Homeಕರ್ನಾಟಕಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

ಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

- Advertisement -
- Advertisement -

ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಮಾರ್ಚ್‌ 4 ಮತ್ತು 5ರಂದು ಬಸವಕಲ್ಯಾಣದಲ್ಲಿ ಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ರೊಟ್ಟಿಯವರು, ‘ಲಿಂಗಾಯಿತರ ಸಂಘಟನೆಗಳಾದ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಬಸವ ಸಮಿತಿ, ಶರಣ ಸಾಹಿತ್ಯ ಪರಿಷತ್‌, ಲಿಂಗಾಯತ ಮಠಾಧೀಶರ ಒಕ್ಕೂಟ, ಬಸವೇಶ್ವರ ಪಂಚ ಕಮಿಟಿ– ಬಸವಕಲ್ಯಾಣ ಹಾಗೂ ಇನ್ನೂ ಅನೇಕ ಸಂಘಟನೆಗಳ ಸಹಯೋಗದಲ್ಲಿ ಈ ಅಧಿವೇಶನ ಆಯೋಜಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿದೇಶಗಳಲ್ಲಿಯೂ ಇರುವ ಲಿಂಗಾಯತ ಪ್ರತಿನಿಧಿಗಳು ಅಧಿವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಚಿಂತಕ ಗೊ.ರು.ಚನ್ನಬಸವಪ್ಪ ಅವರು ಅಧಿವೇಶನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾರ್ಚ್ 4ರಂದು ಬಸವಕಲ್ಯಾಣದಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಗುತ್ತಿದೆ. ನಾಡಿನ 200ಕ್ಕೂ ಅಧಿಕ ಲಿಂಗಾಯತ ಮಠಾಧೀಶರು ಎರಡೂ ದಿನಗಳ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಬಸವ ಕಲ್ಯಾಣದಲ್ಲಿ 12ನೇ ಶತಮಾನದಲ್ಲಿ ಅವೈದಿಕ ಲಿಂಗಾಯತ ಧರ್ಮ ಬಸವಣ್ಣನವರಿಂದ ಸ್ಥಾಪನೆಯಾಯಿತು. ಇಲ್ಲಿಯೇ ಅನುಭವ ಮಂಟಪವೂ ಬೆಳೆದಿದ್ದರಿಂದ ಬಸವಕಲ್ಯಾಣವು ಲಿಂಗಾಯತರಿಗೆ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಆ ಕಾರಣಕ್ಕಾಗಿ ಪ್ರಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಅಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

‘ಪ್ರತಿನಿಧಿಗಳಿಗೆ ಊಟೋಪಚಾರ ಮತ್ತು ವಸತಿ ವ್ಯವಸ್ಥೆಯನ್ನು ಜಾಗತಿಕ ಲಿಂಗಾಯತ ಮಹಾಸಭೆಯ ಕೇಂದ್ರ ಕಚೇರಿಯಿಂದ ಮಾಡಲಾಗಿದೆ. ಎರಡು ದಿನಗಳ ಮಹಾ ಅಧಿವೇಶನದಲ್ಲಿ ನಾಲ್ಕು ಗೋಷ್ಠಿಗಳು ನಡೆಯಲಿವೆ” ಎಂದಿದ್ದಾರೆ.

‘ಅಧಿವೇಶನದ ವೇದಿಕೆಯು ಸಂಪೂರ್ಣವಾಗಿ ರಾಜಕೀಯೇತರವಾಗಿದೆ. ವೇದಿಕೆಯ ಮೇಲೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೆ ಸ್ಥಾನ ಇರುವುದಿಲ್ಲ. ಆದರೆ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಲೋಕಸಭೆಯಲ್ಲಿ ಮಾತನಾಡಿರುವ ಮಹಾರಾಷ್ಟ್ರದ ಸಂಸದರಾದ ಧೈರ್ಯಶೀಲ ಮಾನೆ, ಓಂ ಪ್ರಕಾಶ್ ರಾಜೆ ನಿಂಬಾಳ್ಕರ್, ಮಾಜಿ ಸಂಸದ ರಾಜು ಶೆಟ್ಟಿ ಹಾಗೂ ಹಲವರನ್ನು ಸತ್ಕರಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ಹಲವಾರು ಚರ್ಚೆಗಳನ್ನು ನಡೆಸಲಾಗುತ್ತಿದೆ. ಮೀಸಲಾತಿ ಮತ್ತು ಲಿಂಗಾಯತರು, ಸ್ವತಂತ್ರ ಧರ್ಮದ ಹೋರಾಟದಲ್ಲಿ ಲಿಂಗಾಯತರು, ಜನಗಣತಿ ಮತ್ತು ಲಿಂಗಾಯತರು, ಲಿಂಗಾಯತರನ್ನು ಸಂಘಟಿಸುವಲ್ಲಿ ಮತ್ತು ಲಿಂಗಾಯತ ನಿಜಾಚರಣೆಗಳನ್ನು ಅಳವಡಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ, ಸ್ಥಳೀಯ ಲಿಂಗಾಯತ ಮಠಗಳ ಮಾರ್ಗದರ್ಶನದಲ್ಲಿ ಲಿಂಗಾಯತ ಸಮಾಜದ ವಿವಿಧ ಪಂಗಡಗಳನ್ನು ಒಂದುಗೂಡಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಮಹಿಳೆಯರನ್ನು ಒಂದುಗೂಡಿಸಿ ಲಿಂಗಾಯತ ಸಮಾಜವನ್ನು ಸಂಘಟಿಸುವ ಮಹಿಳೆಯರ ಪಾತ್ರ, ವೈದಿಕದತ್ತ ವಾಲುತ್ತಿರುವ ಲಿಂಗಾಯತರಿಗೆ ನಿಜಾಚರಣೆಗಳನ್ನು ಜಾರಿಗೊಳಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಸಮಾಜದ ಸಂಘಟನೆ ವಿವಿಧ ಪಂಗಡಗಳು ಏಕೀಕರಣ ಹಾಗೂ ಲಿಂಗಾಯತ ನಿಜಾಚರಣೆಗಳ ಪ್ರಚಾರದಲ್ಲಿ ಯುವಕ ಯುವತಿಯರ ಪಾತ್ರ, ನಗರ ಗ್ರಾಮ ತಾಲ್ಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಯುವ ಘಟಕಗಳನ್ನು ಸಂಘಟಿಸಲು ವಿವಿಧ ಮಾರ್ಗಗಳು ಮತ್ತು ಕ್ರಮಗಳು, ಯುವಕರ ತರಬೇತಿಗಾಗಿ ವಿವಿಧ ಮಟ್ಟದಲ್ಲಿ ಶರಣ ತತ್ವ ಸಿದ್ಧಾಂತ ಮತ್ತು ಮಹತ್ವದ ಬಗ್ಗೆ ತಿಳಿವಳಿಕೆ ನೀಡಲು ಸರಳ ಪಠ್ಯಕ್ರಮ ಮತ್ತು ಸಣ್ಣ ಸಣ್ಣ ಸಾಮಗ್ರಿ ತಯಾರಿಕೆ, ನೂತನ ಅನುಭವ ಮಂಟಪದ ವಿವರಗಳು, ಕಾರ್ಯ ಯೋಜನೆಗಳು- ಮೊದಲಾದ ಸಂಗತಿಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ. ವಿಷಯ ತಜ್ಞರು ನಿಗದಿತ ವಿಚಾರಗಳ ಕುರಿತು ಮಾತನಾಡಲಿದ್ದಾರೆ.

ಸಿದ್ದಪ್ಪ ಮೂಲಗೆ ಆಕ್ಷೇಪ

ಬಿಜೆಪಿ ಹಮ್ಮಿಕೊಂಡಿರುವ ವೇದಿಕೆಯಲ್ಲಿಯೇ ಅಧಿವೇಶನವೂ ನಡೆಯಲಿದೆ ಎಂದು ಲಿಂಗಾಯತ ಮುಖಂಡ ಸಿದ್ದಪ್ಪ ಮೂಲಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ತೆಗೆಯುವಂತೆ ಮನವಿ ಮಾಡಿದ್ದಾರೆ.

“ಈ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದೇಕೆ? ದಯವಿಟ್ಟು ನನ್ನ ಹೆಸರು ತೆಗೆಯಿರಿ. ಒಪ್ಪಿಗೆ ಇಲ್ಲದೇ ಹೆಸರು ಹಾಕುವುದು ತಪ್ಪು. ಯಾವತ್ತೂ ನೀವು ಬಿಜೆಪಿ ಟೆಂಟಿನಲ್ಲಿ ನಿಮ್ಮ ಅಧಿವೇಶನ ನಡೆಸಲು ಮುಂದಾಗಿರೋ ಆವೊತ್ತೇ ನಾನು ಈ ಅಧಿವೇಶನದಿಂದ ದೂರ ಸರೆದಿದ್ದೇನೆ. ನನ್ನ ಹೆಸರು ತೆಗೆಯಿರಿ ಎಂದು ಈ ಮೊದಲೇ ತಮಗೆ ಹೇಳಿದ್ದೇನೆ” ಎಂದಿದ್ದಾರೆ.

“ಬಿಜೆಪಿ ಟೆಂಟಿನಲ್ಲಿ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಎಂ ಎಂ ಕಲುಬುರ್ಗಿಯವರ ಎದೆಯಿಂದ ಚಿಮ್ಮಿದ ರಕ್ತ ಇನ್ನೂ ಆರಿಲ್ಲ. ಬಿಜೆಪಿ ಹಾಗೂ ನೀವೂ ಸೇರಿಕೊಂಡು ಒಂದೇ ಟೆಂಟ್ ಹೌಸ್ ಅವರ ಜತೆ ಮಾತಾಡಿ, ಇಬ್ಬರೂ ಸಮಾನವಾಗಿ ದುಡ್ಡು ಹಾಕಿ, ಮಾರ್ಚ್ 3, 4, 5 ರಂದು ಟೆಂಟ್ ಹಾಕಿಸುತ್ತಿದ್ದೀರಿ. 3ರಂದು ಅಮಿತ್ ಷಾ ಕಾರ್ಯಕ್ರಮ ಮಾಡಿಕೊಂಡು ಹೋಗುತ್ತಾರೆ. ನೀವು ಅದೇ ಟೆಂಟಿನಲ್ಲಿ ಮರುದಿನ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಹಾಗೂ ನೀವು ಒಂದೇ ಟೆಂಟಿನಲ್ಲಿ ಅಧಿವೇಶನ ನಡೆಸುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದೀರಿ” ಎಂದು ಮುಖಂಡರಾದ ಶಿವಾನಂದ ಜಾಮದಾರ್ ಅವರಿಗೆ ಕೇಳಿದ್ದಾರೆ.

ಅಧಿವೇಶನದ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....