Homeಕರ್ನಾಟಕದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ...

ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ

ಲಕ್ಷಾಂತರ ‘ದಲಿತ್‌ ಫೈಲ್ಸ್‌’ಗೆ ಮತ್ತೊಂದು ದಾರುಣ ಘಟನೆ ಸೇರ್ಪಡೆಯಾಗಿದೆ. ಆರೋಪಿ ಪರಾರಿಯಾಗಿದ್ದು, ಎಸ್‌ಟಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕನೊಬ್ಬ ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಹತ್ಯೆಗೊಳಗಾದ ಯುವತಿಯನ್ನು ದಾನೇಶ್ವರಿ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾನೇಶ್ವರಿಯ ತಂಗಿ ತೇಜೇಶ್ವರಿ ನೀಡಿದ ದೂರಿನ ಆಧಾರದ ಮೇಲೆ ಪರಾರಿಯಾಗಿರುವ ಶಿವಕುಮಾರ್ ಚಂದ್ರಶೇಖರ್ ಹಿರೇಹಾಳ ಎಂಬ ಯುವಕನ ಮೇಲೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ಲಿಂಗಾಯತ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂದು ತಿಳಿದುಬಂದಿದೆ.

ಹತ್ಯೆಗೊಳಗಾದ ದಾನೇಶ್ವರಿ ಮತ್ತು ಆರೋಪಿ ಶಿವಕುಮಾರ್ ಇಬ್ಬರು ವಿಜಯಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಅವರಿಬ್ಬರೂ ಒಟ್ಟಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ದಾನೇಶ್ವರಿಗೆ ಮಾತು ಕೊಟ್ಟಿದ್ದ ಎಂದು ಆಕೆಯ ತಂಗಿ ಪೊಲೀಸರಿಗೆ ತಿಳಿಸಿದ್ದಾರೆ.

ದಾನೇಶ್ವರಿಯು ಮದುವೆ ವಿಚಾರವನ್ನು ಶಿವಕುಮಾರ್ ಬಳಿ ಮಾತನಾಡಿದಾಗ ಆತ ತನ್ನ ಪೋಷಕರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದ. ವಿಜಯಪುರಕ್ಕೆ ಹೋಗಿ ಬಂದ ಬಳಿಕ ನಿನ್ನನ್ನು ಮದುವೆಯಾಗುವುದಿಲ್ಲ, ನಮ್ಮ ಮನೆಯವರು ಮದುವೆಗೆ ಒಪ್ಪಿಲ್ಲ, ಏಕೆಂದರೆ ನೀನು ಕೆಳಜಾತಿಗೆ ಸೇರಿರುವೆ ಎಂದು ನಿಂದಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 15 ರಂದು ದಾನೇಶ್ವರಿಯು ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದಾಗಲೂ ನೀನು ಕೆಳಜಾತಿ ಎಂದು ಜಾತಿನಿಂದನೆ ಮಾಡಿ ಹೀಯಾಳಿಸಿದ್ದ. ಅಲ್ಲದೆ ಈಗ ಮಾತನಾಡಲು ಸಾಧ್ಯವಿಲ್ಲ ಎಂದು ಯಾರು ಇಲ್ಲದ ಜಾಗಕ್ಕೆ ದಾನೇಶ್ವರಿಯನ್ನು ಕರೆಸಿಕೊಂಡು ಶಿವಕುಮಾರ್ ಮತ್ತು ಆತನ ಸ್ನೇಹಿತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತೆ ದಾನೇಶ್ವರಿಯನ್ನು ಆಸ್ಪತ್ರೆಗೆ ಸೇರಿಸಿ ಆರೋಪಿ ಶಿವಕುಮಾರ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು ಆತನ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಇನ್ನು ಯಾವುದೇ ಬಂಧನವಾಗಿಲ್ಲ.

ಮದುವೆ ವಿಚಾರವಾಗಿ ದಾನೇಶ್ವರಿ ಹಾಗೂ ಶಿವಕುಮಾರ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡ ದಾನೇಶ್ವರಿಯವರನ್ನು ಕೂಡ್ಲು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಮೃತಪಟ್ಟಿದ್ದಾರೆ.

“ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಹುಡುಗ ಬಾದಾಮಿ ಮೂಲದವನೆಂದು ತಿಳಿದುಬಂದಿದೆ. ಅವನು ವಾಸವಿದ್ದ ರೂಮಿಗೆ ಭೇಟಿ ನೀಡಿದಾಗ ಹುಡುಗ ತಲೆಮರೆಸಿಕೊಂಡಿದ್ದು, ಅವನ ಹುಡುಕಾಟ ನಡೆಯುತ್ತಿದೆ” ಎಂದು ಎಸಿಪಿ ರಮೇಶ್‌ ತಿಳಿಸಿರುವುದಾಗಿ ‘ಈ ದಿನ’ ಮಾಧ್ಯಮ ವರದಿ ಮಾಡಿದೆ.

ಯುವತಿಯ ತಂದೆ ಅಶೋಕ್ ಶರ್ಮ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ದಾನೇಶ್ವರಿಗೆ ಮದುವೆ ಮಾಡಲು ನಾವು ಸಿದ್ಧತೆಯಲ್ಲಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ನಮಗೆ ತಿಳಿಸಿದ್ದಳು. ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುವಾಗ ಪರಸ್ಪರ ಪ್ರೀತಿಸಿದ್ದಾರೆ. ನಾನು ಅವನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಆದರೆ ಅವನು ಒಪ್ಪಿರಲಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ನಿನ್ನ ಮದುವೆಯಾದರೆ ನನ್ನ ತಂದೆ ತಾಯಿ ಮನೆಗೆ ಸೇರಿಸುವುದಿಲ್ಲ ಎಂದು ಹೇಳಿರುವುದಾಗಿ ಮಗಳು ತಿಳಿಸಿದ್ದಳು” ಎಂದಿದ್ದಾರೆ.

“ನಮ್ಮ ಮಗಳು ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹೀಗಾಗಿ ಬಿಟಿಎಂ ಲೇಔಟ್‌ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿಯಿತು. ಕೂಡಲೇ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ದುಡ್ಡು ಕೂಡ ಹಾಕಿದ್ದೆ. ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಶಿವಕುಮಾರನು ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್‌ ಕೊಟ್ಟಿದ್ದಾನೆ” ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.


ಇದನ್ನೂ ಓದಿ; ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರೀ ಪೊಲೀಸರೇ ಸವರ್ಣಿ ಹುಡುಗನ ಕಡೆ ಸಪೋರ್ಟ್ ಮಾಡಿತ್ತಿರ ನೀವು ಯಾವತ್ತು ಉದ್ದಾರ ಆಗಲ್ಲ ಏಕೆಂದರೆ ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಹೇಳುತ್ತಿರಲ್ಲ ನಿಮಗೆ ಮಾನಮರ್ಯಾದೆ ಇಲ್ಲವ

  2. ಯಾಕೆಂದರೆ ಪೋಲೀಸರು ಮತ್ತು ಯಾವುದೇ ಅಧಿಕಾರಿ ವರ್ಗ ಬಲಿಷ್ಠರ ಅಥವಾ ಮೇಲ್ವರ್ಗದವರ ಪರವಾಗಿ ತಾನೆ ಕೆಲಸ ಮಾಡುವುದು

LEAVE A REPLY

Please enter your comment!
Please enter your name here

- Advertisment -

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...