Homeಕರ್ನಾಟಕಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

ಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

- Advertisement -
- Advertisement -

ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಮಾರ್ಚ್‌ 4 ಮತ್ತು 5ರಂದು ಬಸವಕಲ್ಯಾಣದಲ್ಲಿ ಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ರೊಟ್ಟಿಯವರು, ‘ಲಿಂಗಾಯಿತರ ಸಂಘಟನೆಗಳಾದ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಬಸವ ಸಮಿತಿ, ಶರಣ ಸಾಹಿತ್ಯ ಪರಿಷತ್‌, ಲಿಂಗಾಯತ ಮಠಾಧೀಶರ ಒಕ್ಕೂಟ, ಬಸವೇಶ್ವರ ಪಂಚ ಕಮಿಟಿ– ಬಸವಕಲ್ಯಾಣ ಹಾಗೂ ಇನ್ನೂ ಅನೇಕ ಸಂಘಟನೆಗಳ ಸಹಯೋಗದಲ್ಲಿ ಈ ಅಧಿವೇಶನ ಆಯೋಜಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿದೇಶಗಳಲ್ಲಿಯೂ ಇರುವ ಲಿಂಗಾಯತ ಪ್ರತಿನಿಧಿಗಳು ಅಧಿವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಚಿಂತಕ ಗೊ.ರು.ಚನ್ನಬಸವಪ್ಪ ಅವರು ಅಧಿವೇಶನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾರ್ಚ್ 4ರಂದು ಬಸವಕಲ್ಯಾಣದಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಗುತ್ತಿದೆ. ನಾಡಿನ 200ಕ್ಕೂ ಅಧಿಕ ಲಿಂಗಾಯತ ಮಠಾಧೀಶರು ಎರಡೂ ದಿನಗಳ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಬಸವ ಕಲ್ಯಾಣದಲ್ಲಿ 12ನೇ ಶತಮಾನದಲ್ಲಿ ಅವೈದಿಕ ಲಿಂಗಾಯತ ಧರ್ಮ ಬಸವಣ್ಣನವರಿಂದ ಸ್ಥಾಪನೆಯಾಯಿತು. ಇಲ್ಲಿಯೇ ಅನುಭವ ಮಂಟಪವೂ ಬೆಳೆದಿದ್ದರಿಂದ ಬಸವಕಲ್ಯಾಣವು ಲಿಂಗಾಯತರಿಗೆ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಆ ಕಾರಣಕ್ಕಾಗಿ ಪ್ರಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಅಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

‘ಪ್ರತಿನಿಧಿಗಳಿಗೆ ಊಟೋಪಚಾರ ಮತ್ತು ವಸತಿ ವ್ಯವಸ್ಥೆಯನ್ನು ಜಾಗತಿಕ ಲಿಂಗಾಯತ ಮಹಾಸಭೆಯ ಕೇಂದ್ರ ಕಚೇರಿಯಿಂದ ಮಾಡಲಾಗಿದೆ. ಎರಡು ದಿನಗಳ ಮಹಾ ಅಧಿವೇಶನದಲ್ಲಿ ನಾಲ್ಕು ಗೋಷ್ಠಿಗಳು ನಡೆಯಲಿವೆ” ಎಂದಿದ್ದಾರೆ.

‘ಅಧಿವೇಶನದ ವೇದಿಕೆಯು ಸಂಪೂರ್ಣವಾಗಿ ರಾಜಕೀಯೇತರವಾಗಿದೆ. ವೇದಿಕೆಯ ಮೇಲೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೆ ಸ್ಥಾನ ಇರುವುದಿಲ್ಲ. ಆದರೆ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಲೋಕಸಭೆಯಲ್ಲಿ ಮಾತನಾಡಿರುವ ಮಹಾರಾಷ್ಟ್ರದ ಸಂಸದರಾದ ಧೈರ್ಯಶೀಲ ಮಾನೆ, ಓಂ ಪ್ರಕಾಶ್ ರಾಜೆ ನಿಂಬಾಳ್ಕರ್, ಮಾಜಿ ಸಂಸದ ರಾಜು ಶೆಟ್ಟಿ ಹಾಗೂ ಹಲವರನ್ನು ಸತ್ಕರಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ಹಲವಾರು ಚರ್ಚೆಗಳನ್ನು ನಡೆಸಲಾಗುತ್ತಿದೆ. ಮೀಸಲಾತಿ ಮತ್ತು ಲಿಂಗಾಯತರು, ಸ್ವತಂತ್ರ ಧರ್ಮದ ಹೋರಾಟದಲ್ಲಿ ಲಿಂಗಾಯತರು, ಜನಗಣತಿ ಮತ್ತು ಲಿಂಗಾಯತರು, ಲಿಂಗಾಯತರನ್ನು ಸಂಘಟಿಸುವಲ್ಲಿ ಮತ್ತು ಲಿಂಗಾಯತ ನಿಜಾಚರಣೆಗಳನ್ನು ಅಳವಡಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ, ಸ್ಥಳೀಯ ಲಿಂಗಾಯತ ಮಠಗಳ ಮಾರ್ಗದರ್ಶನದಲ್ಲಿ ಲಿಂಗಾಯತ ಸಮಾಜದ ವಿವಿಧ ಪಂಗಡಗಳನ್ನು ಒಂದುಗೂಡಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಮಹಿಳೆಯರನ್ನು ಒಂದುಗೂಡಿಸಿ ಲಿಂಗಾಯತ ಸಮಾಜವನ್ನು ಸಂಘಟಿಸುವ ಮಹಿಳೆಯರ ಪಾತ್ರ, ವೈದಿಕದತ್ತ ವಾಲುತ್ತಿರುವ ಲಿಂಗಾಯತರಿಗೆ ನಿಜಾಚರಣೆಗಳನ್ನು ಜಾರಿಗೊಳಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಸಮಾಜದ ಸಂಘಟನೆ ವಿವಿಧ ಪಂಗಡಗಳು ಏಕೀಕರಣ ಹಾಗೂ ಲಿಂಗಾಯತ ನಿಜಾಚರಣೆಗಳ ಪ್ರಚಾರದಲ್ಲಿ ಯುವಕ ಯುವತಿಯರ ಪಾತ್ರ, ನಗರ ಗ್ರಾಮ ತಾಲ್ಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಯುವ ಘಟಕಗಳನ್ನು ಸಂಘಟಿಸಲು ವಿವಿಧ ಮಾರ್ಗಗಳು ಮತ್ತು ಕ್ರಮಗಳು, ಯುವಕರ ತರಬೇತಿಗಾಗಿ ವಿವಿಧ ಮಟ್ಟದಲ್ಲಿ ಶರಣ ತತ್ವ ಸಿದ್ಧಾಂತ ಮತ್ತು ಮಹತ್ವದ ಬಗ್ಗೆ ತಿಳಿವಳಿಕೆ ನೀಡಲು ಸರಳ ಪಠ್ಯಕ್ರಮ ಮತ್ತು ಸಣ್ಣ ಸಣ್ಣ ಸಾಮಗ್ರಿ ತಯಾರಿಕೆ, ನೂತನ ಅನುಭವ ಮಂಟಪದ ವಿವರಗಳು, ಕಾರ್ಯ ಯೋಜನೆಗಳು- ಮೊದಲಾದ ಸಂಗತಿಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ. ವಿಷಯ ತಜ್ಞರು ನಿಗದಿತ ವಿಚಾರಗಳ ಕುರಿತು ಮಾತನಾಡಲಿದ್ದಾರೆ.

ಸಿದ್ದಪ್ಪ ಮೂಲಗೆ ಆಕ್ಷೇಪ

ಬಿಜೆಪಿ ಹಮ್ಮಿಕೊಂಡಿರುವ ವೇದಿಕೆಯಲ್ಲಿಯೇ ಅಧಿವೇಶನವೂ ನಡೆಯಲಿದೆ ಎಂದು ಲಿಂಗಾಯತ ಮುಖಂಡ ಸಿದ್ದಪ್ಪ ಮೂಲಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ತೆಗೆಯುವಂತೆ ಮನವಿ ಮಾಡಿದ್ದಾರೆ.

“ಈ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದೇಕೆ? ದಯವಿಟ್ಟು ನನ್ನ ಹೆಸರು ತೆಗೆಯಿರಿ. ಒಪ್ಪಿಗೆ ಇಲ್ಲದೇ ಹೆಸರು ಹಾಕುವುದು ತಪ್ಪು. ಯಾವತ್ತೂ ನೀವು ಬಿಜೆಪಿ ಟೆಂಟಿನಲ್ಲಿ ನಿಮ್ಮ ಅಧಿವೇಶನ ನಡೆಸಲು ಮುಂದಾಗಿರೋ ಆವೊತ್ತೇ ನಾನು ಈ ಅಧಿವೇಶನದಿಂದ ದೂರ ಸರೆದಿದ್ದೇನೆ. ನನ್ನ ಹೆಸರು ತೆಗೆಯಿರಿ ಎಂದು ಈ ಮೊದಲೇ ತಮಗೆ ಹೇಳಿದ್ದೇನೆ” ಎಂದಿದ್ದಾರೆ.

“ಬಿಜೆಪಿ ಟೆಂಟಿನಲ್ಲಿ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಎಂ ಎಂ ಕಲುಬುರ್ಗಿಯವರ ಎದೆಯಿಂದ ಚಿಮ್ಮಿದ ರಕ್ತ ಇನ್ನೂ ಆರಿಲ್ಲ. ಬಿಜೆಪಿ ಹಾಗೂ ನೀವೂ ಸೇರಿಕೊಂಡು ಒಂದೇ ಟೆಂಟ್ ಹೌಸ್ ಅವರ ಜತೆ ಮಾತಾಡಿ, ಇಬ್ಬರೂ ಸಮಾನವಾಗಿ ದುಡ್ಡು ಹಾಕಿ, ಮಾರ್ಚ್ 3, 4, 5 ರಂದು ಟೆಂಟ್ ಹಾಕಿಸುತ್ತಿದ್ದೀರಿ. 3ರಂದು ಅಮಿತ್ ಷಾ ಕಾರ್ಯಕ್ರಮ ಮಾಡಿಕೊಂಡು ಹೋಗುತ್ತಾರೆ. ನೀವು ಅದೇ ಟೆಂಟಿನಲ್ಲಿ ಮರುದಿನ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಹಾಗೂ ನೀವು ಒಂದೇ ಟೆಂಟಿನಲ್ಲಿ ಅಧಿವೇಶನ ನಡೆಸುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದೀರಿ” ಎಂದು ಮುಖಂಡರಾದ ಶಿವಾನಂದ ಜಾಮದಾರ್ ಅವರಿಗೆ ಕೇಳಿದ್ದಾರೆ.

ಅಧಿವೇಶನದ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...