಾ ಮೇಲ್ವರ್ಗದವರ ಪರವಾಗಿ ತಾನೆ ಕೆಲಸ ಮಾಡುವುದು

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....