Homeಕರ್ನಾಟಕಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

ಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

- Advertisement -
- Advertisement -

ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಮಾರ್ಚ್‌ 4 ಮತ್ತು 5ರಂದು ಬಸವಕಲ್ಯಾಣದಲ್ಲಿ ಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ರೊಟ್ಟಿಯವರು, ‘ಲಿಂಗಾಯಿತರ ಸಂಘಟನೆಗಳಾದ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಬಸವ ಸಮಿತಿ, ಶರಣ ಸಾಹಿತ್ಯ ಪರಿಷತ್‌, ಲಿಂಗಾಯತ ಮಠಾಧೀಶರ ಒಕ್ಕೂಟ, ಬಸವೇಶ್ವರ ಪಂಚ ಕಮಿಟಿ– ಬಸವಕಲ್ಯಾಣ ಹಾಗೂ ಇನ್ನೂ ಅನೇಕ ಸಂಘಟನೆಗಳ ಸಹಯೋಗದಲ್ಲಿ ಈ ಅಧಿವೇಶನ ಆಯೋಜಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿದೇಶಗಳಲ್ಲಿಯೂ ಇರುವ ಲಿಂಗಾಯತ ಪ್ರತಿನಿಧಿಗಳು ಅಧಿವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಚಿಂತಕ ಗೊ.ರು.ಚನ್ನಬಸವಪ್ಪ ಅವರು ಅಧಿವೇಶನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾರ್ಚ್ 4ರಂದು ಬಸವಕಲ್ಯಾಣದಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಗುತ್ತಿದೆ. ನಾಡಿನ 200ಕ್ಕೂ ಅಧಿಕ ಲಿಂಗಾಯತ ಮಠಾಧೀಶರು ಎರಡೂ ದಿನಗಳ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಬಸವ ಕಲ್ಯಾಣದಲ್ಲಿ 12ನೇ ಶತಮಾನದಲ್ಲಿ ಅವೈದಿಕ ಲಿಂಗಾಯತ ಧರ್ಮ ಬಸವಣ್ಣನವರಿಂದ ಸ್ಥಾಪನೆಯಾಯಿತು. ಇಲ್ಲಿಯೇ ಅನುಭವ ಮಂಟಪವೂ ಬೆಳೆದಿದ್ದರಿಂದ ಬಸವಕಲ್ಯಾಣವು ಲಿಂಗಾಯತರಿಗೆ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಆ ಕಾರಣಕ್ಕಾಗಿ ಪ್ರಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಅಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

‘ಪ್ರತಿನಿಧಿಗಳಿಗೆ ಊಟೋಪಚಾರ ಮತ್ತು ವಸತಿ ವ್ಯವಸ್ಥೆಯನ್ನು ಜಾಗತಿಕ ಲಿಂಗಾಯತ ಮಹಾಸಭೆಯ ಕೇಂದ್ರ ಕಚೇರಿಯಿಂದ ಮಾಡಲಾಗಿದೆ. ಎರಡು ದಿನಗಳ ಮಹಾ ಅಧಿವೇಶನದಲ್ಲಿ ನಾಲ್ಕು ಗೋಷ್ಠಿಗಳು ನಡೆಯಲಿವೆ” ಎಂದಿದ್ದಾರೆ.

‘ಅಧಿವೇಶನದ ವೇದಿಕೆಯು ಸಂಪೂರ್ಣವಾಗಿ ರಾಜಕೀಯೇತರವಾಗಿದೆ. ವೇದಿಕೆಯ ಮೇಲೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೆ ಸ್ಥಾನ ಇರುವುದಿಲ್ಲ. ಆದರೆ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಲೋಕಸಭೆಯಲ್ಲಿ ಮಾತನಾಡಿರುವ ಮಹಾರಾಷ್ಟ್ರದ ಸಂಸದರಾದ ಧೈರ್ಯಶೀಲ ಮಾನೆ, ಓಂ ಪ್ರಕಾಶ್ ರಾಜೆ ನಿಂಬಾಳ್ಕರ್, ಮಾಜಿ ಸಂಸದ ರಾಜು ಶೆಟ್ಟಿ ಹಾಗೂ ಹಲವರನ್ನು ಸತ್ಕರಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ಹಲವಾರು ಚರ್ಚೆಗಳನ್ನು ನಡೆಸಲಾಗುತ್ತಿದೆ. ಮೀಸಲಾತಿ ಮತ್ತು ಲಿಂಗಾಯತರು, ಸ್ವತಂತ್ರ ಧರ್ಮದ ಹೋರಾಟದಲ್ಲಿ ಲಿಂಗಾಯತರು, ಜನಗಣತಿ ಮತ್ತು ಲಿಂಗಾಯತರು, ಲಿಂಗಾಯತರನ್ನು ಸಂಘಟಿಸುವಲ್ಲಿ ಮತ್ತು ಲಿಂಗಾಯತ ನಿಜಾಚರಣೆಗಳನ್ನು ಅಳವಡಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ, ಸ್ಥಳೀಯ ಲಿಂಗಾಯತ ಮಠಗಳ ಮಾರ್ಗದರ್ಶನದಲ್ಲಿ ಲಿಂಗಾಯತ ಸಮಾಜದ ವಿವಿಧ ಪಂಗಡಗಳನ್ನು ಒಂದುಗೂಡಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಮಹಿಳೆಯರನ್ನು ಒಂದುಗೂಡಿಸಿ ಲಿಂಗಾಯತ ಸಮಾಜವನ್ನು ಸಂಘಟಿಸುವ ಮಹಿಳೆಯರ ಪಾತ್ರ, ವೈದಿಕದತ್ತ ವಾಲುತ್ತಿರುವ ಲಿಂಗಾಯತರಿಗೆ ನಿಜಾಚರಣೆಗಳನ್ನು ಜಾರಿಗೊಳಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಸಮಾಜದ ಸಂಘಟನೆ ವಿವಿಧ ಪಂಗಡಗಳು ಏಕೀಕರಣ ಹಾಗೂ ಲಿಂಗಾಯತ ನಿಜಾಚರಣೆಗಳ ಪ್ರಚಾರದಲ್ಲಿ ಯುವಕ ಯುವತಿಯರ ಪಾತ್ರ, ನಗರ ಗ್ರಾಮ ತಾಲ್ಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಯುವ ಘಟಕಗಳನ್ನು ಸಂಘಟಿಸಲು ವಿವಿಧ ಮಾರ್ಗಗಳು ಮತ್ತು ಕ್ರಮಗಳು, ಯುವಕರ ತರಬೇತಿಗಾಗಿ ವಿವಿಧ ಮಟ್ಟದಲ್ಲಿ ಶರಣ ತತ್ವ ಸಿದ್ಧಾಂತ ಮತ್ತು ಮಹತ್ವದ ಬಗ್ಗೆ ತಿಳಿವಳಿಕೆ ನೀಡಲು ಸರಳ ಪಠ್ಯಕ್ರಮ ಮತ್ತು ಸಣ್ಣ ಸಣ್ಣ ಸಾಮಗ್ರಿ ತಯಾರಿಕೆ, ನೂತನ ಅನುಭವ ಮಂಟಪದ ವಿವರಗಳು, ಕಾರ್ಯ ಯೋಜನೆಗಳು- ಮೊದಲಾದ ಸಂಗತಿಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ. ವಿಷಯ ತಜ್ಞರು ನಿಗದಿತ ವಿಚಾರಗಳ ಕುರಿತು ಮಾತನಾಡಲಿದ್ದಾರೆ.

ಸಿದ್ದಪ್ಪ ಮೂಲಗೆ ಆಕ್ಷೇಪ

ಬಿಜೆಪಿ ಹಮ್ಮಿಕೊಂಡಿರುವ ವೇದಿಕೆಯಲ್ಲಿಯೇ ಅಧಿವೇಶನವೂ ನಡೆಯಲಿದೆ ಎಂದು ಲಿಂಗಾಯತ ಮುಖಂಡ ಸಿದ್ದಪ್ಪ ಮೂಲಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ತೆಗೆಯುವಂತೆ ಮನವಿ ಮಾಡಿದ್ದಾರೆ.

“ಈ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದೇಕೆ? ದಯವಿಟ್ಟು ನನ್ನ ಹೆಸರು ತೆಗೆಯಿರಿ. ಒಪ್ಪಿಗೆ ಇಲ್ಲದೇ ಹೆಸರು ಹಾಕುವುದು ತಪ್ಪು. ಯಾವತ್ತೂ ನೀವು ಬಿಜೆಪಿ ಟೆಂಟಿನಲ್ಲಿ ನಿಮ್ಮ ಅಧಿವೇಶನ ನಡೆಸಲು ಮುಂದಾಗಿರೋ ಆವೊತ್ತೇ ನಾನು ಈ ಅಧಿವೇಶನದಿಂದ ದೂರ ಸರೆದಿದ್ದೇನೆ. ನನ್ನ ಹೆಸರು ತೆಗೆಯಿರಿ ಎಂದು ಈ ಮೊದಲೇ ತಮಗೆ ಹೇಳಿದ್ದೇನೆ” ಎಂದಿದ್ದಾರೆ.

“ಬಿಜೆಪಿ ಟೆಂಟಿನಲ್ಲಿ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಎಂ ಎಂ ಕಲುಬುರ್ಗಿಯವರ ಎದೆಯಿಂದ ಚಿಮ್ಮಿದ ರಕ್ತ ಇನ್ನೂ ಆರಿಲ್ಲ. ಬಿಜೆಪಿ ಹಾಗೂ ನೀವೂ ಸೇರಿಕೊಂಡು ಒಂದೇ ಟೆಂಟ್ ಹೌಸ್ ಅವರ ಜತೆ ಮಾತಾಡಿ, ಇಬ್ಬರೂ ಸಮಾನವಾಗಿ ದುಡ್ಡು ಹಾಕಿ, ಮಾರ್ಚ್ 3, 4, 5 ರಂದು ಟೆಂಟ್ ಹಾಕಿಸುತ್ತಿದ್ದೀರಿ. 3ರಂದು ಅಮಿತ್ ಷಾ ಕಾರ್ಯಕ್ರಮ ಮಾಡಿಕೊಂಡು ಹೋಗುತ್ತಾರೆ. ನೀವು ಅದೇ ಟೆಂಟಿನಲ್ಲಿ ಮರುದಿನ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಹಾಗೂ ನೀವು ಒಂದೇ ಟೆಂಟಿನಲ್ಲಿ ಅಧಿವೇಶನ ನಡೆಸುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದೀರಿ” ಎಂದು ಮುಖಂಡರಾದ ಶಿವಾನಂದ ಜಾಮದಾರ್ ಅವರಿಗೆ ಕೇಳಿದ್ದಾರೆ.

ಅಧಿವೇಶನದ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...