Homeಕರ್ನಾಟಕಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

ಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

- Advertisement -
- Advertisement -

ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಮಾರ್ಚ್‌ 4 ಮತ್ತು 5ರಂದು ಬಸವಕಲ್ಯಾಣದಲ್ಲಿ ಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ರೊಟ್ಟಿಯವರು, ‘ಲಿಂಗಾಯಿತರ ಸಂಘಟನೆಗಳಾದ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಬಸವ ಸಮಿತಿ, ಶರಣ ಸಾಹಿತ್ಯ ಪರಿಷತ್‌, ಲಿಂಗಾಯತ ಮಠಾಧೀಶರ ಒಕ್ಕೂಟ, ಬಸವೇಶ್ವರ ಪಂಚ ಕಮಿಟಿ– ಬಸವಕಲ್ಯಾಣ ಹಾಗೂ ಇನ್ನೂ ಅನೇಕ ಸಂಘಟನೆಗಳ ಸಹಯೋಗದಲ್ಲಿ ಈ ಅಧಿವೇಶನ ಆಯೋಜಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿದೇಶಗಳಲ್ಲಿಯೂ ಇರುವ ಲಿಂಗಾಯತ ಪ್ರತಿನಿಧಿಗಳು ಅಧಿವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಚಿಂತಕ ಗೊ.ರು.ಚನ್ನಬಸವಪ್ಪ ಅವರು ಅಧಿವೇಶನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾರ್ಚ್ 4ರಂದು ಬಸವಕಲ್ಯಾಣದಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಗುತ್ತಿದೆ. ನಾಡಿನ 200ಕ್ಕೂ ಅಧಿಕ ಲಿಂಗಾಯತ ಮಠಾಧೀಶರು ಎರಡೂ ದಿನಗಳ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಬಸವ ಕಲ್ಯಾಣದಲ್ಲಿ 12ನೇ ಶತಮಾನದಲ್ಲಿ ಅವೈದಿಕ ಲಿಂಗಾಯತ ಧರ್ಮ ಬಸವಣ್ಣನವರಿಂದ ಸ್ಥಾಪನೆಯಾಯಿತು. ಇಲ್ಲಿಯೇ ಅನುಭವ ಮಂಟಪವೂ ಬೆಳೆದಿದ್ದರಿಂದ ಬಸವಕಲ್ಯಾಣವು ಲಿಂಗಾಯತರಿಗೆ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಆ ಕಾರಣಕ್ಕಾಗಿ ಪ್ರಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಅಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

‘ಪ್ರತಿನಿಧಿಗಳಿಗೆ ಊಟೋಪಚಾರ ಮತ್ತು ವಸತಿ ವ್ಯವಸ್ಥೆಯನ್ನು ಜಾಗತಿಕ ಲಿಂಗಾಯತ ಮಹಾಸಭೆಯ ಕೇಂದ್ರ ಕಚೇರಿಯಿಂದ ಮಾಡಲಾಗಿದೆ. ಎರಡು ದಿನಗಳ ಮಹಾ ಅಧಿವೇಶನದಲ್ಲಿ ನಾಲ್ಕು ಗೋಷ್ಠಿಗಳು ನಡೆಯಲಿವೆ” ಎಂದಿದ್ದಾರೆ.

‘ಅಧಿವೇಶನದ ವೇದಿಕೆಯು ಸಂಪೂರ್ಣವಾಗಿ ರಾಜಕೀಯೇತರವಾಗಿದೆ. ವೇದಿಕೆಯ ಮೇಲೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೆ ಸ್ಥಾನ ಇರುವುದಿಲ್ಲ. ಆದರೆ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಲೋಕಸಭೆಯಲ್ಲಿ ಮಾತನಾಡಿರುವ ಮಹಾರಾಷ್ಟ್ರದ ಸಂಸದರಾದ ಧೈರ್ಯಶೀಲ ಮಾನೆ, ಓಂ ಪ್ರಕಾಶ್ ರಾಜೆ ನಿಂಬಾಳ್ಕರ್, ಮಾಜಿ ಸಂಸದ ರಾಜು ಶೆಟ್ಟಿ ಹಾಗೂ ಹಲವರನ್ನು ಸತ್ಕರಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ಹಲವಾರು ಚರ್ಚೆಗಳನ್ನು ನಡೆಸಲಾಗುತ್ತಿದೆ. ಮೀಸಲಾತಿ ಮತ್ತು ಲಿಂಗಾಯತರು, ಸ್ವತಂತ್ರ ಧರ್ಮದ ಹೋರಾಟದಲ್ಲಿ ಲಿಂಗಾಯತರು, ಜನಗಣತಿ ಮತ್ತು ಲಿಂಗಾಯತರು, ಲಿಂಗಾಯತರನ್ನು ಸಂಘಟಿಸುವಲ್ಲಿ ಮತ್ತು ಲಿಂಗಾಯತ ನಿಜಾಚರಣೆಗಳನ್ನು ಅಳವಡಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ, ಸ್ಥಳೀಯ ಲಿಂಗಾಯತ ಮಠಗಳ ಮಾರ್ಗದರ್ಶನದಲ್ಲಿ ಲಿಂಗಾಯತ ಸಮಾಜದ ವಿವಿಧ ಪಂಗಡಗಳನ್ನು ಒಂದುಗೂಡಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಮಹಿಳೆಯರನ್ನು ಒಂದುಗೂಡಿಸಿ ಲಿಂಗಾಯತ ಸಮಾಜವನ್ನು ಸಂಘಟಿಸುವ ಮಹಿಳೆಯರ ಪಾತ್ರ, ವೈದಿಕದತ್ತ ವಾಲುತ್ತಿರುವ ಲಿಂಗಾಯತರಿಗೆ ನಿಜಾಚರಣೆಗಳನ್ನು ಜಾರಿಗೊಳಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಸಮಾಜದ ಸಂಘಟನೆ ವಿವಿಧ ಪಂಗಡಗಳು ಏಕೀಕರಣ ಹಾಗೂ ಲಿಂಗಾಯತ ನಿಜಾಚರಣೆಗಳ ಪ್ರಚಾರದಲ್ಲಿ ಯುವಕ ಯುವತಿಯರ ಪಾತ್ರ, ನಗರ ಗ್ರಾಮ ತಾಲ್ಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಯುವ ಘಟಕಗಳನ್ನು ಸಂಘಟಿಸಲು ವಿವಿಧ ಮಾರ್ಗಗಳು ಮತ್ತು ಕ್ರಮಗಳು, ಯುವಕರ ತರಬೇತಿಗಾಗಿ ವಿವಿಧ ಮಟ್ಟದಲ್ಲಿ ಶರಣ ತತ್ವ ಸಿದ್ಧಾಂತ ಮತ್ತು ಮಹತ್ವದ ಬಗ್ಗೆ ತಿಳಿವಳಿಕೆ ನೀಡಲು ಸರಳ ಪಠ್ಯಕ್ರಮ ಮತ್ತು ಸಣ್ಣ ಸಣ್ಣ ಸಾಮಗ್ರಿ ತಯಾರಿಕೆ, ನೂತನ ಅನುಭವ ಮಂಟಪದ ವಿವರಗಳು, ಕಾರ್ಯ ಯೋಜನೆಗಳು- ಮೊದಲಾದ ಸಂಗತಿಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ. ವಿಷಯ ತಜ್ಞರು ನಿಗದಿತ ವಿಚಾರಗಳ ಕುರಿತು ಮಾತನಾಡಲಿದ್ದಾರೆ.

ಸಿದ್ದಪ್ಪ ಮೂಲಗೆ ಆಕ್ಷೇಪ

ಬಿಜೆಪಿ ಹಮ್ಮಿಕೊಂಡಿರುವ ವೇದಿಕೆಯಲ್ಲಿಯೇ ಅಧಿವೇಶನವೂ ನಡೆಯಲಿದೆ ಎಂದು ಲಿಂಗಾಯತ ಮುಖಂಡ ಸಿದ್ದಪ್ಪ ಮೂಲಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ತೆಗೆಯುವಂತೆ ಮನವಿ ಮಾಡಿದ್ದಾರೆ.

“ಈ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದೇಕೆ? ದಯವಿಟ್ಟು ನನ್ನ ಹೆಸರು ತೆಗೆಯಿರಿ. ಒಪ್ಪಿಗೆ ಇಲ್ಲದೇ ಹೆಸರು ಹಾಕುವುದು ತಪ್ಪು. ಯಾವತ್ತೂ ನೀವು ಬಿಜೆಪಿ ಟೆಂಟಿನಲ್ಲಿ ನಿಮ್ಮ ಅಧಿವೇಶನ ನಡೆಸಲು ಮುಂದಾಗಿರೋ ಆವೊತ್ತೇ ನಾನು ಈ ಅಧಿವೇಶನದಿಂದ ದೂರ ಸರೆದಿದ್ದೇನೆ. ನನ್ನ ಹೆಸರು ತೆಗೆಯಿರಿ ಎಂದು ಈ ಮೊದಲೇ ತಮಗೆ ಹೇಳಿದ್ದೇನೆ” ಎಂದಿದ್ದಾರೆ.

“ಬಿಜೆಪಿ ಟೆಂಟಿನಲ್ಲಿ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಎಂ ಎಂ ಕಲುಬುರ್ಗಿಯವರ ಎದೆಯಿಂದ ಚಿಮ್ಮಿದ ರಕ್ತ ಇನ್ನೂ ಆರಿಲ್ಲ. ಬಿಜೆಪಿ ಹಾಗೂ ನೀವೂ ಸೇರಿಕೊಂಡು ಒಂದೇ ಟೆಂಟ್ ಹೌಸ್ ಅವರ ಜತೆ ಮಾತಾಡಿ, ಇಬ್ಬರೂ ಸಮಾನವಾಗಿ ದುಡ್ಡು ಹಾಕಿ, ಮಾರ್ಚ್ 3, 4, 5 ರಂದು ಟೆಂಟ್ ಹಾಕಿಸುತ್ತಿದ್ದೀರಿ. 3ರಂದು ಅಮಿತ್ ಷಾ ಕಾರ್ಯಕ್ರಮ ಮಾಡಿಕೊಂಡು ಹೋಗುತ್ತಾರೆ. ನೀವು ಅದೇ ಟೆಂಟಿನಲ್ಲಿ ಮರುದಿನ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಹಾಗೂ ನೀವು ಒಂದೇ ಟೆಂಟಿನಲ್ಲಿ ಅಧಿವೇಶನ ನಡೆಸುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದೀರಿ” ಎಂದು ಮುಖಂಡರಾದ ಶಿವಾನಂದ ಜಾಮದಾರ್ ಅವರಿಗೆ ಕೇಳಿದ್ದಾರೆ.

ಅಧಿವೇಶನದ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...